Homeಕರ್ನಾಟಕದೇವನಹಳ್ಳಿ| ಹಠಾತ್ ಕಾಣಿಸಿಕೊಂಡ ಭೂಸ್ವಾಧೀನ 'ಪರ' ಗುಂಪು; 'ಸರ್ಕಾರಿ ಪ್ರಾಯೋಜಿತ' ಎಂದ ರೈತರು?

ದೇವನಹಳ್ಳಿ| ಹಠಾತ್ ಕಾಣಿಸಿಕೊಂಡ ಭೂಸ್ವಾಧೀನ ‘ಪರ’ ಗುಂಪು; ‘ಸರ್ಕಾರಿ ಪ್ರಾಯೋಜಿತ’ ಎಂದ ರೈತರು?

- Advertisement -
- Advertisement -

1777 ಎಕರೆ ಬಲವಂತದ ಭೂಸ್ವಾಧೀನ ವಿರೋಧಿಸಿ ಸುಮಾರು 1200 ದಿನಗಳಿಂದ ಚನ್ನರಾಯಪಟ್ಟಣದ 13 ಹಳ್ಳಿಗಳ ರೈತರು ನಿರಂತರ ಹೋರಾಟ ನಡೆಸುತ್ತಾ ಬಂದಿದ್ದಾರೆ; ಶೇ.73 ರೈತರು ಭೂಮಿ ಕೊಡುವುದಿಲ್ಲ ಎಂದು ಮೂರುವರೆ ವರ್ಷದಿಂದ ಕೆಐಎಡಿಬಿ ವಿರುದ್ಧ ದೃಢವಾಗಿ ನಿಂತಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗಿನ ಹಲವು ಸುತ್ತಿನ ಸಭೆಗಳ ಬಳಿಕ ಜು.15ಕ್ಕೆ ಅಂತಿಮ ಮಾತುಕತೆಗೆ ದಿನ ನಿಗದಿಯಾಗಿದೆ. ಆದರೆ, ಸರ್ಕಾರ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಐದು ದಿನ ಮಾತ್ರ ಬಾಕಿ ಇರುವಾಗ, ಇದ್ದಕ್ಕಿದ್ದಂತೆ ಭೂಸ್ವಾಧೀನ ‘ಪರ’ ಗುಂಪೊಂದು ಸುದ್ದಿಗೋಷ್ಠಿ ನಡೆಸಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ‘ಸರ್ಕಾರ ಹತ್ತು ದಿನ ಸಮಯ ತೆಗೆದುಕೊಂಡಿದ್ದೇ ಹೋರಾಟವನ್ನು ಹಣಿಯುವುದಕ್ಕೆ’ ಎಂದು ರೈತರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಜೂ.25ರ ‘ದೇವನಹಳ್ಳಿ ಚಲೋ’ ಹೋರಾಟದ ಬಳಿಕ ಜು.4ರಂದು ಮುಖ್ಯಮಂತ್ರಿಗಳೊಂದಿಗೆ ಚನ್ನರಾಯಪಟ್ಟಣ ‘ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ’ ರೈತರು ಮತ್ತು ಸಂಯುಕ್ತ ‘ಹೋರಾಟ-ಕರ್ನಾಟಕ’ ಮುಖಂಡರ ಸಭೆ ನಿಗದಿಯಾಗಿತ್ತು. ಅಂದು, ” ಈಗ ನಿರ್ಧಾರ ಕೈಗೊಳ್ಳುವುದು ಅಸಾಧ್ಯ” ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಡಿನೋಟಿಫೈ ಮಾಡಲು ಕಾನೂನಿನ ತೊಡಕುಗಳ ಬಗ್ಗೆ ಚರ್ಚೆ ಮಾಡಬೇಕು, ಜು.15ರಂದು ರೈತರೊಂದಿಗೆ ಅಂತಿಮ ಸುತ್ತಿನ ಸಭೆ ನಡೆಸಿ ನನ್ನ ನಿರ್ಧಾರ ತಿಳಿಸುತ್ತೇನೆ” ಎಂದಿದ್ದರು.

