Homeಕರ್ನಾಟಕದೇವನಹಳ್ಳಿ| ಹಠಾತ್ ಕಾಣಿಸಿಕೊಂಡ ಭೂಸ್ವಾಧೀನ 'ಪರ' ಗುಂಪು; 'ಸರ್ಕಾರಿ ಪ್ರಾಯೋಜಿತ' ಎಂದ ರೈತರು?

ದೇವನಹಳ್ಳಿ| ಹಠಾತ್ ಕಾಣಿಸಿಕೊಂಡ ಭೂಸ್ವಾಧೀನ ‘ಪರ’ ಗುಂಪು; ‘ಸರ್ಕಾರಿ ಪ್ರಾಯೋಜಿತ’ ಎಂದ ರೈತರು?

- Advertisement -
- Advertisement -

1777 ಎಕರೆ ಬಲವಂತದ ಭೂಸ್ವಾಧೀನ ವಿರೋಧಿಸಿ ಸುಮಾರು 1200 ದಿನಗಳಿಂದ ಚನ್ನರಾಯಪಟ್ಟಣದ 13 ಹಳ್ಳಿಗಳ ರೈತರು ನಿರಂತರ ಹೋರಾಟ ನಡೆಸುತ್ತಾ ಬಂದಿದ್ದಾರೆ; ಶೇ.73 ರೈತರು ಭೂಮಿ ಕೊಡುವುದಿಲ್ಲ ಎಂದು ಮೂರುವರೆ ವರ್ಷದಿಂದ ಕೆಐಎಡಿಬಿ ವಿರುದ್ಧ ದೃಢವಾಗಿ ನಿಂತಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗಿನ ಹಲವು ಸುತ್ತಿನ ಸಭೆಗಳ ಬಳಿಕ ಜು.15ಕ್ಕೆ ಅಂತಿಮ ಮಾತುಕತೆಗೆ ದಿನ ನಿಗದಿಯಾಗಿದೆ. ಆದರೆ, ಸರ್ಕಾರ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಐದು ದಿನ ಮಾತ್ರ ಬಾಕಿ ಇರುವಾಗ, ಇದ್ದಕ್ಕಿದ್ದಂತೆ ಭೂಸ್ವಾಧೀನ ‘ಪರ’ ಗುಂಪೊಂದು ಸುದ್ದಿಗೋಷ್ಠಿ ನಡೆಸಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ‘ಸರ್ಕಾರ ಹತ್ತು ದಿನ ಸಮಯ ತೆಗೆದುಕೊಂಡಿದ್ದೇ ಹೋರಾಟವನ್ನು ಹಣಿಯುವುದಕ್ಕೆ’ ಎಂದು ರೈತರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಜೂ.25ರ ‘ದೇವನಹಳ್ಳಿ ಚಲೋ’ ಹೋರಾಟದ ಬಳಿಕ ಜು.4ರಂದು ಮುಖ್ಯಮಂತ್ರಿಗಳೊಂದಿಗೆ ಚನ್ನರಾಯಪಟ್ಟಣ ‘ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ’ ರೈತರು ಮತ್ತು ಸಂಯುಕ್ತ ‘ಹೋರಾಟ-ಕರ್ನಾಟಕ’ ಮುಖಂಡರ ಸಭೆ ನಿಗದಿಯಾಗಿತ್ತು. ಅಂದು, ” ಈಗ ನಿರ್ಧಾರ ಕೈಗೊಳ್ಳುವುದು ಅಸಾಧ್ಯ” ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಡಿನೋಟಿಫೈ ಮಾಡಲು ಕಾನೂನಿನ ತೊಡಕುಗಳ ಬಗ್ಗೆ ಚರ್ಚೆ ಮಾಡಬೇಕು, ಜು.15ರಂದು ರೈತರೊಂದಿಗೆ ಅಂತಿಮ ಸುತ್ತಿನ ಸಭೆ ನಡೆಸಿ ನನ್ನ ನಿರ್ಧಾರ ತಿಳಿಸುತ್ತೇನೆ” ಎಂದಿದ್ದರು.

