Homeಕರ್ನಾಟಕದೇವನಹಳ್ಳಿ| ಹಠಾತ್ ಕಾಣಿಸಿಕೊಂಡ ಭೂಸ್ವಾಧೀನ 'ಪರ' ಗುಂಪು; 'ಸರ್ಕಾರಿ ಪ್ರಾಯೋಜಿತ' ಎಂದ ರೈತರು?

ದೇವನಹಳ್ಳಿ| ಹಠಾತ್ ಕಾಣಿಸಿಕೊಂಡ ಭೂಸ್ವಾಧೀನ ‘ಪರ’ ಗುಂಪು; ‘ಸರ್ಕಾರಿ ಪ್ರಾಯೋಜಿತ’ ಎಂದ ರೈತರು?

- Advertisement -
- Advertisement -

1777 ಎಕರೆ ಬಲವಂತದ ಭೂಸ್ವಾಧೀನ ವಿರೋಧಿಸಿ ಸುಮಾರು 1200 ದಿನಗಳಿಂದ ಚನ್ನರಾಯಪಟ್ಟಣದ 13 ಹಳ್ಳಿಗಳ ರೈತರು ನಿರಂತರ ಹೋರಾಟ ನಡೆಸುತ್ತಾ ಬಂದಿದ್ದಾರೆ; ಶೇ.73 ರೈತರು ಭೂಮಿ ಕೊಡುವುದಿಲ್ಲ ಎಂದು ಮೂರುವರೆ ವರ್ಷದಿಂದ ಕೆಐಎಡಿಬಿ ವಿರುದ್ಧ ದೃಢವಾಗಿ ನಿಂತಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗಿನ ಹಲವು ಸುತ್ತಿನ ಸಭೆಗಳ ಬಳಿಕ ಜು.15ಕ್ಕೆ ಅಂತಿಮ ಮಾತುಕತೆಗೆ ದಿನ ನಿಗದಿಯಾಗಿದೆ. ಆದರೆ, ಸರ್ಕಾರ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಐದು ದಿನ ಮಾತ್ರ ಬಾಕಿ ಇರುವಾಗ, ಇದ್ದಕ್ಕಿದ್ದಂತೆ ಭೂಸ್ವಾಧೀನ ‘ಪರ’ ಗುಂಪೊಂದು ಸುದ್ದಿಗೋಷ್ಠಿ ನಡೆಸಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ‘ಸರ್ಕಾರ ಹತ್ತು ದಿನ ಸಮಯ ತೆಗೆದುಕೊಂಡಿದ್ದೇ ಹೋರಾಟವನ್ನು ಹಣಿಯುವುದಕ್ಕೆ’ ಎಂದು ರೈತರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಜೂ.25ರ ‘ದೇವನಹಳ್ಳಿ ಚಲೋ’ ಹೋರಾಟದ ಬಳಿಕ ಜು.4ರಂದು ಮುಖ್ಯಮಂತ್ರಿಗಳೊಂದಿಗೆ ಚನ್ನರಾಯಪಟ್ಟಣ ‘ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ’ ರೈತರು ಮತ್ತು ಸಂಯುಕ್ತ ‘ಹೋರಾಟ-ಕರ್ನಾಟಕ’ ಮುಖಂಡರ ಸಭೆ ನಿಗದಿಯಾಗಿತ್ತು. ಅಂದು, ” ಈಗ ನಿರ್ಧಾರ ಕೈಗೊಳ್ಳುವುದು ಅಸಾಧ್ಯ” ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಡಿನೋಟಿಫೈ ಮಾಡಲು ಕಾನೂನಿನ ತೊಡಕುಗಳ ಬಗ್ಗೆ ಚರ್ಚೆ ಮಾಡಬೇಕು, ಜು.15ರಂದು ರೈತರೊಂದಿಗೆ ಅಂತಿಮ ಸುತ್ತಿನ ಸಭೆ ನಡೆಸಿ ನನ್ನ ನಿರ್ಧಾರ ತಿಳಿಸುತ್ತೇನೆ” ಎಂದಿದ್ದರು.

