Homeಕರ್ನಾಟಕದೇವನಹಳ್ಳಿ: 'ಶೀಘ್ರ ಮಧ್ಯಪ್ರವೇಶ ಮಾಡಿ, ರೈತರ ಪರ ನಿಲ್ಲಿ' – ಕಾಂಗ್ರೆಸ್ ಹೈಕಮಾಂಡ್‌ಗೆ 65...

ದೇವನಹಳ್ಳಿ: ‘ಶೀಘ್ರ ಮಧ್ಯಪ್ರವೇಶ ಮಾಡಿ, ರೈತರ ಪರ ನಿಲ್ಲಿ’ – ಕಾಂಗ್ರೆಸ್ ಹೈಕಮಾಂಡ್‌ಗೆ 65 ಪ್ರಜ್ಞಾವಂತರಿಂದ ಪತ್ರ

- Advertisement -
- Advertisement -

ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ ರೈತರ ಭೂಸ್ವಾಧೀನ ವಿವಾದದಲ್ಲಿ ರಾಜ್ಯ ಸರ್ಕಾರ ರೈತಪರ ತೀರ್ಪು ಕೈಗೊಳ್ಳಲು ಕಾಂಗ್ರೆಸ್ ಹೈಕಮಾಂಡ್ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿ, 65ಕ್ಕೂ ಹೆಚ್ಚು ವಿದ್ವಾಂಸರು, ವಿಜ್ಞಾನಿಗಳು, ಸಾರ್ವಜನಿಕ ಬುದ್ಧಿಜೀವಿಗಳು, ಬರಹಗಾರರು, ಕಲಾವಿದರು ಮತ್ತು ನಾಗರಿಕ ಸಮಾಜದ ಮುಖಂಡರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.

