Homeಮುಖಪುಟಬಂಧನ ಕೇಂದ್ರದಿಂದ ವಿದೇಶಿಯರ ಗಡೀಪಾರು ಮಾಡುವಲ್ಲಿ ಅಸ್ಸಾಂ ಸರ್ಕಾರ ವಿಫಲ - ಸುಪ್ರೀಂಕೋರ್ಟ್ ಟೀಕೆ

ಬಂಧನ ಕೇಂದ್ರದಿಂದ ವಿದೇಶಿಯರ ಗಡೀಪಾರು ಮಾಡುವಲ್ಲಿ ಅಸ್ಸಾಂ ಸರ್ಕಾರ ವಿಫಲ – ಸುಪ್ರೀಂಕೋರ್ಟ್ ಟೀಕೆ

- Advertisement -
- Advertisement -

ವಿದೇಶಿಯರ ಗಡೀಪಾರು ಮಾಡುವ ಬದಲು ರಾಜ್ಯದ ಬಂಧನ ಕೇಂದ್ರಗಳಲ್ಲಿ ಏಕೆ ಇರಿಸಲಾಗಿದೆ ಎಂಬುದನ್ನು ವಿವರಿಸಲು ವಿಫಲವಾದ ಅಸ್ಸಾಂ ಸರ್ಕಾರವನ್ನು ಸುಪ್ರೀಂ ಕೋರ್ಟ್ ಬುಧವಾರ ಟೀಕಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಎನ್ ಕೋಟೀಶ್ವರ್ ಸಿಂಗ್ ಅವರ ಪೀಠವು ಅಸ್ಸಾಂನ ಗೋಲ್ಪಾರ ಜಿಲ್ಲೆಯ ಮಾಟಿಯಾ ಟ್ರಾನ್ಸಿಸ್ಟ್‌ ಶಿಬಿರದಲ್ಲಿ ಬಂಧಿಸಲ್ಪಟ್ಟ 270 ವಿದೇಶಿ ಪ್ರಜೆಗಳ ಗಡೀಪಾರು ಸಂಬಂಧ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸುತ್ತಿದೆ ಎಂದು ಪಿಟಿಐ ವರದಿ ಮಾಡಿದೆ. ವಿದೇಶಿಯರ ಗಡೀಪಾರು

ಡಿಸೆಂಬರ್ 9 ರಂದು ರಾಜ್ಯ ಸರ್ಕಾರಕ್ಕೆ ಅಫಿಡವಿಟ್ ಸಲ್ಲಿಸಲು ಆರು ವಾರಗಳ ಕಾಲಾವಕಾಶ ನೀಡಲಾಗಿದ್ದು, ಶಿಬಿರದಲ್ಲಿ ವಿದೇಶಿ ಪ್ರಜೆಗಳನ್ನು ಬಂಧಿಸಲು ಕಾರಣಗಳನ್ನು ಮತ್ತು ಅವರ ಗಡೀಪಾರುಗಾಗಿ ತೆಗೆದುಕೊಂಡ ಕ್ರಮಗಳ ವಿವರಗಳನ್ನು ಒದಗಿಸಬೇಕೆಂದು ನಿರೀಕ್ಷಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ. ಆದಾಗ್ಯೂ, ರಾಜ್ಯ ಸರ್ಕಾರ ಸಲ್ಲಿಸಿದ ಅಫಿಡವಿಟ್ ದೋಷಪೂರಿತವಾಗಿದೆ ಎಂದು ಪೀಠ ಹೇಳಿದೆ.

“ಬಂಧನಕ್ಕೆ ಯಾವುದೇ ಸಮರ್ಥನೆಯನ್ನು ಅಫಿಡವಿಟ್ ನೀಡುವುದಿಲ್ಲ… ಗಡೀಪಾರು ಮಾಡಲು ತೆಗೆದುಕೊಂಡ ಕ್ರಮಗಳನ್ನು ನಿಗದಿಪಡಿಸಲಾಗಿಲ್ಲ. ಇದು ಈ ನ್ಯಾಯಾಲಯದ ಆದೇಶಗಳ ಸಂಪೂರ್ಣ ಉಲ್ಲಂಘನೆಯಾಗಿದೆ.” ಎಂದು ಪೀಠವು ಹೇಳಿದೆ ಎಂದು ಪಿಟಿಐ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬದುಕುವ ಮೂಲಭೂತ ಹಕ್ಕು ನಾಗರಿಕರಿಗೆ ಮಾತ್ರವಲ್ಲದೆ ವಿದೇಶಿಯರು ಸೇರಿದಂತೆ ಎಲ್ಲರಿಗೂ ಅನ್ವಯಿಸುತ್ತದೆ ಎಂದು ನ್ಯಾಯಾಲಯ ಹೇಳಿದ್ದು, 270 ಜನರನ್ನು ಅವರ ದೇಶಗಳಿಗೆ ಗಡೀಪಾರು ಮಾಡಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಮುಂದಿನ ವಿಚಾರಣೆಯಲ್ಲಿ ವಿವರಣೆಯೊಂದಿಗೆ ವರ್ಚುವಲ್ ಆಗಿ ಹಾಜರಾಗುವಂತೆ ಮುಖ್ಯ ಕಾರ್ಯದರ್ಶಿಗೆ ನ್ಯಾಯಾಲಯ ಆದೇಶಿಸಿದೆ.

