Homeಕರ್ನಾಟಕದೇವನಹಳ್ಳಿ: 'ಶೀಘ್ರ ಮಧ್ಯಪ್ರವೇಶ ಮಾಡಿ, ರೈತರ ಪರ ನಿಲ್ಲಿ' – ಕಾಂಗ್ರೆಸ್ ಹೈಕಮಾಂಡ್‌ಗೆ 65...

ದೇವನಹಳ್ಳಿ: ‘ಶೀಘ್ರ ಮಧ್ಯಪ್ರವೇಶ ಮಾಡಿ, ರೈತರ ಪರ ನಿಲ್ಲಿ’ – ಕಾಂಗ್ರೆಸ್ ಹೈಕಮಾಂಡ್‌ಗೆ 65 ಪ್ರಜ್ಞಾವಂತರಿಂದ ಪತ್ರ

- Advertisement -
- Advertisement -

ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ ರೈತರ ಭೂಸ್ವಾಧೀನ ವಿವಾದದಲ್ಲಿ ರಾಜ್ಯ ಸರ್ಕಾರ ರೈತಪರ ತೀರ್ಪು ಕೈಗೊಳ್ಳಲು ಕಾಂಗ್ರೆಸ್ ಹೈಕಮಾಂಡ್ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿ, 65ಕ್ಕೂ ಹೆಚ್ಚು ವಿದ್ವಾಂಸರು, ವಿಜ್ಞಾನಿಗಳು, ಸಾರ್ವಜನಿಕ ಬುದ್ಧಿಜೀವಿಗಳು, ಬರಹಗಾರರು, ಕಲಾವಿದರು ಮತ್ತು ನಾಗರಿಕ ಸಮಾಜದ ಮುಖಂಡರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.

