Homeಕರ್ನಾಟಕದೇವನಹಳ್ಳಿ: 'ಶೀಘ್ರ ಮಧ್ಯಪ್ರವೇಶ ಮಾಡಿ, ರೈತರ ಪರ ನಿಲ್ಲಿ' – ಕಾಂಗ್ರೆಸ್ ಹೈಕಮಾಂಡ್‌ಗೆ 65...

ದೇವನಹಳ್ಳಿ: ‘ಶೀಘ್ರ ಮಧ್ಯಪ್ರವೇಶ ಮಾಡಿ, ರೈತರ ಪರ ನಿಲ್ಲಿ’ – ಕಾಂಗ್ರೆಸ್ ಹೈಕಮಾಂಡ್‌ಗೆ 65 ಪ್ರಜ್ಞಾವಂತರಿಂದ ಪತ್ರ

- Advertisement -
- Advertisement -

ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ ರೈತರ ಭೂಸ್ವಾಧೀನ ವಿವಾದದಲ್ಲಿ ರಾಜ್ಯ ಸರ್ಕಾರ ರೈತಪರ ತೀರ್ಪು ಕೈಗೊಳ್ಳಲು ಕಾಂಗ್ರೆಸ್ ಹೈಕಮಾಂಡ್ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿ, 65ಕ್ಕೂ ಹೆಚ್ಚು ವಿದ್ವಾಂಸರು, ವಿಜ್ಞಾನಿಗಳು, ಸಾರ್ವಜನಿಕ ಬುದ್ಧಿಜೀವಿಗಳು, ಬರಹಗಾರರು, ಕಲಾವಿದರು ಮತ್ತು ನಾಗರಿಕ ಸಮಾಜದ ಮುಖಂಡರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.

