Homeಮುಖಪುಟ‘ಬಂಧನವನ್ನು ದಂಡಿಸುವ ಸಾಧನವಾಗಿ ಬಳಸುವಂತಿಲ್ಲ’: ಜುಬೇರ್‌‌ ಪ್ರಕರಣದ ವಿವರವಾದ ತೀರ್ಪು ಬಿಡುಗಡೆ

‘ಬಂಧನವನ್ನು ದಂಡಿಸುವ ಸಾಧನವಾಗಿ ಬಳಸುವಂತಿಲ್ಲ’: ಜುಬೇರ್‌‌ ಪ್ರಕರಣದ ವಿವರವಾದ ತೀರ್ಪು ಬಿಡುಗಡೆ

- Advertisement -
- Advertisement -

ಕಳೆದ ವಾರವಷ್ಟೆ ಜಾಮೀನು ಪಡೆದ ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ಕರ್‌, ಪತ್ರಕರ್ತ ಮೊಹಮ್ಮದ್ ಜುಬೇರ್ ಅವರ ಪ್ರಕರಣದ ವಿವರವಾದ ತೀರ್ಪು ಮಂಗಳವಾರ ಹೊರಬಿದ್ದಿದೆ. ಜುಬೇರ್‌ ಅವರು ಕ್ರಿಮಿನಲ್ ಪ್ರಕ್ರಿಯೆಯ ವಿಷವರ್ತುಲದಲ್ಲಿ ಸಿಕ್ಕಿಬಿದ್ದಿದ್ದಾರೆ. ಅಲ್ಲಿನ ಪ್ರಕ್ರಿಯೆಯೇ ಒಂದು ಶಿಕ್ಷೆಯಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, “ಬಂಧನವನ್ನು ದಂಡಿಸುವ ಸಾಧನವಾಗಿ ಬಳಸುವಂತಿಲ್ಲ” ಎಂದು ಎಚ್ಚರಿಸಿದೆ.

ವಿಚಾರಣೆಯ ಸಮಯದಲ್ಲಿ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಅವರು, ತರಾತುರಿ ಮತ್ತು ವಿವೇಚನಾರಹಿತ ಬಂಧನಗಳು, ಜಾಮೀನು ಪಡೆಯುವಲ್ಲಿ ತೊಂದರೆ ಮತ್ತು ವಿಚಾರಣಾಧೀನ ಕೈದಿಗಳ ದೀರ್ಘಾವಧಿಯ ಕಾರಾಗೃಹವಾಸದ ವಿಷಯವನ್ನು ಎತ್ತಿಹಿಡಿದು ಟೀಸಿದ್ದರು. ಇದರ ನಂತರ ಜುಬೇರ್‌ ಅವರು ಸುಮಾರು 22 ದಿನಗಳ ಬಂಧನದಿಂದ ಜಾಮೀನು ಪಡೆದು ಹೊರ ಬಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಂಧನವು ದಂಡಿಸುವ ಸಾಧನವೆಂಬಂತೆ ಆಗಬಾರದು ಮತ್ತು ಅದನ್ನು ಹಾಗೆ ಬಳಸಬಾರದು. ಏಕೆಂದರೆ, ಕ್ರಿಮಿನಲ್ ಕಾನೂನಿನಿಂದ ಉಂಟಾಗುವ ಗಂಭೀರ ಪರಿಣಾಮಗಳಲ್ಲಿ ವೈಯಕ್ತಿಕ ಸ್ವಾತಂತ್ರ್ಯದ ನಷ್ಟವು ಒಂದಾಗಿದೆ” ಎಂದು ನ್ಯಾಯಮೂರ್ತಿಗಳಾದ ಡಿ.ವೈ ಚಂದ್ರಚೂಡ್ ಮತ್ತು ಎ.ಎಸ್.ಬೋಪಣ್ಣ ಅವರ ಪೀಠವು ನೀಡಿದ ತೀರ್ಪು ಹೇಳಿದೆ.

