Homeಕರ್ನಾಟಕಬಲವಂತದ ಭೂಸ್ವಾಧೀನ ವಿರೋಧಿಸಿ ಸಂಯುಕ್ತ ಹೋರಾಟದಿಂದ 'ದೇವನಹಳ್ಳಿ ಚಲೋ'

ಬಲವಂತದ ಭೂಸ್ವಾಧೀನ ವಿರೋಧಿಸಿ ಸಂಯುಕ್ತ ಹೋರಾಟದಿಂದ ‘ದೇವನಹಳ್ಳಿ ಚಲೋ’

- Advertisement -
- Advertisement -

ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟದ 1150ನೇ ದಿನವಾದ ಗುರುವಾರ ರೈತರನ್ನು ಬೆಂಬಲಿಸಿ ‘ಸಂಯುಕ್ತ ಹೋರಾಟ- ಕರ್ನಾಟಕ’ ಸಂಘಟನೆಗಳ ಒಕ್ಕೂಟ ದೇವನಹಳ್ಳಿಯ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿತು.

ಕರ್ನಾಟಕದ ವಿವಿಧ ಭಾಗಗಳಿಂದ ರೈತ, ಕಾರ್ಮಿಕ, ದಲಿತ ಸಂಘಟನೆಗಳ ಮುಖಂಡರು ಸಭೆಯಲ್ಲಿ ಭಾಗವಹಿಸಿ, ಚನ್ನರಾಯಪಟ್ಟಣ ರೈತರ ಸುದೀರ್ಘ ಹೋರಾಟವನ್ನು ಮೆಲುಕು ಹಾಕಿದರು. “ಇಂತಹ ಪ್ರಾಮಾಣಿಕ ಹೋರಾಟಕ್ಕೆ ಸೋಲಾಗಬಾರದು, ನಾವು ಯಾವುದೇ ಕಾರಣಕ್ಕೂ ಈ ಹೋರಾಟವನ್ನು ಸೋಲಲು ಬಿಡಬಾರದು” ಎಂದು ಪ್ರತಿಪಾದಿಸಿದರು.