ಮೂರು ವರ್ಷಗಳ ರೈತರ ಅಚಲ ಹೋರಾಟ: ಬೆಂಗಳೂರು ವಿಮಾನ ನಿಲ್ದಾಣದ ಉತ್ತರಕ್ಕಿರುವ ದೇವನಹಳ್ಳಿ ತಾಲ್ಲೂಕಿನ 13 ಗ್ರಾಮಗಳ ರೈತರು ಕಳೆದ ಮೂರು ವರ್ಷಗಳಿಂದ, ಅಂದರೆ ಏಪ್ರಿಲ್ 2022ರಿಂದ, ತಮ್ಮ ಫಲವತ್ತಾದ ಭೂಮಿಗಾಗಿ ನಿರಂತರವಾಗಿ ಹೋರಾಟ ನಡೆಸುತ್ತಿದ್ದಾರೆ. ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಪ್ರಸ್ತಾಪಿಸಿರುವ 1,777 ಎಕರೆ ಕೃಷಿ ಭೂಮಿಯನ್ನು ‘ಹೈಟೆಕ್ ರಕ್ಷಣಾ ಮತ್ತು ಏರೋಸ್ಪೇಸ್ ಪಾರ್ಕ್’ಗಾಗಿ ಸ್ವಾಧೀನಪಡಿಸಿಕೊಳ್ಳುವ ವಿರುದ್ಧ ಅವರ ಪ್ರತಿರೋಧ ಅಚಲವಾಗಿದೆ. ಈ ಚಳುವಳಿಗೆ ರೈತರು, ಕಾರ್ಮಿಕರು, ದಲಿತರು, ಮಹಿಳೆಯರು ಮತ್ತು ಯುವಕರಂತಹ ತಳಮಟ್ಟದ ಸಂಘಟನೆಗಳು ಸಕ್ರಿಯ ಬೆಂಬಲ ನೀಡುತ್ತಿವೆ. ಈ ಪ್ರದೇಶವು ಬೆಂಗಳೂರಿಗೆ ತರಕಾರಿಗಳು, ಹಣ್ಣುಗಳು, ಹಾಲು ಮತ್ತು ಇತರ ಅಗತ್ಯ ಆಹಾರ ಪದಾರ್ಥಗಳನ್ನು ಪೂರೈಸುವ ಮೂಲಕ ಆಹಾರ ಭದ್ರತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. “ನಾವು ಸಾಯಲು ಸಿದ್ಧ, ಆದರೆ ನಮ್ಮ ಭೂಮಿಯನ್ನು ಬಿಟ್ಟುಕೊಡಲು ಸಿದ್ಧರಿಲ್ಲ” ಎಂಬ ರೈತರ ಸಾಮೂಹಿಕ ಸಂಕಲ್ಪವನ್ನು ಡೆಕ್ಕನ್ ಹೆರಾಲ್ಡ್ ವರದಿ ಪ್ರತಿಬಿಂಬಿಸಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರವು ಜುಲೈ 4ರಂದು ರೈತ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಜುಲೈ 15ರೊಳಗೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಭರವಸೆ ನೀಡಿತ್ತು. ಆದರೆ, ಸರ್ಕಾರದ ಕೆಲವು ವಲಯಗಳಿಂದ, ರೈತರ ಬೇಡಿಕೆಗಳನ್ನು ಈಡೇರಿಸಿದರೆ ‘ಅಭಿವೃದ್ಧಿಗೆ ಅಡ್ಡಿಯಾಗಬಹುದು’ ಎಂಬ ಆತಂಕದ ಮಾತುಗಳು ಕೇಳಿಬರುತ್ತಿವೆ. ಈ ನಿರೂಪಣೆಯು ಭರವಸೆಯಿಂದ ಹಿಂದೆ ಸರಿಯುವ ಅಥವಾ ವಿಳಂಬ ಮಾಡುವ ಪ್ರಯತ್ನದಂತೆ ಕಾಣುತ್ತಿದೆ. ಇಂತಹ ಹಿನ್ನಡೆಯು ರಾಜ್ಯ ಸರ್ಕಾರದ ವಿಶ್ವಾಸಾರ್ಹತೆಯನ್ನು ಕುಗ್ಗಿಸುವುದಲ್ಲದೆ, ಗ್ರಾಮೀಣ ಸಮುದಾಯಗಳಲ್ಲಿ ಕಾಂಗ್ರೆಸ್ ಪಕ್ಷದ ವರ್ಚಸ್ಸಿಗೆ ಗಂಭೀರ ಹಾನಿ ಉಂಟುಮಾಡಲಿದೆ ಎಂದು ಬಹಿರಂಗ ಪತ್ರದಲ್ಲಿ ಸ್ಪಷ್ಟವಾಗಿ ಎಚ್ಚರಿಸಲಾಗಿದೆ.

2013ರ ಭೂಸ್ವಾಧೀನ ಕಾಯಿದೆ ಅಡಿಯಲ್ಲಿ 70% ಭೂಮಾಲೀಕರ ಸಮ್ಮತಿ ಅಗತ್ಯವಿದ್ದರೂ, KIADB ಯ 2022ರ ಸಮೀಕ್ಷೆಯು ದೇವನಹಳ್ಳಿಯಲ್ಲಿ 80% ಕ್ಕಿಂತ ಹೆಚ್ಚು ರೈತರು ಸ್ವಾಧೀನಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಬಹಿರಂಗಪಡಿಸಿದೆ. ಸಮ್ಮತಿಯಿಲ್ಲದೆ ಮುಂದುವರಿಯುವುದು ಕಾನೂನುಬಾಹಿರವಾಗಿದೆ. ಇಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಭೂಮಿಯನ್ನು ಕಿತ್ತುಕೊಳ್ಳಲು ಹೊರಟಿರುವುದು ಕಾಂಗ್ರೆಸ್ ಪಕ್ಷ  ಎತ್ತಿಹಿಡಿದಿರುವ ಸಾಮಾಜಿಕ ನ್ಯಾಯದ ತತ್ವಕ್ಕೆ ತಿಲಾಂಜಲಿ ಯಾಗಿದೆ. ಇವೆಲ್ಲವನ್ನೂ ಸರಿಪಡಿಸುವ ಭರವಸೆಯನ್ನು ವಿರೋಧ ಪಕ್ಷದಲ್ಲಿದ್ದ ಹಾಲಿ ಮುಖ್ಯಮಂತ್ರಿಗಳು ನೀಡಿದ್ದರು. ರಾಜ್ಯದ ಭೂ ಸುಧಾರಣೆ ಕಾಯ್ದೆಗೆ ಹಿಂದಿನ ಸರ್ಕಾರ ತಂದಿರುವ ಮಾರಕ ತಿದ್ದುಪಡಿಗಳನ್ನು ಸರಿಪಡಿಸಿ ರೈತಪರ ನೀತಿ ನಿಲುವುಗಳನ್ನು ರೂಪಿಸುವ ಭರವಸೆಯನ್ನು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಲಾಗಿರುತ್ತದೆ. ಹಾಗಿದ್ದರೂ  ಎರಡುವರೆ ವರ್ಷಗಳ ಅವಧಿ ಮುಗಿದರು ಸರ್ಕಾರ ಗಮನಹರಿಸದೆ ಕೊಟ್ಟಿರುವ ವಚನವನ್ನು ಪಾಲಿಸುತ್ತಿಲ್ಲ ಇತ್ಯಾದಿ ವಿಚಾರಗಳನ್ನು ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ.