ಸಭೆಗೆ ಇನ್ನು ನಾಲ್ಕು ದಿನ ಇರುವಾಗ ಇದ್ದಕ್ಕಿದ್ದಂತೆ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಗುಂಪೊಂದು, “ಶೇ.80ರಷ್ಟು ರೈತರು ಭೂಮಿ ಕೊಡುವುದಕ್ಕೆ ಒಪ್ಪಿದ್ದಾರೆ; ನಮ್ಮಲ್ಲಿ ಅಂತರ್ಜಲವಿಲ್ಲ, ಈ ಭೂಮಿ ಕೃಷಿಗೆ ಯೋಗ್ಯವಾಗಿಲ್ಲ. ಸರ್ಕಾರ ಸೂಕ್ತ ಬೆಲೆ ಕೊಟ್ಟು ಭೂಮಿ ಪಡೆದುಕೊಳ್ಳಲಿ” ಎಂದು ಹೇಳಿದ್ದಾರೆ.

“ಭೂಸ್ವಾಧೀನದ ಬದಲಿಗೆ 20 ವರ್ಷಗಳ ಕಾಲ ಈ ಪ್ರದೇಶವನ್ನು ‘ಹಸಿರುವ ವಲಯ’ ಎಂದು ಘೋಷಿಸಿ, ಸರ್ಕಾರ ‘ಪರಭಾರೆ ನಿಷೇಧ’ ಜಾರಿ ಮಾಡಲಿದೆ ಎಂಬ ಸುದ್ದಿಯಿಂದ ಹಿಡಿದು, ಮುಖ್ಯಮಂತ್ರಿಗಳು ಮತ್ತು ಸಚಿವರ ದೆಹಲಿ ಭೇಟಿ ಸೇರಿದಂತೆ ಇಂದಿನ ಸುದ್ದಿಗೋಷ್ಠಿಯೂ ಸಹ ರೈತರಿಂದ ಭೂಮಿ ಕಸಿದುಕೊಳ್ಳುವ ಹುನ್ನಾರ” ಎಂದು ಭೂಸ್ವಾಧೀನ ವಿರೋಧಿ ಹೋರಾಟಗಾರರು ಆರೋಪ ಮಾಡಿದ್ದಾರೆ.

ಇದೆಲ್ಲವೂ ಸರ್ಕಾರಿ ಪ್ರಾಯೋಜಿತ

“ಇಂದು ಎಲ್ಲವೂ ಸರ್ಕಾರಿ ಪ್ರಾಯೋಜಿತವಾಗಿಯೇ ನಡೆದಿದೆ. ನಾಲ್ಕು ವರ್ಷದಿಂದ ಸುಮ್ಮನಿದ್ದವರನ್ನು ಸರ್ಕಾರ ಈಗ ಬಳಸಿಕೊಳ್ಳುತ್ತಿದೆ. ನಮ್ಮ ಹೋರಾಟಕ್ಕೆ ರಾಷ್ಟ್ರಮಟ್ಟದಲ್ಲಿ ಬೆಂಬಲ ಸಿಗುತ್ತಿರುವುದನ್ನು ನೋಡಿ ಸರ್ಕಾರ ವಿಚಲಿತವಾಗಿದೆ. ಮುಂದಕ್ಕೆ ಏನೇ ನಡೆದರೂ ‘ಮೇಲಿನವರ’ ಅಣತಿಯಂತೆಯೇ ನಡೆಯುತ್ತದೆ. ಅದಕ್ಕಾಗಿಯೇ ಅವರು 10 ದಿನ ಸಮಯಾವಾಕಾಶ ತೆಗೆದುಕೊಂಡರು. ಇದರಿಂದ ನಾವು ಯಾವುದೇ ಕಾರಣಕ್ಕೂ ಎದೆಗುಂದಲ್ಲ; 13 ಹಳ್ಳಿಗಳ ಶೇ.80ರಷ್ಟು ರೈತರು ನಮ್ಮೊಂದಿಗೆ ದೃಢವಾಗಿ ನಿಂತಿದ್ದಾರೆ. ಅವರ ಯಾವ ಹುನ್ನಾರಗಳೂ ಫಲ ಕೊಡುವುದಿಲ್ಲ” ಎಂದು ‘ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ’ ಸಂಚಾಲಕರಾದ ಕಾರಳ್ಳಿ ಶ್ರೀನಿವಾಸ್ ಹೇಳಿದರು.