ಸಭೆಯನ್ನುದ್ದೇಶಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಯಶವಂತ್, “ಬಂಡವಾಳಶಾಹಿಗಳ ಪರವಾಗಿರುವ ಈ ಸರ್ಕಾರಗಳು ಎಂದಿಗೂ ರೈತರ ಪರವಾಗಿಲ್ಲ, ಯಾವ ಪಕ್ಷದ ಸರ್ಕಾರಗಳು ಕೂಡ ಇದಕ್ಕೆ ಹೊರತಾಗಿಲ್ಲ. ಈ ಸುದೀರ್ಘ ಚನ್ನರಾಯಪಟ್ಟಣ ಹೋರಾಟಕ್ಕೆ ದೆಹಲಿ ಹೋರಾಟದ ಸ್ಪೂರ್ತಿ ಇದೆ. ಅಲ್ಲಿ ರೈತರು ಸರ್ವಾಧಿಕಾರಿ ಆದೇಶವನ್ನು ಹಿಮ್ಮೆಟ್ಟಿಸಿದಂತೆ, ಇಲ್ಲಿ ಭೂಮಿ ಕಸಿಯುತ್ತಿರುವ ಕಾರ್ಪೊರೇಟ್‌ ಪರವಾದ ಸರ್ಕಾರವನ್ನು ನಾವು ಹಿಮ್ಮೆಟ್ಟಿಸಲೇಬೇಕು, ನಾವು ಖಂಡಿತ ಗೆಲ್ಲುತ್ತೇವೆ” ಎಂದರು.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಮಾತನಾಡಿ, “ಸರ್ಕಾರಗಳಿಗೆ ಈ ಭೂಮಿ ಕೇವಲ ಮಾರಾಟದ ಸರಕಷ್ಟೇ. ಆದರೆ, ಇಲ್ಲಿನ ರೈತರಿಗೆ ಇದು ಬದುಕು. ಆದ್ದರಿಂದಲೇ, ಯಾವುದೇ ಕಾರಣಕ್ಕೂ ನಾವು ಭೂಮಿ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ದೇವನಹಳ್ಳಿ ಚನ್ನರಾಯಪಟ್ಟಣ ರೈತರು ಈ ಐತಿಹಾಸಿಕ ಹೋರಾಟ ನಡೆಸುತ್ತಿದ್ದು, ಈ ಹೋರಾಟ ಇಂದು ಬರಿಯ ದೇವನಹಳ್ಳಿಯ ಹೋರಾಟವಾಗಿ ಮಾತ್ರ ಉಳಿದಿಲ್ಲ. ಇಡೀ ರಾಜ್ಯದ ಹೋರಾಟ. ಇಡೀ ರಾಜ್ಯದ ರೈತ ಸಂಘಟನೆಗಳು ಮತ್ತು ಇತರ ಎಲ್ಲ ಪ್ರಗತಿಪರ ಸಂಘಟನೆಗಳು ಈ ಹೋರಾಟವನ್ನು ಪ್ರತಿಷ್ಠೆಯಾಗಿ ಪರಿಗಣಿಸಿ, ಜೂನ್ 25ಕ್ಕೆ ‘ದೇವನಹಳ್ಳಿ ಚಲೋ ಹೆಸರಿನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಎಲ್ಲ ಹೋರಾಟಗಾರರು, ಬೆಂಬಲಿಗರು ಸೇರಿ ಪ್ರತಿರೋಧವನ್ನು ವ್ಯಕ್ತಪಡಿಸೋಣ. ಇದು ಕನಿಷ್ಠ 10,000 ಜನರನ್ನು ಒಳಗೊಂಡ ಬೃಹತ್ ಕಾರ್ಯಕ್ರಮವಾಗಬೇಕು. ಇದಕ್ಕಾಗಿ ಸಂಯುಕ್ತ ಹೋರಾಟ ಕರ್ನಾಟಕದ ಎಲ್ಲ ಸಹಭಾಗಿ ಸಂಘಟನೆಗಳು ರಾಜ್ಯದ ವಿವಿಧ ಭಾಗಗಳಿಂದ ತಮ್ಮ ಕಾರ್ಯಕರ್ತರುಗಳನ್ನು ಇಲ್ಲಿಗೆ ಕರೆತರಲಿವೆ” ಎಂದು ಸಭೆಯ ನಿರ್ಧಾರವನ್ನು ಪ್ರಕಟಿಸಿದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್‌ ಮಾತನಾಡಿ, “ಹಿಂದಿನ ಕೋಮುವಾದಿ ಸರ್ಕಾರವನ್ನು ಸೋಲಿಸಲು ನಾವೇ ಹಗಲಿರುಳು ಶ್ರಮಿಸಿ ಅಸ್ತಿತ್ವಕ್ಕೆ ತಂದ ಸರ್ಕಾರ ಇದು. ಆದರೆ, ಸಿದ್ದರಾಮಯ್ಯನವರ ಸರ್ಕಾರದ ಮೇಲಿಟ್ಟಿದ್ದ ನಂಬಿಕೆ ಸಂಪೂರ್ಣ ಹುಸಿಯಾಗಿದೆ. ವಿರೋಧ ಪಕ್ಷದಲ್ಲಿದ್ದಾಗ ರೈತರ ಪರವಾಗಿ, ಬಡವರ ಪರವಾಗಿ ನಿಲ್ಲುವುದಾಗಿ ಹೇಳಿ ಜನರನ್ನು ನಂಬಿಸಿ ಅಧಿಕಾರಕ್ಕೆ ಬಂದ ಸರ್ಕಾರ ಇದು. ಚನ್ನರಾಯಪಟ್ಟಣ ರೈತರು ಧರಣಿ ನಡೆಸುತ್ತಿರುವಾಗ ಅಲ್ಲಿಗೆ ಬಂದು, ‘ಫಲವತ್ತಾದ ಕೃಷಿ ಭೂಮಿಯನ್ನು ಯಾವುದೇ ಕಾರಣಕ್ಕೂ ಭೂಸ್ವಾಧೀನ ಮಾಡಿಕೊಳ್ಳಬಾರದು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಬಲವಂತದ ಭೂಸ್ವಾಧೀನವನ್ನು ಮಾಡುವುದಿಲ್ಲ. ಈ ಭೂಸ್ವಾಧೀನವನ್ನು ಕೈಬಿಡುತ್ತೇವೆ’ ಎಂದು ಹೇಳಿದ್ದ ಮುಖ್ಯಮಂತ್ರಿಗಳು ಇಂದು ವಚನಭ್ರಷ್ಟರಾಗಿದ್ದಾರೆ. ಅಲ್ಲದೆ, ಚುನಾವಣೆಯ ಸಮಯದಲ್ಲಿ ರೈತರ ಜೊತೆಗಿರುವುದಾಗಿ ಹೇಳಿದ್ದ ಕೆ.ಹೆಚ್. ಮುನಿಯಪ್ಪನವರು ರೈತರ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ. ಆದ್ದರಿಂದ, ಎಲ್ಲ ಸಂಘಟನೆಗಳು ಚನ್ನರಾಯಪಟ್ಟಣ ರೈತರ ಜೊತೆಗೆ ನಿಂತು ಅವರನ್ನು ಗೆಲ್ಲಿಸಲೇಬೇಕು. ಈ ಕಾರ್ಪೊರೇಟ್‌ ಪರವಾದ ಸರ್ಕಾರಗಳನ್ನು ಹಿಮ್ಮೆಟ್ಟಿಸಲೇಬೇಕು” ಎಂದು ಮಾತನಾಡಿದರು.

