Homeಕರ್ನಾಟಕದೇವನಹಳ್ಳಿ ಚಲೋ! ಸಂತ್ರಸ್ತ ರೈತರಿಂದ ಸರ್ಕಾರಕ್ಕೆ ಫೈನಲ್‌ ನೋಟೀಸ್‌

ದೇವನಹಳ್ಳಿ ಚಲೋ! ಸಂತ್ರಸ್ತ ರೈತರಿಂದ ಸರ್ಕಾರಕ್ಕೆ ಫೈನಲ್‌ ನೋಟೀಸ್‌

- Advertisement -
- Advertisement -

ದೇವನಹಳ್ಳಿ: ನಮ್ಮ ಪಾಡಿಗೆ ನಮ್ಮನ್ನು ಬದುಕಲು ಬಿಡಿ. ಇಲ್ಲವೇ, ಕುಟುಂಬ ಸಮೇತ ನಮ್ಮನ್ನು ಜೈಲಿಗೆ ಹಾಕಿ ಎಂಬ ಶಿರೋನಾಮೆಯೊಂದಿಗೆ ಚನ್ನರಾಯಪಟ್ಟಣದ ಸಂತ್ರಸ್ತ ರೈತರೇ ಸರಕಾರಕ್ಕೆ ಫೈನಲ್ ನೋಟಿಸ್ ನೀಡಿದ್ದಾರೆ.

ಇಂದು ದೇವನಹಳ್ಳಿಯಲ್ಲಿ ನಡೆಯುತ್ತಿರುವ ದೇವನಹಳ್ಳಿ ಚಲೋ ಕಾರ್ಯಕ್ರಮದಲ್ಲಿ ಸಂತ್ರಸ್ತ ರೈತರು ಮುಖ್ಯಮಂತ್ರಿಗಳ ಮೂಲಕ ಸರಕಾರಕ್ಕೆ ತಮ್ಮ ಫೈನಲ್ ನೋಟಿಸ್ ನೀಡಿದ್ದಾರೆ.

ಕಳೆದ 1178 ದಿನಗಳಿಂದ ನಾವು ಅವಡುಗಚ್ಚಿ ಹೋರಾಟ ನಡೆಸಿದ್ದೇವೆ. ಶುದ್ಧ ಮನಸ್ಸಿನಿಂದ ಈ ಹೋರಾಟ ನಡೆಸಿದ್ದೇವೆ. ಎಲ್ಲಾ ಜಾತಿಯ ಜನ ಅಣ್ಣ ತಮ್ಮಂದಿರಂತೆ, ಅಕ್ಕತಂಗಿಯರಂತೆ ಜೊತೆಗೂಡಿ ಹೋರಾಡಿದ್ದೇವೆ. ಅಧಿಕಾರಸ್ಥರ ಮನೆಮನೆಗೆ ಅಲೆದಿದ್ದೇವೆ. ನಮ್ಮ ತಾಳ್ಮೆಗೂ ಒಂದು ಮಿತಿ ಇದೆ. ಕಾಯುವಿಕೆಗೂ ಒಂದು ಕೊನೆ ಇದೆ. ಈ ಹಗ್ಗಜಗ್ಗಾಟ ಸಾಕು. ಒಂದು ಅಂತಿಮ ಇತ್ಯಾರ್ಥ ಆಗಬೇಕು. ನೀವೇ ಈ ತೀರ್ಮಾನ ತೆಗೆದುಕೊಳ್ಳಬೇಕು. ಒಂದೋ ನಮ್ಮನ್ನು ʼನಮ್ಮ ಪಾಡಿಗೆ ಬದುಕಲು ಬಿಡಬೇಕುʼ ಅಥವಾ ಕುಟುಂಬ ಸಮೇತ ನಮ್ಮನ್ನು ಶಾಶ್ವತವಾಗಿ ಜೈಲಿಗೆ ಕಳಿಸಿ ʼಕಂಪನಿಗಳೇ ನಮಗೆ ಮುಖ್ಯʼ ಎಂದು ನೀವು ಘೋಷಿಸಬೇಕು ಎಂದು ಸರಕಾರಕ್ಕೆ ಒತ್ತಾಯಿಸಿದ್ದಾರೆ.