ಸಭೆಗೆ ಇನ್ನು ನಾಲ್ಕು ದಿನ ಇರುವಾಗ ಇದ್ದಕ್ಕಿದ್ದಂತೆ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಗುಂಪೊಂದು, “ಶೇ.80ರಷ್ಟು ರೈತರು ಭೂಮಿ ಕೊಡುವುದಕ್ಕೆ ಒಪ್ಪಿದ್ದಾರೆ; ನಮ್ಮಲ್ಲಿ ಅಂತರ್ಜಲವಿಲ್ಲ, ಈ ಭೂಮಿ ಕೃಷಿಗೆ ಯೋಗ್ಯವಾಗಿಲ್ಲ. ಸರ್ಕಾರ ಸೂಕ್ತ ಬೆಲೆ ಕೊಟ್ಟು ಭೂಮಿ ಪಡೆದುಕೊಳ್ಳಲಿ” ಎಂದು ಹೇಳಿದ್ದಾರೆ.

“ಭೂಸ್ವಾಧೀನದ ಬದಲಿಗೆ 20 ವರ್ಷಗಳ ಕಾಲ ಈ ಪ್ರದೇಶವನ್ನು ‘ಹಸಿರುವ ವಲಯ’ ಎಂದು ಘೋಷಿಸಿ, ಸರ್ಕಾರ ‘ಪರಭಾರೆ ನಿಷೇಧ’ ಜಾರಿ ಮಾಡಲಿದೆ ಎಂಬ ಸುದ್ದಿಯಿಂದ ಹಿಡಿದು, ಮುಖ್ಯಮಂತ್ರಿಗಳು ಮತ್ತು ಸಚಿವರ ದೆಹಲಿ ಭೇಟಿ ಸೇರಿದಂತೆ ಇಂದಿನ ಸುದ್ದಿಗೋಷ್ಠಿಯೂ ಸಹ ರೈತರಿಂದ ಭೂಮಿ ಕಸಿದುಕೊಳ್ಳುವ ಹುನ್ನಾರ” ಎಂದು ಭೂಸ್ವಾಧೀನ ವಿರೋಧಿ ಹೋರಾಟಗಾರರು ಆರೋಪ ಮಾಡಿದ್ದಾರೆ.

ಇದೆಲ್ಲವೂ ಸರ್ಕಾರಿ ಪ್ರಾಯೋಜಿತ

“ಇಂದು ಎಲ್ಲವೂ ಸರ್ಕಾರಿ ಪ್ರಾಯೋಜಿತವಾಗಿಯೇ ನಡೆದಿದೆ. ನಾಲ್ಕು ವರ್ಷದಿಂದ ಸುಮ್ಮನಿದ್ದವರನ್ನು ಸರ್ಕಾರ ಈಗ ಬಳಸಿಕೊಳ್ಳುತ್ತಿದೆ. ನಮ್ಮ ಹೋರಾಟಕ್ಕೆ ರಾಷ್ಟ್ರಮಟ್ಟದಲ್ಲಿ ಬೆಂಬಲ ಸಿಗುತ್ತಿರುವುದನ್ನು ನೋಡಿ ಸರ್ಕಾರ ವಿಚಲಿತವಾಗಿದೆ. ಮುಂದಕ್ಕೆ ಏನೇ ನಡೆದರೂ ‘ಮೇಲಿನವರ’ ಅಣತಿಯಂತೆಯೇ ನಡೆಯುತ್ತದೆ. ಅದಕ್ಕಾಗಿಯೇ ಅವರು 10 ದಿನ ಸಮಯಾವಾಕಾಶ ತೆಗೆದುಕೊಂಡರು. ಇದರಿಂದ ನಾವು ಯಾವುದೇ ಕಾರಣಕ್ಕೂ ಎದೆಗುಂದಲ್ಲ; 13 ಹಳ್ಳಿಗಳ ಶೇ.80ರಷ್ಟು ರೈತರು ನಮ್ಮೊಂದಿಗೆ ದೃಢವಾಗಿ ನಿಂತಿದ್ದಾರೆ. ಅವರ ಯಾವ ಹುನ್ನಾರಗಳೂ ಫಲ ಕೊಡುವುದಿಲ್ಲ” ಎಂದು ‘ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ’ ಸಂಚಾಲಕರಾದ ಕಾರಳ್ಳಿ ಶ್ರೀನಿವಾಸ್ ಹೇಳಿದರು.

