Homeಕರ್ನಾಟಕದೇವನಹಳ್ಳಿ| ಹಠಾತ್ ಕಾಣಿಸಿಕೊಂಡ ಭೂಸ್ವಾಧೀನ 'ಪರ' ಗುಂಪು; 'ಸರ್ಕಾರಿ ಪ್ರಾಯೋಜಿತ' ಎಂದ ರೈತರು?

ದೇವನಹಳ್ಳಿ| ಹಠಾತ್ ಕಾಣಿಸಿಕೊಂಡ ಭೂಸ್ವಾಧೀನ ‘ಪರ’ ಗುಂಪು; ‘ಸರ್ಕಾರಿ ಪ್ರಾಯೋಜಿತ’ ಎಂದ ರೈತರು?

- Advertisement -
- Advertisement -

1777 ಎಕರೆ ಬಲವಂತದ ಭೂಸ್ವಾಧೀನ ವಿರೋಧಿಸಿ ಸುಮಾರು 1200 ದಿನಗಳಿಂದ ಚನ್ನರಾಯಪಟ್ಟಣದ 13 ಹಳ್ಳಿಗಳ ರೈತರು ನಿರಂತರ ಹೋರಾಟ ನಡೆಸುತ್ತಾ ಬಂದಿದ್ದಾರೆ; ಶೇ.73 ರೈತರು ಭೂಮಿ ಕೊಡುವುದಿಲ್ಲ ಎಂದು ಮೂರುವರೆ ವರ್ಷದಿಂದ ಕೆಐಎಡಿಬಿ ವಿರುದ್ಧ ದೃಢವಾಗಿ ನಿಂತಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗಿನ ಹಲವು ಸುತ್ತಿನ ಸಭೆಗಳ ಬಳಿಕ ಜು.15ಕ್ಕೆ ಅಂತಿಮ ಮಾತುಕತೆಗೆ ದಿನ ನಿಗದಿಯಾಗಿದೆ. ಆದರೆ, ಸರ್ಕಾರ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಐದು ದಿನ ಮಾತ್ರ ಬಾಕಿ ಇರುವಾಗ, ಇದ್ದಕ್ಕಿದ್ದಂತೆ ಭೂಸ್ವಾಧೀನ ‘ಪರ’ ಗುಂಪೊಂದು ಸುದ್ದಿಗೋಷ್ಠಿ ನಡೆಸಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ‘ಸರ್ಕಾರ ಹತ್ತು ದಿನ ಸಮಯ ತೆಗೆದುಕೊಂಡಿದ್ದೇ ಹೋರಾಟವನ್ನು ಹಣಿಯುವುದಕ್ಕೆ’ ಎಂದು ರೈತರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಜೂ.25ರ ‘ದೇವನಹಳ್ಳಿ ಚಲೋ’ ಹೋರಾಟದ ಬಳಿಕ ಜು.4ರಂದು ಮುಖ್ಯಮಂತ್ರಿಗಳೊಂದಿಗೆ ಚನ್ನರಾಯಪಟ್ಟಣ ‘ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ’ ರೈತರು ಮತ್ತು ಸಂಯುಕ್ತ ‘ಹೋರಾಟ-ಕರ್ನಾಟಕ’ ಮುಖಂಡರ ಸಭೆ ನಿಗದಿಯಾಗಿತ್ತು. ಅಂದು, ” ಈಗ ನಿರ್ಧಾರ ಕೈಗೊಳ್ಳುವುದು ಅಸಾಧ್ಯ” ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಡಿನೋಟಿಫೈ ಮಾಡಲು ಕಾನೂನಿನ ತೊಡಕುಗಳ ಬಗ್ಗೆ ಚರ್ಚೆ ಮಾಡಬೇಕು, ಜು.15ರಂದು ರೈತರೊಂದಿಗೆ ಅಂತಿಮ ಸುತ್ತಿನ ಸಭೆ ನಡೆಸಿ ನನ್ನ ನಿರ್ಧಾರ ತಿಳಿಸುತ್ತೇನೆ” ಎಂದಿದ್ದರು.

