Homeಚಳವಳಿದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟ:  ಜು.2ಕ್ಕೆ ಸಂತ್ರಸ್ತ ರೈತರಿಂದ  ಉಪವಾಸ ಸತ್ಯಾಗ್ರಹ-ವೀಡಿಯೋ

ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟ:  ಜು.2ಕ್ಕೆ ಸಂತ್ರಸ್ತ ರೈತರಿಂದ  ಉಪವಾಸ ಸತ್ಯಾಗ್ರಹ-ವೀಡಿಯೋ

- Advertisement -
- Advertisement -

ದೇವನಹಳ್ಳಿ: ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯು ಮಂಗಳವಾರ (ಜೂನ್ 30, 2025) ಪತ್ರಿಕಾಗೋಷ್ಠಿ ನಡೆಸಿ, ರಾಜ್ಯ ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆಯ ವಿರುದ್ಧ ತಮ್ಮ ನಿರಂತರ ಹೋರಾಟದ ಮುಂದಿನ ಹಂತಗಳನ್ನು ಘೋಷಿಸಿದೆ. ಜುಲೈ 4ರಂದು ಸರ್ಕಾರವು ರೈತ ಮುಖಂಡರು ಮತ್ತು ಹೋರಾಟಗಾರರೊಂದಿಗೆ ಕರೆದಿರುವ ಸಭೆಯು 1190 ದಿನಗಳಿಂದ ನಡೆಯುತ್ತಿರುವ ಈ ಹೋರಾಟಕ್ಕೆ ನಿರ್ಣಾಯಕ ಘಟ್ಟವಾಗಲಿದೆ ಎಂದು ಸಮಿತಿ ಸ್ಪಷ್ಟಪಡಿಸಿದೆ.

ಜುಲೈ 2ರಂದು ಉಪವಾಸ ಸತ್ಯಾಗ್ರಹ

ಸಮಿತಿಯು ನೀಡಿರುವ ಹೇಳಿಕೆಯ ಪ್ರಕಾರ, ಜುಲೈ 2ರಂದು ಚನ್ನರಾಯಪಟ್ಟಣದ 13 ಹಳ್ಳಿಗಳ ಸಂತ್ರಸ್ತ ರೈತರು “ನಮ್ಮ ಬದುಕು ಈ ಮಣ್ಣಿನಲ್ಲಿದೆ, ಈ ಮಣ್ಣಿನ ಮಕ್ಕಳ ಭವಿಷ್ಯ ನಿಮ್ಮ ಕೈಯಲ್ಲಿದೆ” ಎಂಬ ಘೋಷವಾಕ್ಯದೊಂದಿಗೆ ನಾಡ ಕಚೇರಿ ಮುಂಭಾಗದಲ್ಲಿರುವ ಧರಣಿ ಸ್ಥಳದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ರೈತರ ಈ ಶಾಂತಿಯುತ ಪ್ರತಿಭಟನೆಗೆ ಬೆಂಬಲವಾಗಿ, ಹಿರಿಯ ಗಾಂಧಿವಾದಿ ಸಂತೋಷ್ ಕೌಲಗಿಯವರು ಕೂಡ ಉಪವಾಸದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದು ರಾಜ್ಯದ ಜನರ ಒಗ್ಗಟ್ಟಿನ ಪ್ರತೀಕವಾಗಲಿದೆ ಎಂದು ಸಮಿತಿ ಹೇಳಿದೆ.