ಇಂದು ಮತ್ತೊಮ್ಮೆ ಕೆಲವು ಕಹಿ ಸತ್ಯಗಳನ್ನು ನಿಮಗೆ ನೆನಪಿಸಲು ಬಯಸುತ್ತೇವೆ. 2022ರ ಜನವರಿಯಲ್ಲಿ ಆಗ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ನಮ್ಮನ್ನು ಒಕ್ಕಲೆಬ್ಬಿಸಿ, ಚನ್ನರಾಯಪಟ್ಟಣದ 13 ಹಳ್ಳಿಗಳಿಗೆ ಸೇರಿದ, 1777 ಎಕರೆ ಭೂಮಿಯನ್ನು ಕಂಪನಿಗಳಿಗೆ ಮಾರುವ ತೀರ್ಮಾನ ಮಾಡಿ ಅಧಿಸೂಚನೆ ನೀಡಿತ್ತು. ಈ ಭೂಮಿಯಲ್ಲಿ 800 ಕುಟುಂಬದ ಜನ ವಾಸಿಸುತ್ತಿದ್ದೇವೆ. ಬಹುತೇಕರು ಕೃಷಿಯನ್ನೇ ನಂಬಿ ಬದುಕಿದ್ದೇವೆ. ನಮ್ಮ ಪೂರ್ವಿಕರ ಸಮಾಧಿಗಳು ಈ ಭೂಮಿಗಳಲ್ಲಿವೆ. ನಮ್ಮೆಲ್ಲಾ ಜೀವಮಾನದ ದುಡಿಮೆಯನ್ನು ಇದಕ್ಕೆ ಸುರಿದು ನೀರಾವರಿ ಮಾಡಿಕೊಂಡಿದ್ದೇವೆ. ತೋಟಗಳನ್ನು ಬೆಳೆಸಿದ್ದೇವೆ. ಹೈನುಗಾರಿಕೆ, ಕೋಳಿಸಾಗಣಿಗೆ ಮುಂತಾದ ಕೃಷಿ ಸಂಬಂಧಿ ಚಟುವಟಿಕೆಗಳನ್ನು ಮಾಡಿಕೊಂಡು ಕಷ್ಟವೋ ನಷ್ಟವೋ ನಮ್ಮ ಕುಟುಂಬಗಳ ಜೊತೆ, ಬಂಧುಬಳಗದ ಜೊತೆ ಬದುಕುತ್ತಿದ್ದೇವೆ. ಈ ಬದುಕನ್ನು ಕಳೆದುಕೊಳ್ಳಲು ನಾವು ಸಿದ್ಧರಿಲ್ಲ. ಏಕೆಂದರೆ ನಮ್ಮ ಸುತ್ತಮುತ್ತವೇ ಈಗಾಗಲೇ 6,000 ಎಕರೆ ಭೂಮಿಯನ್ನು ಏರ್‌ ಪೋರ್ಟ್‌ ಮತ್ತು ಕಂಪನಿಗಳಿಗಾಗಿ ವಶಪಡಿಸಿಕೊಳ್ಳಲಾಗಿದೆ. ಭೂಮಿ ಕಳೆದುಕೊಂಡವರ ಕತೆ ಏನಾಗಿದೆ ಎಂಬುದನ್ನು ಕಣ್ಣಾರೆ ಕಂಡಿದ್ದೇವೆ. ಅನಾಥರಂತೆ ಚೆಲ್ಲಾಪಿಲ್ಲಿಯಾಗಿ ಪಡಬಾರದ ಕಷ್ಟಪಡುತ್ತಾ ಅವರು ಅಲೆಯುತ್ತಿದ್ದಾರೆ. ಈ ಪರಿಸ್ಥಿತಿಯನ್ನು ನಮ್ಮ ಕುಟುಂಬಗಳಿಗೂ ತಂದುಕೊಳ್ಳಲು ನಾವು ಸಿದ್ಧರಿಲ್ಲ, ನಮ್ಮ ಮಕ್ಕಳ ಭವಿಷ್ಯವನ್ನು ಬಲಿಕೊಡಲು ನಾವು ಸಿದ್ಧರಿಲ್ಲ. ಹಾಗಾಗಿಯೇ ನಾವು ನಮ್ಮ ಬದುಕನ್ನು ಕಾಪಾಡಿಕೊಳ್ಳಲು ಉಸಿರು ಹಿಡಿದು ಹೋರಾಡುತ್ತಾ ಬಂದಿದ್ದೇವೆ ಎಂದು ಫೈನಲ್ ನೋಟಿಸ್ ನಲ್ಲಿ ಸರಕಾರಕ್ಕೆ ಸಂತ್ರಸ್ತ ರೈತರು ತಿಳಿಸಿದ್ದಾರೆ.

