Homeಎಕಾನಮಿಡೇಟಾ ಖೋಲಿ: NDRF ಅಂದ್ರ ಏನಂತ ಗೊತ್ತೈತೇನ್ರಿ....

ಡೇಟಾ ಖೋಲಿ: NDRF ಅಂದ್ರ ಏನಂತ ಗೊತ್ತೈತೇನ್ರಿ….

- Advertisement -
- Advertisement -

ಏನಿಲ್ಲಾ, ಈ ನಮ್ಮ ಕರುನಾಡಿನ ಸಚಿವ ಸಂಪುಷ್ಟದ ಸನ್ಮಾನ್ಯ ಸದಸ್ಯರೆಲ್ಲಾ ʻNDRF NDRF’ ಅನ್ನಾಕ ಹತ್ಯಾರೆಲ್ಲಾ, ಏನದು?

ಅಷ್ಟ ಅಲ್ಲಾ, ಇದು ಒಂದಲ್ಲ. ಎರಡು. ಬದಲಾದ ರಾಜಕೀಯ ಪರಿಸ್ಥಿತಿಯೊಳಗ ಎಲ್ಲದಕ್ಕೂ ಎರಡೆರಡು ರೂಪ ಇರತಾವಲ್ಲಾ, ನಾಯಕರದು ರಾಜ್ಯಮಟ್ಟದೊಳಗ ಒಂದು, ತಮ್ಮ ಕ್ಷೇತ್ರದೊಳಗ ಇನ್ನೊಂದು ರೂಪ ಇರ್ತದಲ್ಲಾ, ಹಂಗ, ಇದರದೂ ಎರಡು ರೂಪ ಅದಾವು.

ದೇಶದ ಯಾವುದೇ ಮೂಲಿಯೊಳಗ ನೆರೆ, ಬರ, ಭೂಕಂಪ, ಸುಂಟರಗಾಳಿ ಅಥವಾ ಇತರ ಪ್ರಕೃತಿ ವಿಕೋಪಗಳು ಆದರ ಅಲ್ಲಿಗೆ ಸಹಾಯ ಮಾಡಲಿಕ್ಕೆ ಅಂತ ಇರೋದು ಭಾರತೀಯ ಪ್ರಕೃತಿ ವಿಕೋಪ ನಿರ್ವಹಣಾ ಸಂಸ್ಥೆ. ಇದು ಕೇಂದ್ರ ಗೃಹ ಇಲಾಖೆಯ ಪ್ರಕೃತಿ ವಿಕೋಪ ವಿಭಾಗದ ಒಂದು ಭಾಗ. ಈ ಸಂಸ್ಥೆಯ ಕೆಳಗಡೆ ಇರೋವು ವಿವಿಧ ರಾಜ್ಯಗಳ ಪ್ರಕೃತಿ ವಿಕೋಪ ನಿರ್ವಹಣಾ ಸಂಸ್ಥೆಗಳು. ಸನ್ 2005 ರಲ್ಲಿ ಜಾರಿಯಾದ ಪ್ರಕೃತಿ ವಿಕೋಪ ನಿರ್ವಹಣಾ ಕಾಯಿದೆಯ ಕೆಳಗ ಈ ಸಂಸ್ಥೆಗಳು ಆರಂಭವಾದವು.

ಇಂಥಾ ಎಜೆನ್ಸಿಗಳಿಂದ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಪ್ರಕೃತಿ ವಿಕೋಪಗಳು ಎಲ್ಲೆಲ್ಲಿ ಆಗತಾವೋ ಅಲ್ಲಲ್ಲಿ ತನು ಮನ ಧನ ಸಹಾಯ ಮಾಡಬೇಕು ಅಥವಾ ಹಾಗೇಂತ ನಮ್ಮ ಆಶಾ ಇರಬಹುದೇನೋ.

ಈಗ ನಮ್ಮಲ್ಲೆ ತನುವಿಗೊಂದು ಎನ್‍ಡಿಆರ್‌ಎಫ್ ಹಾಗೂ ಧನಕ್ಕೆ ಇನ್ನೊಂದು ಎನ್‍ಡಿಆರ್‌ಎಫ್ ಅವ. ಆದರ ಮನಕ್ಕ ಅಂತ ಮಾತ್ರ ಪ್ರತ್ಯೇಕ ಸಂಸ್ಥೆ ಇಲ್ಲ. ಅದು ಕೇಂದ್ರ ಸರಕಾರದ ಮನದಲ್ಲಿ ಇರಬಹುದೇನೋ, ಹೋಗಲಿ ಬಿಡರಿ.