ಭೂಮಿ ಮತ್ತು ವಸತಿ ಹೋರಾಟ ಸಮಿತಿಯ ನೂರ್ ಶ್ರೀಧರ್‌ ಮಾತನಾಡಿ, “ಸದಾ ರೈತರ ಪರವಾಗಿ ಇರುವುದಾಗಿ ಹೇಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತು ಇಂದಿನ ಕಾಂಗ್ರೆಸ್ ಸರ್ಕಾರ ಭೂಮಿ ವಿಷಯಕ್ಕೆ ಸಂಬಂಧಿಸಿದಂತೆ ರೈತ ವಿರೋಧಿಯಾಗಿ ನಡೆದುಕೊಳ್ಳುತ್ತಿರುವುದು, ಜನ ವಿರೋಧಿಗಳಾಗಿ ನಡೆದುಕೊಳ್ಳುತ್ತಿರುವುದು ಸಹಿಸಲು ಸಾಧ್ಯವಿಲ್ಲ. ಒಂದು ಕಡೆ ರೈತರ ಕೈಯಲ್ಲಿರುವ ಭೂಮಿಯನ್ನು ಭೂಸ್ವಾಧೀನದ ಮೂಲಕ ಕಸಿದುಕೊಳ್ಳುವ ಪ್ರಯತ್ನವಾಗುತ್ತಿದ್ದರೆ, ಮತ್ತೊಂದೆಡೆ ಬಗರ್ ಹುಕುಂ ಸಾಗುವಳಿದಾರರಿಗೆ ಭೂ ಹಂಚಿಕೆ ಮಾಡದಿರುವುದು ಈ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಎತ್ತಿ ತೋರಿಸುತ್ತಿದೆ. ಇಂತಹ ಜನ ವಿರೋಧಿ ಸರ್ಕಾರವನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದರು.