ದೇವನಹಳ್ಳಿ ಚಲೋಗೆ ಅದ್ಭುತ ಸ್ಪಂದನೆ: ಜನಸಮುದಾಯಕ್ಕೆ ಕೃತಜ್ಞತೆ

ಇತ್ತೀಚೆಗೆ ನಡೆದ ‘ದೇವನಹಳ್ಳಿ ಚಲೋ’ ಚಳುವಳಿಗೆ ರಾಜ್ಯದ ಜನತೆ ಅಭೂತಪೂರ್ವವಾಗಿ ಸ್ಪಂದಿಸಿದ್ದು, ಇದು ನಾಗರಿಕ ಸಮಾಜದಲ್ಲಿ ‘ತಾಯ್ತನದ ಪ್ರೀತಿ’ ಮತ್ತು ಮಾನವೀಯ ಸಂಬಂಧಗಳು ಇನ್ನೂ ಜೀವಂತವಾಗಿವೆ ಎಂಬುದಕ್ಕೆ ದೊಡ್ಡ ನಿದರ್ಶನವಾಗಿದೆ ಎಂದು ಸಮಿತಿ ಪ್ರಶಂಸಿಸಿದೆ. “ಭೂಮಿ ತಾಯಿಯ ಕರುಳಬಳ್ಳಿಯ ಸಂಬಂಧದಲ್ಲಿ ಬೆಸೆದ ರೈತ, ಕಾರ್ಮಿಕ, ದಲಿತ, ಮಹಿಳಾ ಸೇರಿದಂತೆ ಎಲ್ಲಾ ಸಂಘಟನೆಗಳು ರೈತರ ಉಳಿವಿಗಾಗಿ ಒಗ್ಗೂಡಿ ನಿಂತಿದ್ದು, ಇದು ಸ್ಮರಣೀಯವಾಗಿದೆ” ಎಂದು ಸಮಿತಿಯ ನಾಯಕರು ತಿಳಿಸಿದ್ದಾರೆ.

ಸರ್ಕಾರದ ಮೇಲೆ ರಾಜ್ಯದಾದ್ಯಂತ ಒತ್ತಡ: ಸಭೆಗೆ ಕರೆ

‘ದೇವನಹಳ್ಳಿ ಚಲೋ’ ನಂತರ ಸರ್ಕಾರವು ರೈತರು ಮತ್ತು ಹೋರಾಟಗಾರರೊಂದಿಗೆ ಅತ್ಯಂತ ದಾರುಣವಾಗಿ ವರ್ತಿಸಿತು. ಇದರ ಪರಿಣಾಮವಾಗಿ, ಇಡೀ ರಾಜ್ಯವೇ “ನಿಮ್ಮ ಜೊತೆಗೆ ನಾವಿದ್ದೇವೆ” ಎಂಬ ಸಂದೇಶದೊಂದಿಗೆ ದೇವನಹಳ್ಳಿ ಹೋರಾಟಕ್ಕೆ ಬೆಂಬಲವಾಗಿ ನಿಂತಿದೆ. ಪ್ರಗತಿಪರ ಚಿಂತಕರು, ನಟರು, ಸಾಹಿತಿಗಳು, ಕಲಾವಿದರು ಸೇರಿದಂತೆ ಸಮಾಜದ ವಿವಿಧ ಸ್ತರಗಳ ಗಣ್ಯರು ಸರ್ಕಾರದ ಮೇಲೆ ತೀವ್ರ ಒತ್ತಡ ಹೇರಿದ್ದಾರೆ. ಈ ಒತ್ತಡದ ಫಲವಾಗಿ, ಜುಲೈ 4ರಂದು ಸರ್ಕಾರವು ರೈತ ಮುಖಂಡರು ಮತ್ತು ಹೋರಾಟಗಾರರೊಂದಿಗೆ ಸಭೆ ಕರೆದಿದೆ.

