Homeಎಕಾನಮಿಡೇಟಾ ಖೋಲಿ: NDRF ಅಂದ್ರ ಏನಂತ ಗೊತ್ತೈತೇನ್ರಿ....

ಡೇಟಾ ಖೋಲಿ: NDRF ಅಂದ್ರ ಏನಂತ ಗೊತ್ತೈತೇನ್ರಿ….

- Advertisement -
- Advertisement -

ಏನಿಲ್ಲಾ, ಈ ನಮ್ಮ ಕರುನಾಡಿನ ಸಚಿವ ಸಂಪುಷ್ಟದ ಸನ್ಮಾನ್ಯ ಸದಸ್ಯರೆಲ್ಲಾ ʻNDRF NDRF’ ಅನ್ನಾಕ ಹತ್ಯಾರೆಲ್ಲಾ, ಏನದು?

ಅಷ್ಟ ಅಲ್ಲಾ, ಇದು ಒಂದಲ್ಲ. ಎರಡು. ಬದಲಾದ ರಾಜಕೀಯ ಪರಿಸ್ಥಿತಿಯೊಳಗ ಎಲ್ಲದಕ್ಕೂ ಎರಡೆರಡು ರೂಪ ಇರತಾವಲ್ಲಾ, ನಾಯಕರದು ರಾಜ್ಯಮಟ್ಟದೊಳಗ ಒಂದು, ತಮ್ಮ ಕ್ಷೇತ್ರದೊಳಗ ಇನ್ನೊಂದು ರೂಪ ಇರ್ತದಲ್ಲಾ, ಹಂಗ, ಇದರದೂ ಎರಡು ರೂಪ ಅದಾವು.

ದೇಶದ ಯಾವುದೇ ಮೂಲಿಯೊಳಗ ನೆರೆ, ಬರ, ಭೂಕಂಪ, ಸುಂಟರಗಾಳಿ ಅಥವಾ ಇತರ ಪ್ರಕೃತಿ ವಿಕೋಪಗಳು ಆದರ ಅಲ್ಲಿಗೆ ಸಹಾಯ ಮಾಡಲಿಕ್ಕೆ ಅಂತ ಇರೋದು ಭಾರತೀಯ ಪ್ರಕೃತಿ ವಿಕೋಪ ನಿರ್ವಹಣಾ ಸಂಸ್ಥೆ. ಇದು ಕೇಂದ್ರ ಗೃಹ ಇಲಾಖೆಯ ಪ್ರಕೃತಿ ವಿಕೋಪ ವಿಭಾಗದ ಒಂದು ಭಾಗ. ಈ ಸಂಸ್ಥೆಯ ಕೆಳಗಡೆ ಇರೋವು ವಿವಿಧ ರಾಜ್ಯಗಳ ಪ್ರಕೃತಿ ವಿಕೋಪ ನಿರ್ವಹಣಾ ಸಂಸ್ಥೆಗಳು. ಸನ್ 2005 ರಲ್ಲಿ ಜಾರಿಯಾದ ಪ್ರಕೃತಿ ವಿಕೋಪ ನಿರ್ವಹಣಾ ಕಾಯಿದೆಯ ಕೆಳಗ ಈ ಸಂಸ್ಥೆಗಳು ಆರಂಭವಾದವು.

ಇಂಥಾ ಎಜೆನ್ಸಿಗಳಿಂದ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಪ್ರಕೃತಿ ವಿಕೋಪಗಳು ಎಲ್ಲೆಲ್ಲಿ ಆಗತಾವೋ ಅಲ್ಲಲ್ಲಿ ತನು ಮನ ಧನ ಸಹಾಯ ಮಾಡಬೇಕು ಅಥವಾ ಹಾಗೇಂತ ನಮ್ಮ ಆಶಾ ಇರಬಹುದೇನೋ.

