Homeಕರ್ನಾಟಕಬಲವಂತದ ಭೂಸ್ವಾಧೀನ ವಿರೋಧಿಸಿ ಸಂಯುಕ್ತ ಹೋರಾಟದಿಂದ 'ದೇವನಹಳ್ಳಿ ಚಲೋ'

ಬಲವಂತದ ಭೂಸ್ವಾಧೀನ ವಿರೋಧಿಸಿ ಸಂಯುಕ್ತ ಹೋರಾಟದಿಂದ ‘ದೇವನಹಳ್ಳಿ ಚಲೋ’

- Advertisement -
- Advertisement -

ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟದ 1150ನೇ ದಿನವಾದ ಗುರುವಾರ ರೈತರನ್ನು ಬೆಂಬಲಿಸಿ ‘ಸಂಯುಕ್ತ ಹೋರಾಟ- ಕರ್ನಾಟಕ’ ಸಂಘಟನೆಗಳ ಒಕ್ಕೂಟ ದೇವನಹಳ್ಳಿಯ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿತು.

ಕರ್ನಾಟಕದ ವಿವಿಧ ಭಾಗಗಳಿಂದ ರೈತ, ಕಾರ್ಮಿಕ, ದಲಿತ ಸಂಘಟನೆಗಳ ಮುಖಂಡರು ಸಭೆಯಲ್ಲಿ ಭಾಗವಹಿಸಿ, ಚನ್ನರಾಯಪಟ್ಟಣ ರೈತರ ಸುದೀರ್ಘ ಹೋರಾಟವನ್ನು ಮೆಲುಕು ಹಾಕಿದರು. “ಇಂತಹ ಪ್ರಾಮಾಣಿಕ ಹೋರಾಟಕ್ಕೆ ಸೋಲಾಗಬಾರದು, ನಾವು ಯಾವುದೇ ಕಾರಣಕ್ಕೂ ಈ ಹೋರಾಟವನ್ನು ಸೋಲಲು ಬಿಡಬಾರದು” ಎಂದು ಪ್ರತಿಪಾದಿಸಿದರು.

