Homeಮುಖಪುಟಬಂಧನ ಕೇಂದ್ರದಿಂದ ವಿದೇಶಿಯರ ಗಡೀಪಾರು ಮಾಡುವಲ್ಲಿ ಅಸ್ಸಾಂ ಸರ್ಕಾರ ವಿಫಲ - ಸುಪ್ರೀಂಕೋರ್ಟ್ ಟೀಕೆ

ಬಂಧನ ಕೇಂದ್ರದಿಂದ ವಿದೇಶಿಯರ ಗಡೀಪಾರು ಮಾಡುವಲ್ಲಿ ಅಸ್ಸಾಂ ಸರ್ಕಾರ ವಿಫಲ – ಸುಪ್ರೀಂಕೋರ್ಟ್ ಟೀಕೆ

- Advertisement -
- Advertisement -

ವಿದೇಶಿಯರ ಗಡೀಪಾರು ಮಾಡುವ ಬದಲು ರಾಜ್ಯದ ಬಂಧನ ಕೇಂದ್ರಗಳಲ್ಲಿ ಏಕೆ ಇರಿಸಲಾಗಿದೆ ಎಂಬುದನ್ನು ವಿವರಿಸಲು ವಿಫಲವಾದ ಅಸ್ಸಾಂ ಸರ್ಕಾರವನ್ನು ಸುಪ್ರೀಂ ಕೋರ್ಟ್ ಬುಧವಾರ ಟೀಕಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಎನ್ ಕೋಟೀಶ್ವರ್ ಸಿಂಗ್ ಅವರ ಪೀಠವು ಅಸ್ಸಾಂನ ಗೋಲ್ಪಾರ ಜಿಲ್ಲೆಯ ಮಾಟಿಯಾ ಟ್ರಾನ್ಸಿಸ್ಟ್‌ ಶಿಬಿರದಲ್ಲಿ ಬಂಧಿಸಲ್ಪಟ್ಟ 270 ವಿದೇಶಿ ಪ್ರಜೆಗಳ ಗಡೀಪಾರು ಸಂಬಂಧ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸುತ್ತಿದೆ ಎಂದು ಪಿಟಿಐ ವರದಿ ಮಾಡಿದೆ. ವಿದೇಶಿಯರ ಗಡೀಪಾರು

ಡಿಸೆಂಬರ್ 9 ರಂದು ರಾಜ್ಯ ಸರ್ಕಾರಕ್ಕೆ ಅಫಿಡವಿಟ್ ಸಲ್ಲಿಸಲು ಆರು ವಾರಗಳ ಕಾಲಾವಕಾಶ ನೀಡಲಾಗಿದ್ದು, ಶಿಬಿರದಲ್ಲಿ ವಿದೇಶಿ ಪ್ರಜೆಗಳನ್ನು ಬಂಧಿಸಲು ಕಾರಣಗಳನ್ನು ಮತ್ತು ಅವರ ಗಡೀಪಾರುಗಾಗಿ ತೆಗೆದುಕೊಂಡ ಕ್ರಮಗಳ ವಿವರಗಳನ್ನು ಒದಗಿಸಬೇಕೆಂದು ನಿರೀಕ್ಷಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ. ಆದಾಗ್ಯೂ, ರಾಜ್ಯ ಸರ್ಕಾರ ಸಲ್ಲಿಸಿದ ಅಫಿಡವಿಟ್ ದೋಷಪೂರಿತವಾಗಿದೆ ಎಂದು ಪೀಠ ಹೇಳಿದೆ.

“ಬಂಧನಕ್ಕೆ ಯಾವುದೇ ಸಮರ್ಥನೆಯನ್ನು ಅಫಿಡವಿಟ್ ನೀಡುವುದಿಲ್ಲ… ಗಡೀಪಾರು ಮಾಡಲು ತೆಗೆದುಕೊಂಡ ಕ್ರಮಗಳನ್ನು ನಿಗದಿಪಡಿಸಲಾಗಿಲ್ಲ. ಇದು ಈ ನ್ಯಾಯಾಲಯದ ಆದೇಶಗಳ ಸಂಪೂರ್ಣ ಉಲ್ಲಂಘನೆಯಾಗಿದೆ.” ಎಂದು ಪೀಠವು ಹೇಳಿದೆ ಎಂದು ಪಿಟಿಐ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬದುಕುವ ಮೂಲಭೂತ ಹಕ್ಕು ನಾಗರಿಕರಿಗೆ ಮಾತ್ರವಲ್ಲದೆ ವಿದೇಶಿಯರು ಸೇರಿದಂತೆ ಎಲ್ಲರಿಗೂ ಅನ್ವಯಿಸುತ್ತದೆ ಎಂದು ನ್ಯಾಯಾಲಯ ಹೇಳಿದ್ದು, 270 ಜನರನ್ನು ಅವರ ದೇಶಗಳಿಗೆ ಗಡೀಪಾರು ಮಾಡಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಮುಂದಿನ ವಿಚಾರಣೆಯಲ್ಲಿ ವಿವರಣೆಯೊಂದಿಗೆ ವರ್ಚುವಲ್ ಆಗಿ ಹಾಜರಾಗುವಂತೆ ಮುಖ್ಯ ಕಾರ್ಯದರ್ಶಿಗೆ ನ್ಯಾಯಾಲಯ ಆದೇಶಿಸಿದೆ.

