Homeಕರ್ನಾಟಕಬಲವಂತದ ಭೂಸ್ವಾಧೀನ ವಿರೋಧಿಸಿ ಸಂಯುಕ್ತ ಹೋರಾಟದಿಂದ 'ದೇವನಹಳ್ಳಿ ಚಲೋ'

ಬಲವಂತದ ಭೂಸ್ವಾಧೀನ ವಿರೋಧಿಸಿ ಸಂಯುಕ್ತ ಹೋರಾಟದಿಂದ ‘ದೇವನಹಳ್ಳಿ ಚಲೋ’

- Advertisement -
- Advertisement -

ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟದ 1150ನೇ ದಿನವಾದ ಗುರುವಾರ ರೈತರನ್ನು ಬೆಂಬಲಿಸಿ ‘ಸಂಯುಕ್ತ ಹೋರಾಟ- ಕರ್ನಾಟಕ’ ಸಂಘಟನೆಗಳ ಒಕ್ಕೂಟ ದೇವನಹಳ್ಳಿಯ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿತು.

ಕರ್ನಾಟಕದ ವಿವಿಧ ಭಾಗಗಳಿಂದ ರೈತ, ಕಾರ್ಮಿಕ, ದಲಿತ ಸಂಘಟನೆಗಳ ಮುಖಂಡರು ಸಭೆಯಲ್ಲಿ ಭಾಗವಹಿಸಿ, ಚನ್ನರಾಯಪಟ್ಟಣ ರೈತರ ಸುದೀರ್ಘ ಹೋರಾಟವನ್ನು ಮೆಲುಕು ಹಾಕಿದರು. “ಇಂತಹ ಪ್ರಾಮಾಣಿಕ ಹೋರಾಟಕ್ಕೆ ಸೋಲಾಗಬಾರದು, ನಾವು ಯಾವುದೇ ಕಾರಣಕ್ಕೂ ಈ ಹೋರಾಟವನ್ನು ಸೋಲಲು ಬಿಡಬಾರದು” ಎಂದು ಪ್ರತಿಪಾದಿಸಿದರು.

