Homeಕರ್ನಾಟಕಬಲವಂತದ ಭೂಸ್ವಾಧೀನ ವಿರೋಧಿಸಿ ಸಂಯುಕ್ತ ಹೋರಾಟದಿಂದ 'ದೇವನಹಳ್ಳಿ ಚಲೋ'

ಬಲವಂತದ ಭೂಸ್ವಾಧೀನ ವಿರೋಧಿಸಿ ಸಂಯುಕ್ತ ಹೋರಾಟದಿಂದ ‘ದೇವನಹಳ್ಳಿ ಚಲೋ’

- Advertisement -
- Advertisement -

ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟದ 1150ನೇ ದಿನವಾದ ಗುರುವಾರ ರೈತರನ್ನು ಬೆಂಬಲಿಸಿ ‘ಸಂಯುಕ್ತ ಹೋರಾಟ- ಕರ್ನಾಟಕ’ ಸಂಘಟನೆಗಳ ಒಕ್ಕೂಟ ದೇವನಹಳ್ಳಿಯ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿತು.

ಕರ್ನಾಟಕದ ವಿವಿಧ ಭಾಗಗಳಿಂದ ರೈತ, ಕಾರ್ಮಿಕ, ದಲಿತ ಸಂಘಟನೆಗಳ ಮುಖಂಡರು ಸಭೆಯಲ್ಲಿ ಭಾಗವಹಿಸಿ, ಚನ್ನರಾಯಪಟ್ಟಣ ರೈತರ ಸುದೀರ್ಘ ಹೋರಾಟವನ್ನು ಮೆಲುಕು ಹಾಕಿದರು. “ಇಂತಹ ಪ್ರಾಮಾಣಿಕ ಹೋರಾಟಕ್ಕೆ ಸೋಲಾಗಬಾರದು, ನಾವು ಯಾವುದೇ ಕಾರಣಕ್ಕೂ ಈ ಹೋರಾಟವನ್ನು ಸೋಲಲು ಬಿಡಬಾರದು” ಎಂದು ಪ್ರತಿಪಾದಿಸಿದರು.

