Homeಕರ್ನಾಟಕಬಲವಂತದ ಭೂಸ್ವಾಧೀನ ವಿರೋಧಿಸಿ ಸಂಯುಕ್ತ ಹೋರಾಟದಿಂದ 'ದೇವನಹಳ್ಳಿ ಚಲೋ'

ಬಲವಂತದ ಭೂಸ್ವಾಧೀನ ವಿರೋಧಿಸಿ ಸಂಯುಕ್ತ ಹೋರಾಟದಿಂದ ‘ದೇವನಹಳ್ಳಿ ಚಲೋ’

- Advertisement -
- Advertisement -

ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟದ 1150ನೇ ದಿನವಾದ ಗುರುವಾರ ರೈತರನ್ನು ಬೆಂಬಲಿಸಿ ‘ಸಂಯುಕ್ತ ಹೋರಾಟ- ಕರ್ನಾಟಕ’ ಸಂಘಟನೆಗಳ ಒಕ್ಕೂಟ ದೇವನಹಳ್ಳಿಯ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿತು.

ಕರ್ನಾಟಕದ ವಿವಿಧ ಭಾಗಗಳಿಂದ ರೈತ, ಕಾರ್ಮಿಕ, ದಲಿತ ಸಂಘಟನೆಗಳ ಮುಖಂಡರು ಸಭೆಯಲ್ಲಿ ಭಾಗವಹಿಸಿ, ಚನ್ನರಾಯಪಟ್ಟಣ ರೈತರ ಸುದೀರ್ಘ ಹೋರಾಟವನ್ನು ಮೆಲುಕು ಹಾಕಿದರು. “ಇಂತಹ ಪ್ರಾಮಾಣಿಕ ಹೋರಾಟಕ್ಕೆ ಸೋಲಾಗಬಾರದು, ನಾವು ಯಾವುದೇ ಕಾರಣಕ್ಕೂ ಈ ಹೋರಾಟವನ್ನು ಸೋಲಲು ಬಿಡಬಾರದು” ಎಂದು ಪ್ರತಿಪಾದಿಸಿದರು.