ಸಭೆಯನ್ನುದ್ದೇಶಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಯಶವಂತ್, “ಬಂಡವಾಳಶಾಹಿಗಳ ಪರವಾಗಿರುವ ಈ ಸರ್ಕಾರಗಳು ಎಂದಿಗೂ ರೈತರ ಪರವಾಗಿಲ್ಲ, ಯಾವ ಪಕ್ಷದ ಸರ್ಕಾರಗಳು ಕೂಡ ಇದಕ್ಕೆ ಹೊರತಾಗಿಲ್ಲ. ಈ ಸುದೀರ್ಘ ಚನ್ನರಾಯಪಟ್ಟಣ ಹೋರಾಟಕ್ಕೆ ದೆಹಲಿ ಹೋರಾಟದ ಸ್ಪೂರ್ತಿ ಇದೆ. ಅಲ್ಲಿ ರೈತರು ಸರ್ವಾಧಿಕಾರಿ ಆದೇಶವನ್ನು ಹಿಮ್ಮೆಟ್ಟಿಸಿದಂತೆ, ಇಲ್ಲಿ ಭೂಮಿ ಕಸಿಯುತ್ತಿರುವ ಕಾರ್ಪೊರೇಟ್‌ ಪರವಾದ ಸರ್ಕಾರವನ್ನು ನಾವು ಹಿಮ್ಮೆಟ್ಟಿಸಲೇಬೇಕು, ನಾವು ಖಂಡಿತ ಗೆಲ್ಲುತ್ತೇವೆ” ಎಂದರು.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಮಾತನಾಡಿ, “ಸರ್ಕಾರಗಳಿಗೆ ಈ ಭೂಮಿ ಕೇವಲ ಮಾರಾಟದ ಸರಕಷ್ಟೇ. ಆದರೆ, ಇಲ್ಲಿನ ರೈತರಿಗೆ ಇದು ಬದುಕು. ಆದ್ದರಿಂದಲೇ, ಯಾವುದೇ ಕಾರಣಕ್ಕೂ ನಾವು ಭೂಮಿ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ದೇವನಹಳ್ಳಿ ಚನ್ನರಾಯಪಟ್ಟಣ ರೈತರು ಈ ಐತಿಹಾಸಿಕ ಹೋರಾಟ ನಡೆಸುತ್ತಿದ್ದು, ಈ ಹೋರಾಟ ಇಂದು ಬರಿಯ ದೇವನಹಳ್ಳಿಯ ಹೋರಾಟವಾಗಿ ಮಾತ್ರ ಉಳಿದಿಲ್ಲ. ಇಡೀ ರಾಜ್ಯದ ಹೋರಾಟ. ಇಡೀ ರಾಜ್ಯದ ರೈತ ಸಂಘಟನೆಗಳು ಮತ್ತು ಇತರ ಎಲ್ಲ ಪ್ರಗತಿಪರ ಸಂಘಟನೆಗಳು ಈ ಹೋರಾಟವನ್ನು ಪ್ರತಿಷ್ಠೆಯಾಗಿ ಪರಿಗಣಿಸಿ, ಜೂನ್ 25ಕ್ಕೆ ‘ದೇವನಹಳ್ಳಿ ಚಲೋ ಹೆಸರಿನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಎಲ್ಲ ಹೋರಾಟಗಾರರು, ಬೆಂಬಲಿಗರು ಸೇರಿ ಪ್ರತಿರೋಧವನ್ನು ವ್ಯಕ್ತಪಡಿಸೋಣ. ಇದು ಕನಿಷ್ಠ 10,000 ಜನರನ್ನು ಒಳಗೊಂಡ ಬೃಹತ್ ಕಾರ್ಯಕ್ರಮವಾಗಬೇಕು. ಇದಕ್ಕಾಗಿ ಸಂಯುಕ್ತ ಹೋರಾಟ ಕರ್ನಾಟಕದ ಎಲ್ಲ ಸಹಭಾಗಿ ಸಂಘಟನೆಗಳು ರಾಜ್ಯದ ವಿವಿಧ ಭಾಗಗಳಿಂದ ತಮ್ಮ ಕಾರ್ಯಕರ್ತರುಗಳನ್ನು ಇಲ್ಲಿಗೆ ಕರೆತರಲಿವೆ” ಎಂದು ಸಭೆಯ ನಿರ್ಧಾರವನ್ನು ಪ್ರಕಟಿಸಿದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್‌ ಮಾತನಾಡಿ, “ಹಿಂದಿನ ಕೋಮುವಾದಿ ಸರ್ಕಾರವನ್ನು ಸೋಲಿಸಲು ನಾವೇ ಹಗಲಿರುಳು ಶ್ರಮಿಸಿ ಅಸ್ತಿತ್ವಕ್ಕೆ ತಂದ ಸರ್ಕಾರ ಇದು. ಆದರೆ, ಸಿದ್ದರಾಮಯ್ಯನವರ ಸರ್ಕಾರದ ಮೇಲಿಟ್ಟಿದ್ದ ನಂಬಿಕೆ ಸಂಪೂರ್ಣ ಹುಸಿಯಾಗಿದೆ. ವಿರೋಧ ಪಕ್ಷದಲ್ಲಿದ್ದಾಗ ರೈತರ ಪರವಾಗಿ, ಬಡವರ ಪರವಾಗಿ ನಿಲ್ಲುವುದಾಗಿ ಹೇಳಿ ಜನರನ್ನು ನಂಬಿಸಿ ಅಧಿಕಾರಕ್ಕೆ ಬಂದ ಸರ್ಕಾರ ಇದು. ಚನ್ನರಾಯಪಟ್ಟಣ ರೈತರು ಧರಣಿ ನಡೆಸುತ್ತಿರುವಾಗ ಅಲ್ಲಿಗೆ ಬಂದು, ‘ಫಲವತ್ತಾದ ಕೃಷಿ ಭೂಮಿಯನ್ನು ಯಾವುದೇ ಕಾರಣಕ್ಕೂ ಭೂಸ್ವಾಧೀನ ಮಾಡಿಕೊಳ್ಳಬಾರದು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಬಲವಂತದ ಭೂಸ್ವಾಧೀನವನ್ನು ಮಾಡುವುದಿಲ್ಲ. ಈ ಭೂಸ್ವಾಧೀನವನ್ನು ಕೈಬಿಡುತ್ತೇವೆ’ ಎಂದು ಹೇಳಿದ್ದ ಮುಖ್ಯಮಂತ್ರಿಗಳು ಇಂದು ವಚನಭ್ರಷ್ಟರಾಗಿದ್ದಾರೆ. ಅಲ್ಲದೆ, ಚುನಾವಣೆಯ ಸಮಯದಲ್ಲಿ ರೈತರ ಜೊತೆಗಿರುವುದಾಗಿ ಹೇಳಿದ್ದ ಕೆ.ಹೆಚ್. ಮುನಿಯಪ್ಪನವರು ರೈತರ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ. ಆದ್ದರಿಂದ, ಎಲ್ಲ ಸಂಘಟನೆಗಳು ಚನ್ನರಾಯಪಟ್ಟಣ ರೈತರ ಜೊತೆಗೆ ನಿಂತು ಅವರನ್ನು ಗೆಲ್ಲಿಸಲೇಬೇಕು. ಈ ಕಾರ್ಪೊರೇಟ್‌ ಪರವಾದ ಸರ್ಕಾರಗಳನ್ನು ಹಿಮ್ಮೆಟ್ಟಿಸಲೇಬೇಕು” ಎಂದು ಮಾತನಾಡಿದರು.