ಸಭೆಗೆ ಇನ್ನು ನಾಲ್ಕು ದಿನ ಇರುವಾಗ ಇದ್ದಕ್ಕಿದ್ದಂತೆ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಗುಂಪೊಂದು, “ಶೇ.80ರಷ್ಟು ರೈತರು ಭೂಮಿ ಕೊಡುವುದಕ್ಕೆ ಒಪ್ಪಿದ್ದಾರೆ; ನಮ್ಮಲ್ಲಿ ಅಂತರ್ಜಲವಿಲ್ಲ, ಈ ಭೂಮಿ ಕೃಷಿಗೆ ಯೋಗ್ಯವಾಗಿಲ್ಲ. ಸರ್ಕಾರ ಸೂಕ್ತ ಬೆಲೆ ಕೊಟ್ಟು ಭೂಮಿ ಪಡೆದುಕೊಳ್ಳಲಿ” ಎಂದು ಹೇಳಿದ್ದಾರೆ.

“ಭೂಸ್ವಾಧೀನದ ಬದಲಿಗೆ 20 ವರ್ಷಗಳ ಕಾಲ ಈ ಪ್ರದೇಶವನ್ನು ‘ಹಸಿರುವ ವಲಯ’ ಎಂದು ಘೋಷಿಸಿ, ಸರ್ಕಾರ ‘ಪರಭಾರೆ ನಿಷೇಧ’ ಜಾರಿ ಮಾಡಲಿದೆ ಎಂಬ ಸುದ್ದಿಯಿಂದ ಹಿಡಿದು, ಮುಖ್ಯಮಂತ್ರಿಗಳು ಮತ್ತು ಸಚಿವರ ದೆಹಲಿ ಭೇಟಿ ಸೇರಿದಂತೆ ಇಂದಿನ ಸುದ್ದಿಗೋಷ್ಠಿಯೂ ಸಹ ರೈತರಿಂದ ಭೂಮಿ ಕಸಿದುಕೊಳ್ಳುವ ಹುನ್ನಾರ” ಎಂದು ಭೂಸ್ವಾಧೀನ ವಿರೋಧಿ ಹೋರಾಟಗಾರರು ಆರೋಪ ಮಾಡಿದ್ದಾರೆ.

ಇದೆಲ್ಲವೂ ಸರ್ಕಾರಿ ಪ್ರಾಯೋಜಿತ

“ಇಂದು ಎಲ್ಲವೂ ಸರ್ಕಾರಿ ಪ್ರಾಯೋಜಿತವಾಗಿಯೇ ನಡೆದಿದೆ. ನಾಲ್ಕು ವರ್ಷದಿಂದ ಸುಮ್ಮನಿದ್ದವರನ್ನು ಸರ್ಕಾರ ಈಗ ಬಳಸಿಕೊಳ್ಳುತ್ತಿದೆ. ನಮ್ಮ ಹೋರಾಟಕ್ಕೆ ರಾಷ್ಟ್ರಮಟ್ಟದಲ್ಲಿ ಬೆಂಬಲ ಸಿಗುತ್ತಿರುವುದನ್ನು ನೋಡಿ ಸರ್ಕಾರ ವಿಚಲಿತವಾಗಿದೆ. ಮುಂದಕ್ಕೆ ಏನೇ ನಡೆದರೂ ‘ಮೇಲಿನವರ’ ಅಣತಿಯಂತೆಯೇ ನಡೆಯುತ್ತದೆ. ಅದಕ್ಕಾಗಿಯೇ ಅವರು 10 ದಿನ ಸಮಯಾವಾಕಾಶ ತೆಗೆದುಕೊಂಡರು. ಇದರಿಂದ ನಾವು ಯಾವುದೇ ಕಾರಣಕ್ಕೂ ಎದೆಗುಂದಲ್ಲ; 13 ಹಳ್ಳಿಗಳ ಶೇ.80ರಷ್ಟು ರೈತರು ನಮ್ಮೊಂದಿಗೆ ದೃಢವಾಗಿ ನಿಂತಿದ್ದಾರೆ. ಅವರ ಯಾವ ಹುನ್ನಾರಗಳೂ ಫಲ ಕೊಡುವುದಿಲ್ಲ” ಎಂದು ‘ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ’ ಸಂಚಾಲಕರಾದ ಕಾರಳ್ಳಿ ಶ್ರೀನಿವಾಸ್ ಹೇಳಿದರು.