ಸಭೆಯನ್ನುದ್ದೇಶಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಯಶವಂತ್, “ಬಂಡವಾಳಶಾಹಿಗಳ ಪರವಾಗಿರುವ ಈ ಸರ್ಕಾರಗಳು ಎಂದಿಗೂ ರೈತರ ಪರವಾಗಿಲ್ಲ, ಯಾವ ಪಕ್ಷದ ಸರ್ಕಾರಗಳು ಕೂಡ ಇದಕ್ಕೆ ಹೊರತಾಗಿಲ್ಲ. ಈ ಸುದೀರ್ಘ ಚನ್ನರಾಯಪಟ್ಟಣ ಹೋರಾಟಕ್ಕೆ ದೆಹಲಿ ಹೋರಾಟದ ಸ್ಪೂರ್ತಿ ಇದೆ. ಅಲ್ಲಿ ರೈತರು ಸರ್ವಾಧಿಕಾರಿ ಆದೇಶವನ್ನು ಹಿಮ್ಮೆಟ್ಟಿಸಿದಂತೆ, ಇಲ್ಲಿ ಭೂಮಿ ಕಸಿಯುತ್ತಿರುವ ಕಾರ್ಪೊರೇಟ್‌ ಪರವಾದ ಸರ್ಕಾರವನ್ನು ನಾವು ಹಿಮ್ಮೆಟ್ಟಿಸಲೇಬೇಕು, ನಾವು ಖಂಡಿತ ಗೆಲ್ಲುತ್ತೇವೆ” ಎಂದರು.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಮಾತನಾಡಿ, “ಸರ್ಕಾರಗಳಿಗೆ ಈ ಭೂಮಿ ಕೇವಲ ಮಾರಾಟದ ಸರಕಷ್ಟೇ. ಆದರೆ, ಇಲ್ಲಿನ ರೈತರಿಗೆ ಇದು ಬದುಕು. ಆದ್ದರಿಂದಲೇ, ಯಾವುದೇ ಕಾರಣಕ್ಕೂ ನಾವು ಭೂಮಿ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ದೇವನಹಳ್ಳಿ ಚನ್ನರಾಯಪಟ್ಟಣ ರೈತರು ಈ ಐತಿಹಾಸಿಕ ಹೋರಾಟ ನಡೆಸುತ್ತಿದ್ದು, ಈ ಹೋರಾಟ ಇಂದು ಬರಿಯ ದೇವನಹಳ್ಳಿಯ ಹೋರಾಟವಾಗಿ ಮಾತ್ರ ಉಳಿದಿಲ್ಲ. ಇಡೀ ರಾಜ್ಯದ ಹೋರಾಟ. ಇಡೀ ರಾಜ್ಯದ ರೈತ ಸಂಘಟನೆಗಳು ಮತ್ತು ಇತರ ಎಲ್ಲ ಪ್ರಗತಿಪರ ಸಂಘಟನೆಗಳು ಈ ಹೋರಾಟವನ್ನು ಪ್ರತಿಷ್ಠೆಯಾಗಿ ಪರಿಗಣಿಸಿ, ಜೂನ್ 25ಕ್ಕೆ ‘ದೇವನಹಳ್ಳಿ ಚಲೋ ಹೆಸರಿನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಎಲ್ಲ ಹೋರಾಟಗಾರರು, ಬೆಂಬಲಿಗರು ಸೇರಿ ಪ್ರತಿರೋಧವನ್ನು ವ್ಯಕ್ತಪಡಿಸೋಣ. ಇದು ಕನಿಷ್ಠ 10,000 ಜನರನ್ನು ಒಳಗೊಂಡ ಬೃಹತ್ ಕಾರ್ಯಕ್ರಮವಾಗಬೇಕು. ಇದಕ್ಕಾಗಿ ಸಂಯುಕ್ತ ಹೋರಾಟ ಕರ್ನಾಟಕದ ಎಲ್ಲ ಸಹಭಾಗಿ ಸಂಘಟನೆಗಳು ರಾಜ್ಯದ ವಿವಿಧ ಭಾಗಗಳಿಂದ ತಮ್ಮ ಕಾರ್ಯಕರ್ತರುಗಳನ್ನು ಇಲ್ಲಿಗೆ ಕರೆತರಲಿವೆ” ಎಂದು ಸಭೆಯ ನಿರ್ಧಾರವನ್ನು ಪ್ರಕಟಿಸಿದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್‌ ಮಾತನಾಡಿ, “ಹಿಂದಿನ ಕೋಮುವಾದಿ ಸರ್ಕಾರವನ್ನು ಸೋಲಿಸಲು ನಾವೇ ಹಗಲಿರುಳು ಶ್ರಮಿಸಿ ಅಸ್ತಿತ್ವಕ್ಕೆ ತಂದ ಸರ್ಕಾರ ಇದು. ಆದರೆ, ಸಿದ್ದರಾಮಯ್ಯನವರ ಸರ್ಕಾರದ ಮೇಲಿಟ್ಟಿದ್ದ ನಂಬಿಕೆ ಸಂಪೂರ್ಣ ಹುಸಿಯಾಗಿದೆ. ವಿರೋಧ ಪಕ್ಷದಲ್ಲಿದ್ದಾಗ ರೈತರ ಪರವಾಗಿ, ಬಡವರ ಪರವಾಗಿ ನಿಲ್ಲುವುದಾಗಿ ಹೇಳಿ ಜನರನ್ನು ನಂಬಿಸಿ ಅಧಿಕಾರಕ್ಕೆ ಬಂದ ಸರ್ಕಾರ ಇದು. ಚನ್ನರಾಯಪಟ್ಟಣ ರೈತರು ಧರಣಿ ನಡೆಸುತ್ತಿರುವಾಗ ಅಲ್ಲಿಗೆ ಬಂದು, ‘ಫಲವತ್ತಾದ ಕೃಷಿ ಭೂಮಿಯನ್ನು ಯಾವುದೇ ಕಾರಣಕ್ಕೂ ಭೂಸ್ವಾಧೀನ ಮಾಡಿಕೊಳ್ಳಬಾರದು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಬಲವಂತದ ಭೂಸ್ವಾಧೀನವನ್ನು ಮಾಡುವುದಿಲ್ಲ. ಈ ಭೂಸ್ವಾಧೀನವನ್ನು ಕೈಬಿಡುತ್ತೇವೆ’ ಎಂದು ಹೇಳಿದ್ದ ಮುಖ್ಯಮಂತ್ರಿಗಳು ಇಂದು ವಚನಭ್ರಷ್ಟರಾಗಿದ್ದಾರೆ. ಅಲ್ಲದೆ, ಚುನಾವಣೆಯ ಸಮಯದಲ್ಲಿ ರೈತರ ಜೊತೆಗಿರುವುದಾಗಿ ಹೇಳಿದ್ದ ಕೆ.ಹೆಚ್. ಮುನಿಯಪ್ಪನವರು ರೈತರ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ. ಆದ್ದರಿಂದ, ಎಲ್ಲ ಸಂಘಟನೆಗಳು ಚನ್ನರಾಯಪಟ್ಟಣ ರೈತರ ಜೊತೆಗೆ ನಿಂತು ಅವರನ್ನು ಗೆಲ್ಲಿಸಲೇಬೇಕು. ಈ ಕಾರ್ಪೊರೇಟ್‌ ಪರವಾದ ಸರ್ಕಾರಗಳನ್ನು ಹಿಮ್ಮೆಟ್ಟಿಸಲೇಬೇಕು” ಎಂದು ಮಾತನಾಡಿದರು.