ಈಗ ನಮ್ಮಲ್ಲೆ ತನುವಿಗೊಂದು ಎನ್‍ಡಿಆರ್‌ಎಫ್ ಹಾಗೂ ಧನಕ್ಕೆ ಇನ್ನೊಂದು ಎನ್‍ಡಿಆರ್‌ಎಫ್ ಅವ. ಆದರ ಮನಕ್ಕ ಅಂತ ಮಾತ್ರ ಪ್ರತ್ಯೇಕ ಸಂಸ್ಥೆ ಇಲ್ಲ. ಅದು ಕೇಂದ್ರ ಸರಕಾರದ ಮನದಲ್ಲಿ ಇರಬಹುದೇನೋ, ಹೋಗಲಿ ಬಿಡರಿ.

ಒಂದನೇ ಎನ್‍ಡಿಆರ್‌ಎಫ್ ಅಂದರ ರಾಷ್ಟ್ರೀಯ ಪ್ರಕೃತಿ ವಿಕೋಪ ಪ್ರತಿಕ್ರಿಯೆ ದಳ. (NDRF national disaster response force) ದೆಹಲಿಯ ಮುಖ್ಯ ಕಚೇರಿ ಬಿಟ್ಟರ ಇದಕ್ಕ ಬ್ಯಾರೆ ಬ್ಯಾರೆ ರಾಜ್ಯದೊಳಗ 17 ಉಪವಿಭಾಗ ಅವ.

ಇದರಾಗ ಭಾರತೀಯ ಪೊಲೀಸ್ ಸೇವೆ ಹಾಗೂ ಭಾರತೀಯ ಅರೆಸೇನಾ ದಳದ ಅಧಿಕಾರಿಗಳು ಮತ್ತ ಬ್ಯಾರೆ ಬ್ಯಾರೆ ಸಿಬ್ಬಂದಿ ಇದ್ದಾರ. ಈ ಹಿಂದಿನ 15 ವರ್ಷದೊಳಗ ಇವರೆಲ್ಲಾ ಕೂಡಿ ಸುಮಾರು 17 ಲಕ್ಷ ಜನರ ಜೀವಾ ಉಳಿಸ್ಯಾರ. ಇಂಥವರ ಕೆಲಸದ ಬಗ್ಗೆ ಯಾರಿಗೂ ತಕರಾರು ಇಲ್ಲ. ಇರಲಿಕ್ಕೆ ಸಾಧ್ಯನೂ ಇಲ್ಲ. ಇದರಾಗೇನು ರಾಜಕೀಯ ಇದ್ದಂತಿಲ್ಲ. ಹೋದವರ್ಷ ಮಹಾರಾಷ್ಟ್ರದ ಕೊಲ್ಹಾಪುರದ ಪ್ರವಾಹದಾಗ ಉಳದ ಹೆಣಮಗಳೊಬ್ಬಳು ಆ ಸಿಬ್ಬಂದಿ ಕಾಲಿಗೆ ಬಿದ್ದು ‘ನೀನೇ ನಮ್ಮ ಪಾಂಡುರಂಗೋ ಯಪ್ಪಾ’ ಅಂತ ಹೇಳಿದ್ದ ವಿಡಿಯೋ ನಿಮ್ಮ ಫೋನಿನ ವಾಟ್ಸಪ್ಪಿಗೆ ಬಂದಿತ್ತಲ್ಲ, ಅಕೀ ಭಾವನೆಯೇ ಉಳಿದೆ ಎಲ್ಲಾರ ಭಾವನೆ.

ಆದರ ಎಲ್ಲಾರ ತಕರಾರು ಇರುವುದು ಆ ಇನ್ನೊಂದು ಎನ್‍ಡಿಆರ್‌ಎಫ್‍ನ ಬಗ್ಗೆ. ಇದು ರಾಷ್ಟ್ರೀಯ ಪ್ರಕೃತಿ ವಿಕೋಪ ಪರಿಹಾರ ನಿಧಿ (NDRF national disaster response force).