ವಿಚಾರಣೆಯ ಸಮಯದಲ್ಲಿ, ರಾಜ್ಯ ಸರ್ಕಾರವನ್ನು ಪ್ರತಿನಿಧಿಸುವ ವಕೀಲರು ವಿದೇಶಿಯರ ನ್ಯಾಯಮಂಡಳಿಯು ವ್ಯಕ್ತಿಗಳನ್ನು ವಿದೇಶಿಯರೆಂದು ಘೋಷಿಸಿದ ನಂತರವೇ ಅವರನ್ನು ಬಂಧಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಆದಾಗ್ಯೂ, ಗಡೀಪಾರು ಪ್ರಕ್ರಿಯೆಯನ್ನು ಪ್ರಾರಂಭಿಸದೆ ಬಂಧನಗಳು ಏಕೆ ಮುಂದುವರೆದಿವೆ ಎಂದು ಪೀಠ ಕೇಳಿತು.

ರಾಜ್ಯ ಸರ್ಕಾರದ ವಕೀಲರು ಅಫಿಡವಿಟ್ ಗೌಪ್ಯವಾಗಿದ್ದು, ಅದನ್ನು ಮೊಹರು ಮಾಡಬೇಕು ಎಂದು ನ್ಯಾಯಾಲಯಕ್ಕೆ ತಿಳಿಸಿದರು ಎಂದು ಲೈವ್ ಲಾ ವರದಿ ಮಾಡಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ನ್ಯಾಯಮೂರ್ತಿ ಓಕಾ ಅವರು, ಇದು ಹೇಗೆ ಸೂಕ್ಷ್ಮ ವಿಚಾರ ಎಂಬುದನ್ನು ವಿವರಿಸಲು ಕೇಳಿದ್ದಾರೆ. ಆಗ ಪ್ರತಿಕ್ರಿಯಿಸಿದ ವಕೀಲರು, ಅಫಿಡವಿಟ್‌ನಲ್ಲಿ ವಿದೇಶಿಯರ ವಿಳಾಸಗಳು ಇವೆ ಎಂದು ಹೇಳಿದರು.

“ಸಲ್ಲಿಸಿದ ಅಫಿಡವಿಟ್‌ನ ವಿಷಯಗಳು ಗೌಪ್ಯವಾಗಿರುವುದರಿಂದ ಅದನ್ನು ಮುಚ್ಚಿದ ಲಕೋಟೆಯಲ್ಲಿ ಇಡಬೇಕು ಎಂದು ಅಸ್ಸಾಂ ವಕೀಲರು ಹೇಳುತ್ತಾರೆ. ಅದನ್ನು ಮುಚ್ಚಿದ ಲಕೋಟೆಯಲ್ಲಿ ಇಡಬೇಕೆಂದು ನಾವು ನಿರ್ದೇಶಿಸುತ್ತಿದ್ದೇವೆ, ಅದರೆ ಈ ವಿಷಯದಲ್ಲಿ ಗೌಪ್ಯತೆಯಿದೆ ಎಂಬ ವಕೀಲರ ಹೇಳಿಕೆಯ ಬಗ್ಗೆ ನಮಗೆ ಸಮಮತವಿಲ್ಲ” ಎಂದು ಪೀಠವೂ ಹೇಳಿದೆ.

ಗೋಲ್ಪಾರದಲ್ಲಿರುವ ಬಂಧನ ಕೇಂದ್ರವು ಜನವರಿ 2023 ರಲ್ಲಿ ಕಾರ್ಯಾರಂಭ ಮಾಡಿತು. ಇದು ಭಾರತದ ಅತಿದೊಡ್ಡ ಬಂಧನ ಕೇಂದ್ರವಾಗಿದ್ದು, ಸೆಪ್ಟೆಂಬರ್ 18 ರ ಹೊತ್ತಿಗೆ, ಇಲ್ಲಿ 274 ಕೈದಿಗಳನ್ನು ಇರಿಸಲಾಗಿತ್ತು.