ಸಭೆಗೆ ಇನ್ನು ನಾಲ್ಕು ದಿನ ಇರುವಾಗ ಇದ್ದಕ್ಕಿದ್ದಂತೆ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಗುಂಪೊಂದು, “ಶೇ.80ರಷ್ಟು ರೈತರು ಭೂಮಿ ಕೊಡುವುದಕ್ಕೆ ಒಪ್ಪಿದ್ದಾರೆ; ನಮ್ಮಲ್ಲಿ ಅಂತರ್ಜಲವಿಲ್ಲ, ಈ ಭೂಮಿ ಕೃಷಿಗೆ ಯೋಗ್ಯವಾಗಿಲ್ಲ. ಸರ್ಕಾರ ಸೂಕ್ತ ಬೆಲೆ ಕೊಟ್ಟು ಭೂಮಿ ಪಡೆದುಕೊಳ್ಳಲಿ” ಎಂದು ಹೇಳಿದ್ದಾರೆ.

“ಭೂಸ್ವಾಧೀನದ ಬದಲಿಗೆ 20 ವರ್ಷಗಳ ಕಾಲ ಈ ಪ್ರದೇಶವನ್ನು ‘ಹಸಿರುವ ವಲಯ’ ಎಂದು ಘೋಷಿಸಿ, ಸರ್ಕಾರ ‘ಪರಭಾರೆ ನಿಷೇಧ’ ಜಾರಿ ಮಾಡಲಿದೆ ಎಂಬ ಸುದ್ದಿಯಿಂದ ಹಿಡಿದು, ಮುಖ್ಯಮಂತ್ರಿಗಳು ಮತ್ತು ಸಚಿವರ ದೆಹಲಿ ಭೇಟಿ ಸೇರಿದಂತೆ ಇಂದಿನ ಸುದ್ದಿಗೋಷ್ಠಿಯೂ ಸಹ ರೈತರಿಂದ ಭೂಮಿ ಕಸಿದುಕೊಳ್ಳುವ ಹುನ್ನಾರ” ಎಂದು ಭೂಸ್ವಾಧೀನ ವಿರೋಧಿ ಹೋರಾಟಗಾರರು ಆರೋಪ ಮಾಡಿದ್ದಾರೆ.

ಇದೆಲ್ಲವೂ ಸರ್ಕಾರಿ ಪ್ರಾಯೋಜಿತ

“ಇಂದು ಎಲ್ಲವೂ ಸರ್ಕಾರಿ ಪ್ರಾಯೋಜಿತವಾಗಿಯೇ ನಡೆದಿದೆ. ನಾಲ್ಕು ವರ್ಷದಿಂದ ಸುಮ್ಮನಿದ್ದವರನ್ನು ಸರ್ಕಾರ ಈಗ ಬಳಸಿಕೊಳ್ಳುತ್ತಿದೆ. ನಮ್ಮ ಹೋರಾಟಕ್ಕೆ ರಾಷ್ಟ್ರಮಟ್ಟದಲ್ಲಿ ಬೆಂಬಲ ಸಿಗುತ್ತಿರುವುದನ್ನು ನೋಡಿ ಸರ್ಕಾರ ವಿಚಲಿತವಾಗಿದೆ. ಮುಂದಕ್ಕೆ ಏನೇ ನಡೆದರೂ ‘ಮೇಲಿನವರ’ ಅಣತಿಯಂತೆಯೇ ನಡೆಯುತ್ತದೆ. ಅದಕ್ಕಾಗಿಯೇ ಅವರು 10 ದಿನ ಸಮಯಾವಾಕಾಶ ತೆಗೆದುಕೊಂಡರು. ಇದರಿಂದ ನಾವು ಯಾವುದೇ ಕಾರಣಕ್ಕೂ ಎದೆಗುಂದಲ್ಲ; 13 ಹಳ್ಳಿಗಳ ಶೇ.80ರಷ್ಟು ರೈತರು ನಮ್ಮೊಂದಿಗೆ ದೃಢವಾಗಿ ನಿಂತಿದ್ದಾರೆ. ಅವರ ಯಾವ ಹುನ್ನಾರಗಳೂ ಫಲ ಕೊಡುವುದಿಲ್ಲ” ಎಂದು ‘ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ’ ಸಂಚಾಲಕರಾದ ಕಾರಳ್ಳಿ ಶ್ರೀನಿವಾಸ್ ಹೇಳಿದರು.