ನಾವು ಭೂಮಿಯನ್ನು ಬಿಡುವುದಿಲ್ಲ ಎಂದು ಪಟ್ಟು ಹಿಡಿದಾಗ ಭೂಸ್ವಾಧೀನ ಪ್ರಕ್ರಿಯೆಯ ಕಟ್ಟಳೆಯಾಗಿ ಜನಾಭಿಪ್ರಾಯ ಸಂಗ್ರಹಿಸಲೇಬೇಕಿತ್ತು. 2022ರ ಮೇ ತಿಂಗಳಿನಲ್ಲಿ ಜನಾಭಿಪ್ರಾಯ ಸಂಗ್ರಹಣೆ ನಡೆಯಿತು. KIADB ಅಧಿಕಾರಿಗಳೇ ಚನ್ನರಾಯಪಟ್ಟಣದಲ್ಲಿ ಟೇಬಲ್‌ ಹಾಕಿಕೊಂಡು ಜನಾಭಿಪ್ರಾಯ ಸಂಗ್ರಹಿಸಿದರು. ಶೇ 80 ಭಾಗದಷ್ಟು ಜನ ಭೂಮಿ ಕೊಡುವುದಿಲ್ಲ ಎಂದು ಬರೆದುಕೊಟ್ಟೆವು. ಇದರ ಅರ್ಥ ಇನ್ನು ಶೇ 20 ಭಾಗದಷ್ಟು ಜನ ಭೂಮಿ ಕೊಡಲು ಒಪ್ಪಿದರು ಎಂದೂ ಅಲ್ಲ. ಅವರು ಭೂಮಿ ಇಲ್ಲಿದ್ದರೂ ದೂರದೂರದಲ್ಲಿ ಬದುಕುತ್ತಿರುವವರು ಅವರು ತಮ್ಮ ಅಭಿಪ್ರಾಯ ನೀಡಲು ಬರಲೇ ಇಲ್ಲ ಅಷ್ಟೆ. ಕೇವಲ ಬೆರಳೆಣಿಕೆಯ ಜನ ಮಾತ್ರ ಬೇರೊಂದು ಒತ್ತಡಗಳ ಕಾರಣಕ್ಕಾಗಿ ಭೂಮಿ ಕೊಡುತ್ತೇವೆ ಎಂದು ಬರೆದುಕೊಟ್ಟಿದ್ದರು. ಇಂದು ನೀವು ಮತ್ತೆ ಜನಾಭಿಪ್ರಾಯ ಸಂಗ್ರಹಿಸಿದರೆ ಶೇ 95 ಭಾಗದಷ್ಟು ಜನ ಇದನ್ನು ತಿರಸ್ಕರಿಸುವುದು ಶತಸಿದ್ಧ. ಇದು ನಮ್ಮ 13 ಹಳ್ಳಿಗಳ ಒಕ್ಕೊರಲ ತೀರ್ಮಾನ ಎಂಬುದನ್ನು ನೀವು ಮನಸ್ಸಿಗೆ ಇಳಿಸಿಕೊಳ್ಳಬೇಕು. ಇದು ನಿಮ್ಮ ಪಕ್ಷದ ನೇತೃತ್ವದಲ್ಲಿ 2013ರಲ್ಲಿ ತರಲಾದ “ಭೂಸ್ವಾಧೀನ ಹಾಗೂ ಪುನರ್ವಸತಿ ನೀತಿ”ಯ ಸಂಪೂರ್ಣ ಉಲ್ಲಂಘನೆ ಎಂಬುದನ್ನು ನಾವು ನಿಮಗೆ ಹೇಳಬೇಕಿಲ್ಲ ಎಂದು ನೋಟಿಸ್ ನಲ್ಲಿ ರೈತರು ಉಲ್ಲೇಖಿಸಿದ್ದಾರೆ.