ವಿಚಾರಣೆಯ ಸಮಯದಲ್ಲಿ, ರಾಜ್ಯ ಸರ್ಕಾರವನ್ನು ಪ್ರತಿನಿಧಿಸುವ ವಕೀಲರು ವಿದೇಶಿಯರ ನ್ಯಾಯಮಂಡಳಿಯು ವ್ಯಕ್ತಿಗಳನ್ನು ವಿದೇಶಿಯರೆಂದು ಘೋಷಿಸಿದ ನಂತರವೇ ಅವರನ್ನು ಬಂಧಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಆದಾಗ್ಯೂ, ಗಡೀಪಾರು ಪ್ರಕ್ರಿಯೆಯನ್ನು ಪ್ರಾರಂಭಿಸದೆ ಬಂಧನಗಳು ಏಕೆ ಮುಂದುವರೆದಿವೆ ಎಂದು ಪೀಠ ಕೇಳಿತು.

ರಾಜ್ಯ ಸರ್ಕಾರದ ವಕೀಲರು ಅಫಿಡವಿಟ್ ಗೌಪ್ಯವಾಗಿದ್ದು, ಅದನ್ನು ಮೊಹರು ಮಾಡಬೇಕು ಎಂದು ನ್ಯಾಯಾಲಯಕ್ಕೆ ತಿಳಿಸಿದರು ಎಂದು ಲೈವ್ ಲಾ ವರದಿ ಮಾಡಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ನ್ಯಾಯಮೂರ್ತಿ ಓಕಾ ಅವರು, ಇದು ಹೇಗೆ ಸೂಕ್ಷ್ಮ ವಿಚಾರ ಎಂಬುದನ್ನು ವಿವರಿಸಲು ಕೇಳಿದ್ದಾರೆ. ಆಗ ಪ್ರತಿಕ್ರಿಯಿಸಿದ ವಕೀಲರು, ಅಫಿಡವಿಟ್‌ನಲ್ಲಿ ವಿದೇಶಿಯರ ವಿಳಾಸಗಳು ಇವೆ ಎಂದು ಹೇಳಿದರು.

“ಸಲ್ಲಿಸಿದ ಅಫಿಡವಿಟ್‌ನ ವಿಷಯಗಳು ಗೌಪ್ಯವಾಗಿರುವುದರಿಂದ ಅದನ್ನು ಮುಚ್ಚಿದ ಲಕೋಟೆಯಲ್ಲಿ ಇಡಬೇಕು ಎಂದು ಅಸ್ಸಾಂ ವಕೀಲರು ಹೇಳುತ್ತಾರೆ. ಅದನ್ನು ಮುಚ್ಚಿದ ಲಕೋಟೆಯಲ್ಲಿ ಇಡಬೇಕೆಂದು ನಾವು ನಿರ್ದೇಶಿಸುತ್ತಿದ್ದೇವೆ, ಅದರೆ ಈ ವಿಷಯದಲ್ಲಿ ಗೌಪ್ಯತೆಯಿದೆ ಎಂಬ ವಕೀಲರ ಹೇಳಿಕೆಯ ಬಗ್ಗೆ ನಮಗೆ ಸಮಮತವಿಲ್ಲ” ಎಂದು ಪೀಠವೂ ಹೇಳಿದೆ.

ಗೋಲ್ಪಾರದಲ್ಲಿರುವ ಬಂಧನ ಕೇಂದ್ರವು ಜನವರಿ 2023 ರಲ್ಲಿ ಕಾರ್ಯಾರಂಭ ಮಾಡಿತು. ಇದು ಭಾರತದ ಅತಿದೊಡ್ಡ ಬಂಧನ ಕೇಂದ್ರವಾಗಿದ್ದು, ಸೆಪ್ಟೆಂಬರ್ 18 ರ ಹೊತ್ತಿಗೆ, ಇಲ್ಲಿ 274 ಕೈದಿಗಳನ್ನು ಇರಿಸಲಾಗಿತ್ತು.