ಸಭೆಯನ್ನುದ್ದೇಶಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಯಶವಂತ್, “ಬಂಡವಾಳಶಾಹಿಗಳ ಪರವಾಗಿರುವ ಈ ಸರ್ಕಾರಗಳು ಎಂದಿಗೂ ರೈತರ ಪರವಾಗಿಲ್ಲ, ಯಾವ ಪಕ್ಷದ ಸರ್ಕಾರಗಳು ಕೂಡ ಇದಕ್ಕೆ ಹೊರತಾಗಿಲ್ಲ. ಈ ಸುದೀರ್ಘ ಚನ್ನರಾಯಪಟ್ಟಣ ಹೋರಾಟಕ್ಕೆ ದೆಹಲಿ ಹೋರಾಟದ ಸ್ಪೂರ್ತಿ ಇದೆ. ಅಲ್ಲಿ ರೈತರು ಸರ್ವಾಧಿಕಾರಿ ಆದೇಶವನ್ನು ಹಿಮ್ಮೆಟ್ಟಿಸಿದಂತೆ, ಇಲ್ಲಿ ಭೂಮಿ ಕಸಿಯುತ್ತಿರುವ ಕಾರ್ಪೊರೇಟ್‌ ಪರವಾದ ಸರ್ಕಾರವನ್ನು ನಾವು ಹಿಮ್ಮೆಟ್ಟಿಸಲೇಬೇಕು, ನಾವು ಖಂಡಿತ ಗೆಲ್ಲುತ್ತೇವೆ” ಎಂದರು.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಮಾತನಾಡಿ, “ಸರ್ಕಾರಗಳಿಗೆ ಈ ಭೂಮಿ ಕೇವಲ ಮಾರಾಟದ ಸರಕಷ್ಟೇ. ಆದರೆ, ಇಲ್ಲಿನ ರೈತರಿಗೆ ಇದು ಬದುಕು. ಆದ್ದರಿಂದಲೇ, ಯಾವುದೇ ಕಾರಣಕ್ಕೂ ನಾವು ಭೂಮಿ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ದೇವನಹಳ್ಳಿ ಚನ್ನರಾಯಪಟ್ಟಣ ರೈತರು ಈ ಐತಿಹಾಸಿಕ ಹೋರಾಟ ನಡೆಸುತ್ತಿದ್ದು, ಈ ಹೋರಾಟ ಇಂದು ಬರಿಯ ದೇವನಹಳ್ಳಿಯ ಹೋರಾಟವಾಗಿ ಮಾತ್ರ ಉಳಿದಿಲ್ಲ. ಇಡೀ ರಾಜ್ಯದ ಹೋರಾಟ. ಇಡೀ ರಾಜ್ಯದ ರೈತ ಸಂಘಟನೆಗಳು ಮತ್ತು ಇತರ ಎಲ್ಲ ಪ್ರಗತಿಪರ ಸಂಘಟನೆಗಳು ಈ ಹೋರಾಟವನ್ನು ಪ್ರತಿಷ್ಠೆಯಾಗಿ ಪರಿಗಣಿಸಿ, ಜೂನ್ 25ಕ್ಕೆ ‘ದೇವನಹಳ್ಳಿ ಚಲೋ ಹೆಸರಿನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಎಲ್ಲ ಹೋರಾಟಗಾರರು, ಬೆಂಬಲಿಗರು ಸೇರಿ ಪ್ರತಿರೋಧವನ್ನು ವ್ಯಕ್ತಪಡಿಸೋಣ. ಇದು ಕನಿಷ್ಠ 10,000 ಜನರನ್ನು ಒಳಗೊಂಡ ಬೃಹತ್ ಕಾರ್ಯಕ್ರಮವಾಗಬೇಕು. ಇದಕ್ಕಾಗಿ ಸಂಯುಕ್ತ ಹೋರಾಟ ಕರ್ನಾಟಕದ ಎಲ್ಲ ಸಹಭಾಗಿ ಸಂಘಟನೆಗಳು ರಾಜ್ಯದ ವಿವಿಧ ಭಾಗಗಳಿಂದ ತಮ್ಮ ಕಾರ್ಯಕರ್ತರುಗಳನ್ನು ಇಲ್ಲಿಗೆ ಕರೆತರಲಿವೆ” ಎಂದು ಸಭೆಯ ನಿರ್ಧಾರವನ್ನು ಪ್ರಕಟಿಸಿದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್‌ ಮಾತನಾಡಿ, “ಹಿಂದಿನ ಕೋಮುವಾದಿ ಸರ್ಕಾರವನ್ನು ಸೋಲಿಸಲು ನಾವೇ ಹಗಲಿರುಳು ಶ್ರಮಿಸಿ ಅಸ್ತಿತ್ವಕ್ಕೆ ತಂದ ಸರ್ಕಾರ ಇದು. ಆದರೆ, ಸಿದ್ದರಾಮಯ್ಯನವರ ಸರ್ಕಾರದ ಮೇಲಿಟ್ಟಿದ್ದ ನಂಬಿಕೆ ಸಂಪೂರ್ಣ ಹುಸಿಯಾಗಿದೆ. ವಿರೋಧ ಪಕ್ಷದಲ್ಲಿದ್ದಾಗ ರೈತರ ಪರವಾಗಿ, ಬಡವರ ಪರವಾಗಿ ನಿಲ್ಲುವುದಾಗಿ ಹೇಳಿ ಜನರನ್ನು ನಂಬಿಸಿ ಅಧಿಕಾರಕ್ಕೆ ಬಂದ ಸರ್ಕಾರ ಇದು. ಚನ್ನರಾಯಪಟ್ಟಣ ರೈತರು ಧರಣಿ ನಡೆಸುತ್ತಿರುವಾಗ ಅಲ್ಲಿಗೆ ಬಂದು, ‘ಫಲವತ್ತಾದ ಕೃಷಿ ಭೂಮಿಯನ್ನು ಯಾವುದೇ ಕಾರಣಕ್ಕೂ ಭೂಸ್ವಾಧೀನ ಮಾಡಿಕೊಳ್ಳಬಾರದು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಬಲವಂತದ ಭೂಸ್ವಾಧೀನವನ್ನು ಮಾಡುವುದಿಲ್ಲ. ಈ ಭೂಸ್ವಾಧೀನವನ್ನು ಕೈಬಿಡುತ್ತೇವೆ’ ಎಂದು ಹೇಳಿದ್ದ ಮುಖ್ಯಮಂತ್ರಿಗಳು ಇಂದು ವಚನಭ್ರಷ್ಟರಾಗಿದ್ದಾರೆ. ಅಲ್ಲದೆ, ಚುನಾವಣೆಯ ಸಮಯದಲ್ಲಿ ರೈತರ ಜೊತೆಗಿರುವುದಾಗಿ ಹೇಳಿದ್ದ ಕೆ.ಹೆಚ್. ಮುನಿಯಪ್ಪನವರು ರೈತರ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ. ಆದ್ದರಿಂದ, ಎಲ್ಲ ಸಂಘಟನೆಗಳು ಚನ್ನರಾಯಪಟ್ಟಣ ರೈತರ ಜೊತೆಗೆ ನಿಂತು ಅವರನ್ನು ಗೆಲ್ಲಿಸಲೇಬೇಕು. ಈ ಕಾರ್ಪೊರೇಟ್‌ ಪರವಾದ ಸರ್ಕಾರಗಳನ್ನು ಹಿಮ್ಮೆಟ್ಟಿಸಲೇಬೇಕು” ಎಂದು ಮಾತನಾಡಿದರು.