ಭೂಮಿ ಮತ್ತು ವಸತಿ ಹೋರಾಟ ಸಮಿತಿಯ ನೂರ್ ಶ್ರೀಧರ್‌ ಮಾತನಾಡಿ, “ಸದಾ ರೈತರ ಪರವಾಗಿ ಇರುವುದಾಗಿ ಹೇಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತು ಇಂದಿನ ಕಾಂಗ್ರೆಸ್ ಸರ್ಕಾರ ಭೂಮಿ ವಿಷಯಕ್ಕೆ ಸಂಬಂಧಿಸಿದಂತೆ ರೈತ ವಿರೋಧಿಯಾಗಿ ನಡೆದುಕೊಳ್ಳುತ್ತಿರುವುದು, ಜನ ವಿರೋಧಿಗಳಾಗಿ ನಡೆದುಕೊಳ್ಳುತ್ತಿರುವುದು ಸಹಿಸಲು ಸಾಧ್ಯವಿಲ್ಲ. ಒಂದು ಕಡೆ ರೈತರ ಕೈಯಲ್ಲಿರುವ ಭೂಮಿಯನ್ನು ಭೂಸ್ವಾಧೀನದ ಮೂಲಕ ಕಸಿದುಕೊಳ್ಳುವ ಪ್ರಯತ್ನವಾಗುತ್ತಿದ್ದರೆ, ಮತ್ತೊಂದೆಡೆ ಬಗರ್ ಹುಕುಂ ಸಾಗುವಳಿದಾರರಿಗೆ ಭೂ ಹಂಚಿಕೆ ಮಾಡದಿರುವುದು ಈ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಎತ್ತಿ ತೋರಿಸುತ್ತಿದೆ. ಇಂತಹ ಜನ ವಿರೋಧಿ ಸರ್ಕಾರವನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದರು.