ಡಿಸೆಂಬರ್ 9 ರಂದು ನಡೆದ ಕೊನೆಯ ವಿಚಾರಣೆಯಲ್ಲಿ, ಬಂಧನ ಶಿಬಿರದಲ್ಲಿ ಬಂಧಿಸಲ್ಪಟ್ಟ ವ್ಯಕ್ತಿಗಳ ಹೆಸರುಗಳು, ಅವರ ಬಂಧನವನ್ನು ಸಮರ್ಥಿಸುವ ದಾಖಲೆಗಳು ಮತ್ತು ಅವರನ್ನು ಗಡೀಪಾರು ಮಾಡಲು ತೆಗೆದುಕೊಂಡ ಕ್ರಮಗಳ ಕುರಿತು ಅಫಿಡವಿಟ್ ಸಲ್ಲಿಸುವಂತೆ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು ಎಂದು ಲೈವ್ ಲಾ ವರದಿ ಮಾಡಿದೆ.

ನವೆಂಬರ್ 4 ರಂದು, ಮಾಟಿಯಾ ಟ್ರಾನ್ಸಿಸ್ಟ್ ಶಿಬಿರದಲ್ಲಿನ ಪರಿಸ್ಥಿತಿಗಳು “ತೃಪ್ತಿಕರವಾಗಿಲ್ಲ” ಎಂದು ನ್ಯಾಯಾಲಯ ಹೇಳಿತ್ತು ಮತ್ತು ಒಂದು ತಿಂಗಳೊಳಗೆ ಸೌಲಭ್ಯಗಳನ್ನು ಸುಧಾರಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು. ಬಂಧನ ಕೇಂದ್ರದಲ್ಲಿರುವ ನಿರಾಶ್ರಿತರ ಜೀವನ ಪರಿಸ್ಥಿತಿಗಳನ್ನು ಪರಿಶೀಲಿಸಲು ಅಸ್ಸಾಂ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಅನಿರೀಕ್ಷಿತ ಭೇಟಿಗಳನ್ನು ನೀಡುವಂತೆ ಕೂಡಾ ಸುಪ್ರಿಂಕೋರ್ಟ್‌ ನಿರ್ದೇಶಿಸಿತ್ತು.

ಬಂಧಿತರಲ್ಲಿ ಹೆಚ್ಚಿನವರು – 102 ರೋಹಿಂಗ್ಯಾಗಳು ಮತ್ತು 32 ಚಿನ್ – ಕಿರುಕುಳದಿಂದ ಪಲಾಯನ ಮಾಡಿದ ಮ್ಯಾನ್ಮಾರ್‌ನ ನಿರಾಶ್ರಿತರಾಗಿದ್ದಾರೆ. ಸೆಪ್ಟೆಂಬರ್ 10 ರಂದು, ನ್ಯಾಯಾಲಯವು ಅಸ್ಸಾಂ ಸರ್ಕಾರಕ್ಕೆ ವಿದೇಶಿಯರನ್ನು ಗಡೀಪಾರು ಮಾಡುವ ಯೋಜನೆಯನ್ನು ಸಲ್ಲಿಸುವಂತೆ ಆದೇಶಿಸಿತು. ಸೆಪ್ಟೆಂಬರ್ 9 ರಂದು ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ ಮ್ಯಾನ್ಮಾರ್‌ನ ನೂರಕ್ಕೂ ಹೆಚ್ಚು ರೋಹಿಂಗ್ಯಾ ಮತ್ತು ಚಿನ್ ನಿರಾಶ್ರಿತರು ಶಿಬಿರದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ ಎಂದು ಸ್ಕ್ರಾಲ್ ವರದಿ ಮಾಡಿದೆ.

ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆಯಿಂದ ನೀಡಲಾದ ಕಾರ್ಡ್‌ಗಳನ್ನು ಹೊಂದಿರುವ ನಿರಾಶ್ರಿತರು, ತಮ್ಮನ್ನು ವಿಶ್ವಸಂಸ್ಥೆಯ ನಿರಾಶ್ರಿತರ ಹೈ ಕಮಿಷನರ್‌ಗೆ ಹಸ್ತಾಂತರಿಸಬೇಕು, ದೆಹಲಿಯ ಬಂಧನ ಕೇಂದ್ರಕ್ಕೆ ವರ್ಗಾಯಿಸಬೇಕು ಮತ್ತು ಅಂತಿಮವಾಗಿ ಮೂರನೇ ದೇಶದಲ್ಲಿ ಪುನರ್ವಸತಿ ಕಲ್ಪಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.

ಇದನ್ನೂಓದಿ:  ಜಲಗಾಂವ್ ರೈಲು ಅಪಘಾತ | ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆ; 8 ಮೃತದೇಹಗಳ ಗುರುತು ಪತ್ತೆ

ಜಲಗಾಂವ್ ರೈಲು ಅಪಘಾತ | ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆ; 8 ಮೃತದೇಹಗಳ ಗುರುತು ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...