ಮೂರು ವರ್ಷಗಳ ರೈತರ ಅಚಲ ಹೋರಾಟ: ಬೆಂಗಳೂರು ವಿಮಾನ ನಿಲ್ದಾಣದ ಉತ್ತರಕ್ಕಿರುವ ದೇವನಹಳ್ಳಿ ತಾಲ್ಲೂಕಿನ 13 ಗ್ರಾಮಗಳ ರೈತರು ಕಳೆದ ಮೂರು ವರ್ಷಗಳಿಂದ, ಅಂದರೆ ಏಪ್ರಿಲ್ 2022ರಿಂದ, ತಮ್ಮ ಫಲವತ್ತಾದ ಭೂಮಿಗಾಗಿ ನಿರಂತರವಾಗಿ ಹೋರಾಟ ನಡೆಸುತ್ತಿದ್ದಾರೆ. ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಪ್ರಸ್ತಾಪಿಸಿರುವ 1,777 ಎಕರೆ ಕೃಷಿ ಭೂಮಿಯನ್ನು ‘ಹೈಟೆಕ್ ರಕ್ಷಣಾ ಮತ್ತು ಏರೋಸ್ಪೇಸ್ ಪಾರ್ಕ್’ಗಾಗಿ ಸ್ವಾಧೀನಪಡಿಸಿಕೊಳ್ಳುವ ವಿರುದ್ಧ ಅವರ ಪ್ರತಿರೋಧ ಅಚಲವಾಗಿದೆ. ಈ ಚಳುವಳಿಗೆ ರೈತರು, ಕಾರ್ಮಿಕರು, ದಲಿತರು, ಮಹಿಳೆಯರು ಮತ್ತು ಯುವಕರಂತಹ ತಳಮಟ್ಟದ ಸಂಘಟನೆಗಳು ಸಕ್ರಿಯ ಬೆಂಬಲ ನೀಡುತ್ತಿವೆ. ಈ ಪ್ರದೇಶವು ಬೆಂಗಳೂರಿಗೆ ತರಕಾರಿಗಳು, ಹಣ್ಣುಗಳು, ಹಾಲು ಮತ್ತು ಇತರ ಅಗತ್ಯ ಆಹಾರ ಪದಾರ್ಥಗಳನ್ನು ಪೂರೈಸುವ ಮೂಲಕ ಆಹಾರ ಭದ್ರತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. “ನಾವು ಸಾಯಲು ಸಿದ್ಧ, ಆದರೆ ನಮ್ಮ ಭೂಮಿಯನ್ನು ಬಿಟ್ಟುಕೊಡಲು ಸಿದ್ಧರಿಲ್ಲ” ಎಂಬ ರೈತರ ಸಾಮೂಹಿಕ ಸಂಕಲ್ಪವನ್ನು ಡೆಕ್ಕನ್ ಹೆರಾಲ್ಡ್ ವರದಿ ಪ್ರತಿಬಿಂಬಿಸಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರವು ಜುಲೈ 4ರಂದು ರೈತ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಜುಲೈ 15ರೊಳಗೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಭರವಸೆ ನೀಡಿತ್ತು. ಆದರೆ, ಸರ್ಕಾರದ ಕೆಲವು ವಲಯಗಳಿಂದ, ರೈತರ ಬೇಡಿಕೆಗಳನ್ನು ಈಡೇರಿಸಿದರೆ ‘ಅಭಿವೃದ್ಧಿಗೆ ಅಡ್ಡಿಯಾಗಬಹುದು’ ಎಂಬ ಆತಂಕದ ಮಾತುಗಳು ಕೇಳಿಬರುತ್ತಿವೆ. ಈ ನಿರೂಪಣೆಯು ಭರವಸೆಯಿಂದ ಹಿಂದೆ ಸರಿಯುವ ಅಥವಾ ವಿಳಂಬ ಮಾಡುವ ಪ್ರಯತ್ನದಂತೆ ಕಾಣುತ್ತಿದೆ. ಇಂತಹ ಹಿನ್ನಡೆಯು ರಾಜ್ಯ ಸರ್ಕಾರದ ವಿಶ್ವಾಸಾರ್ಹತೆಯನ್ನು ಕುಗ್ಗಿಸುವುದಲ್ಲದೆ, ಗ್ರಾಮೀಣ ಸಮುದಾಯಗಳಲ್ಲಿ ಕಾಂಗ್ರೆಸ್ ಪಕ್ಷದ ವರ್ಚಸ್ಸಿಗೆ ಗಂಭೀರ ಹಾನಿ ಉಂಟುಮಾಡಲಿದೆ ಎಂದು ಬಹಿರಂಗ ಪತ್ರದಲ್ಲಿ ಸ್ಪಷ್ಟವಾಗಿ ಎಚ್ಚರಿಸಲಾಗಿದೆ.

2013ರ ಭೂಸ್ವಾಧೀನ ಕಾಯಿದೆ ಅಡಿಯಲ್ಲಿ 70% ಭೂಮಾಲೀಕರ ಸಮ್ಮತಿ ಅಗತ್ಯವಿದ್ದರೂ, KIADB ಯ 2022ರ ಸಮೀಕ್ಷೆಯು ದೇವನಹಳ್ಳಿಯಲ್ಲಿ 80% ಕ್ಕಿಂತ ಹೆಚ್ಚು ರೈತರು ಸ್ವಾಧೀನಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಬಹಿರಂಗಪಡಿಸಿದೆ. ಸಮ್ಮತಿಯಿಲ್ಲದೆ ಮುಂದುವರಿಯುವುದು ಕಾನೂನುಬಾಹಿರವಾಗಿದೆ. ಇಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಭೂಮಿಯನ್ನು ಕಿತ್ತುಕೊಳ್ಳಲು ಹೊರಟಿರುವುದು ಕಾಂಗ್ರೆಸ್ ಪಕ್ಷ  ಎತ್ತಿಹಿಡಿದಿರುವ ಸಾಮಾಜಿಕ ನ್ಯಾಯದ ತತ್ವಕ್ಕೆ ತಿಲಾಂಜಲಿ ಯಾಗಿದೆ. ಇವೆಲ್ಲವನ್ನೂ ಸರಿಪಡಿಸುವ ಭರವಸೆಯನ್ನು ವಿರೋಧ ಪಕ್ಷದಲ್ಲಿದ್ದ ಹಾಲಿ ಮುಖ್ಯಮಂತ್ರಿಗಳು ನೀಡಿದ್ದರು. ರಾಜ್ಯದ ಭೂ ಸುಧಾರಣೆ ಕಾಯ್ದೆಗೆ ಹಿಂದಿನ ಸರ್ಕಾರ ತಂದಿರುವ ಮಾರಕ ತಿದ್ದುಪಡಿಗಳನ್ನು ಸರಿಪಡಿಸಿ ರೈತಪರ ನೀತಿ ನಿಲುವುಗಳನ್ನು ರೂಪಿಸುವ ಭರವಸೆಯನ್ನು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಲಾಗಿರುತ್ತದೆ. ಹಾಗಿದ್ದರೂ  ಎರಡುವರೆ ವರ್ಷಗಳ ಅವಧಿ ಮುಗಿದರು ಸರ್ಕಾರ ಗಮನಹರಿಸದೆ ಕೊಟ್ಟಿರುವ ವಚನವನ್ನು ಪಾಲಿಸುತ್ತಿಲ್ಲ ಇತ್ಯಾದಿ ವಿಚಾರಗಳನ್ನು ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ.