ಇದನ್ನೂ ಓದಿ: ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯರ ಕೆಲಸವನ್ನು ಮಾಧ್ಯಮಗಳೇ ಮಾಡುತ್ತಿವೆ: ಜುಬೇರ್‌

“ಕೇವಲ ಆರೋಪಗಳ ಆಧಾರದ ಮೇಲೆ ಮತ್ತು ನ್ಯಾಯಯುತ ವಿಚಾರಣೆಯಿಲ್ಲದೆ ವ್ಯಕ್ತಿಗಳನ್ನು ಶಿಕ್ಷಿಸಬಾರದು…ಬಂಧಿಸುವ ಅಧಿಕಾರವನ್ನು ಮನಸ್ಸಿನ ಅನ್ವಯವಿಲ್ಲದೆ ಮತ್ತು ಕಾನೂನನ್ನು ಪರಿಗಣಿಸದೆ ಚಲಾಯಿಸಿದಾಗ ಅದು ಅಧಿಕಾರದ ದುರುಪಯೋಗವಾಗುತ್ತದೆ” ತೀರ್ಪು ಹೇಳಿದೆ.

ದೆಹಲಿ ಮತ್ತು ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ದಾಖಲಾಗಿದ್ದ ಪ್ರಕರಣಗಳಲ್ಲಿ ಪರಿಹಾರ ಕೋರಿದ್ದ ಮೊಹಮ್ಮದ್ ಜುಬೇರ್ ಅವರನ್ನು ಶೀಘ್ರ ಬಿಡುಗಡೆ ಮಾಡಲು ಜುಲೈ 20 ರಂದು ನ್ಯಾಯಾಲಯವು ತೀರ್ಪಿನ ಆಪರೇಟಿವ್ ಭಾಗವನ್ನು ಬಿಡುಗಡೆ ಮಾಡಿತ್ತು.

ನಾಲ್ಕು ವರ್ಷಗಳ ಹಿಂದೆ ಜುಬೇರ್‌ ಹಂಚಿಕೊಂಡಿದ್ದ ಜನಪ್ರಿಯ ಹಿಂದಿ ಚಲನಚಿತ್ರದ ಸ್ಕ್ರೀನ್‌ಶಾಟ್ ವಿಚಾರದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗುವುದರೊಂದಿಗೆ ಅವರ ವಿರುದ್ಧ ಸರಣಿ ಪ್ರಕರಣಗಳ ನಾಟಕೀಯ ಘಟನೆ ಪ್ರಾರಂಭವಾಯಿತು. ಇದರ ಜೊತೆಗೆ ಇತರ ದೂರುಗಳ ಮೇಲೂ ಜುಬೇರ್‌ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಯಿತು.

ಇದನ್ನೂ ಓದಿ: ಜುಬೇರ್‌ಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್‌; ನ್ಯಾಯಾಲಯದಲ್ಲಿ ಏನಾಯಿತು? | ಸಂಕ್ಷಿಪ್ತ ವಿವರಣೆ

ಬಂಧನಕ್ಕೆ ಕೆಲವು ದಿನಗಳ ಮೊದಲು, ಮೊಹಮ್ಮದ್ ಜುಬೈರ್ ಅವರು ಪ್ರವಾದಿ ಮುಹಮ್ಮದ್ ಕುರಿತು ಬಿಜೆಪಿಯ ನೂಪುರ್ ಶರ್ಮಾ ಅವರ ಹೇಳಿಕೆಗಳನ್ನು ಹಂಚಿಕೊಂಡಿದ್ದರು. ಅದು ವಿಶ್ವದ ಗಮನ ಸೆಳೆದು ವಿಶ್ವದಾದ್ಯಂತ ಆಕ್ರೋಶಕ್ಕೆ ಕಾರಣವಾಗಿ, ಆಡಳಿತರೂಢ ಬಿಜೆಪಿ ಸರ್ಕಾರ ತೀವ್ರ ಮುಜುಗರಕ್ಕೆ ಈಡಾಗಿತ್ತು.

ಜುಲೈ 20 ರಂದು, ಸುಪ್ರೀಂಕೋರ್ಟ್‌ ಅವರಿಗೆ ಜಾಮೀನು ನೀಡಿ, ಯುಪಿಯ ವಿಶೇಷ ತನಿಖೆಯನ್ನು ರದ್ದುಗೊಳಿಸಿತು ಮತ್ತು ಎಲ್ಲಾ ಯುಪಿ ಪ್ರಕರಣಗಳನ್ನು ದೆಹಲಿಗೆ ವರ್ಗಾಯಿಸಿತು. ಮೊಹಮ್ಮದ್ ಜುಬೇರ್ ಟ್ವೀಟ್ ಮಾಡುವುದನ್ನು ನಿಲ್ಲಿಸಬೇಕು ಎಂಬ ಉತ್ತರ ಪ್ರದೇಶ ಸರ್ಕಾರದ ಮನವಿಯನ್ನು ನ್ಯಾಯಮೂರ್ತಿಗಳು ತಿರಸ್ಕರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...