Homeಎಕಾನಮಿಡೇಟಾ ಖೋಲಿ: NDRF ಅಂದ್ರ ಏನಂತ ಗೊತ್ತೈತೇನ್ರಿ....

ಡೇಟಾ ಖೋಲಿ: NDRF ಅಂದ್ರ ಏನಂತ ಗೊತ್ತೈತೇನ್ರಿ….

- Advertisement -
- Advertisement -

ಏನಿಲ್ಲಾ, ಈ ನಮ್ಮ ಕರುನಾಡಿನ ಸಚಿವ ಸಂಪುಷ್ಟದ ಸನ್ಮಾನ್ಯ ಸದಸ್ಯರೆಲ್ಲಾ ʻNDRF NDRF’ ಅನ್ನಾಕ ಹತ್ಯಾರೆಲ್ಲಾ, ಏನದು?

ಅಷ್ಟ ಅಲ್ಲಾ, ಇದು ಒಂದಲ್ಲ. ಎರಡು. ಬದಲಾದ ರಾಜಕೀಯ ಪರಿಸ್ಥಿತಿಯೊಳಗ ಎಲ್ಲದಕ್ಕೂ ಎರಡೆರಡು ರೂಪ ಇರತಾವಲ್ಲಾ, ನಾಯಕರದು ರಾಜ್ಯಮಟ್ಟದೊಳಗ ಒಂದು, ತಮ್ಮ ಕ್ಷೇತ್ರದೊಳಗ ಇನ್ನೊಂದು ರೂಪ ಇರ್ತದಲ್ಲಾ, ಹಂಗ, ಇದರದೂ ಎರಡು ರೂಪ ಅದಾವು.

ದೇಶದ ಯಾವುದೇ ಮೂಲಿಯೊಳಗ ನೆರೆ, ಬರ, ಭೂಕಂಪ, ಸುಂಟರಗಾಳಿ ಅಥವಾ ಇತರ ಪ್ರಕೃತಿ ವಿಕೋಪಗಳು ಆದರ ಅಲ್ಲಿಗೆ ಸಹಾಯ ಮಾಡಲಿಕ್ಕೆ ಅಂತ ಇರೋದು ಭಾರತೀಯ ಪ್ರಕೃತಿ ವಿಕೋಪ ನಿರ್ವಹಣಾ ಸಂಸ್ಥೆ. ಇದು ಕೇಂದ್ರ ಗೃಹ ಇಲಾಖೆಯ ಪ್ರಕೃತಿ ವಿಕೋಪ ವಿಭಾಗದ ಒಂದು ಭಾಗ. ಈ ಸಂಸ್ಥೆಯ ಕೆಳಗಡೆ ಇರೋವು ವಿವಿಧ ರಾಜ್ಯಗಳ ಪ್ರಕೃತಿ ವಿಕೋಪ ನಿರ್ವಹಣಾ ಸಂಸ್ಥೆಗಳು. ಸನ್ 2005 ರಲ್ಲಿ ಜಾರಿಯಾದ ಪ್ರಕೃತಿ ವಿಕೋಪ ನಿರ್ವಹಣಾ ಕಾಯಿದೆಯ ಕೆಳಗ ಈ ಸಂಸ್ಥೆಗಳು ಆರಂಭವಾದವು.

ಇಂಥಾ ಎಜೆನ್ಸಿಗಳಿಂದ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಪ್ರಕೃತಿ ವಿಕೋಪಗಳು ಎಲ್ಲೆಲ್ಲಿ ಆಗತಾವೋ ಅಲ್ಲಲ್ಲಿ ತನು ಮನ ಧನ ಸಹಾಯ ಮಾಡಬೇಕು ಅಥವಾ ಹಾಗೇಂತ ನಮ್ಮ ಆಶಾ ಇರಬಹುದೇನೋ.

ಈಗ ನಮ್ಮಲ್ಲೆ ತನುವಿಗೊಂದು ಎನ್‍ಡಿಆರ್‌ಎಫ್ ಹಾಗೂ ಧನಕ್ಕೆ ಇನ್ನೊಂದು ಎನ್‍ಡಿಆರ್‌ಎಫ್ ಅವ. ಆದರ ಮನಕ್ಕ ಅಂತ ಮಾತ್ರ ಪ್ರತ್ಯೇಕ ಸಂಸ್ಥೆ ಇಲ್ಲ. ಅದು ಕೇಂದ್ರ ಸರಕಾರದ ಮನದಲ್ಲಿ ಇರಬಹುದೇನೋ, ಹೋಗಲಿ ಬಿಡರಿ.