KIADB ಕರ್ನಾಟಕದಾದ್ಯಂತ ಗಣನೀಯ ಪ್ರಮಾಣದ ಬಳಕೆಯಾಗದ ಭೂಮಿ ಹೊಂದಿದ್ದರೂ, ಫಲವತ್ತಾದ ಕೃಷಿಭೂಮಿಯ ಸ್ವಾಧೀನಕ್ಕೆ ಮುಂದಾಗಿರುವುದು ಪಾರದರ್ಶಕತೆ ಮತ್ತು ಭೂಬಳಕೆ ಯೋಜನೆಯ ಸಮಗ್ರತೆಯ ಬಗ್ಗೆ ಕಳವಳ ಮೂಡಿಸಿದೆ. CAG ವರದಿಯು KIADBಯ ಸ್ವಾಧೀನ ಮತ್ತು ಹಂಚಿಕೆ ಪದ್ಧತಿಗಳಲ್ಲಿನ ಲೋಪಗಳನ್ನು ಎತ್ತಿ ತೋರಿಸಿದೆ. ಇತ್ತೀಚೆಗೆ, ISRO ಯೋಜನೆ ಮತ್ತು NICE ಯೋಜನೆಗಳಲ್ಲಿನ ವಿಳಂಬಕ್ಕೆ ಹೈಕೋರ್ಟ್ KIADB ವಿರುದ್ಧ ತೀರ್ಪು ನೀಡಿದೆ. ದೇವನಹಳ್ಳಿ ಪ್ರಕರಣದಲ್ಲಿ ಮೂರು ವರ್ಷಗಳ ವಿಳಂಬ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಕೂಡ ಪತ್ರವು ತಿಳಿಸಿದೆ.

ಹಾಗೆಯೇ, ರೈತರು ಮತ್ತು ಕೈಗಾರಿಕಾ ವಲಯಗಳ ಅಭಿಪ್ರಾಯ ಸಲಹೆ ಸೂಚನೆ ಪಡೆದು ರಾಜ್ಯದ ಆಹಾರ ಭದ್ರತೆ ಮತ್ತು ರೈತರ ಹಿತಕ್ಕೆ ಧಕ್ಕೆ ಬರದ ರೀತಿಯಲ್ಲಿ ಕೈಗಾರಿಕೆಗೆ ಅತ್ಯಗತ್ಯವಾಗಿರುವ ಭೂ ಖರೀದಿ ವ್ಯವಹಾರದ ನಿಟ್ಟಿನಲ್ಲಿ ಸಮಗ್ರ ನೀತಿ ರೂಪಿಸಿ, ಮತ್ತು ಈ ಮೂಲಕ ದೇಶಕ್ಕೆ ಒಂದು ಮಾದರಿ ನೀತಿಯನ್ನು  ಕರ್ನಾಟಕ ಸರ್ಕಾರ 15 ರಂದು ಮುಂದಿಡಲಿ ಎಂದು ಆಗ್ರಹಿಸಲಾಗಿದೆ.