ಪೋಲನಹಳ್ಳಿ ಗ್ರಾಮದ ಯುವ ರೈತ ಪ್ರಮೋದ್ ಮಾತನಾಡಿ, “13 ಹಳ್ಳಿಗಳ ಶೇ.80ರಷ್ಟು ಜನ ನಾವು ಭೂಮಿ ಕೊಡುವುದಿಲ್ಲ ಎಂದು ದೃಢವಾಗಿ ನಿಂತಿದ್ದೇವೆ, ಇದಕ್ಕೆ ನಾವು ಬದ್ಧರಾಗಿದ್ದೇವೆ. ಈ ಬಗ್ಗೆ ಸರ್ಕಾರ ಯಾವುದೇ ರೀತಿಯ ತನಿಖೆ ಮಾಡಲಿ; ದಿನದಿಂದ ದಿನ್ಕಕೆ ಭೂಮಿ ಕೊಡುವುದಿಲ್ಲ ಎಂಬುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಷ್ಟು ದಿನ ಸುಮ್ಮನಿದ್ದವರು ಈಗ ಸುದ್ದಿಗೋಷ್ಠಿ ನಡೆಸಿದ್ದು ಯಾಕೆ? ಸರ್ಕಾರ ಹತ್ತು ದಿನ ಸಮಯ ತೆಗೆದುಕೊಂಡಾಗಲೇ ಇವರು ಸುದ್ದಿಗೋಷ್ಠಿ ನಡೆಸಿರುವುದು ಸಾಕಷ್ಟು ಅನುಮಾನ ಮೂಡಿಸಿದೆ. ಇಂದು ಅಲ್ಲಿದ್ದವರಲ್ಲಿ ಕೆಲವರು ಸಚಿವ ಕೆ.ಎಚ್‌.ಮುನಿಯಪ್ಪ ಅವರಿಗೆ ಆಪ್ತರಿದ್ದಾರೆ; ಸಚಿವರೇ ಇವರನ್ನು ಮುಂದೆ ಬಿಟ್ಟಿರುವ ಸಾಧ್ಯತೆಗಳಿವೆ. ಯಾವುದೇ ಕಾರಣಕ್ಕೂ ನಾವು ಇದನ್ನು ಒಪ್ಪುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭೂಸ್ವಾಧೀನ ವಿರೋಧಿಸಿ ಪೋಲನಹಳ್ಳಿ ಗ್ರಾಮದಲ್ಲಿ ಇಂದು ನಡೆದ ರೈತರ ಸಭೆ

ಚನ್ನರಾಯಪಟ್ಟಣ ಗ್ರಾಮದ ರೈತ ಮೋಹನ್ ಮಾತನಾಡಿ, ಭೂಮಿ ಕೊಡುವುದಕ್ಕೆ ಶೇ.80ರಷ್ಟು ರೈತರು ಒಪ್ಪಿದ್ದಾರೆ ಎಂದು ಸುದ್ದಿಗೋಷ್ಠಿ ನಡೆಸಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

“ಚನ್ನರಾಯಪಟ್ಟಣದಲ್ಲಿ ರೈತರೆಲ್ಲಾ ಭೂಮಿ ಕೊಡುವುದಕ್ಕೆ ಒಪ್ಪಿದ್ದಾರೆ ಎಂದು ಹೇಳುವುದಕ್ಕೆ ಅವರು ಯಾರು? ಇಂದು ಪತ್ರಿಕಾಗೋಷ್ಠಿ ನಡೆಸಿದವರಿಗೆ ಇಲ್ಲಿ ಹೆಚ್ಚಿನ ಭೂಮಿಯೇ ಇಲ್ಲ. ಅವರಲ್ಲಿ ಬಹುತೇಕರು ಭೂ ದಲ್ಲಾಳಿಗಳು; ಹಲವು ಅಮಾಯಕರಿಗೆ ವಂಚಿಸಿದ್ದಾರೆ. ಈ ಹಿಂದೆ ಇದೇ ರೀತಿ ಸುಳ್ಳು ಹೇಳಿದಾಗ ದಲಿತರೆಲ್ಲಾ ಸೇರಿಕೊಂಡು ಊರಿನ ಮಧ್ಯೆ ಅವರಿಗೆ ಛೀಮಾರಿ ಹಾಕಿದ್ದೆವು. ಯಾವುದೇ ಕಾರಣಕ್ಕೂ ನಾವು ಭೂಮಿ ಕೊಡುವುದಕ್ಕೆ ಒಪ್ಪಿಕೊಳ್ಳುವುದಿಲ್ಲ. ನಮ್ಮ ಪ್ರಾಣ ಹೋದರೂ ಭೂಮಿ ಕೊಡುವುದಿಲ್ಲ. ಏಕೆಂದರೆ, ಭೂಮಿಯೇ ನಮ್ಮ ಅಸ್ತಿತ್ವ. ನನ್ನ ತಾತನ ಕಾಲದಿಂದ ಮಣ್ಣನ್ನೇ ನಂಬಿಕೊಂಡಿರುವ ನಮಗೆ ಭೂಮಿ ಜೊತೆಗೆ ಅವಿನಾಭಾವ ಸಂಬಂಧ ಇದೆ. ನಾನೂ ಸೇರಿದಂತೆ ಚನ್ನರಾಯಪಟ್ಟಣ ಗ್ರಾಮದ ಹಲವಾರು ದಲಿತ ಕುಟುಂಬಗಳು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕೊಳವೆ ಬಾವಿ ಕೊರೆಸಿದ್ದೇವೆ. ಪಾಲಿ ಹೌಸ್‌ ಮಾಡಿ ಆಧುನಿಕ ಕೃಷಿ ಮಾಡುತ್ತಿದ್ದೇವೆ. ಗ್ರಾಮದ ಎಲ್ಲ ದಲಿತರೂ ನೀರಾವರಿ ಕೃಷಿ ಮಾಡುತ್ತಿದ್ದಾರೆ, ನಾವು ಭೂಮಿ ಕೊಡುವುದಿಲ್ಲ ಕೆಐಎಡಿಬಿ ಅಧಿಕಾರಿಗಳಿಗೆ ಈ ಬಗ್ಗೆ ಮೊದಲೇ ತಿಳಿಸಿದ್ದೇವೆ” ಎಂದು ಸುದ್ದಿಗೋಷ್ಠೀ ನಡೆಸಿದವರ ವಿರುದ್ಧ ಕಿಡಿಕಾರಿದರು.