“ಚನ್ನರಾಯಪಟ್ಟಣ ಹೋರಾಟದ ಹಾದಿಯಲ್ಲಿ ಎಲ್ಲ ರೀತಿಯ ಪ್ರತಿರೋಧಗಳನ್ನು, ಪ್ರತಿಭಟನೆಗಳನ್ನು ಮಾಡುತ್ತಲೇ ಬಂದಿದೆ. ಆದರೆ ಜೂನ್ 25ರಂದು ನಡೆಯಲಿರುವ ‘ದೇವನಹಳ್ಳಿ ಚಲೋ’ ಹಿಂದಿನ ಹೋರಾಟದಂತೆ ಮತ್ತೊಂದು ಹೋರಾಟವಾಗಿರುವುದಿಲ್ಲ. ಇದು ನಿರ್ಣಾಯಕ ಹೋರಾಟ. ಯಾವುದೇ ಕಾರಣಕ್ಕೂ ನಾವು ಬರಿಗೈಯಲ್ಲಿ ವಾಪಸ್ ಹೋಗುವ ಪ್ರಶ್ನೆಯೇ ಇಲ್ಲ. ಅದಕ್ಕೆ ಇಲ್ಲಿನ ರೈತರು ತಮ್ಮ ಮನೆಯ ದನ, ಕರು, ಕುರಿ ಎಲ್ಲವುಗಳ ಜೊತೆ ಬಂದು ಸೇರಿಕೊಳ್ಳೋಣ. ಅದನ್ನೂ ಮೀರಿ ಹೇಗೆ ಭೂಸ್ವಾಧೀನ ಮಾಡುತ್ತಾರೋ ನೋಡೋಣ, ತಾಕತ್ತಿದ್ದರೆ ಒಂದಿಂಚು ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಲಿ, ಇದು ಸರ್ಕಾರಕ್ಕೆ ಹೋರಾಟಗಾರರ ಸವಾಲು ” ಅವರು ಹಾಕಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರಾದ ಚಾಮರಸ ಮಾಲಿ ಪಾಟೀಲ್, “ನಾವು ಅಭಿವೃದ್ಧಿಯ ವಿರೋಧಿಗಳಲ್ಲ. ಕೃಷಿಗೆ ಯೋಗ್ಯವಲ್ಲದ ಬರಡು ಭೂಮಿಗಳು ಮತ್ತು ಅತಿಯಾದ ನೀರಾವರಿಯ ಕಾರಣಕ್ಕೆ ಉಂಟಾಗಿರುವ ಜೌಗು ಭೂಮಿಗಳು ನಮ್ಮಲ್ಲಿ ಸಾಕಷ್ಟು ಇವೆ. ಅಂತಹ ಕಡೆಗಳಲ್ಲಿ ಧಾರಾಳವಾಗಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲಿ. ಆದರೆ, ಈ ಸರ್ಕಾರಗಳಿಗೆ ಕೈಗಾರಿಕೆಗಳನ್ನು ಸ್ಥಾಪನೆ ಮಾಡುವ ಉದ್ದೇಶವಿಲ್ಲ ಕೆಐಎಡಿಬಿ ಹೆಸರಿನಲ್ಲಿ ರಿಯಲ್ ಎಸ್ಟೇಟ್ ದಂಧೆ ನಡೆಸುತ್ತಿದ್ದಾರೆ” ಎಂದು ದೂರಿದರು.

ಸಭೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷರಾದ ಯು. ಬಸವರಾಜು, ಸಿ.ಐ.ಟಿ.ಯು. ಸಂಘಟನೆಯ ಮೀನಾಕ್ಷಿ ಸುಂದರಂ, ವರಲಕ್ಷ್ಮಿ, ಭೂಮಿ ಮತ್ತು ವಸತಿ ಹೋರಾಟ ಸಮಿತಿಯ ಮರಿಯಪ್ಪ, ಹೋರಾಟಗಾರರಾದ ಕಾರಳ್ಳಿ ಶ್ರೀನಿವಾಸ್, ಪ್ರಭಾ ಬೆಳವಂಗಲ, ನವೀನ್, ಚಂದ್ರ ತೇಜಸ್ವಿ, ರಮೇಶ್ ಸಂಕ್ರಾಂತಿ ಮುಂತಾದ ವಿವಿಧ ಸಂಘಟನೆಗಳ ಮುಖಂಡರು, ರೈತ ನಾಯಕರುಗಳು, ಮತ್ತು 13 ಹಳ್ಳಿಗಳ ರೈತರು ಭಾಗವಹಿಸಿದ್ದರು.

ಬೆಂಗಳೂರು| ರಾತ್ರೋರಾತ್ರಿ ದಲಿತರ ಮನೆ, ದೇವಸ್ಥಾನ ಧ್ವಂಸ ಆರೋಪ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...