ಸಭೆಯನ್ನುದ್ದೇಶಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಯಶವಂತ್, “ಬಂಡವಾಳಶಾಹಿಗಳ ಪರವಾಗಿರುವ ಈ ಸರ್ಕಾರಗಳು ಎಂದಿಗೂ ರೈತರ ಪರವಾಗಿಲ್ಲ, ಯಾವ ಪಕ್ಷದ ಸರ್ಕಾರಗಳು ಕೂಡ ಇದಕ್ಕೆ ಹೊರತಾಗಿಲ್ಲ. ಈ ಸುದೀರ್ಘ ಚನ್ನರಾಯಪಟ್ಟಣ ಹೋರಾಟಕ್ಕೆ ದೆಹಲಿ ಹೋರಾಟದ ಸ್ಪೂರ್ತಿ ಇದೆ. ಅಲ್ಲಿ ರೈತರು ಸರ್ವಾಧಿಕಾರಿ ಆದೇಶವನ್ನು ಹಿಮ್ಮೆಟ್ಟಿಸಿದಂತೆ, ಇಲ್ಲಿ ಭೂಮಿ ಕಸಿಯುತ್ತಿರುವ ಕಾರ್ಪೊರೇಟ್‌ ಪರವಾದ ಸರ್ಕಾರವನ್ನು ನಾವು ಹಿಮ್ಮೆಟ್ಟಿಸಲೇಬೇಕು, ನಾವು ಖಂಡಿತ ಗೆಲ್ಲುತ್ತೇವೆ” ಎಂದರು.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಮಾತನಾಡಿ, “ಸರ್ಕಾರಗಳಿಗೆ ಈ ಭೂಮಿ ಕೇವಲ ಮಾರಾಟದ ಸರಕಷ್ಟೇ. ಆದರೆ, ಇಲ್ಲಿನ ರೈತರಿಗೆ ಇದು ಬದುಕು. ಆದ್ದರಿಂದಲೇ, ಯಾವುದೇ ಕಾರಣಕ್ಕೂ ನಾವು ಭೂಮಿ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ದೇವನಹಳ್ಳಿ ಚನ್ನರಾಯಪಟ್ಟಣ ರೈತರು ಈ ಐತಿಹಾಸಿಕ ಹೋರಾಟ ನಡೆಸುತ್ತಿದ್ದು, ಈ ಹೋರಾಟ ಇಂದು ಬರಿಯ ದೇವನಹಳ್ಳಿಯ ಹೋರಾಟವಾಗಿ ಮಾತ್ರ ಉಳಿದಿಲ್ಲ. ಇಡೀ ರಾಜ್ಯದ ಹೋರಾಟ. ಇಡೀ ರಾಜ್ಯದ ರೈತ ಸಂಘಟನೆಗಳು ಮತ್ತು ಇತರ ಎಲ್ಲ ಪ್ರಗತಿಪರ ಸಂಘಟನೆಗಳು ಈ ಹೋರಾಟವನ್ನು ಪ್ರತಿಷ್ಠೆಯಾಗಿ ಪರಿಗಣಿಸಿ, ಜೂನ್ 25ಕ್ಕೆ ‘ದೇವನಹಳ್ಳಿ ಚಲೋ ಹೆಸರಿನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಎಲ್ಲ ಹೋರಾಟಗಾರರು, ಬೆಂಬಲಿಗರು ಸೇರಿ ಪ್ರತಿರೋಧವನ್ನು ವ್ಯಕ್ತಪಡಿಸೋಣ. ಇದು ಕನಿಷ್ಠ 10,000 ಜನರನ್ನು ಒಳಗೊಂಡ ಬೃಹತ್ ಕಾರ್ಯಕ್ರಮವಾಗಬೇಕು. ಇದಕ್ಕಾಗಿ ಸಂಯುಕ್ತ ಹೋರಾಟ ಕರ್ನಾಟಕದ ಎಲ್ಲ ಸಹಭಾಗಿ ಸಂಘಟನೆಗಳು ರಾಜ್ಯದ ವಿವಿಧ ಭಾಗಗಳಿಂದ ತಮ್ಮ ಕಾರ್ಯಕರ್ತರುಗಳನ್ನು ಇಲ್ಲಿಗೆ ಕರೆತರಲಿವೆ” ಎಂದು ಸಭೆಯ ನಿರ್ಧಾರವನ್ನು ಪ್ರಕಟಿಸಿದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್‌ ಮಾತನಾಡಿ, “ಹಿಂದಿನ ಕೋಮುವಾದಿ ಸರ್ಕಾರವನ್ನು ಸೋಲಿಸಲು ನಾವೇ ಹಗಲಿರುಳು ಶ್ರಮಿಸಿ ಅಸ್ತಿತ್ವಕ್ಕೆ ತಂದ ಸರ್ಕಾರ ಇದು. ಆದರೆ, ಸಿದ್ದರಾಮಯ್ಯನವರ ಸರ್ಕಾರದ ಮೇಲಿಟ್ಟಿದ್ದ ನಂಬಿಕೆ ಸಂಪೂರ್ಣ ಹುಸಿಯಾಗಿದೆ. ವಿರೋಧ ಪಕ್ಷದಲ್ಲಿದ್ದಾಗ ರೈತರ ಪರವಾಗಿ, ಬಡವರ ಪರವಾಗಿ ನಿಲ್ಲುವುದಾಗಿ ಹೇಳಿ ಜನರನ್ನು ನಂಬಿಸಿ ಅಧಿಕಾರಕ್ಕೆ ಬಂದ ಸರ್ಕಾರ ಇದು. ಚನ್ನರಾಯಪಟ್ಟಣ ರೈತರು ಧರಣಿ ನಡೆಸುತ್ತಿರುವಾಗ ಅಲ್ಲಿಗೆ ಬಂದು, ‘ಫಲವತ್ತಾದ ಕೃಷಿ ಭೂಮಿಯನ್ನು ಯಾವುದೇ ಕಾರಣಕ್ಕೂ ಭೂಸ್ವಾಧೀನ ಮಾಡಿಕೊಳ್ಳಬಾರದು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಬಲವಂತದ ಭೂಸ್ವಾಧೀನವನ್ನು ಮಾಡುವುದಿಲ್ಲ. ಈ ಭೂಸ್ವಾಧೀನವನ್ನು ಕೈಬಿಡುತ್ತೇವೆ’ ಎಂದು ಹೇಳಿದ್ದ ಮುಖ್ಯಮಂತ್ರಿಗಳು ಇಂದು ವಚನಭ್ರಷ್ಟರಾಗಿದ್ದಾರೆ. ಅಲ್ಲದೆ, ಚುನಾವಣೆಯ ಸಮಯದಲ್ಲಿ ರೈತರ ಜೊತೆಗಿರುವುದಾಗಿ ಹೇಳಿದ್ದ ಕೆ.ಹೆಚ್. ಮುನಿಯಪ್ಪನವರು ರೈತರ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ. ಆದ್ದರಿಂದ, ಎಲ್ಲ ಸಂಘಟನೆಗಳು ಚನ್ನರಾಯಪಟ್ಟಣ ರೈತರ ಜೊತೆಗೆ ನಿಂತು ಅವರನ್ನು ಗೆಲ್ಲಿಸಲೇಬೇಕು. ಈ ಕಾರ್ಪೊರೇಟ್‌ ಪರವಾದ ಸರ್ಕಾರಗಳನ್ನು ಹಿಮ್ಮೆಟ್ಟಿಸಲೇಬೇಕು” ಎಂದು ಮಾತನಾಡಿದರು.