ಬಿಜೆಪಿ ಸರ್ಕಾರ ಭೂಸ್ವಾಧೀನದ ಅಧಿಸೂಚನೆ ಹೊರಡಿಸಿದಾಗ ಆಗ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್‌ ಪಕ್ಷ ವಿರೋದಿಸಿತ್ತು. ಸದನದಲ್ಲೇ ಪ್ರಶ್ನೆ ಕೇಳಿತ್ತು. ಎಲ್ಲದಕ್ಕಿಂತ ಹೆಚ್ಚು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಖುದ್ದು 2022ರ ಸೆಪ್ಟೆಂಬರ್‌ ತಿಂಗಳಿನಲ್ಲಿ ನಮ್ಮ ಹೋರಾಟದ ಪೆಂಡಾಲಿಗೆ ಭೇಟಿ ನೀಡಿದ್ದರು. “ಸರ್ಕಾರ ಈ ರೀತಿ ಮಾಡುವುದು ಸರಿಯಲ್ಲ, ನಾನು ಮತ್ತೆ ಅಧಿಕಾರಕ್ಕೆ ಬಂದರೆ ಇದನ್ನು ರದ್ದುಪಡಿಸುತ್ತೇನೆ” ಎಂದು ಸಿದ್ದರಾಮಯ್ಯನವರೇ ನಮಗೆ ಮಾತುಕೊಟ್ಟಿದ್ದಾರೆ ಎಂದು ಈ ನೋಟಿಸ್ ನಲ್ಲಿ ನೆನಪಿಸಿದ್ದಾರೆ.

ಈ ಎಲ್ಲಾ ಕಾರಣಕ್ಕೆ 2023ರಲ್ಲಿ ನಡೆದ ಚುನಾವಣೆಯಲ್ಲಿ ನಮ್ಮಲ್ಲಿನ ಬಹುತೇಕರು ಕಾಂಗ್ರೆಸ್‌ ಪಕ್ಷವನ್ನೇ ಬೆಂಬಲಿಸಿ ಮತ ಹಾಕಿದರು. ಈ ಬಲವಂತದ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸುತ್ತಿದ್ದ ಕೆ.ಹೆಚ್.‌ ಮುನಿಯಪ್ಪನವರನ್ನು ಗೆಲ್ಲಿಸುವುದರಲ್ಲಿ ನಮ್ಮ ಹಳ್ಳಿಗಳ ಪಾತ್ರವೂ ಮುಖ್ಯವಾಗಿತ್ತು. ಗೆದ್ದನಂತರ ಅವರು ನಮ್ಮನ್ನು ಹಲವು ಬಾರಿ ಎಂ.ಬಿ. ಪಾಟೀಲರ ಬಳಿ, ತಮ್ಮ ಬಳಿ ಕರೆದುಕೊಂಡು ಬಂದರು. ನೀವು ನೋಡೋಣ, ಪರಿಶೀಲಸೋಣ, ಸಭೆ ಕರೆಯೋಣ ಎಂದು ಉತ್ತರ ಕೊಟ್ಟಿರಿ ಗಟ್ಟಿ ತೀರ್ಮಾನ ತೆಗೆದುಕೊಳ್ಳಲಿಲ್ಲ. ಎಂ.ಬಿ. ಪಾಟೀಲರು ಅಂದಿನಿಂದ ಇಂದಿನ ತನಕ ಭೂ ಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಲು ಸಾಧ್ಯವೇ ಇಲ್ಲ ಎಂದು ಪಟ್ಟುಹಿಡಿಯುತ್ತಾ ಬಂದಿದ್ದಾರೆ. ಕ್ರಮೇಣ ಕೆ.ಹೆಚ್.‌ ಮುನಿಯಪ್ಪನವರೂ ಅವರ ಜೊತೆ ದನಿಗೂಡಿಸಲು ಶುರು ಮಾಡಿದ್ದಾರೆ ಎಂದು ಈ ನೋಟಿಸ್ ಹೇಳಿದೆ.