ಸಚಿವ ಸಂಪುಟಕ್ಕೆ ಮನವಿ ಮತ್ತು ಜುಲೈ 4ರ ಬೃಹತ್ ಸಮಾವೇಶ

ಜುಲೈ 2ರಂದು ನಂದಿಬೆಟ್ಟದಲ್ಲಿ ನಡೆಯಲಿರುವ ವಿಶೇಷ ಕ್ಯಾಬಿನೆಟ್ ಸಭೆಯಲ್ಲಿ “ದೇವನಹಳ್ಳಿ ಭೂಸ್ವಾಧೀನದ ಸಮಸ್ಯೆ”ಯನ್ನು ವಿಶೇಷ ಅಜೆಂಡಾ ಆಗಿ ಪರಿಗಣಿಸಬೇಕು ಎಂದು ಹೋರಾಟ ಸಮಿತಿ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ. “ದೇವನಹಳ್ಳಿ ಮೂಲಕವೇ ಬೆಟ್ಟಕ್ಕೆ ತೆರಳಿದ ಸಚಿವರು, ಭೂಸ್ವಾಧೀನ ಮಾಡುವುದಿಲ್ಲ ಎಂಬ ನಿರ್ಣಯ ಕೈಗೊಂಡು ವಾಪಸ್ಸಾಗಬೇಕು. ದೇವನಹಳ್ಳಿ ರೈತರ ಸಂಕಷ್ಟಕ್ಕೆ ಸ್ಪಂದಿಸಿದ ರಾಜ್ಯದ ಜನರ ಆಶಯದಂತೆ, ಸರ್ಕಾರವೂ ನಮ್ಮ ಪರವಾದ ನಿರ್ಣಯಕ್ಕೆ ಬರುತ್ತದೆ ಎಂದು ದೇವನಹಳ್ಳಿಯ ಜನತೆ ಮತ್ತು ರೈತಪರ ಮನಸ್ಸುಗಳು ಆಶಾವಾದದಿಂದ ಕಾಯುತ್ತಿವೆ” ಎಂದು ಸಮಿತಿ ಆಶಾಭಾವ ವ್ಯಕ್ತಪಡಿಸಿದೆ.

ಜುಲೈ 4ರಂದು ನಡೆಯಲಿರುವ ಸಭೆಯ ಹಿನ್ನೆಲೆಯಲ್ಲಿ, ರೈತರನ್ನು ಬೆಂಬಲಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ “ನಾಡ ಉಳಿಸಿ ಸಮಾವೇಶ”ವನ್ನು ಸಂಘಟಿಸಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಸಮಾನ ಮನಸ್ಕರು ಮತ್ತು ರಾಜ್ಯದ ಜನಪರ ಸಂಘಟನೆಗಳು ಈ ಸಮಾವೇಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹೋರಾಟ ಸಮಿತಿ ಮನವಿ ಮಾಡಿದೆ. “ಇದು ಕೇವಲ ದೇವನಹಳ್ಳಿಯ ಸಮಸ್ಯೆಯಲ್ಲ, ಇದು ರಾಜ್ಯದ ರೈತರ ಅಸ್ಮಿತೆ ಮತ್ತು ಕೃಷಿ ಸಂಸ್ಕೃತಿಯ ರಕ್ಷಣೆಯ ಹೋರಾಟ” ಎಂದು ಸಮಿತಿ ಮುಖಂಡರು ಒತ್ತಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಚಂದ್ರ ತೇಜಸ್ವಿ, ಕಾರಳ್ಳಿ ಶ್ರೀನಿವಾಸ್, ಮಾರೇಗೌಡ, ನಂಜಪ್ಪ, ಸಂಜೀವ ನಾಯಕ್, ಅಶ್ವತ್ಥಪ್ಪ, ಸುಬ್ರಮಣಿಗೌಡ, ನರಸಪ್ಪ, ತಿಮ್ಮರಾಯಪ್ಪ, ಗೌರಮ್ಮ, ಅನಸೂಯಮ್ಮ ಮುಂತಾದವರು ಭಾಗವಹಿಸಿದ್ದರು.

ದೇವನಹಳ್ಳಿ ಭೂಸ್ವಾಧೀನ ಮಾಡಿದರೆ ಸರಕಾರಕ್ಕೆ ಎಚ್ಚರಿಕೆ: ಸಂಯುಕ್ತ ಹೋರಾಟದ ನಾಯಕರೊಂದಿಗೆ ವಿಶೇಷ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...