ಈ ಮನವಿಯ ಪ್ರತಿಯನ್ನು ಸೋನಿಯಾ ಗಾಂಧಿ,  ರಾಹುಲ್ ಗಾಂಧಿ,  ವೇಣುಗೋಪಾಲ್,  ಜೈರಾಮ್ ರಮೇಶ್, ಕರ್ನಾಟಕ ಮುಖ್ಯಮಂತ್ರಿ  ಸಿದ್ದರಾಮಯ್ಯ, ಉಪಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್, ಸಚಿವರಾದ  ಎಂ.ಬಿ. ಪಾಟೀಲ್,  ರಣದೀಪ್ ಸಿಂಗ್ ಸುರ್ಜೆವಾಲಾ ಹಾಗೂ ಕರ್ನಾಟಕದ ಕಾಂಗ್ರೆಸ್ ಸಂಸದರಿಗೆ ರವಾನಿಸಲಾಗಿದೆ.

ಸಹಿ ಮಾಡಿದವರ ಪಟ್ಟಿ (ಪ್ರಮುಖರು): ಪ್ರೊ. ರಾಮಚಂದ್ರ ಗುಹಾ (ಇತಿಹಾಸಕಾರ, ಪರಿಸರವಾದಿ),  ದೇವನೂರ ಮಹಾದೇವ (ಪದ್ಮಶ್ರೀ ಪುರಸ್ಕೃತ ಕನ್ನಡ ಬರಹಗಾರರು), ಡಾ. ಎ.ಎನ್.ಯಲ್ಲಪ್ಪ ರೆಡ್ಡಿ (ಪರಿಸರವಾದಿ),  ಬಿ.ಜಯಶ್ರೀ (ರಂಗಭೂಮಿ ಕಲಾವಿದೆ), ಪ್ರೊ. ಕೆ. ನಾರಾಯಣ ಗೌಡ (ಮಾಜಿ ಉಪಕುಲಪತಿ, UAS), ಡಾ. ಜಿ. ಎನ್. ದೇವ್ಯ (ಭಾಷಾಶಾಸ್ತ್ರಜ್ಞ, ಸಾಹಿತ್ಯ ವಿಮರ್ಶಕ), ಗಿರೀಶ್ ಕಾಸರವಳ್ಳಿ (ರಾಷ್ಟ್ರ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ದೇಶಕರು), ಅರುಂಧತಿ ನಾಗ (ಪ್ರಶಸ್ತಿ ವಿಜೇತ ನಟಿ), ಡಾ. ಸುಧೀರ್ ವೋಂಬತ್ಕೆರೆ, ಪ್ರೊ. ವಿ. ಕೆ. ಗೌರ್, ಪ್ರೊ. ವಿನೋದ್ ವ್ಯಾಸಲು, ಪ್ರೊ. ದೀಪಕ್ ಮಾಲ್ಘಾನ್, ಕಿಶೋರ್ ಕುಮಾರ್ ಜಿ, ಸುರೇಶ್ ಹೆಬ್ಳೀಕರ್, ಪಾಂಡುರಂಗ ಹೆಗಡೆ ಸೇರಿದಂತೆ ಒಟ್ಟು 65 ವಿದ್ವಾಂಸರು, ವಿಜ್ಞಾನಿಗಳು, ಬುದ್ಧಿಜೀವಿಗಳು, ಬರಹಗಾರರು, ಕಲಾವಿದರು ಮತ್ತು ನಾಗರಿಕ ಸಮಾಜದ ಮುಖಂಡರು ಈ ಬಹಿರಂಗ ಪತ್ರಕ್ಕೆ ಸಹಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...