“ಚನ್ನರಾಯಪಟ್ಟಣ ಹೋರಾಟದ ಹಾದಿಯಲ್ಲಿ ಎಲ್ಲ ರೀತಿಯ ಪ್ರತಿರೋಧಗಳನ್ನು, ಪ್ರತಿಭಟನೆಗಳನ್ನು ಮಾಡುತ್ತಲೇ ಬಂದಿದೆ. ಆದರೆ ಜೂನ್ 25ರಂದು ನಡೆಯಲಿರುವ ‘ದೇವನಹಳ್ಳಿ ಚಲೋ’ ಹಿಂದಿನ ಹೋರಾಟದಂತೆ ಮತ್ತೊಂದು ಹೋರಾಟವಾಗಿರುವುದಿಲ್ಲ. ಇದು ನಿರ್ಣಾಯಕ ಹೋರಾಟ. ಯಾವುದೇ ಕಾರಣಕ್ಕೂ ನಾವು ಬರಿಗೈಯಲ್ಲಿ ವಾಪಸ್ ಹೋಗುವ ಪ್ರಶ್ನೆಯೇ ಇಲ್ಲ. ಅದಕ್ಕೆ ಇಲ್ಲಿನ ರೈತರು ತಮ್ಮ ಮನೆಯ ದನ, ಕರು, ಕುರಿ ಎಲ್ಲವುಗಳ ಜೊತೆ ಬಂದು ಸೇರಿಕೊಳ್ಳೋಣ. ಅದನ್ನೂ ಮೀರಿ ಹೇಗೆ ಭೂಸ್ವಾಧೀನ ಮಾಡುತ್ತಾರೋ ನೋಡೋಣ, ತಾಕತ್ತಿದ್ದರೆ ಒಂದಿಂಚು ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಲಿ, ಇದು ಸರ್ಕಾರಕ್ಕೆ ಹೋರಾಟಗಾರರ ಸವಾಲು ” ಅವರು ಹಾಕಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರಾದ ಚಾಮರಸ ಮಾಲಿ ಪಾಟೀಲ್, “ನಾವು ಅಭಿವೃದ್ಧಿಯ ವಿರೋಧಿಗಳಲ್ಲ. ಕೃಷಿಗೆ ಯೋಗ್ಯವಲ್ಲದ ಬರಡು ಭೂಮಿಗಳು ಮತ್ತು ಅತಿಯಾದ ನೀರಾವರಿಯ ಕಾರಣಕ್ಕೆ ಉಂಟಾಗಿರುವ ಜೌಗು ಭೂಮಿಗಳು ನಮ್ಮಲ್ಲಿ ಸಾಕಷ್ಟು ಇವೆ. ಅಂತಹ ಕಡೆಗಳಲ್ಲಿ ಧಾರಾಳವಾಗಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲಿ. ಆದರೆ, ಈ ಸರ್ಕಾರಗಳಿಗೆ ಕೈಗಾರಿಕೆಗಳನ್ನು ಸ್ಥಾಪನೆ ಮಾಡುವ ಉದ್ದೇಶವಿಲ್ಲ ಕೆಐಎಡಿಬಿ ಹೆಸರಿನಲ್ಲಿ ರಿಯಲ್ ಎಸ್ಟೇಟ್ ದಂಧೆ ನಡೆಸುತ್ತಿದ್ದಾರೆ” ಎಂದು ದೂರಿದರು.

ಸಭೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷರಾದ ಯು. ಬಸವರಾಜು, ಸಿ.ಐ.ಟಿ.ಯು. ಸಂಘಟನೆಯ ಮೀನಾಕ್ಷಿ ಸುಂದರಂ, ವರಲಕ್ಷ್ಮಿ, ಭೂಮಿ ಮತ್ತು ವಸತಿ ಹೋರಾಟ ಸಮಿತಿಯ ಮರಿಯಪ್ಪ, ಹೋರಾಟಗಾರರಾದ ಕಾರಳ್ಳಿ ಶ್ರೀನಿವಾಸ್, ಪ್ರಭಾ ಬೆಳವಂಗಲ, ನವೀನ್, ಚಂದ್ರ ತೇಜಸ್ವಿ, ರಮೇಶ್ ಸಂಕ್ರಾಂತಿ ಮುಂತಾದ ವಿವಿಧ ಸಂಘಟನೆಗಳ ಮುಖಂಡರು, ರೈತ ನಾಯಕರುಗಳು, ಮತ್ತು 13 ಹಳ್ಳಿಗಳ ರೈತರು ಭಾಗವಹಿಸಿದ್ದರು.

ಬೆಂಗಳೂರು| ರಾತ್ರೋರಾತ್ರಿ ದಲಿತರ ಮನೆ, ದೇವಸ್ಥಾನ ಧ್ವಂಸ ಆರೋಪ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...