ಪೋಲನಹಳ್ಳಿ ಗ್ರಾಮದ ಯುವ ರೈತ ಪ್ರಮೋದ್ ಮಾತನಾಡಿ, “13 ಹಳ್ಳಿಗಳ ಶೇ.80ರಷ್ಟು ಜನ ನಾವು ಭೂಮಿ ಕೊಡುವುದಿಲ್ಲ ಎಂದು ದೃಢವಾಗಿ ನಿಂತಿದ್ದೇವೆ, ಇದಕ್ಕೆ ನಾವು ಬದ್ಧರಾಗಿದ್ದೇವೆ. ಈ ಬಗ್ಗೆ ಸರ್ಕಾರ ಯಾವುದೇ ರೀತಿಯ ತನಿಖೆ ಮಾಡಲಿ; ದಿನದಿಂದ ದಿನ್ಕಕೆ ಭೂಮಿ ಕೊಡುವುದಿಲ್ಲ ಎಂಬುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಷ್ಟು ದಿನ ಸುಮ್ಮನಿದ್ದವರು ಈಗ ಸುದ್ದಿಗೋಷ್ಠಿ ನಡೆಸಿದ್ದು ಯಾಕೆ? ಸರ್ಕಾರ ಹತ್ತು ದಿನ ಸಮಯ ತೆಗೆದುಕೊಂಡಾಗಲೇ ಇವರು ಸುದ್ದಿಗೋಷ್ಠಿ ನಡೆಸಿರುವುದು ಸಾಕಷ್ಟು ಅನುಮಾನ ಮೂಡಿಸಿದೆ. ಇಂದು ಅಲ್ಲಿದ್ದವರಲ್ಲಿ ಕೆಲವರು ಸಚಿವ ಕೆ.ಎಚ್‌.ಮುನಿಯಪ್ಪ ಅವರಿಗೆ ಆಪ್ತರಿದ್ದಾರೆ; ಸಚಿವರೇ ಇವರನ್ನು ಮುಂದೆ ಬಿಟ್ಟಿರುವ ಸಾಧ್ಯತೆಗಳಿವೆ. ಯಾವುದೇ ಕಾರಣಕ್ಕೂ ನಾವು ಇದನ್ನು ಒಪ್ಪುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭೂಸ್ವಾಧೀನ ವಿರೋಧಿಸಿ ಪೋಲನಹಳ್ಳಿ ಗ್ರಾಮದಲ್ಲಿ ಇಂದು ನಡೆದ ರೈತರ ಸಭೆ

ಚನ್ನರಾಯಪಟ್ಟಣ ಗ್ರಾಮದ ರೈತ ಮೋಹನ್ ಮಾತನಾಡಿ, ಭೂಮಿ ಕೊಡುವುದಕ್ಕೆ ಶೇ.80ರಷ್ಟು ರೈತರು ಒಪ್ಪಿದ್ದಾರೆ ಎಂದು ಸುದ್ದಿಗೋಷ್ಠಿ ನಡೆಸಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

“ಚನ್ನರಾಯಪಟ್ಟಣದಲ್ಲಿ ರೈತರೆಲ್ಲಾ ಭೂಮಿ ಕೊಡುವುದಕ್ಕೆ ಒಪ್ಪಿದ್ದಾರೆ ಎಂದು ಹೇಳುವುದಕ್ಕೆ ಅವರು ಯಾರು? ಇಂದು ಪತ್ರಿಕಾಗೋಷ್ಠಿ ನಡೆಸಿದವರಿಗೆ ಇಲ್ಲಿ ಹೆಚ್ಚಿನ ಭೂಮಿಯೇ ಇಲ್ಲ. ಅವರಲ್ಲಿ ಬಹುತೇಕರು ಭೂ ದಲ್ಲಾಳಿಗಳು; ಹಲವು ಅಮಾಯಕರಿಗೆ ವಂಚಿಸಿದ್ದಾರೆ. ಈ ಹಿಂದೆ ಇದೇ ರೀತಿ ಸುಳ್ಳು ಹೇಳಿದಾಗ ದಲಿತರೆಲ್ಲಾ ಸೇರಿಕೊಂಡು ಊರಿನ ಮಧ್ಯೆ ಅವರಿಗೆ ಛೀಮಾರಿ ಹಾಕಿದ್ದೆವು. ಯಾವುದೇ ಕಾರಣಕ್ಕೂ ನಾವು ಭೂಮಿ ಕೊಡುವುದಕ್ಕೆ ಒಪ್ಪಿಕೊಳ್ಳುವುದಿಲ್ಲ. ನಮ್ಮ ಪ್ರಾಣ ಹೋದರೂ ಭೂಮಿ ಕೊಡುವುದಿಲ್ಲ. ಏಕೆಂದರೆ, ಭೂಮಿಯೇ ನಮ್ಮ ಅಸ್ತಿತ್ವ. ನನ್ನ ತಾತನ ಕಾಲದಿಂದ ಮಣ್ಣನ್ನೇ ನಂಬಿಕೊಂಡಿರುವ ನಮಗೆ ಭೂಮಿ ಜೊತೆಗೆ ಅವಿನಾಭಾವ ಸಂಬಂಧ ಇದೆ. ನಾನೂ ಸೇರಿದಂತೆ ಚನ್ನರಾಯಪಟ್ಟಣ ಗ್ರಾಮದ ಹಲವಾರು ದಲಿತ ಕುಟುಂಬಗಳು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕೊಳವೆ ಬಾವಿ ಕೊರೆಸಿದ್ದೇವೆ. ಪಾಲಿ ಹೌಸ್‌ ಮಾಡಿ ಆಧುನಿಕ ಕೃಷಿ ಮಾಡುತ್ತಿದ್ದೇವೆ. ಗ್ರಾಮದ ಎಲ್ಲ ದಲಿತರೂ ನೀರಾವರಿ ಕೃಷಿ ಮಾಡುತ್ತಿದ್ದಾರೆ, ನಾವು ಭೂಮಿ ಕೊಡುವುದಿಲ್ಲ ಕೆಐಎಡಿಬಿ ಅಧಿಕಾರಿಗಳಿಗೆ ಈ ಬಗ್ಗೆ ಮೊದಲೇ ತಿಳಿಸಿದ್ದೇವೆ” ಎಂದು ಸುದ್ದಿಗೋಷ್ಠೀ ನಡೆಸಿದವರ ವಿರುದ್ಧ ಕಿಡಿಕಾರಿದರು.