ಒಂದನೇ ಎನ್‍ಡಿಆರ್‌ಎಫ್ ಅಂದರ ರಾಷ್ಟ್ರೀಯ ಪ್ರಕೃತಿ ವಿಕೋಪ ಪ್ರತಿಕ್ರಿಯೆ ದಳ. (NDRF national disaster response force) ದೆಹಲಿಯ ಮುಖ್ಯ ಕಚೇರಿ ಬಿಟ್ಟರ ಇದಕ್ಕ ಬ್ಯಾರೆ ಬ್ಯಾರೆ ರಾಜ್ಯದೊಳಗ 17 ಉಪವಿಭಾಗ ಅವ.

ಇದರಾಗ ಭಾರತೀಯ ಪೊಲೀಸ್ ಸೇವೆ ಹಾಗೂ ಭಾರತೀಯ ಅರೆಸೇನಾ ದಳದ ಅಧಿಕಾರಿಗಳು ಮತ್ತ ಬ್ಯಾರೆ ಬ್ಯಾರೆ ಸಿಬ್ಬಂದಿ ಇದ್ದಾರ. ಈ ಹಿಂದಿನ 15 ವರ್ಷದೊಳಗ ಇವರೆಲ್ಲಾ ಕೂಡಿ ಸುಮಾರು 17 ಲಕ್ಷ ಜನರ ಜೀವಾ ಉಳಿಸ್ಯಾರ. ಇಂಥವರ ಕೆಲಸದ ಬಗ್ಗೆ ಯಾರಿಗೂ ತಕರಾರು ಇಲ್ಲ. ಇರಲಿಕ್ಕೆ ಸಾಧ್ಯನೂ ಇಲ್ಲ. ಇದರಾಗೇನು ರಾಜಕೀಯ ಇದ್ದಂತಿಲ್ಲ. ಹೋದವರ್ಷ ಮಹಾರಾಷ್ಟ್ರದ ಕೊಲ್ಹಾಪುರದ ಪ್ರವಾಹದಾಗ ಉಳದ ಹೆಣಮಗಳೊಬ್ಬಳು ಆ ಸಿಬ್ಬಂದಿ ಕಾಲಿಗೆ ಬಿದ್ದು ‘ನೀನೇ ನಮ್ಮ ಪಾಂಡುರಂಗೋ ಯಪ್ಪಾ’ ಅಂತ ಹೇಳಿದ್ದ ವಿಡಿಯೋ ನಿಮ್ಮ ಫೋನಿನ ವಾಟ್ಸಪ್ಪಿಗೆ ಬಂದಿತ್ತಲ್ಲ, ಅಕೀ ಭಾವನೆಯೇ ಉಳಿದೆ ಎಲ್ಲಾರ ಭಾವನೆ.

ಆದರ ಎಲ್ಲಾರ ತಕರಾರು ಇರುವುದು ಆ ಇನ್ನೊಂದು ಎನ್‍ಡಿಆರ್‌ಎಫ್‍ನ ಬಗ್ಗೆ. ಇದು ರಾಷ್ಟ್ರೀಯ ಪ್ರಕೃತಿ ವಿಕೋಪ ಪರಿಹಾರ ನಿಧಿ (NDRF national disaster response force).

ಇವರು ರಾಜ್ಯಗಳೊಳಗ ವಿಕೋಪ ನಡೆದಾಗ ಅವರಿಗೆ ದುಡ್ಡು ಕೊಡುವವರು. (ಕೇಂದ್ರಕ್ಕಂತೂ ಪ್ರಕೃತಿ ವಿಕೋಪ ಬರಂಗಿಲ್ಲಲ್ಲಾ. ಅಲ್ಲಿ ಬರೋ ವಿಕೋಪ ಅಂದರ ಬರೇ ಎಲೆಕ್ಷನ್ ಒಂದ)

ಇವರು ಯಾವಾಗ ಯಾರಿಗೆ ಏನು ಕೊಡುತ್ತಾರೆ ಅನ್ನೋದು ಮಾತ್ರ ಭಾರತೀಯ ಮತದಾರನ ಮನಸ್ಸಿಗಿಂತಾ ನಿಗೂಢ. ಯಾವಾಗರ ಹಿಂದೀ ಝೀ ಟಿವಿಯೊಳಗ ನಿಗೂಢ ರಹಸ್ಯ ಅಂತ ಇದರದ್ದೂ ಒಂದು ಎಪಿಸೋಡು ಬರಬಹುದು.