ಎಐ ಯುಗದಲ್ಲಿ ಉದ್ಯೋಗದ ಭದ್ರತೆ ಇಲ್ಲ

ಎಐ ಯುಗದಲ್ಲಿ ನಮಗೆ ಉದ್ಯೋಗದ ಭದ್ರತೆ ಇಲ್ಲ, ಅದಕ್ಕಾಗಿಯೇ ನಾನು ಕೃಷಿ ಆಯ್ದುಕೊಂಡಿದ್ದೇನೆ ಎಂದು ಮಟ್ಟಬಾರ್ಲು ಗ್ರಾಮದ ಯುವ ರೈತ ನಂದನ್ ಹೇಳಿದರು. ಭೂಮಿ ಕೊಡುತ್ತೇವೆ ಎಂದು ಸುದ್ದಿಗೋಷ್ಠಿ ನಡೆಸಿದವರ ನಡೆಯನ್ನು ಖಂಡಿಸಿದರು.

“ನಾನು ಇಂಜಿನಿಯರಿಂಗ್ ಮುಗಿಸಿ ಕೃಷಿ ಮಾಡುತ್ತಿದ್ದೇನೆ. ಕೃಷಿಯನ್ನೂ ಈಗ ಲಾಭದಾಯಕವಾಗಿಸಬಹುದು. ನಮ್ಮ ಹಿರೀಕರು ಸಹ ಕೃಷಿ ಮಾಡಿಕೊಂಡೇ ಇಲ್ಲೀವರೆಗೆ ಬಂದಿದ್ದಾರೆ. ಈಗಿರುವ ಎಐ ಯುಗದಲ್ಲಿ ನಮಗೆ ಉದ್ಯೋಗದ ಭದ್ರತೆಯೇ ಇಲ್ಲ. ಪ್ರಸಿದ್ಧ ಕಂಪನಿಯೊಂದು 9 ಸಾವಿರ ಜನರನ್ನು ಉದ್ದೋಗದಿಂದ ತೆಗೆದಿದ್ದಾರೆ. ಆದ್ದರಿಂದ, ಕೃಷಿಯೇ ನಮಗೆ ಆಧಾರ. ಕಂಪನಿಗಳು ಕೊಡುವ 20 ಸಾವಿರ ರೂಪಾಯಿ ಸಂಬಳದ ಬದಲಿಗೆ ಕೃಷಿಯನ್ನು ಲಾಭದಾಯಕ ಮಾಡುವ ಬಗ್ಗೆ ಯೋಚಿಸಬೇಕು. ನಾನೀಗ ತರಕಾರಿ, ಹೂ ಮತ್ತು ಹಣ್ಣಿನ ಜೊತೆಗೆ ಹೈನುಗಾರಿಯನ್ನೂ ಮಾಡಿಕೊಂಡಿದ್ದೇನೆ” ಎಂದರು.

ಕರ್ನಾಟಕದಲ್ಲಿ ಡಿಫೆನ್ಸ್‌ ಕಾರಿಡಾರ್‌ಗಳ ಸ್ಥಾಪನೆಗೆ ಮನವಿ; ರಕ್ಷಣಾ ಸಚಿವರನ್ನು ಭೇಟಿಯಾದ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...