ಪೋಲನಹಳ್ಳಿ ಗ್ರಾಮದ ಯುವ ರೈತ ಪ್ರಮೋದ್ ಮಾತನಾಡಿ, “13 ಹಳ್ಳಿಗಳ ಶೇ.80ರಷ್ಟು ಜನ ನಾವು ಭೂಮಿ ಕೊಡುವುದಿಲ್ಲ ಎಂದು ದೃಢವಾಗಿ ನಿಂತಿದ್ದೇವೆ, ಇದಕ್ಕೆ ನಾವು ಬದ್ಧರಾಗಿದ್ದೇವೆ. ಈ ಬಗ್ಗೆ ಸರ್ಕಾರ ಯಾವುದೇ ರೀತಿಯ ತನಿಖೆ ಮಾಡಲಿ; ದಿನದಿಂದ ದಿನ್ಕಕೆ ಭೂಮಿ ಕೊಡುವುದಿಲ್ಲ ಎಂಬುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಷ್ಟು ದಿನ ಸುಮ್ಮನಿದ್ದವರು ಈಗ ಸುದ್ದಿಗೋಷ್ಠಿ ನಡೆಸಿದ್ದು ಯಾಕೆ? ಸರ್ಕಾರ ಹತ್ತು ದಿನ ಸಮಯ ತೆಗೆದುಕೊಂಡಾಗಲೇ ಇವರು ಸುದ್ದಿಗೋಷ್ಠಿ ನಡೆಸಿರುವುದು ಸಾಕಷ್ಟು ಅನುಮಾನ ಮೂಡಿಸಿದೆ. ಇಂದು ಅಲ್ಲಿದ್ದವರಲ್ಲಿ ಕೆಲವರು ಸಚಿವ ಕೆ.ಎಚ್‌.ಮುನಿಯಪ್ಪ ಅವರಿಗೆ ಆಪ್ತರಿದ್ದಾರೆ; ಸಚಿವರೇ ಇವರನ್ನು ಮುಂದೆ ಬಿಟ್ಟಿರುವ ಸಾಧ್ಯತೆಗಳಿವೆ. ಯಾವುದೇ ಕಾರಣಕ್ಕೂ ನಾವು ಇದನ್ನು ಒಪ್ಪುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭೂಸ್ವಾಧೀನ ವಿರೋಧಿಸಿ ಪೋಲನಹಳ್ಳಿ ಗ್ರಾಮದಲ್ಲಿ ಇಂದು ನಡೆದ ರೈತರ ಸಭೆ

ಚನ್ನರಾಯಪಟ್ಟಣ ಗ್ರಾಮದ ರೈತ ಮೋಹನ್ ಮಾತನಾಡಿ, ಭೂಮಿ ಕೊಡುವುದಕ್ಕೆ ಶೇ.80ರಷ್ಟು ರೈತರು ಒಪ್ಪಿದ್ದಾರೆ ಎಂದು ಸುದ್ದಿಗೋಷ್ಠಿ ನಡೆಸಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

“ಚನ್ನರಾಯಪಟ್ಟಣದಲ್ಲಿ ರೈತರೆಲ್ಲಾ ಭೂಮಿ ಕೊಡುವುದಕ್ಕೆ ಒಪ್ಪಿದ್ದಾರೆ ಎಂದು ಹೇಳುವುದಕ್ಕೆ ಅವರು ಯಾರು? ಇಂದು ಪತ್ರಿಕಾಗೋಷ್ಠಿ ನಡೆಸಿದವರಿಗೆ ಇಲ್ಲಿ ಹೆಚ್ಚಿನ ಭೂಮಿಯೇ ಇಲ್ಲ. ಅವರಲ್ಲಿ ಬಹುತೇಕರು ಭೂ ದಲ್ಲಾಳಿಗಳು; ಹಲವು ಅಮಾಯಕರಿಗೆ ವಂಚಿಸಿದ್ದಾರೆ. ಈ ಹಿಂದೆ ಇದೇ ರೀತಿ ಸುಳ್ಳು ಹೇಳಿದಾಗ ದಲಿತರೆಲ್ಲಾ ಸೇರಿಕೊಂಡು ಊರಿನ ಮಧ್ಯೆ ಅವರಿಗೆ ಛೀಮಾರಿ ಹಾಕಿದ್ದೆವು. ಯಾವುದೇ ಕಾರಣಕ್ಕೂ ನಾವು ಭೂಮಿ ಕೊಡುವುದಕ್ಕೆ ಒಪ್ಪಿಕೊಳ್ಳುವುದಿಲ್ಲ. ನಮ್ಮ ಪ್ರಾಣ ಹೋದರೂ ಭೂಮಿ ಕೊಡುವುದಿಲ್ಲ. ಏಕೆಂದರೆ, ಭೂಮಿಯೇ ನಮ್ಮ ಅಸ್ತಿತ್ವ. ನನ್ನ ತಾತನ ಕಾಲದಿಂದ ಮಣ್ಣನ್ನೇ ನಂಬಿಕೊಂಡಿರುವ ನಮಗೆ ಭೂಮಿ ಜೊತೆಗೆ ಅವಿನಾಭಾವ ಸಂಬಂಧ ಇದೆ. ನಾನೂ ಸೇರಿದಂತೆ ಚನ್ನರಾಯಪಟ್ಟಣ ಗ್ರಾಮದ ಹಲವಾರು ದಲಿತ ಕುಟುಂಬಗಳು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕೊಳವೆ ಬಾವಿ ಕೊರೆಸಿದ್ದೇವೆ. ಪಾಲಿ ಹೌಸ್‌ ಮಾಡಿ ಆಧುನಿಕ ಕೃಷಿ ಮಾಡುತ್ತಿದ್ದೇವೆ. ಗ್ರಾಮದ ಎಲ್ಲ ದಲಿತರೂ ನೀರಾವರಿ ಕೃಷಿ ಮಾಡುತ್ತಿದ್ದಾರೆ, ನಾವು ಭೂಮಿ ಕೊಡುವುದಿಲ್ಲ ಕೆಐಎಡಿಬಿ ಅಧಿಕಾರಿಗಳಿಗೆ ಈ ಬಗ್ಗೆ ಮೊದಲೇ ತಿಳಿಸಿದ್ದೇವೆ” ಎಂದು ಸುದ್ದಿಗೋಷ್ಠೀ ನಡೆಸಿದವರ ವಿರುದ್ಧ ಕಿಡಿಕಾರಿದರು.