ಉದಾಹರಣೆಗೆ, ಈ ಸತೆ, ಕರ್ನಾಟಕಕ್ಕ 1,872 ಕೋಟಿ ಕೊಟ್ಟಾರ (ಕೇಂದ್ರ ಹಾಗೂ ರಾಜ್ಯ ನಿಧಿಗಳ ಲೆಕ್ಕದಲ್ಲಿ) ಮಹಾರಾಷ್ಟ್ರಕ್ಕ 3,150 ಕೋಟಿ, ಓಡಿಶಾಗೆ 3,666 ಕೋಟಿ . ರಾಜಸ್ತಾನಕ್ಕೆ 1,666 ಕೋಟಿ, ಆಂಧ್ರ 770 ಕೋಟಿ, ಮತ್ತ ಉತ್ತರ ಪ್ರದೇಶಕ್ಕೆ 541 ಕೋಟಿ . ಹಿಮಾಚಲ ಪ್ರದೇಶಕ್ಕೆ 434 ಕೋಟಿ, ಗೋವಾ ಮಿಜೋರಾಮಿಗೆ ಏನಿಲ್ಲಾ. ನಾಗಾಲ್ಯಾಂಡಿಗೆ 5 ಕೋಟಿ ಹಾಗೂ ಮಣಿಪುರಕ್ಕೆ 9.9 ಕೋಟಿ ಬಿಡುಗಡೆ ಆಗೇದ.

ಇದಲ್ಲಾಗಿಂತ ಮಜಾ ಏನೆಂದರ ನಾವು ಆರಿಸಿ ಕಳಿಸಿದ ಘನ ಸರಕಾರದವರು ನಾವು ಕಟ್ಟಿದ ಸುಂಕದ ರೊಕ್ಕದಾಗ ಈ ಸಂಸ್ಥಾದ ತಿಜೋರಿಯೊಳಗ ಒಂದು ವರ್ಷಕ್ಕೆ ಇಟ್ಟಿರೋದು ಬರೇ 23,465 ಕೋಟಿ ರೂಪಾಯಿ.

ಕರ್ನಾಟಕದ ಜನಾ ಒಂದು ವರ್ಷಕ್ಕ ಸುಮಾರು 29,000 ಕೋಟಿ ರೂಪಾಯಿ ಬರೇ ಜಿಎಸ್‍ಟಿ ಅಂದರ ಗಬ್ಬರ ಸಿಂಗ್ ಟ್ಯಾಕ್ಸ ಕಟ್ಟತಾರ. ಬ್ಯಾರೆ ಟ್ಯಾಕ್ಸಿನ ಲೆಕ್ಕಾ ಬ್ಯಾರೆ ಮತ್ತ. ಇದರಿಂದ ಸೆಂಟರಿನವರ ಹಾರ್ಟು ಎಷ್ಟು ದೊಡ್ಡದು ಅಂತ ತಿಳಕೋಬಹುದು.

ಅದರಾಗೂನು, ಎಲ್ಲಾ ರಾಜ್ಯಗಳ ಎಲ್ಲಾ ಥರದ ವಿಕೋಪಗಳಿಗೆ ಅವರು ಬಿಡುಗಡೆ ಮಾಡಿರುವುದು ಬರೇ 6,614 ಕೋಟಿ. ಅವರ ತಿಜೋರಿಯೊಳಗ ಇನ್ನೂ 51 ಶೇಕಡಾ ಹಣದ ಶಿಲ್ಕು ಹಂಗ ಬಾಕಿ ಉಳಿದದ.

ನಮ್ ಸೀಎಮ್ ಬಿ.ಎಸ್ ಯಡಿಯೂರಪ್ಪನವರು ಮನ್ನೆ ನೆರೆ ಪರಿಹಾರಕ್ಕೆ 38,000 ಕೋಟಿ ರೂಪಾಯಿ ಕೇಳಿದಾಗ ಮ್ಯಾಲಿನವರು ನಿಮ್ಮ ನಷ್ಟದ ಅಂದಾಜೇ ಸರಿ ಇಲ್ಲ ಎಂದು ಬೈದು ಕಳಿಸಿದ್ದು ಯಾಕ ಅಂತ ಗೊತ್ತಾತಲ್ಲಾ ? ನೋಡ್ರಿ, ಹೆಂಗದ ಮಜಾ!

ಹೆಚ್ಚಿನ ವಿವರಗಳಿಗೆ –

www.ndrf.gov.in

https://www.ndmindia.nic.in/images/allocation.PDF

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...