ಈಗ ನಿನ್ನೆ ಇಬ್ಬರೂ ಸೇರಿ (ಮುನಿಯಪ್ಪ ಮತ್ತು ಎಂ.ಬಿ.ಪಾಟೀಲ್) ಪತ್ರಿಕಾಗೋಷ್ಟಿ ಮಾಡಿದ್ದಾರೆ. ರಿಯಲ್‌ ಎಸ್ಟೇಟ್‌ ಏಜೆಂಟರುಗಳಂತೆ ಮಾತನಾಡಿದ್ದಾರೆ. ʼಮೂರು ಹಳ್ಳಿಗಳನ್ನು ಕೈಬಿಡುವ, ಕಮರ್ಷಿಯಲ್‌ ಚಟುವಟಿಕೆಗೆ ಒಂದಿಷ್ಟು ಜಾಗ ನೀಡುವʼ ಮಾತನಾಡಿದ್ದಾರೆ. ಇದನ್ನು ನಾವು ತೀವ್ರವಾಗಿ ಒಕ್ಕೊರಲಿನ ಜೊತೆ ಖಂಡಿಸುತ್ತಿದ್ದೇವೆ. ಇದು ನಮ್ಮನ್ನು ಒಡೆದಾಳುವ ಕುತಂತ್ರ ಎಂಬುದನ್ನು ಅರ್ಥಮಾಡಿಕೊಳ್ಳಲಾರದಷ್ಟು ಮೂರ್ಖರು ನಾವಲ್ಲ. ಒಂದಿಷ್ಟು ಹಣದ ಆಸೆಗೆ ಭೂಮಿಯನ್ನು ಬರಡುಗೊಳಿಸಲು ಅವಕಾಶ ನೀಡುವಷ್ಟು ಸ್ವಾರ್ಥಿಗಳೂ ನಾವಲ್ಲ. ನಾವು ಈ ಚೌಕಾಸಿ ಡೀಲ್‌ ಅನ್ನು ಒಪ್ಪುವ ಮಾತೇ ಇಲ್ಲ ಎಂದು ಈ ನೋಟಿಸ್ ನಲ್ಲಿ ತಿಳಿಸಲಾಗಿದೆ.

ಮುಖ್ಯಮಂತ್ರಿಗಳೇ, ಈಗ ಕೊನೆಯದಾಗಿ ನಿಮ್ಮ ಬಾಗಿಲನ್ನು ಬಲವಾಗಿ ತಟ್ಟಲು ತೀರ್ಮಾನಿಸಿ ಈ ಹೋರಾಟ ಹಮ್ಮಿಕೊಳ್ಳಲಾಗಿದೆ. ಕರ್ನಾಟಕದ ಸಮಸ್ತ ಸಂಘಟನೆಗಳು ನಮ್ಮ ಬೆನ್ನಿಗೆ ನಿಂತು ಮರು ಉತ್ಸಾಹ ಮೂಡಿಸಿವೆ. ಸಾಹಿತಿ – ಚಿಂತಕರು, ಕಲಾವಿದರು, ಧರ್ಮಗುರುಗಳು, ಜನಸಾಮಾನ್ಯರು ನಮ್ಮ ಪರವಾಗಿ ದನಿ ಎತ್ತಿದ್ದಾರೆ. ಇಂದು ನಮ್ಮನ್ನು ಬೆಂಬಲಿಸಿ ರಾಜ್ಯದ ಮೂಲೆಮೂಲೆಗಳಿಂದ ಬಂದಿರುವ ಬಂಧುಗಳ ಕರುಳ ಮಿಡಿತಕ್ಕೆ ನಾವು ಋಣಿಗಳಾಗಿದ್ದೇವೆ. ಇವರೆಲ್ಲರ ಸಮ್ಮುಖದಲ್ಲಿ ನಾವು ನಮ್ಮ ಕೊನೆ ತೀರ್ಮಾನವನ್ನು ಘೋಷಿಸುತ್ತಿದ್ದೇವೆ. ಒಂದೇ ಮಾತಿನಲ್ಲಿ “ಸರ್ಕಾರ ಈ ಅಧಿಸೂಚನೆಯನ್ನು ರದ್ದುಗೊಳಿಸುತ್ತಿದೆ ಎಂದು ಘೋಷಿಸಿ ನಮ್ಮ ಪಾಡಿಗೆ ನಮ್ಮನ್ನು ಬದುಕಲು ಬಿಡಿ. ಅಥವಾ ನಮ್ಮೆಲ್ಲರನ್ನು ಜೈಲಿಗೆ ಹಾಕಿ ನಿಮಗೆ ಏನು ಮಾಡಬೇಕೆನಿಸುತ್ತೋ ಅದನ್ನು ಮಾಡಿ”. ಆದರೆ ನೀವೀ ಕೆಲಸವನ್ನು ನಮ್ಮನ್ನು ಸೆರೆಗೆ ಹಾಕಿಯೇ ಮಾಡಬೇಕು ಎಂದು ಈ ನೋಟಿಸ್ ನಲ್ಲಿ ಒತ್ತಾಯಿಸಿದ್ದಾರೆ.