ಭೂಮಿ ಮತ್ತು ವಸತಿ ಹೋರಾಟ ಸಮಿತಿಯ ನೂರ್ ಶ್ರೀಧರ್‌ ಮಾತನಾಡಿ, “ಸದಾ ರೈತರ ಪರವಾಗಿ ಇರುವುದಾಗಿ ಹೇಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತು ಇಂದಿನ ಕಾಂಗ್ರೆಸ್ ಸರ್ಕಾರ ಭೂಮಿ ವಿಷಯಕ್ಕೆ ಸಂಬಂಧಿಸಿದಂತೆ ರೈತ ವಿರೋಧಿಯಾಗಿ ನಡೆದುಕೊಳ್ಳುತ್ತಿರುವುದು, ಜನ ವಿರೋಧಿಗಳಾಗಿ ನಡೆದುಕೊಳ್ಳುತ್ತಿರುವುದು ಸಹಿಸಲು ಸಾಧ್ಯವಿಲ್ಲ. ಒಂದು ಕಡೆ ರೈತರ ಕೈಯಲ್ಲಿರುವ ಭೂಮಿಯನ್ನು ಭೂಸ್ವಾಧೀನದ ಮೂಲಕ ಕಸಿದುಕೊಳ್ಳುವ ಪ್ರಯತ್ನವಾಗುತ್ತಿದ್ದರೆ, ಮತ್ತೊಂದೆಡೆ ಬಗರ್ ಹುಕುಂ ಸಾಗುವಳಿದಾರರಿಗೆ ಭೂ ಹಂಚಿಕೆ ಮಾಡದಿರುವುದು ಈ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಎತ್ತಿ ತೋರಿಸುತ್ತಿದೆ. ಇಂತಹ ಜನ ವಿರೋಧಿ ಸರ್ಕಾರವನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದರು.

