Homeಎಕಾನಮಿಡೇಟಾ ಖೋಲಿ: NDRF ಅಂದ್ರ ಏನಂತ ಗೊತ್ತೈತೇನ್ರಿ....

ಡೇಟಾ ಖೋಲಿ: NDRF ಅಂದ್ರ ಏನಂತ ಗೊತ್ತೈತೇನ್ರಿ….

- Advertisement -
- Advertisement -

ಏನಿಲ್ಲಾ, ಈ ನಮ್ಮ ಕರುನಾಡಿನ ಸಚಿವ ಸಂಪುಷ್ಟದ ಸನ್ಮಾನ್ಯ ಸದಸ್ಯರೆಲ್ಲಾ ʻNDRF NDRF’ ಅನ್ನಾಕ ಹತ್ಯಾರೆಲ್ಲಾ, ಏನದು?

ಅಷ್ಟ ಅಲ್ಲಾ, ಇದು ಒಂದಲ್ಲ. ಎರಡು. ಬದಲಾದ ರಾಜಕೀಯ ಪರಿಸ್ಥಿತಿಯೊಳಗ ಎಲ್ಲದಕ್ಕೂ ಎರಡೆರಡು ರೂಪ ಇರತಾವಲ್ಲಾ, ನಾಯಕರದು ರಾಜ್ಯಮಟ್ಟದೊಳಗ ಒಂದು, ತಮ್ಮ ಕ್ಷೇತ್ರದೊಳಗ ಇನ್ನೊಂದು ರೂಪ ಇರ್ತದಲ್ಲಾ, ಹಂಗ, ಇದರದೂ ಎರಡು ರೂಪ ಅದಾವು.

ದೇಶದ ಯಾವುದೇ ಮೂಲಿಯೊಳಗ ನೆರೆ, ಬರ, ಭೂಕಂಪ, ಸುಂಟರಗಾಳಿ ಅಥವಾ ಇತರ ಪ್ರಕೃತಿ ವಿಕೋಪಗಳು ಆದರ ಅಲ್ಲಿಗೆ ಸಹಾಯ ಮಾಡಲಿಕ್ಕೆ ಅಂತ ಇರೋದು ಭಾರತೀಯ ಪ್ರಕೃತಿ ವಿಕೋಪ ನಿರ್ವಹಣಾ ಸಂಸ್ಥೆ. ಇದು ಕೇಂದ್ರ ಗೃಹ ಇಲಾಖೆಯ ಪ್ರಕೃತಿ ವಿಕೋಪ ವಿಭಾಗದ ಒಂದು ಭಾಗ. ಈ ಸಂಸ್ಥೆಯ ಕೆಳಗಡೆ ಇರೋವು ವಿವಿಧ ರಾಜ್ಯಗಳ ಪ್ರಕೃತಿ ವಿಕೋಪ ನಿರ್ವಹಣಾ ಸಂಸ್ಥೆಗಳು. ಸನ್ 2005 ರಲ್ಲಿ ಜಾರಿಯಾದ ಪ್ರಕೃತಿ ವಿಕೋಪ ನಿರ್ವಹಣಾ ಕಾಯಿದೆಯ ಕೆಳಗ ಈ ಸಂಸ್ಥೆಗಳು ಆರಂಭವಾದವು.

ಇಂಥಾ ಎಜೆನ್ಸಿಗಳಿಂದ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಪ್ರಕೃತಿ ವಿಕೋಪಗಳು ಎಲ್ಲೆಲ್ಲಿ ಆಗತಾವೋ ಅಲ್ಲಲ್ಲಿ ತನು ಮನ ಧನ ಸಹಾಯ ಮಾಡಬೇಕು ಅಥವಾ ಹಾಗೇಂತ ನಮ್ಮ ಆಶಾ ಇರಬಹುದೇನೋ.

ಈಗ ನಮ್ಮಲ್ಲೆ ತನುವಿಗೊಂದು ಎನ್‍ಡಿಆರ್‌ಎಫ್ ಹಾಗೂ ಧನಕ್ಕೆ ಇನ್ನೊಂದು ಎನ್‍ಡಿಆರ್‌ಎಫ್ ಅವ. ಆದರ ಮನಕ್ಕ ಅಂತ ಮಾತ್ರ ಪ್ರತ್ಯೇಕ ಸಂಸ್ಥೆ ಇಲ್ಲ. ಅದು ಕೇಂದ್ರ ಸರಕಾರದ ಮನದಲ್ಲಿ ಇರಬಹುದೇನೋ, ಹೋಗಲಿ ಬಿಡರಿ.