ಇವರು ರಾಜ್ಯಗಳೊಳಗ ವಿಕೋಪ ನಡೆದಾಗ ಅವರಿಗೆ ದುಡ್ಡು ಕೊಡುವವರು. (ಕೇಂದ್ರಕ್ಕಂತೂ ಪ್ರಕೃತಿ ವಿಕೋಪ ಬರಂಗಿಲ್ಲಲ್ಲಾ. ಅಲ್ಲಿ ಬರೋ ವಿಕೋಪ ಅಂದರ ಬರೇ ಎಲೆಕ್ಷನ್ ಒಂದ)

ಇವರು ಯಾವಾಗ ಯಾರಿಗೆ ಏನು ಕೊಡುತ್ತಾರೆ ಅನ್ನೋದು ಮಾತ್ರ ಭಾರತೀಯ ಮತದಾರನ ಮನಸ್ಸಿಗಿಂತಾ ನಿಗೂಢ. ಯಾವಾಗರ ಹಿಂದೀ ಝೀ ಟಿವಿಯೊಳಗ ನಿಗೂಢ ರಹಸ್ಯ ಅಂತ ಇದರದ್ದೂ ಒಂದು ಎಪಿಸೋಡು ಬರಬಹುದು.

ಉದಾಹರಣೆಗೆ, ಈ ಸತೆ, ಕರ್ನಾಟಕಕ್ಕ 1,872 ಕೋಟಿ ಕೊಟ್ಟಾರ (ಕೇಂದ್ರ ಹಾಗೂ ರಾಜ್ಯ ನಿಧಿಗಳ ಲೆಕ್ಕದಲ್ಲಿ) ಮಹಾರಾಷ್ಟ್ರಕ್ಕ 3,150 ಕೋಟಿ, ಓಡಿಶಾಗೆ 3,666 ಕೋಟಿ . ರಾಜಸ್ತಾನಕ್ಕೆ 1,666 ಕೋಟಿ, ಆಂಧ್ರ 770 ಕೋಟಿ, ಮತ್ತ ಉತ್ತರ ಪ್ರದೇಶಕ್ಕೆ 541 ಕೋಟಿ . ಹಿಮಾಚಲ ಪ್ರದೇಶಕ್ಕೆ 434 ಕೋಟಿ, ಗೋವಾ ಮಿಜೋರಾಮಿಗೆ ಏನಿಲ್ಲಾ. ನಾಗಾಲ್ಯಾಂಡಿಗೆ 5 ಕೋಟಿ ಹಾಗೂ ಮಣಿಪುರಕ್ಕೆ 9.9 ಕೋಟಿ ಬಿಡುಗಡೆ ಆಗೇದ.

ಇದಲ್ಲಾಗಿಂತ ಮಜಾ ಏನೆಂದರ ನಾವು ಆರಿಸಿ ಕಳಿಸಿದ ಘನ ಸರಕಾರದವರು ನಾವು ಕಟ್ಟಿದ ಸುಂಕದ ರೊಕ್ಕದಾಗ ಈ ಸಂಸ್ಥಾದ ತಿಜೋರಿಯೊಳಗ ಒಂದು ವರ್ಷಕ್ಕೆ ಇಟ್ಟಿರೋದು ಬರೇ 23,465 ಕೋಟಿ ರೂಪಾಯಿ.

ಕರ್ನಾಟಕದ ಜನಾ ಒಂದು ವರ್ಷಕ್ಕ ಸುಮಾರು 29,000 ಕೋಟಿ ರೂಪಾಯಿ ಬರೇ ಜಿಎಸ್‍ಟಿ ಅಂದರ ಗಬ್ಬರ ಸಿಂಗ್ ಟ್ಯಾಕ್ಸ ಕಟ್ಟತಾರ. ಬ್ಯಾರೆ ಟ್ಯಾಕ್ಸಿನ ಲೆಕ್ಕಾ ಬ್ಯಾರೆ ಮತ್ತ. ಇದರಿಂದ ಸೆಂಟರಿನವರ ಹಾರ್ಟು ಎಷ್ಟು ದೊಡ್ಡದು ಅಂತ ತಿಳಕೋಬಹುದು.