ಪೋಲನಹಳ್ಳಿ ಗ್ರಾಮದ ಯುವ ರೈತ ಪ್ರಮೋದ್ ಮಾತನಾಡಿ, “13 ಹಳ್ಳಿಗಳ ಶೇ.80ರಷ್ಟು ಜನ ನಾವು ಭೂಮಿ ಕೊಡುವುದಿಲ್ಲ ಎಂದು ದೃಢವಾಗಿ ನಿಂತಿದ್ದೇವೆ, ಇದಕ್ಕೆ ನಾವು ಬದ್ಧರಾಗಿದ್ದೇವೆ. ಈ ಬಗ್ಗೆ ಸರ್ಕಾರ ಯಾವುದೇ ರೀತಿಯ ತನಿಖೆ ಮಾಡಲಿ; ದಿನದಿಂದ ದಿನ್ಕಕೆ ಭೂಮಿ ಕೊಡುವುದಿಲ್ಲ ಎಂಬುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಷ್ಟು ದಿನ ಸುಮ್ಮನಿದ್ದವರು ಈಗ ಸುದ್ದಿಗೋಷ್ಠಿ ನಡೆಸಿದ್ದು ಯಾಕೆ? ಸರ್ಕಾರ ಹತ್ತು ದಿನ ಸಮಯ ತೆಗೆದುಕೊಂಡಾಗಲೇ ಇವರು ಸುದ್ದಿಗೋಷ್ಠಿ ನಡೆಸಿರುವುದು ಸಾಕಷ್ಟು ಅನುಮಾನ ಮೂಡಿಸಿದೆ. ಇಂದು ಅಲ್ಲಿದ್ದವರಲ್ಲಿ ಕೆಲವರು ಸಚಿವ ಕೆ.ಎಚ್‌.ಮುನಿಯಪ್ಪ ಅವರಿಗೆ ಆಪ್ತರಿದ್ದಾರೆ; ಸಚಿವರೇ ಇವರನ್ನು ಮುಂದೆ ಬಿಟ್ಟಿರುವ ಸಾಧ್ಯತೆಗಳಿವೆ. ಯಾವುದೇ ಕಾರಣಕ್ಕೂ ನಾವು ಇದನ್ನು ಒಪ್ಪುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭೂಸ್ವಾಧೀನ ವಿರೋಧಿಸಿ ಪೋಲನಹಳ್ಳಿ ಗ್ರಾಮದಲ್ಲಿ ಇಂದು ನಡೆದ ರೈತರ ಸಭೆ

ಚನ್ನರಾಯಪಟ್ಟಣ ಗ್ರಾಮದ ರೈತ ಮೋಹನ್ ಮಾತನಾಡಿ, ಭೂಮಿ ಕೊಡುವುದಕ್ಕೆ ಶೇ.80ರಷ್ಟು ರೈತರು ಒಪ್ಪಿದ್ದಾರೆ ಎಂದು ಸುದ್ದಿಗೋಷ್ಠಿ ನಡೆಸಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