ಒಂದನೇ ಎನ್‍ಡಿಆರ್‌ಎಫ್ ಅಂದರ ರಾಷ್ಟ್ರೀಯ ಪ್ರಕೃತಿ ವಿಕೋಪ ಪ್ರತಿಕ್ರಿಯೆ ದಳ. (NDRF national disaster response force) ದೆಹಲಿಯ ಮುಖ್ಯ ಕಚೇರಿ ಬಿಟ್ಟರ ಇದಕ್ಕ ಬ್ಯಾರೆ ಬ್ಯಾರೆ ರಾಜ್ಯದೊಳಗ 17 ಉಪವಿಭಾಗ ಅವ.

ಇದರಾಗ ಭಾರತೀಯ ಪೊಲೀಸ್ ಸೇವೆ ಹಾಗೂ ಭಾರತೀಯ ಅರೆಸೇನಾ ದಳದ ಅಧಿಕಾರಿಗಳು ಮತ್ತ ಬ್ಯಾರೆ ಬ್ಯಾರೆ ಸಿಬ್ಬಂದಿ ಇದ್ದಾರ. ಈ ಹಿಂದಿನ 15 ವರ್ಷದೊಳಗ ಇವರೆಲ್ಲಾ ಕೂಡಿ ಸುಮಾರು 17 ಲಕ್ಷ ಜನರ ಜೀವಾ ಉಳಿಸ್ಯಾರ. ಇಂಥವರ ಕೆಲಸದ ಬಗ್ಗೆ ಯಾರಿಗೂ ತಕರಾರು ಇಲ್ಲ. ಇರಲಿಕ್ಕೆ ಸಾಧ್ಯನೂ ಇಲ್ಲ. ಇದರಾಗೇನು ರಾಜಕೀಯ ಇದ್ದಂತಿಲ್ಲ. ಹೋದವರ್ಷ ಮಹಾರಾಷ್ಟ್ರದ ಕೊಲ್ಹಾಪುರದ ಪ್ರವಾಹದಾಗ ಉಳದ ಹೆಣಮಗಳೊಬ್ಬಳು ಆ ಸಿಬ್ಬಂದಿ ಕಾಲಿಗೆ ಬಿದ್ದು ‘ನೀನೇ ನಮ್ಮ ಪಾಂಡುರಂಗೋ ಯಪ್ಪಾ’ ಅಂತ ಹೇಳಿದ್ದ ವಿಡಿಯೋ ನಿಮ್ಮ ಫೋನಿನ ವಾಟ್ಸಪ್ಪಿಗೆ ಬಂದಿತ್ತಲ್ಲ, ಅಕೀ ಭಾವನೆಯೇ ಉಳಿದೆ ಎಲ್ಲಾರ ಭಾವನೆ.

ಆದರ ಎಲ್ಲಾರ ತಕರಾರು ಇರುವುದು ಆ ಇನ್ನೊಂದು ಎನ್‍ಡಿಆರ್‌ಎಫ್‍ನ ಬಗ್ಗೆ. ಇದು ರಾಷ್ಟ್ರೀಯ ಪ್ರಕೃತಿ ವಿಕೋಪ ಪರಿಹಾರ ನಿಧಿ (NDRF national disaster response force).

ಇವರು ರಾಜ್ಯಗಳೊಳಗ ವಿಕೋಪ ನಡೆದಾಗ ಅವರಿಗೆ ದುಡ್ಡು ಕೊಡುವವರು. (ಕೇಂದ್ರಕ್ಕಂತೂ ಪ್ರಕೃತಿ ವಿಕೋಪ ಬರಂಗಿಲ್ಲಲ್ಲಾ. ಅಲ್ಲಿ ಬರೋ ವಿಕೋಪ ಅಂದರ ಬರೇ ಎಲೆಕ್ಷನ್ ಒಂದ)

ಇವರು ಯಾವಾಗ ಯಾರಿಗೆ ಏನು ಕೊಡುತ್ತಾರೆ ಅನ್ನೋದು ಮಾತ್ರ ಭಾರತೀಯ ಮತದಾರನ ಮನಸ್ಸಿಗಿಂತಾ ನಿಗೂಢ. ಯಾವಾಗರ ಹಿಂದೀ ಝೀ ಟಿವಿಯೊಳಗ ನಿಗೂಢ ರಹಸ್ಯ ಅಂತ ಇದರದ್ದೂ ಒಂದು ಎಪಿಸೋಡು ಬರಬಹುದು.