ಎಐ ಯುಗದಲ್ಲಿ ಉದ್ಯೋಗದ ಭದ್ರತೆ ಇಲ್ಲ

ಎಐ ಯುಗದಲ್ಲಿ ನಮಗೆ ಉದ್ಯೋಗದ ಭದ್ರತೆ ಇಲ್ಲ, ಅದಕ್ಕಾಗಿಯೇ ನಾನು ಕೃಷಿ ಆಯ್ದುಕೊಂಡಿದ್ದೇನೆ ಎಂದು ಮಟ್ಟಬಾರ್ಲು ಗ್ರಾಮದ ಯುವ ರೈತ ನಂದನ್ ಹೇಳಿದರು. ಭೂಮಿ ಕೊಡುತ್ತೇವೆ ಎಂದು ಸುದ್ದಿಗೋಷ್ಠಿ ನಡೆಸಿದವರ ನಡೆಯನ್ನು ಖಂಡಿಸಿದರು.

“ನಾನು ಇಂಜಿನಿಯರಿಂಗ್ ಮುಗಿಸಿ ಕೃಷಿ ಮಾಡುತ್ತಿದ್ದೇನೆ. ಕೃಷಿಯನ್ನೂ ಈಗ ಲಾಭದಾಯಕವಾಗಿಸಬಹುದು. ನಮ್ಮ ಹಿರೀಕರು ಸಹ ಕೃಷಿ ಮಾಡಿಕೊಂಡೇ ಇಲ್ಲೀವರೆಗೆ ಬಂದಿದ್ದಾರೆ. ಈಗಿರುವ ಎಐ ಯುಗದಲ್ಲಿ ನಮಗೆ ಉದ್ಯೋಗದ ಭದ್ರತೆಯೇ ಇಲ್ಲ. ಪ್ರಸಿದ್ಧ ಕಂಪನಿಯೊಂದು 9 ಸಾವಿರ ಜನರನ್ನು ಉದ್ದೋಗದಿಂದ ತೆಗೆದಿದ್ದಾರೆ. ಆದ್ದರಿಂದ, ಕೃಷಿಯೇ ನಮಗೆ ಆಧಾರ. ಕಂಪನಿಗಳು ಕೊಡುವ 20 ಸಾವಿರ ರೂಪಾಯಿ ಸಂಬಳದ ಬದಲಿಗೆ ಕೃಷಿಯನ್ನು ಲಾಭದಾಯಕ ಮಾಡುವ ಬಗ್ಗೆ ಯೋಚಿಸಬೇಕು. ನಾನೀಗ ತರಕಾರಿ, ಹೂ ಮತ್ತು ಹಣ್ಣಿನ ಜೊತೆಗೆ ಹೈನುಗಾರಿಯನ್ನೂ ಮಾಡಿಕೊಂಡಿದ್ದೇನೆ” ಎಂದರು.

ಕರ್ನಾಟಕದಲ್ಲಿ ಡಿಫೆನ್ಸ್‌ ಕಾರಿಡಾರ್‌ಗಳ ಸ್ಥಾಪನೆಗೆ ಮನವಿ; ರಕ್ಷಣಾ ಸಚಿವರನ್ನು ಭೇಟಿಯಾದ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...