“ಚನ್ನರಾಯಪಟ್ಟಣದಲ್ಲಿ ರೈತರೆಲ್ಲಾ ಭೂಮಿ ಕೊಡುವುದಕ್ಕೆ ಒಪ್ಪಿದ್ದಾರೆ ಎಂದು ಹೇಳುವುದಕ್ಕೆ ಅವರು ಯಾರು? ಇಂದು ಪತ್ರಿಕಾಗೋಷ್ಠಿ ನಡೆಸಿದವರಿಗೆ ಇಲ್ಲಿ ಹೆಚ್ಚಿನ ಭೂಮಿಯೇ ಇಲ್ಲ. ಅವರಲ್ಲಿ ಬಹುತೇಕರು ಭೂ ದಲ್ಲಾಳಿಗಳು; ಹಲವು ಅಮಾಯಕರಿಗೆ ವಂಚಿಸಿದ್ದಾರೆ. ಈ ಹಿಂದೆ ಇದೇ ರೀತಿ ಸುಳ್ಳು ಹೇಳಿದಾಗ ದಲಿತರೆಲ್ಲಾ ಸೇರಿಕೊಂಡು ಊರಿನ ಮಧ್ಯೆ ಅವರಿಗೆ ಛೀಮಾರಿ ಹಾಕಿದ್ದೆವು. ಯಾವುದೇ ಕಾರಣಕ್ಕೂ ನಾವು ಭೂಮಿ ಕೊಡುವುದಕ್ಕೆ ಒಪ್ಪಿಕೊಳ್ಳುವುದಿಲ್ಲ. ನಮ್ಮ ಪ್ರಾಣ ಹೋದರೂ ಭೂಮಿ ಕೊಡುವುದಿಲ್ಲ. ಏಕೆಂದರೆ, ಭೂಮಿಯೇ ನಮ್ಮ ಅಸ್ತಿತ್ವ. ನನ್ನ ತಾತನ ಕಾಲದಿಂದ ಮಣ್ಣನ್ನೇ ನಂಬಿಕೊಂಡಿರುವ ನಮಗೆ ಭೂಮಿ ಜೊತೆಗೆ ಅವಿನಾಭಾವ ಸಂಬಂಧ ಇದೆ. ನಾನೂ ಸೇರಿದಂತೆ ಚನ್ನರಾಯಪಟ್ಟಣ ಗ್ರಾಮದ ಹಲವಾರು ದಲಿತ ಕುಟುಂಬಗಳು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕೊಳವೆ ಬಾವಿ ಕೊರೆಸಿದ್ದೇವೆ. ಪಾಲಿ ಹೌಸ್‌ ಮಾಡಿ ಆಧುನಿಕ ಕೃಷಿ ಮಾಡುತ್ತಿದ್ದೇವೆ. ಗ್ರಾಮದ ಎಲ್ಲ ದಲಿತರೂ ನೀರಾವರಿ ಕೃಷಿ ಮಾಡುತ್ತಿದ್ದಾರೆ, ನಾವು ಭೂಮಿ ಕೊಡುವುದಿಲ್ಲ ಕೆಐಎಡಿಬಿ ಅಧಿಕಾರಿಗಳಿಗೆ ಈ ಬಗ್ಗೆ ಮೊದಲೇ ತಿಳಿಸಿದ್ದೇವೆ” ಎಂದು ಸುದ್ದಿಗೋಷ್ಠೀ ನಡೆಸಿದವರ ವಿರುದ್ಧ ಕಿಡಿಕಾರಿದರು.

ಎಐ ಯುಗದಲ್ಲಿ ಉದ್ಯೋಗದ ಭದ್ರತೆ ಇಲ್ಲ

ಎಐ ಯುಗದಲ್ಲಿ ನಮಗೆ ಉದ್ಯೋಗದ ಭದ್ರತೆ ಇಲ್ಲ, ಅದಕ್ಕಾಗಿಯೇ ನಾನು ಕೃಷಿ ಆಯ್ದುಕೊಂಡಿದ್ದೇನೆ ಎಂದು ಮಟ್ಟಬಾರ್ಲು ಗ್ರಾಮದ ಯುವ ರೈತ ನಂದನ್ ಹೇಳಿದರು. ಭೂಮಿ ಕೊಡುತ್ತೇವೆ ಎಂದು ಸುದ್ದಿಗೋಷ್ಠಿ ನಡೆಸಿದವರ ನಡೆಯನ್ನು ಖಂಡಿಸಿದರು.