ಸರ್ಕಾರ ಜಾಗ ಖಾಲಿ ಮಾಡಲು ನಮಗೆ ಅಂತಿಮ ಅಧಿಸೂಚನೆ ಕಳಿಸಿಯಾಗಿದೆ. ಇಂದು ನಾವು ಈ ಪತ್ರದ ಮೂಲಕ ಸರ್ಕಾರಕ್ಕೆ ಅಂತಿಮ ನೋಟೀಸ್‌ ನೀಡುತ್ತಿದ್ದೇವೆ. ಇಲ್ಲಿಂದ 24 ಗಂಟೆಗಳ ಕಾಲ ನಾವು ನಿಮ್ಮ ಪ್ರತಿಕ್ರಿಯೆಗಾಗಿ ಕಾಯುತ್ತೇವೆ. ಸ್ಪಷ್ಟ ಉತ್ತರ ಬರದಿದ್ದಲ್ಲಿ ನಾಳೆ ಇದೇ ಹೊತ್ತಿಗೆ ತೀವ್ರ ಹೋರಾಟಕ್ಕೆ ಇಳಿಯುತ್ತೇವೆ. ಅಪರಾಧವೇ ಅಧಿಕಾರವಾದಾಗ ಗಾಂಧೀಜಿಯವರೂ ತೀಕ್ಷ್ಣ ಹೆಜ್ಜೆಗಳನ್ನು ಇಟ್ಟಿದ್ದಾರೆ, ನಾವೂ ಸಹ ಅವರ ಹಾದಿಯಲ್ಲೇ ಸಾಗುತ್ತೇವೆ. ಸರ್ಕಾರದ ಪ್ರಾತಿನಿಧಿಕ ತಾಣವಾದ ತಾಲ್ಲೂಕು ಕಛೇರಿಯನ್ನು ಮುತ್ತಿಗೆ ಹಾಕುತ್ತೇವೆ. ನಿಮಗೊಂದು ನೆಪ ಸಿಗುತ್ತದೆ. ನಮ್ಮನ್ನು ಜೈಲಿಗೆ ಹಾಕಬಹುದು. ಕಂಪನಿಗಳ ದಾರಿಯನ್ನು ಸುಗಮಗೊಳಿಸಬಹುದು. ತೀರ್ಮಾನ ತಮ್ಮದು. ನಮಸ್ಕಾರ ಎಂದು ಸಂತ್ರಸ್ತ 13 ಹಳ್ಳಿಗಳ ರೈತರು ಈ ನೋಟಿಸ್ ಅನ್ನು ಸರಕಾರಕ್ಕೆ ನೀಡಿದ್ದಾರೆ.

ಸಂಜೆ 5 ಗಂಟೆಯೊಳಗೆ ಸರ್ಕಾರ ರೈತಪರ ನಿರ್ಣಯ ತೆಗೆದುಕೊಳ್ಳದಿದ್ದರೆ ಹೋರಾಟದ ಸ್ವರೂಪ ಬದಲಾಗಲಿದೆ: ಬಡಗಲಪುರ ನಾಗೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...