ಮೂರು ವರ್ಷಗಳ ರೈತರ ಅಚಲ ಹೋರಾಟ: ಬೆಂಗಳೂರು ವಿಮಾನ ನಿಲ್ದಾಣದ ಉತ್ತರಕ್ಕಿರುವ ದೇವನಹಳ್ಳಿ ತಾಲ್ಲೂಕಿನ 13 ಗ್ರಾಮಗಳ ರೈತರು ಕಳೆದ ಮೂರು ವರ್ಷಗಳಿಂದ, ಅಂದರೆ ಏಪ್ರಿಲ್ 2022ರಿಂದ, ತಮ್ಮ ಫಲವತ್ತಾದ ಭೂಮಿಗಾಗಿ ನಿರಂತರವಾಗಿ ಹೋರಾಟ ನಡೆಸುತ್ತಿದ್ದಾರೆ. ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಪ್ರಸ್ತಾಪಿಸಿರುವ 1,777 ಎಕರೆ ಕೃಷಿ ಭೂಮಿಯನ್ನು ‘ಹೈಟೆಕ್ ರಕ್ಷಣಾ ಮತ್ತು ಏರೋಸ್ಪೇಸ್ ಪಾರ್ಕ್’ಗಾಗಿ ಸ್ವಾಧೀನಪಡಿಸಿಕೊಳ್ಳುವ ವಿರುದ್ಧ ಅವರ ಪ್ರತಿರೋಧ ಅಚಲವಾಗಿದೆ. ಈ ಚಳುವಳಿಗೆ ರೈತರು, ಕಾರ್ಮಿಕರು, ದಲಿತರು, ಮಹಿಳೆಯರು ಮತ್ತು ಯುವಕರಂತಹ ತಳಮಟ್ಟದ ಸಂಘಟನೆಗಳು ಸಕ್ರಿಯ ಬೆಂಬಲ ನೀಡುತ್ತಿವೆ. ಈ ಪ್ರದೇಶವು ಬೆಂಗಳೂರಿಗೆ ತರಕಾರಿಗಳು, ಹಣ್ಣುಗಳು, ಹಾಲು ಮತ್ತು ಇತರ ಅಗತ್ಯ ಆಹಾರ ಪದಾರ್ಥಗಳನ್ನು ಪೂರೈಸುವ ಮೂಲಕ ಆಹಾರ ಭದ್ರತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. “ನಾವು ಸಾಯಲು ಸಿದ್ಧ, ಆದರೆ ನಮ್ಮ ಭೂಮಿಯನ್ನು ಬಿಟ್ಟುಕೊಡಲು ಸಿದ್ಧರಿಲ್ಲ” ಎಂಬ ರೈತರ ಸಾಮೂಹಿಕ ಸಂಕಲ್ಪವನ್ನು ಡೆಕ್ಕನ್ ಹೆರಾಲ್ಡ್ ವರದಿ ಪ್ರತಿಬಿಂಬಿಸಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರವು ಜುಲೈ 4ರಂದು ರೈತ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಜುಲೈ 15ರೊಳಗೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಭರವಸೆ ನೀಡಿತ್ತು. ಆದರೆ, ಸರ್ಕಾರದ ಕೆಲವು ವಲಯಗಳಿಂದ, ರೈತರ ಬೇಡಿಕೆಗಳನ್ನು ಈಡೇರಿಸಿದರೆ ‘ಅಭಿವೃದ್ಧಿಗೆ ಅಡ್ಡಿಯಾಗಬಹುದು’ ಎಂಬ ಆತಂಕದ ಮಾತುಗಳು ಕೇಳಿಬರುತ್ತಿವೆ. ಈ ನಿರೂಪಣೆಯು ಭರವಸೆಯಿಂದ ಹಿಂದೆ ಸರಿಯುವ ಅಥವಾ ವಿಳಂಬ ಮಾಡುವ ಪ್ರಯತ್ನದಂತೆ ಕಾಣುತ್ತಿದೆ. ಇಂತಹ ಹಿನ್ನಡೆಯು ರಾಜ್ಯ ಸರ್ಕಾರದ ವಿಶ್ವಾಸಾರ್ಹತೆಯನ್ನು ಕುಗ್ಗಿಸುವುದಲ್ಲದೆ, ಗ್ರಾಮೀಣ ಸಮುದಾಯಗಳಲ್ಲಿ ಕಾಂಗ್ರೆಸ್ ಪಕ್ಷದ ವರ್ಚಸ್ಸಿಗೆ ಗಂಭೀರ ಹಾನಿ ಉಂಟುಮಾಡಲಿದೆ ಎಂದು ಬಹಿರಂಗ ಪತ್ರದಲ್ಲಿ ಸ್ಪಷ್ಟವಾಗಿ ಎಚ್ಚರಿಸಲಾಗಿದೆ.

2013ರ ಭೂಸ್ವಾಧೀನ ಕಾಯಿದೆ ಅಡಿಯಲ್ಲಿ 70% ಭೂಮಾಲೀಕರ ಸಮ್ಮತಿ ಅಗತ್ಯವಿದ್ದರೂ, KIADB ಯ 2022ರ ಸಮೀಕ್ಷೆಯು ದೇವನಹಳ್ಳಿಯಲ್ಲಿ 80% ಕ್ಕಿಂತ ಹೆಚ್ಚು ರೈತರು ಸ್ವಾಧೀನಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಬಹಿರಂಗಪಡಿಸಿದೆ. ಸಮ್ಮತಿಯಿಲ್ಲದೆ ಮುಂದುವರಿಯುವುದು ಕಾನೂನುಬಾಹಿರವಾಗಿದೆ. ಇಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಭೂಮಿಯನ್ನು ಕಿತ್ತುಕೊಳ್ಳಲು ಹೊರಟಿರುವುದು ಕಾಂಗ್ರೆಸ್ ಪಕ್ಷ  ಎತ್ತಿಹಿಡಿದಿರುವ ಸಾಮಾಜಿಕ ನ್ಯಾಯದ ತತ್ವಕ್ಕೆ ತಿಲಾಂಜಲಿ ಯಾಗಿದೆ. ಇವೆಲ್ಲವನ್ನೂ ಸರಿಪಡಿಸುವ ಭರವಸೆಯನ್ನು ವಿರೋಧ ಪಕ್ಷದಲ್ಲಿದ್ದ ಹಾಲಿ ಮುಖ್ಯಮಂತ್ರಿಗಳು ನೀಡಿದ್ದರು. ರಾಜ್ಯದ ಭೂ ಸುಧಾರಣೆ ಕಾಯ್ದೆಗೆ ಹಿಂದಿನ ಸರ್ಕಾರ ತಂದಿರುವ ಮಾರಕ ತಿದ್ದುಪಡಿಗಳನ್ನು ಸರಿಪಡಿಸಿ ರೈತಪರ ನೀತಿ ನಿಲುವುಗಳನ್ನು ರೂಪಿಸುವ ಭರವಸೆಯನ್ನು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಲಾಗಿರುತ್ತದೆ. ಹಾಗಿದ್ದರೂ  ಎರಡುವರೆ ವರ್ಷಗಳ ಅವಧಿ ಮುಗಿದರು ಸರ್ಕಾರ ಗಮನಹರಿಸದೆ ಕೊಟ್ಟಿರುವ ವಚನವನ್ನು ಪಾಲಿಸುತ್ತಿಲ್ಲ ಇತ್ಯಾದಿ ವಿಚಾರಗಳನ್ನು ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ.