“ನಾನು ಇಂಜಿನಿಯರಿಂಗ್ ಮುಗಿಸಿ ಕೃಷಿ ಮಾಡುತ್ತಿದ್ದೇನೆ. ಕೃಷಿಯನ್ನೂ ಈಗ ಲಾಭದಾಯಕವಾಗಿಸಬಹುದು. ನಮ್ಮ ಹಿರೀಕರು ಸಹ ಕೃಷಿ ಮಾಡಿಕೊಂಡೇ ಇಲ್ಲೀವರೆಗೆ ಬಂದಿದ್ದಾರೆ. ಈಗಿರುವ ಎಐ ಯುಗದಲ್ಲಿ ನಮಗೆ ಉದ್ಯೋಗದ ಭದ್ರತೆಯೇ ಇಲ್ಲ. ಪ್ರಸಿದ್ಧ ಕಂಪನಿಯೊಂದು 9 ಸಾವಿರ ಜನರನ್ನು ಉದ್ದೋಗದಿಂದ ತೆಗೆದಿದ್ದಾರೆ. ಆದ್ದರಿಂದ, ಕೃಷಿಯೇ ನಮಗೆ ಆಧಾರ. ಕಂಪನಿಗಳು ಕೊಡುವ 20 ಸಾವಿರ ರೂಪಾಯಿ ಸಂಬಳದ ಬದಲಿಗೆ ಕೃಷಿಯನ್ನು ಲಾಭದಾಯಕ ಮಾಡುವ ಬಗ್ಗೆ ಯೋಚಿಸಬೇಕು. ನಾನೀಗ ತರಕಾರಿ, ಹೂ ಮತ್ತು ಹಣ್ಣಿನ ಜೊತೆಗೆ ಹೈನುಗಾರಿಯನ್ನೂ ಮಾಡಿಕೊಂಡಿದ್ದೇನೆ” ಎಂದರು.

ಕರ್ನಾಟಕದಲ್ಲಿ ಡಿಫೆನ್ಸ್‌ ಕಾರಿಡಾರ್‌ಗಳ ಸ್ಥಾಪನೆಗೆ ಮನವಿ; ರಕ್ಷಣಾ ಸಚಿವರನ್ನು ಭೇಟಿಯಾದ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...

ಗೋಣಿ ತುಮಕೂರು ಅಸ್ಪೃಶ್ಯತೆ ಆಚರಣೆ ಪ್ರಕರಣ: ತಹಶೀಲ್ದಾರ್ ಸಮ್ಮುಖದಲ್ಲಿ ದೇಗುಲ ಪ್ರವೇಶಿಸಿದ ನವ ದಂಪತಿ

ಕಳೆದ ವಾರ ಭಾರಿ ಚರ್ಚೆಗೆ ಗ್ರಾಸವಾಗಿದ್ದ ದಲಿತ ನವ ದಂಪತಿ ದೇಗುಲ  ಪ್ರವೇಶ ಹಾಗೂ ದಲಿತ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತುರುವೇಕೆರೆ ತಾಲೂಕು ಗೋಣಿ ತುಮಕೂರು ಗ್ರಾಮದಲ್ಲಿರುವ ಸವರ್ಣೀಯ ಮತ್ತು ದಲಿತ ಜನಾಂಗದ ನಡುವೆ...

ದ್ವೇಷ ಭಾಷಣ ಆರೋಪ: ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಎಫ್ಐಆರ್ 

ಯಾದಗಿರಿ ಜಿಲ್ಲೆಯಲ್ಲಿ ನಡೆದ ಶಿವಾಜಿ ಜಯಂತಿ ಆಚರಣೆಯ ಸಂದರ್ಭದಲ್ಲಿ ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಜಿಲ್ಲೆಯ ಗುರ್ಮಿತ್ಕಲ್ ಪಟ್ಟಣದಲ್ಲಿ ಈ...