ಭೂಮಿ ಮತ್ತು ವಸತಿ ಹೋರಾಟ ಸಮಿತಿಯ ನೂರ್ ಶ್ರೀಧರ್‌ ಮಾತನಾಡಿ, “ಸದಾ ರೈತರ ಪರವಾಗಿ ಇರುವುದಾಗಿ ಹೇಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತು ಇಂದಿನ ಕಾಂಗ್ರೆಸ್ ಸರ್ಕಾರ ಭೂಮಿ ವಿಷಯಕ್ಕೆ ಸಂಬಂಧಿಸಿದಂತೆ ರೈತ ವಿರೋಧಿಯಾಗಿ ನಡೆದುಕೊಳ್ಳುತ್ತಿರುವುದು, ಜನ ವಿರೋಧಿಗಳಾಗಿ ನಡೆದುಕೊಳ್ಳುತ್ತಿರುವುದು ಸಹಿಸಲು ಸಾಧ್ಯವಿಲ್ಲ. ಒಂದು ಕಡೆ ರೈತರ ಕೈಯಲ್ಲಿರುವ ಭೂಮಿಯನ್ನು ಭೂಸ್ವಾಧೀನದ ಮೂಲಕ ಕಸಿದುಕೊಳ್ಳುವ ಪ್ರಯತ್ನವಾಗುತ್ತಿದ್ದರೆ, ಮತ್ತೊಂದೆಡೆ ಬಗರ್ ಹುಕುಂ ಸಾಗುವಳಿದಾರರಿಗೆ ಭೂ ಹಂಚಿಕೆ ಮಾಡದಿರುವುದು ಈ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಎತ್ತಿ ತೋರಿಸುತ್ತಿದೆ. ಇಂತಹ ಜನ ವಿರೋಧಿ ಸರ್ಕಾರವನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದರು.