ಒಂದನೇ ಎನ್‍ಡಿಆರ್‌ಎಫ್ ಅಂದರ ರಾಷ್ಟ್ರೀಯ ಪ್ರಕೃತಿ ವಿಕೋಪ ಪ್ರತಿಕ್ರಿಯೆ ದಳ. (NDRF national disaster response force) ದೆಹಲಿಯ ಮುಖ್ಯ ಕಚೇರಿ ಬಿಟ್ಟರ ಇದಕ್ಕ ಬ್ಯಾರೆ ಬ್ಯಾರೆ ರಾಜ್ಯದೊಳಗ 17 ಉಪವಿಭಾಗ ಅವ.

ಇದರಾಗ ಭಾರತೀಯ ಪೊಲೀಸ್ ಸೇವೆ ಹಾಗೂ ಭಾರತೀಯ ಅರೆಸೇನಾ ದಳದ ಅಧಿಕಾರಿಗಳು ಮತ್ತ ಬ್ಯಾರೆ ಬ್ಯಾರೆ ಸಿಬ್ಬಂದಿ ಇದ್ದಾರ. ಈ ಹಿಂದಿನ 15 ವರ್ಷದೊಳಗ ಇವರೆಲ್ಲಾ ಕೂಡಿ ಸುಮಾರು 17 ಲಕ್ಷ ಜನರ ಜೀವಾ ಉಳಿಸ್ಯಾರ. ಇಂಥವರ ಕೆಲಸದ ಬಗ್ಗೆ ಯಾರಿಗೂ ತಕರಾರು ಇಲ್ಲ. ಇರಲಿಕ್ಕೆ ಸಾಧ್ಯನೂ ಇಲ್ಲ. ಇದರಾಗೇನು ರಾಜಕೀಯ ಇದ್ದಂತಿಲ್ಲ. ಹೋದವರ್ಷ ಮಹಾರಾಷ್ಟ್ರದ ಕೊಲ್ಹಾಪುರದ ಪ್ರವಾಹದಾಗ ಉಳದ ಹೆಣಮಗಳೊಬ್ಬಳು ಆ ಸಿಬ್ಬಂದಿ ಕಾಲಿಗೆ ಬಿದ್ದು ‘ನೀನೇ ನಮ್ಮ ಪಾಂಡುರಂಗೋ ಯಪ್ಪಾ’ ಅಂತ ಹೇಳಿದ್ದ ವಿಡಿಯೋ ನಿಮ್ಮ ಫೋನಿನ ವಾಟ್ಸಪ್ಪಿಗೆ ಬಂದಿತ್ತಲ್ಲ, ಅಕೀ ಭಾವನೆಯೇ ಉಳಿದೆ ಎಲ್ಲಾರ ಭಾವನೆ.

ಆದರ ಎಲ್ಲಾರ ತಕರಾರು ಇರುವುದು ಆ ಇನ್ನೊಂದು ಎನ್‍ಡಿಆರ್‌ಎಫ್‍ನ ಬಗ್ಗೆ. ಇದು ರಾಷ್ಟ್ರೀಯ ಪ್ರಕೃತಿ ವಿಕೋಪ ಪರಿಹಾರ ನಿಧಿ (NDRF national disaster response force).

ಇವರು ರಾಜ್ಯಗಳೊಳಗ ವಿಕೋಪ ನಡೆದಾಗ ಅವರಿಗೆ ದುಡ್ಡು ಕೊಡುವವರು. (ಕೇಂದ್ರಕ್ಕಂತೂ ಪ್ರಕೃತಿ ವಿಕೋಪ ಬರಂಗಿಲ್ಲಲ್ಲಾ. ಅಲ್ಲಿ ಬರೋ ವಿಕೋಪ ಅಂದರ ಬರೇ ಎಲೆಕ್ಷನ್ ಒಂದ)

ಇವರು ಯಾವಾಗ ಯಾರಿಗೆ ಏನು ಕೊಡುತ್ತಾರೆ ಅನ್ನೋದು ಮಾತ್ರ ಭಾರತೀಯ ಮತದಾರನ ಮನಸ್ಸಿಗಿಂತಾ ನಿಗೂಢ. ಯಾವಾಗರ ಹಿಂದೀ ಝೀ ಟಿವಿಯೊಳಗ ನಿಗೂಢ ರಹಸ್ಯ ಅಂತ ಇದರದ್ದೂ ಒಂದು ಎಪಿಸೋಡು ಬರಬಹುದು.