KIADB ಕರ್ನಾಟಕದಾದ್ಯಂತ ಗಣನೀಯ ಪ್ರಮಾಣದ ಬಳಕೆಯಾಗದ ಭೂಮಿ ಹೊಂದಿದ್ದರೂ, ಫಲವತ್ತಾದ ಕೃಷಿಭೂಮಿಯ ಸ್ವಾಧೀನಕ್ಕೆ ಮುಂದಾಗಿರುವುದು ಪಾರದರ್ಶಕತೆ ಮತ್ತು ಭೂಬಳಕೆ ಯೋಜನೆಯ ಸಮಗ್ರತೆಯ ಬಗ್ಗೆ ಕಳವಳ ಮೂಡಿಸಿದೆ. CAG ವರದಿಯು KIADBಯ ಸ್ವಾಧೀನ ಮತ್ತು ಹಂಚಿಕೆ ಪದ್ಧತಿಗಳಲ್ಲಿನ ಲೋಪಗಳನ್ನು ಎತ್ತಿ ತೋರಿಸಿದೆ. ಇತ್ತೀಚೆಗೆ, ISRO ಯೋಜನೆ ಮತ್ತು NICE ಯೋಜನೆಗಳಲ್ಲಿನ ವಿಳಂಬಕ್ಕೆ ಹೈಕೋರ್ಟ್ KIADB ವಿರುದ್ಧ ತೀರ್ಪು ನೀಡಿದೆ. ದೇವನಹಳ್ಳಿ ಪ್ರಕರಣದಲ್ಲಿ ಮೂರು ವರ್ಷಗಳ ವಿಳಂಬ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಕೂಡ ಪತ್ರವು ತಿಳಿಸಿದೆ.

ಹಾಗೆಯೇ, ರೈತರು ಮತ್ತು ಕೈಗಾರಿಕಾ ವಲಯಗಳ ಅಭಿಪ್ರಾಯ ಸಲಹೆ ಸೂಚನೆ ಪಡೆದು ರಾಜ್ಯದ ಆಹಾರ ಭದ್ರತೆ ಮತ್ತು ರೈತರ ಹಿತಕ್ಕೆ ಧಕ್ಕೆ ಬರದ ರೀತಿಯಲ್ಲಿ ಕೈಗಾರಿಕೆಗೆ ಅತ್ಯಗತ್ಯವಾಗಿರುವ ಭೂ ಖರೀದಿ ವ್ಯವಹಾರದ ನಿಟ್ಟಿನಲ್ಲಿ ಸಮಗ್ರ ನೀತಿ ರೂಪಿಸಿ, ಮತ್ತು ಈ ಮೂಲಕ ದೇಶಕ್ಕೆ ಒಂದು ಮಾದರಿ ನೀತಿಯನ್ನು  ಕರ್ನಾಟಕ ಸರ್ಕಾರ 15 ರಂದು ಮುಂದಿಡಲಿ ಎಂದು ಆಗ್ರಹಿಸಲಾಗಿದೆ.