ಅದರಾಗೂನು, ಎಲ್ಲಾ ರಾಜ್ಯಗಳ ಎಲ್ಲಾ ಥರದ ವಿಕೋಪಗಳಿಗೆ ಅವರು ಬಿಡುಗಡೆ ಮಾಡಿರುವುದು ಬರೇ 6,614 ಕೋಟಿ. ಅವರ ತಿಜೋರಿಯೊಳಗ ಇನ್ನೂ 51 ಶೇಕಡಾ ಹಣದ ಶಿಲ್ಕು ಹಂಗ ಬಾಕಿ ಉಳಿದದ.

ನಮ್ ಸೀಎಮ್ ಬಿ.ಎಸ್ ಯಡಿಯೂರಪ್ಪನವರು ಮನ್ನೆ ನೆರೆ ಪರಿಹಾರಕ್ಕೆ 38,000 ಕೋಟಿ ರೂಪಾಯಿ ಕೇಳಿದಾಗ ಮ್ಯಾಲಿನವರು ನಿಮ್ಮ ನಷ್ಟದ ಅಂದಾಜೇ ಸರಿ ಇಲ್ಲ ಎಂದು ಬೈದು ಕಳಿಸಿದ್ದು ಯಾಕ ಅಂತ ಗೊತ್ತಾತಲ್ಲಾ ? ನೋಡ್ರಿ, ಹೆಂಗದ ಮಜಾ!

ಹೆಚ್ಚಿನ ವಿವರಗಳಿಗೆ –

www.ndrf.gov.in

https://www.ndmindia.nic.in/images/allocation.PDF

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...

ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ. ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ...

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ...

ಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ

ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಗುರುವಾರ (ಫೆ.5) ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ...

ಸಭಾಪತಿ ಹೊರಟ್ಟಿ ಉಮಾಶ್ರೀ ಜೊತೆ ಬಳಸಿದ ಭಾಷೆ ಶಿಸ್ತಿನ ಹೆಸರಿನ ಅಹಂಕಾರ: ನಿರ್ದೇಶಕಿ ಸುಮನಾ ಕಿತ್ತೂರು

ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್‌ನಲ್ಲಿ ಉಮಾಶ್ರೀ ಅವರಿಗೆ ಬಳಸಿದ ಭಾಷೆ ಶಿಸ್ತಿನ ಹೆಸರಲ್ಲಿನ ಅಹಂಕಾರವಾಗಿದೆ ಎಂದು ನಿರ್ದೇಶಕಿ ಸುಮನಾ ಕಿತ್ತೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುರುವಾರ (ಫೆ.5) ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ...

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

ಪ್ರಮುಖ ಮಾಧ್ಯಮ ಸಂಸ್ಥೆ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಭಾರೀ ಉದ್ಯೋಗ ಕಡಿತ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಕೆಲಸ ಕಳೆದುಕೊಂಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಶಶಿ ತರೂರ್ ಅವರ ಮಗ...

ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ : ಲೋಕಸಭೆ ಕಲಾಪ ಮುಂದೂಡಿಕೆ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಗುರುವಾರ (ಫೆ.5) ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಮಧ್ಯಾಹ್ನದವರೆಗೆ ಮುಂದೂಡಿದರು. ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ವಿಶೇಷವಾಗಿ,...

ಗದಗ | ಕ್ಯಾಂಟರ್-ಕ್ರೂಸರ್ ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಗದಗ ಜಿಲ್ಲೆ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಜೇಂದ್ರಗಡದ...

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...