ಉದಾಹರಣೆಗೆ, ಈ ಸತೆ, ಕರ್ನಾಟಕಕ್ಕ 1,872 ಕೋಟಿ ಕೊಟ್ಟಾರ (ಕೇಂದ್ರ ಹಾಗೂ ರಾಜ್ಯ ನಿಧಿಗಳ ಲೆಕ್ಕದಲ್ಲಿ) ಮಹಾರಾಷ್ಟ್ರಕ್ಕ 3,150 ಕೋಟಿ, ಓಡಿಶಾಗೆ 3,666 ಕೋಟಿ . ರಾಜಸ್ತಾನಕ್ಕೆ 1,666 ಕೋಟಿ, ಆಂಧ್ರ 770 ಕೋಟಿ, ಮತ್ತ ಉತ್ತರ ಪ್ರದೇಶಕ್ಕೆ 541 ಕೋಟಿ . ಹಿಮಾಚಲ ಪ್ರದೇಶಕ್ಕೆ 434 ಕೋಟಿ, ಗೋವಾ ಮಿಜೋರಾಮಿಗೆ ಏನಿಲ್ಲಾ. ನಾಗಾಲ್ಯಾಂಡಿಗೆ 5 ಕೋಟಿ ಹಾಗೂ ಮಣಿಪುರಕ್ಕೆ 9.9 ಕೋಟಿ ಬಿಡುಗಡೆ ಆಗೇದ.

ಇದಲ್ಲಾಗಿಂತ ಮಜಾ ಏನೆಂದರ ನಾವು ಆರಿಸಿ ಕಳಿಸಿದ ಘನ ಸರಕಾರದವರು ನಾವು ಕಟ್ಟಿದ ಸುಂಕದ ರೊಕ್ಕದಾಗ ಈ ಸಂಸ್ಥಾದ ತಿಜೋರಿಯೊಳಗ ಒಂದು ವರ್ಷಕ್ಕೆ ಇಟ್ಟಿರೋದು ಬರೇ 23,465 ಕೋಟಿ ರೂಪಾಯಿ.

ಕರ್ನಾಟಕದ ಜನಾ ಒಂದು ವರ್ಷಕ್ಕ ಸುಮಾರು 29,000 ಕೋಟಿ ರೂಪಾಯಿ ಬರೇ ಜಿಎಸ್‍ಟಿ ಅಂದರ ಗಬ್ಬರ ಸಿಂಗ್ ಟ್ಯಾಕ್ಸ ಕಟ್ಟತಾರ. ಬ್ಯಾರೆ ಟ್ಯಾಕ್ಸಿನ ಲೆಕ್ಕಾ ಬ್ಯಾರೆ ಮತ್ತ. ಇದರಿಂದ ಸೆಂಟರಿನವರ ಹಾರ್ಟು ಎಷ್ಟು ದೊಡ್ಡದು ಅಂತ ತಿಳಕೋಬಹುದು.

ಅದರಾಗೂನು, ಎಲ್ಲಾ ರಾಜ್ಯಗಳ ಎಲ್ಲಾ ಥರದ ವಿಕೋಪಗಳಿಗೆ ಅವರು ಬಿಡುಗಡೆ ಮಾಡಿರುವುದು ಬರೇ 6,614 ಕೋಟಿ. ಅವರ ತಿಜೋರಿಯೊಳಗ ಇನ್ನೂ 51 ಶೇಕಡಾ ಹಣದ ಶಿಲ್ಕು ಹಂಗ ಬಾಕಿ ಉಳಿದದ.

ನಮ್ ಸೀಎಮ್ ಬಿ.ಎಸ್ ಯಡಿಯೂರಪ್ಪನವರು ಮನ್ನೆ ನೆರೆ ಪರಿಹಾರಕ್ಕೆ 38,000 ಕೋಟಿ ರೂಪಾಯಿ ಕೇಳಿದಾಗ ಮ್ಯಾಲಿನವರು ನಿಮ್ಮ ನಷ್ಟದ ಅಂದಾಜೇ ಸರಿ ಇಲ್ಲ ಎಂದು ಬೈದು ಕಳಿಸಿದ್ದು ಯಾಕ ಅಂತ ಗೊತ್ತಾತಲ್ಲಾ ? ನೋಡ್ರಿ, ಹೆಂಗದ ಮಜಾ!

ಹೆಚ್ಚಿನ ವಿವರಗಳಿಗೆ –

www.ndrf.gov.in

https://www.ndmindia.nic.in/images/allocation.PDF

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...