ಈ ಮನವಿಯ ಪ್ರತಿಯನ್ನು ಸೋನಿಯಾ ಗಾಂಧಿ,  ರಾಹುಲ್ ಗಾಂಧಿ,  ವೇಣುಗೋಪಾಲ್,  ಜೈರಾಮ್ ರಮೇಶ್, ಕರ್ನಾಟಕ ಮುಖ್ಯಮಂತ್ರಿ  ಸಿದ್ದರಾಮಯ್ಯ, ಉಪಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್, ಸಚಿವರಾದ  ಎಂ.ಬಿ. ಪಾಟೀಲ್,  ರಣದೀಪ್ ಸಿಂಗ್ ಸುರ್ಜೆವಾಲಾ ಹಾಗೂ ಕರ್ನಾಟಕದ ಕಾಂಗ್ರೆಸ್ ಸಂಸದರಿಗೆ ರವಾನಿಸಲಾಗಿದೆ.

ಸಹಿ ಮಾಡಿದವರ ಪಟ್ಟಿ (ಪ್ರಮುಖರು): ಪ್ರೊ. ರಾಮಚಂದ್ರ ಗುಹಾ (ಇತಿಹಾಸಕಾರ, ಪರಿಸರವಾದಿ),  ದೇವನೂರ ಮಹಾದೇವ (ಪದ್ಮಶ್ರೀ ಪುರಸ್ಕೃತ ಕನ್ನಡ ಬರಹಗಾರರು), ಡಾ. ಎ.ಎನ್.ಯಲ್ಲಪ್ಪ ರೆಡ್ಡಿ (ಪರಿಸರವಾದಿ),  ಬಿ.ಜಯಶ್ರೀ (ರಂಗಭೂಮಿ ಕಲಾವಿದೆ), ಪ್ರೊ. ಕೆ. ನಾರಾಯಣ ಗೌಡ (ಮಾಜಿ ಉಪಕುಲಪತಿ, UAS), ಡಾ. ಜಿ. ಎನ್. ದೇವ್ಯ (ಭಾಷಾಶಾಸ್ತ್ರಜ್ಞ, ಸಾಹಿತ್ಯ ವಿಮರ್ಶಕ), ಗಿರೀಶ್ ಕಾಸರವಳ್ಳಿ (ರಾಷ್ಟ್ರ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ದೇಶಕರು), ಅರುಂಧತಿ ನಾಗ (ಪ್ರಶಸ್ತಿ ವಿಜೇತ ನಟಿ), ಡಾ. ಸುಧೀರ್ ವೋಂಬತ್ಕೆರೆ, ಪ್ರೊ. ವಿ. ಕೆ. ಗೌರ್, ಪ್ರೊ. ವಿನೋದ್ ವ್ಯಾಸಲು, ಪ್ರೊ. ದೀಪಕ್ ಮಾಲ್ಘಾನ್, ಕಿಶೋರ್ ಕುಮಾರ್ ಜಿ, ಸುರೇಶ್ ಹೆಬ್ಳೀಕರ್, ಪಾಂಡುರಂಗ ಹೆಗಡೆ ಸೇರಿದಂತೆ ಒಟ್ಟು 65 ವಿದ್ವಾಂಸರು, ವಿಜ್ಞಾನಿಗಳು, ಬುದ್ಧಿಜೀವಿಗಳು, ಬರಹಗಾರರು, ಕಲಾವಿದರು ಮತ್ತು ನಾಗರಿಕ ಸಮಾಜದ ಮುಖಂಡರು ಈ ಬಹಿರಂಗ ಪತ್ರಕ್ಕೆ ಸಹಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...