ಭೂಮಿ ಮತ್ತು ವಸತಿ ಹೋರಾಟ ಸಮಿತಿಯ ನೂರ್ ಶ್ರೀಧರ್‌ ಮಾತನಾಡಿ, “ಸದಾ ರೈತರ ಪರವಾಗಿ ಇರುವುದಾಗಿ ಹೇಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತು ಇಂದಿನ ಕಾಂಗ್ರೆಸ್ ಸರ್ಕಾರ ಭೂಮಿ ವಿಷಯಕ್ಕೆ ಸಂಬಂಧಿಸಿದಂತೆ ರೈತ ವಿರೋಧಿಯಾಗಿ ನಡೆದುಕೊಳ್ಳುತ್ತಿರುವುದು, ಜನ ವಿರೋಧಿಗಳಾಗಿ ನಡೆದುಕೊಳ್ಳುತ್ತಿರುವುದು ಸಹಿಸಲು ಸಾಧ್ಯವಿಲ್ಲ. ಒಂದು ಕಡೆ ರೈತರ ಕೈಯಲ್ಲಿರುವ ಭೂಮಿಯನ್ನು ಭೂಸ್ವಾಧೀನದ ಮೂಲಕ ಕಸಿದುಕೊಳ್ಳುವ ಪ್ರಯತ್ನವಾಗುತ್ತಿದ್ದರೆ, ಮತ್ತೊಂದೆಡೆ ಬಗರ್ ಹುಕುಂ ಸಾಗುವಳಿದಾರರಿಗೆ ಭೂ ಹಂಚಿಕೆ ಮಾಡದಿರುವುದು ಈ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಎತ್ತಿ ತೋರಿಸುತ್ತಿದೆ. ಇಂತಹ ಜನ ವಿರೋಧಿ ಸರ್ಕಾರವನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದರು.