“ಚನ್ನರಾಯಪಟ್ಟಣ ಹೋರಾಟದ ಹಾದಿಯಲ್ಲಿ ಎಲ್ಲ ರೀತಿಯ ಪ್ರತಿರೋಧಗಳನ್ನು, ಪ್ರತಿಭಟನೆಗಳನ್ನು ಮಾಡುತ್ತಲೇ ಬಂದಿದೆ. ಆದರೆ ಜೂನ್ 25ರಂದು ನಡೆಯಲಿರುವ ‘ದೇವನಹಳ್ಳಿ ಚಲೋ’ ಹಿಂದಿನ ಹೋರಾಟದಂತೆ ಮತ್ತೊಂದು ಹೋರಾಟವಾಗಿರುವುದಿಲ್ಲ. ಇದು ನಿರ್ಣಾಯಕ ಹೋರಾಟ. ಯಾವುದೇ ಕಾರಣಕ್ಕೂ ನಾವು ಬರಿಗೈಯಲ್ಲಿ ವಾಪಸ್ ಹೋಗುವ ಪ್ರಶ್ನೆಯೇ ಇಲ್ಲ. ಅದಕ್ಕೆ ಇಲ್ಲಿನ ರೈತರು ತಮ್ಮ ಮನೆಯ ದನ, ಕರು, ಕುರಿ ಎಲ್ಲವುಗಳ ಜೊತೆ ಬಂದು ಸೇರಿಕೊಳ್ಳೋಣ. ಅದನ್ನೂ ಮೀರಿ ಹೇಗೆ ಭೂಸ್ವಾಧೀನ ಮಾಡುತ್ತಾರೋ ನೋಡೋಣ, ತಾಕತ್ತಿದ್ದರೆ ಒಂದಿಂಚು ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಲಿ, ಇದು ಸರ್ಕಾರಕ್ಕೆ ಹೋರಾಟಗಾರರ ಸವಾಲು ” ಅವರು ಹಾಕಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರಾದ ಚಾಮರಸ ಮಾಲಿ ಪಾಟೀಲ್, “ನಾವು ಅಭಿವೃದ್ಧಿಯ ವಿರೋಧಿಗಳಲ್ಲ. ಕೃಷಿಗೆ ಯೋಗ್ಯವಲ್ಲದ ಬರಡು ಭೂಮಿಗಳು ಮತ್ತು ಅತಿಯಾದ ನೀರಾವರಿಯ ಕಾರಣಕ್ಕೆ ಉಂಟಾಗಿರುವ ಜೌಗು ಭೂಮಿಗಳು ನಮ್ಮಲ್ಲಿ ಸಾಕಷ್ಟು ಇವೆ. ಅಂತಹ ಕಡೆಗಳಲ್ಲಿ ಧಾರಾಳವಾಗಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲಿ. ಆದರೆ, ಈ ಸರ್ಕಾರಗಳಿಗೆ ಕೈಗಾರಿಕೆಗಳನ್ನು ಸ್ಥಾಪನೆ ಮಾಡುವ ಉದ್ದೇಶವಿಲ್ಲ ಕೆಐಎಡಿಬಿ ಹೆಸರಿನಲ್ಲಿ ರಿಯಲ್ ಎಸ್ಟೇಟ್ ದಂಧೆ ನಡೆಸುತ್ತಿದ್ದಾರೆ” ಎಂದು ದೂರಿದರು.

ಸಭೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷರಾದ ಯು. ಬಸವರಾಜು, ಸಿ.ಐ.ಟಿ.ಯು. ಸಂಘಟನೆಯ ಮೀನಾಕ್ಷಿ ಸುಂದರಂ, ವರಲಕ್ಷ್ಮಿ, ಭೂಮಿ ಮತ್ತು ವಸತಿ ಹೋರಾಟ ಸಮಿತಿಯ ಮರಿಯಪ್ಪ, ಹೋರಾಟಗಾರರಾದ ಕಾರಳ್ಳಿ ಶ್ರೀನಿವಾಸ್, ಪ್ರಭಾ ಬೆಳವಂಗಲ, ನವೀನ್, ಚಂದ್ರ ತೇಜಸ್ವಿ, ರಮೇಶ್ ಸಂಕ್ರಾಂತಿ ಮುಂತಾದ ವಿವಿಧ ಸಂಘಟನೆಗಳ ಮುಖಂಡರು, ರೈತ ನಾಯಕರುಗಳು, ಮತ್ತು 13 ಹಳ್ಳಿಗಳ ರೈತರು ಭಾಗವಹಿಸಿದ್ದರು.

ಬೆಂಗಳೂರು| ರಾತ್ರೋರಾತ್ರಿ ದಲಿತರ ಮನೆ, ದೇವಸ್ಥಾನ ಧ್ವಂಸ ಆರೋಪ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...