ಉದಾಹರಣೆಗೆ, ಈ ಸತೆ, ಕರ್ನಾಟಕಕ್ಕ 1,872 ಕೋಟಿ ಕೊಟ್ಟಾರ (ಕೇಂದ್ರ ಹಾಗೂ ರಾಜ್ಯ ನಿಧಿಗಳ ಲೆಕ್ಕದಲ್ಲಿ) ಮಹಾರಾಷ್ಟ್ರಕ್ಕ 3,150 ಕೋಟಿ, ಓಡಿಶಾಗೆ 3,666 ಕೋಟಿ . ರಾಜಸ್ತಾನಕ್ಕೆ 1,666 ಕೋಟಿ, ಆಂಧ್ರ 770 ಕೋಟಿ, ಮತ್ತ ಉತ್ತರ ಪ್ರದೇಶಕ್ಕೆ 541 ಕೋಟಿ . ಹಿಮಾಚಲ ಪ್ರದೇಶಕ್ಕೆ 434 ಕೋಟಿ, ಗೋವಾ ಮಿಜೋರಾಮಿಗೆ ಏನಿಲ್ಲಾ. ನಾಗಾಲ್ಯಾಂಡಿಗೆ 5 ಕೋಟಿ ಹಾಗೂ ಮಣಿಪುರಕ್ಕೆ 9.9 ಕೋಟಿ ಬಿಡುಗಡೆ ಆಗೇದ.

ಇದಲ್ಲಾಗಿಂತ ಮಜಾ ಏನೆಂದರ ನಾವು ಆರಿಸಿ ಕಳಿಸಿದ ಘನ ಸರಕಾರದವರು ನಾವು ಕಟ್ಟಿದ ಸುಂಕದ ರೊಕ್ಕದಾಗ ಈ ಸಂಸ್ಥಾದ ತಿಜೋರಿಯೊಳಗ ಒಂದು ವರ್ಷಕ್ಕೆ ಇಟ್ಟಿರೋದು ಬರೇ 23,465 ಕೋಟಿ ರೂಪಾಯಿ.

ಕರ್ನಾಟಕದ ಜನಾ ಒಂದು ವರ್ಷಕ್ಕ ಸುಮಾರು 29,000 ಕೋಟಿ ರೂಪಾಯಿ ಬರೇ ಜಿಎಸ್‍ಟಿ ಅಂದರ ಗಬ್ಬರ ಸಿಂಗ್ ಟ್ಯಾಕ್ಸ ಕಟ್ಟತಾರ. ಬ್ಯಾರೆ ಟ್ಯಾಕ್ಸಿನ ಲೆಕ್ಕಾ ಬ್ಯಾರೆ ಮತ್ತ. ಇದರಿಂದ ಸೆಂಟರಿನವರ ಹಾರ್ಟು ಎಷ್ಟು ದೊಡ್ಡದು ಅಂತ ತಿಳಕೋಬಹುದು.

ಅದರಾಗೂನು, ಎಲ್ಲಾ ರಾಜ್ಯಗಳ ಎಲ್ಲಾ ಥರದ ವಿಕೋಪಗಳಿಗೆ ಅವರು ಬಿಡುಗಡೆ ಮಾಡಿರುವುದು ಬರೇ 6,614 ಕೋಟಿ. ಅವರ ತಿಜೋರಿಯೊಳಗ ಇನ್ನೂ 51 ಶೇಕಡಾ ಹಣದ ಶಿಲ್ಕು ಹಂಗ ಬಾಕಿ ಉಳಿದದ.

ನಮ್ ಸೀಎಮ್ ಬಿ.ಎಸ್ ಯಡಿಯೂರಪ್ಪನವರು ಮನ್ನೆ ನೆರೆ ಪರಿಹಾರಕ್ಕೆ 38,000 ಕೋಟಿ ರೂಪಾಯಿ ಕೇಳಿದಾಗ ಮ್ಯಾಲಿನವರು ನಿಮ್ಮ ನಷ್ಟದ ಅಂದಾಜೇ ಸರಿ ಇಲ್ಲ ಎಂದು ಬೈದು ಕಳಿಸಿದ್ದು ಯಾಕ ಅಂತ ಗೊತ್ತಾತಲ್ಲಾ ? ನೋಡ್ರಿ, ಹೆಂಗದ ಮಜಾ!

ಹೆಚ್ಚಿನ ವಿವರಗಳಿಗೆ –

www.ndrf.gov.in

https://www.ndmindia.nic.in/images/allocation.PDF

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...