“ಚನ್ನರಾಯಪಟ್ಟಣ ಹೋರಾಟದ ಹಾದಿಯಲ್ಲಿ ಎಲ್ಲ ರೀತಿಯ ಪ್ರತಿರೋಧಗಳನ್ನು, ಪ್ರತಿಭಟನೆಗಳನ್ನು ಮಾಡುತ್ತಲೇ ಬಂದಿದೆ. ಆದರೆ ಜೂನ್ 25ರಂದು ನಡೆಯಲಿರುವ ‘ದೇವನಹಳ್ಳಿ ಚಲೋ’ ಹಿಂದಿನ ಹೋರಾಟದಂತೆ ಮತ್ತೊಂದು ಹೋರಾಟವಾಗಿರುವುದಿಲ್ಲ. ಇದು ನಿರ್ಣಾಯಕ ಹೋರಾಟ. ಯಾವುದೇ ಕಾರಣಕ್ಕೂ ನಾವು ಬರಿಗೈಯಲ್ಲಿ ವಾಪಸ್ ಹೋಗುವ ಪ್ರಶ್ನೆಯೇ ಇಲ್ಲ. ಅದಕ್ಕೆ ಇಲ್ಲಿನ ರೈತರು ತಮ್ಮ ಮನೆಯ ದನ, ಕರು, ಕುರಿ ಎಲ್ಲವುಗಳ ಜೊತೆ ಬಂದು ಸೇರಿಕೊಳ್ಳೋಣ. ಅದನ್ನೂ ಮೀರಿ ಹೇಗೆ ಭೂಸ್ವಾಧೀನ ಮಾಡುತ್ತಾರೋ ನೋಡೋಣ, ತಾಕತ್ತಿದ್ದರೆ ಒಂದಿಂಚು ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಲಿ, ಇದು ಸರ್ಕಾರಕ್ಕೆ ಹೋರಾಟಗಾರರ ಸವಾಲು ” ಅವರು ಹಾಕಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರಾದ ಚಾಮರಸ ಮಾಲಿ ಪಾಟೀಲ್, “ನಾವು ಅಭಿವೃದ್ಧಿಯ ವಿರೋಧಿಗಳಲ್ಲ. ಕೃಷಿಗೆ ಯೋಗ್ಯವಲ್ಲದ ಬರಡು ಭೂಮಿಗಳು ಮತ್ತು ಅತಿಯಾದ ನೀರಾವರಿಯ ಕಾರಣಕ್ಕೆ ಉಂಟಾಗಿರುವ ಜೌಗು ಭೂಮಿಗಳು ನಮ್ಮಲ್ಲಿ ಸಾಕಷ್ಟು ಇವೆ. ಅಂತಹ ಕಡೆಗಳಲ್ಲಿ ಧಾರಾಳವಾಗಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲಿ. ಆದರೆ, ಈ ಸರ್ಕಾರಗಳಿಗೆ ಕೈಗಾರಿಕೆಗಳನ್ನು ಸ್ಥಾಪನೆ ಮಾಡುವ ಉದ್ದೇಶವಿಲ್ಲ ಕೆಐಎಡಿಬಿ ಹೆಸರಿನಲ್ಲಿ ರಿಯಲ್ ಎಸ್ಟೇಟ್ ದಂಧೆ ನಡೆಸುತ್ತಿದ್ದಾರೆ” ಎಂದು ದೂರಿದರು.

ಸಭೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷರಾದ ಯು. ಬಸವರಾಜು, ಸಿ.ಐ.ಟಿ.ಯು. ಸಂಘಟನೆಯ ಮೀನಾಕ್ಷಿ ಸುಂದರಂ, ವರಲಕ್ಷ್ಮಿ, ಭೂಮಿ ಮತ್ತು ವಸತಿ ಹೋರಾಟ ಸಮಿತಿಯ ಮರಿಯಪ್ಪ, ಹೋರಾಟಗಾರರಾದ ಕಾರಳ್ಳಿ ಶ್ರೀನಿವಾಸ್, ಪ್ರಭಾ ಬೆಳವಂಗಲ, ನವೀನ್, ಚಂದ್ರ ತೇಜಸ್ವಿ, ರಮೇಶ್ ಸಂಕ್ರಾಂತಿ ಮುಂತಾದ ವಿವಿಧ ಸಂಘಟನೆಗಳ ಮುಖಂಡರು, ರೈತ ನಾಯಕರುಗಳು, ಮತ್ತು 13 ಹಳ್ಳಿಗಳ ರೈತರು ಭಾಗವಹಿಸಿದ್ದರು.

ಬೆಂಗಳೂರು| ರಾತ್ರೋರಾತ್ರಿ ದಲಿತರ ಮನೆ, ದೇವಸ್ಥಾನ ಧ್ವಂಸ ಆರೋಪ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...