ಎಐ ಯುಗದಲ್ಲಿ ಉದ್ಯೋಗದ ಭದ್ರತೆ ಇಲ್ಲ

ಎಐ ಯುಗದಲ್ಲಿ ನಮಗೆ ಉದ್ಯೋಗದ ಭದ್ರತೆ ಇಲ್ಲ, ಅದಕ್ಕಾಗಿಯೇ ನಾನು ಕೃಷಿ ಆಯ್ದುಕೊಂಡಿದ್ದೇನೆ ಎಂದು ಮಟ್ಟಬಾರ್ಲು ಗ್ರಾಮದ ಯುವ ರೈತ ನಂದನ್ ಹೇಳಿದರು. ಭೂಮಿ ಕೊಡುತ್ತೇವೆ ಎಂದು ಸುದ್ದಿಗೋಷ್ಠಿ ನಡೆಸಿದವರ ನಡೆಯನ್ನು ಖಂಡಿಸಿದರು.

“ನಾನು ಇಂಜಿನಿಯರಿಂಗ್ ಮುಗಿಸಿ ಕೃಷಿ ಮಾಡುತ್ತಿದ್ದೇನೆ. ಕೃಷಿಯನ್ನೂ ಈಗ ಲಾಭದಾಯಕವಾಗಿಸಬಹುದು. ನಮ್ಮ ಹಿರೀಕರು ಸಹ ಕೃಷಿ ಮಾಡಿಕೊಂಡೇ ಇಲ್ಲೀವರೆಗೆ ಬಂದಿದ್ದಾರೆ. ಈಗಿರುವ ಎಐ ಯುಗದಲ್ಲಿ ನಮಗೆ ಉದ್ಯೋಗದ ಭದ್ರತೆಯೇ ಇಲ್ಲ. ಪ್ರಸಿದ್ಧ ಕಂಪನಿಯೊಂದು 9 ಸಾವಿರ ಜನರನ್ನು ಉದ್ದೋಗದಿಂದ ತೆಗೆದಿದ್ದಾರೆ. ಆದ್ದರಿಂದ, ಕೃಷಿಯೇ ನಮಗೆ ಆಧಾರ. ಕಂಪನಿಗಳು ಕೊಡುವ 20 ಸಾವಿರ ರೂಪಾಯಿ ಸಂಬಳದ ಬದಲಿಗೆ ಕೃಷಿಯನ್ನು ಲಾಭದಾಯಕ ಮಾಡುವ ಬಗ್ಗೆ ಯೋಚಿಸಬೇಕು. ನಾನೀಗ ತರಕಾರಿ, ಹೂ ಮತ್ತು ಹಣ್ಣಿನ ಜೊತೆಗೆ ಹೈನುಗಾರಿಯನ್ನೂ ಮಾಡಿಕೊಂಡಿದ್ದೇನೆ” ಎಂದರು.

ಕರ್ನಾಟಕದಲ್ಲಿ ಡಿಫೆನ್ಸ್‌ ಕಾರಿಡಾರ್‌ಗಳ ಸ್ಥಾಪನೆಗೆ ಮನವಿ; ರಕ್ಷಣಾ ಸಚಿವರನ್ನು ಭೇಟಿಯಾದ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...