KIADB ಕರ್ನಾಟಕದಾದ್ಯಂತ ಗಣನೀಯ ಪ್ರಮಾಣದ ಬಳಕೆಯಾಗದ ಭೂಮಿ ಹೊಂದಿದ್ದರೂ, ಫಲವತ್ತಾದ ಕೃಷಿಭೂಮಿಯ ಸ್ವಾಧೀನಕ್ಕೆ ಮುಂದಾಗಿರುವುದು ಪಾರದರ್ಶಕತೆ ಮತ್ತು ಭೂಬಳಕೆ ಯೋಜನೆಯ ಸಮಗ್ರತೆಯ ಬಗ್ಗೆ ಕಳವಳ ಮೂಡಿಸಿದೆ. CAG ವರದಿಯು KIADBಯ ಸ್ವಾಧೀನ ಮತ್ತು ಹಂಚಿಕೆ ಪದ್ಧತಿಗಳಲ್ಲಿನ ಲೋಪಗಳನ್ನು ಎತ್ತಿ ತೋರಿಸಿದೆ. ಇತ್ತೀಚೆಗೆ, ISRO ಯೋಜನೆ ಮತ್ತು NICE ಯೋಜನೆಗಳಲ್ಲಿನ ವಿಳಂಬಕ್ಕೆ ಹೈಕೋರ್ಟ್ KIADB ವಿರುದ್ಧ ತೀರ್ಪು ನೀಡಿದೆ. ದೇವನಹಳ್ಳಿ ಪ್ರಕರಣದಲ್ಲಿ ಮೂರು ವರ್ಷಗಳ ವಿಳಂಬ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಕೂಡ ಪತ್ರವು ತಿಳಿಸಿದೆ.

ಹಾಗೆಯೇ, ರೈತರು ಮತ್ತು ಕೈಗಾರಿಕಾ ವಲಯಗಳ ಅಭಿಪ್ರಾಯ ಸಲಹೆ ಸೂಚನೆ ಪಡೆದು ರಾಜ್ಯದ ಆಹಾರ ಭದ್ರತೆ ಮತ್ತು ರೈತರ ಹಿತಕ್ಕೆ ಧಕ್ಕೆ ಬರದ ರೀತಿಯಲ್ಲಿ ಕೈಗಾರಿಕೆಗೆ ಅತ್ಯಗತ್ಯವಾಗಿರುವ ಭೂ ಖರೀದಿ ವ್ಯವಹಾರದ ನಿಟ್ಟಿನಲ್ಲಿ ಸಮಗ್ರ ನೀತಿ ರೂಪಿಸಿ, ಮತ್ತು ಈ ಮೂಲಕ ದೇಶಕ್ಕೆ ಒಂದು ಮಾದರಿ ನೀತಿಯನ್ನು  ಕರ್ನಾಟಕ ಸರ್ಕಾರ 15 ರಂದು ಮುಂದಿಡಲಿ ಎಂದು ಆಗ್ರಹಿಸಲಾಗಿದೆ.