“ಚನ್ನರಾಯಪಟ್ಟಣ ಹೋರಾಟದ ಹಾದಿಯಲ್ಲಿ ಎಲ್ಲ ರೀತಿಯ ಪ್ರತಿರೋಧಗಳನ್ನು, ಪ್ರತಿಭಟನೆಗಳನ್ನು ಮಾಡುತ್ತಲೇ ಬಂದಿದೆ. ಆದರೆ ಜೂನ್ 25ರಂದು ನಡೆಯಲಿರುವ ‘ದೇವನಹಳ್ಳಿ ಚಲೋ’ ಹಿಂದಿನ ಹೋರಾಟದಂತೆ ಮತ್ತೊಂದು ಹೋರಾಟವಾಗಿರುವುದಿಲ್ಲ. ಇದು ನಿರ್ಣಾಯಕ ಹೋರಾಟ. ಯಾವುದೇ ಕಾರಣಕ್ಕೂ ನಾವು ಬರಿಗೈಯಲ್ಲಿ ವಾಪಸ್ ಹೋಗುವ ಪ್ರಶ್ನೆಯೇ ಇಲ್ಲ. ಅದಕ್ಕೆ ಇಲ್ಲಿನ ರೈತರು ತಮ್ಮ ಮನೆಯ ದನ, ಕರು, ಕುರಿ ಎಲ್ಲವುಗಳ ಜೊತೆ ಬಂದು ಸೇರಿಕೊಳ್ಳೋಣ. ಅದನ್ನೂ ಮೀರಿ ಹೇಗೆ ಭೂಸ್ವಾಧೀನ ಮಾಡುತ್ತಾರೋ ನೋಡೋಣ, ತಾಕತ್ತಿದ್ದರೆ ಒಂದಿಂಚು ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಲಿ, ಇದು ಸರ್ಕಾರಕ್ಕೆ ಹೋರಾಟಗಾರರ ಸವಾಲು ” ಅವರು ಹಾಕಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರಾದ ಚಾಮರಸ ಮಾಲಿ ಪಾಟೀಲ್, “ನಾವು ಅಭಿವೃದ್ಧಿಯ ವಿರೋಧಿಗಳಲ್ಲ. ಕೃಷಿಗೆ ಯೋಗ್ಯವಲ್ಲದ ಬರಡು ಭೂಮಿಗಳು ಮತ್ತು ಅತಿಯಾದ ನೀರಾವರಿಯ ಕಾರಣಕ್ಕೆ ಉಂಟಾಗಿರುವ ಜೌಗು ಭೂಮಿಗಳು ನಮ್ಮಲ್ಲಿ ಸಾಕಷ್ಟು ಇವೆ. ಅಂತಹ ಕಡೆಗಳಲ್ಲಿ ಧಾರಾಳವಾಗಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲಿ. ಆದರೆ, ಈ ಸರ್ಕಾರಗಳಿಗೆ ಕೈಗಾರಿಕೆಗಳನ್ನು ಸ್ಥಾಪನೆ ಮಾಡುವ ಉದ್ದೇಶವಿಲ್ಲ ಕೆಐಎಡಿಬಿ ಹೆಸರಿನಲ್ಲಿ ರಿಯಲ್ ಎಸ್ಟೇಟ್ ದಂಧೆ ನಡೆಸುತ್ತಿದ್ದಾರೆ” ಎಂದು ದೂರಿದರು.

ಸಭೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷರಾದ ಯು. ಬಸವರಾಜು, ಸಿ.ಐ.ಟಿ.ಯು. ಸಂಘಟನೆಯ ಮೀನಾಕ್ಷಿ ಸುಂದರಂ, ವರಲಕ್ಷ್ಮಿ, ಭೂಮಿ ಮತ್ತು ವಸತಿ ಹೋರಾಟ ಸಮಿತಿಯ ಮರಿಯಪ್ಪ, ಹೋರಾಟಗಾರರಾದ ಕಾರಳ್ಳಿ ಶ್ರೀನಿವಾಸ್, ಪ್ರಭಾ ಬೆಳವಂಗಲ, ನವೀನ್, ಚಂದ್ರ ತೇಜಸ್ವಿ, ರಮೇಶ್ ಸಂಕ್ರಾಂತಿ ಮುಂತಾದ ವಿವಿಧ ಸಂಘಟನೆಗಳ ಮುಖಂಡರು, ರೈತ ನಾಯಕರುಗಳು, ಮತ್ತು 13 ಹಳ್ಳಿಗಳ ರೈತರು ಭಾಗವಹಿಸಿದ್ದರು.

ಬೆಂಗಳೂರು| ರಾತ್ರೋರಾತ್ರಿ ದಲಿತರ ಮನೆ, ದೇವಸ್ಥಾನ ಧ್ವಂಸ ಆರೋಪ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...