ಡಿಸೆಂಬರ್ 9 ರಂದು ನಡೆದ ಕೊನೆಯ ವಿಚಾರಣೆಯಲ್ಲಿ, ಬಂಧನ ಶಿಬಿರದಲ್ಲಿ ಬಂಧಿಸಲ್ಪಟ್ಟ ವ್ಯಕ್ತಿಗಳ ಹೆಸರುಗಳು, ಅವರ ಬಂಧನವನ್ನು ಸಮರ್ಥಿಸುವ ದಾಖಲೆಗಳು ಮತ್ತು ಅವರನ್ನು ಗಡೀಪಾರು ಮಾಡಲು ತೆಗೆದುಕೊಂಡ ಕ್ರಮಗಳ ಕುರಿತು ಅಫಿಡವಿಟ್ ಸಲ್ಲಿಸುವಂತೆ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು ಎಂದು ಲೈವ್ ಲಾ ವರದಿ ಮಾಡಿದೆ.

ನವೆಂಬರ್ 4 ರಂದು, ಮಾಟಿಯಾ ಟ್ರಾನ್ಸಿಸ್ಟ್ ಶಿಬಿರದಲ್ಲಿನ ಪರಿಸ್ಥಿತಿಗಳು “ತೃಪ್ತಿಕರವಾಗಿಲ್ಲ” ಎಂದು ನ್ಯಾಯಾಲಯ ಹೇಳಿತ್ತು ಮತ್ತು ಒಂದು ತಿಂಗಳೊಳಗೆ ಸೌಲಭ್ಯಗಳನ್ನು ಸುಧಾರಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು. ಬಂಧನ ಕೇಂದ್ರದಲ್ಲಿರುವ ನಿರಾಶ್ರಿತರ ಜೀವನ ಪರಿಸ್ಥಿತಿಗಳನ್ನು ಪರಿಶೀಲಿಸಲು ಅಸ್ಸಾಂ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಅನಿರೀಕ್ಷಿತ ಭೇಟಿಗಳನ್ನು ನೀಡುವಂತೆ ಕೂಡಾ ಸುಪ್ರಿಂಕೋರ್ಟ್‌ ನಿರ್ದೇಶಿಸಿತ್ತು.

ಬಂಧಿತರಲ್ಲಿ ಹೆಚ್ಚಿನವರು – 102 ರೋಹಿಂಗ್ಯಾಗಳು ಮತ್ತು 32 ಚಿನ್ – ಕಿರುಕುಳದಿಂದ ಪಲಾಯನ ಮಾಡಿದ ಮ್ಯಾನ್ಮಾರ್‌ನ ನಿರಾಶ್ರಿತರಾಗಿದ್ದಾರೆ. ಸೆಪ್ಟೆಂಬರ್ 10 ರಂದು, ನ್ಯಾಯಾಲಯವು ಅಸ್ಸಾಂ ಸರ್ಕಾರಕ್ಕೆ ವಿದೇಶಿಯರನ್ನು ಗಡೀಪಾರು ಮಾಡುವ ಯೋಜನೆಯನ್ನು ಸಲ್ಲಿಸುವಂತೆ ಆದೇಶಿಸಿತು. ಸೆಪ್ಟೆಂಬರ್ 9 ರಂದು ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ ಮ್ಯಾನ್ಮಾರ್‌ನ ನೂರಕ್ಕೂ ಹೆಚ್ಚು ರೋಹಿಂಗ್ಯಾ ಮತ್ತು ಚಿನ್ ನಿರಾಶ್ರಿತರು ಶಿಬಿರದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ ಎಂದು ಸ್ಕ್ರಾಲ್ ವರದಿ ಮಾಡಿದೆ.

ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆಯಿಂದ ನೀಡಲಾದ ಕಾರ್ಡ್‌ಗಳನ್ನು ಹೊಂದಿರುವ ನಿರಾಶ್ರಿತರು, ತಮ್ಮನ್ನು ವಿಶ್ವಸಂಸ್ಥೆಯ ನಿರಾಶ್ರಿತರ ಹೈ ಕಮಿಷನರ್‌ಗೆ ಹಸ್ತಾಂತರಿಸಬೇಕು, ದೆಹಲಿಯ ಬಂಧನ ಕೇಂದ್ರಕ್ಕೆ ವರ್ಗಾಯಿಸಬೇಕು ಮತ್ತು ಅಂತಿಮವಾಗಿ ಮೂರನೇ ದೇಶದಲ್ಲಿ ಪುನರ್ವಸತಿ ಕಲ್ಪಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.

ಇದನ್ನೂಓದಿ:  ಜಲಗಾಂವ್ ರೈಲು ಅಪಘಾತ | ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆ; 8 ಮೃತದೇಹಗಳ ಗುರುತು ಪತ್ತೆ

ಜಲಗಾಂವ್ ರೈಲು ಅಪಘಾತ | ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆ; 8 ಮೃತದೇಹಗಳ ಗುರುತು ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...