ಈ ಮನವಿಯ ಪ್ರತಿಯನ್ನು ಸೋನಿಯಾ ಗಾಂಧಿ,  ರಾಹುಲ್ ಗಾಂಧಿ,  ವೇಣುಗೋಪಾಲ್,  ಜೈರಾಮ್ ರಮೇಶ್, ಕರ್ನಾಟಕ ಮುಖ್ಯಮಂತ್ರಿ  ಸಿದ್ದರಾಮಯ್ಯ, ಉಪಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್, ಸಚಿವರಾದ  ಎಂ.ಬಿ. ಪಾಟೀಲ್,  ರಣದೀಪ್ ಸಿಂಗ್ ಸುರ್ಜೆವಾಲಾ ಹಾಗೂ ಕರ್ನಾಟಕದ ಕಾಂಗ್ರೆಸ್ ಸಂಸದರಿಗೆ ರವಾನಿಸಲಾಗಿದೆ.

ಸಹಿ ಮಾಡಿದವರ ಪಟ್ಟಿ (ಪ್ರಮುಖರು): ಪ್ರೊ. ರಾಮಚಂದ್ರ ಗುಹಾ (ಇತಿಹಾಸಕಾರ, ಪರಿಸರವಾದಿ),  ದೇವನೂರ ಮಹಾದೇವ (ಪದ್ಮಶ್ರೀ ಪುರಸ್ಕೃತ ಕನ್ನಡ ಬರಹಗಾರರು), ಡಾ. ಎ.ಎನ್.ಯಲ್ಲಪ್ಪ ರೆಡ್ಡಿ (ಪರಿಸರವಾದಿ),  ಬಿ.ಜಯಶ್ರೀ (ರಂಗಭೂಮಿ ಕಲಾವಿದೆ), ಪ್ರೊ. ಕೆ. ನಾರಾಯಣ ಗೌಡ (ಮಾಜಿ ಉಪಕುಲಪತಿ, UAS), ಡಾ. ಜಿ. ಎನ್. ದೇವ್ಯ (ಭಾಷಾಶಾಸ್ತ್ರಜ್ಞ, ಸಾಹಿತ್ಯ ವಿಮರ್ಶಕ), ಗಿರೀಶ್ ಕಾಸರವಳ್ಳಿ (ರಾಷ್ಟ್ರ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ದೇಶಕರು), ಅರುಂಧತಿ ನಾಗ (ಪ್ರಶಸ್ತಿ ವಿಜೇತ ನಟಿ), ಡಾ. ಸುಧೀರ್ ವೋಂಬತ್ಕೆರೆ, ಪ್ರೊ. ವಿ. ಕೆ. ಗೌರ್, ಪ್ರೊ. ವಿನೋದ್ ವ್ಯಾಸಲು, ಪ್ರೊ. ದೀಪಕ್ ಮಾಲ್ಘಾನ್, ಕಿಶೋರ್ ಕುಮಾರ್ ಜಿ, ಸುರೇಶ್ ಹೆಬ್ಳೀಕರ್, ಪಾಂಡುರಂಗ ಹೆಗಡೆ ಸೇರಿದಂತೆ ಒಟ್ಟು 65 ವಿದ್ವಾಂಸರು, ವಿಜ್ಞಾನಿಗಳು, ಬುದ್ಧಿಜೀವಿಗಳು, ಬರಹಗಾರರು, ಕಲಾವಿದರು ಮತ್ತು ನಾಗರಿಕ ಸಮಾಜದ ಮುಖಂಡರು ಈ ಬಹಿರಂಗ ಪತ್ರಕ್ಕೆ ಸಹಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...