Homeಕರ್ನಾಟಕದೇವನಹಳ್ಳಿ: ಸಂಘರ್ಷದ ಹಂತ ತಲುಪಿದ ಭೂಸ್ವಾಧೀನ ವಿರೋಧಿ ಚಳವಳಿ; 'ಸಂಯುಕ್ತ ಹೋರಾಟ'ದಿಂದ 'ದೇವನಹಳ್ಳಿ ಚಲೋ'ಗೆ ಕರೆ

ದೇವನಹಳ್ಳಿ: ಸಂಘರ್ಷದ ಹಂತ ತಲುಪಿದ ಭೂಸ್ವಾಧೀನ ವಿರೋಧಿ ಚಳವಳಿ; ‘ಸಂಯುಕ್ತ ಹೋರಾಟ’ದಿಂದ ‘ದೇವನಹಳ್ಳಿ ಚಲೋ’ಗೆ ಕರೆ

- Advertisement -
- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಚನ್ನರಾಯಪಟ್ಟಣ ಹೋಬಳಿಯ ರೈತರು ಕಳೆದ 1180 ದಿನಗಳಿಂದ (ಸುಮಾರು ನಾಲ್ಕು ವರ್ಷ) ಕೆಐಎಡಿಬಿ ಭೂಸ್ವಾಧೀನ ವಿರೋಧಿ ಹೋರಾಟ ಸಂಘರ್ಷದ ಸ್ಥಿತಿಗೆ ತಲುಪಿದೆ. ಬಲವಂತದ ಹಾಗೂ ಅನ್ಯಾಯದ ಭೂಸ್ವಾಧೀನ ವಿರೋಧಿಸಿ, ಸಂಯುಕ್ತ ಹೋರಾಟ-ಕರ್ನಾಟಕ ಸಂಘಟನೆಯಿಂದ ಜೂನ್‌ 25 ರಂದು ‘ದೇವನಹಳ್ಳಿ ಚಲೋ’ ಹೋರಾಟಕ್ಕೆ ಕರೆ ನೀಡಲಾಗಿದೆ.

ಈ ಬಗ್ಗೆ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಯುಕ್ತ ಹೋರಾಟದ ಮುಖಂಡರು, “13 ಗ್ರಾಮಗಳ ರೈತರು ನಾಡ ಕಚೇರಿ ಮುಂದೆ ಅನಿರ್ದಿಷ್ಟ ಪ್ರತಿಭಟನೆ ನಡೆಸುತ್ತಿದ್ದಾರೆ. ಶೇಕಡಾ 80 ರಷ್ಟು ರೈತರು ಲಿಖಿತವಾಗಿ ಭೂಸ್ವಾಧೀನಕ್ಕೆ ತಮ್ಮ ಅಸಮೃತಿ ಹಾಗೂ ವಿರೋಧ ಸ್ಪಷ್ಟವಾಗಿ ವ್ಯಕ್ತಪಡಿಸಿದ್ದರೂ, ಬಲವಂತದ ಭೂಸ್ವಾಧೀನಕ್ಕೆ ಕ್ರಮವಹಿಸಿರುವುದು, ಭೂ ಸ್ವಾಧೀನ ಕಾಯ್ದೆ-2013 ರ ಸ್ಪಷ್ಠ ಉಲ್ಲಂಘನೆಯಾಗಿದೆ” ಎಂದು ಹೇಳಿದರು.

ಭೂ ಸ್ವಾಧೀನ ಕೈಬಿಡುವಂತೆ ಬೆಂಗಳೂರಿನ ಫ್ರೀಂಡಂ ಪಾರ್ಕಿಲ್ಲಿ ರೈತರು ನಡೆಸಿದ ಪ್ರತಿಭಟನಾ ಸ್ಥಳಗಳಿಗೆ ಈಗಿನ ಮುಖ್ಯಮಂತ್ರಿ, ಹಿಂದಿನ ವಿರೋಧ ಪಕ್ಷದ ನಾಯಕರಾಗಿ ಭೇಟಿ ನೀಡಿದ್ದ ಸಿದ್ದರಾಮಯ್ಯ ಅವರು, ತಾವು ಅಧಿಕಾರಕ್ಕೆ ಬಂದರೆ ಅನ್ಯಾಯ ಹಾಗೂ ಬಲವಂತದ ಭೂ ಸ್ವಾಧೀನವನ್ನು ರದ್ದುಪಡಿಸುವುದಾಗಿ ಸಾರ್ವಜನಿಕ ಘೋಷಣೆ ಮಾಡಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಈಗ ಉಸ್ತುವಾರಿ ಸಚಿವರಾಗಿರುವ ಕೆ.ಎಚ್‌. ಮುನಿಯಪ್ಪ ಕೂಡ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಬಲವಂತವಾಗಿ ಭೂ ಸ್ವಾಧೀನಕ್ಕೆ ಅವಕಾಶ ನೀಡುವುದಿಲ್ಲ ಎಂದು ಈ ರೈತರ ಮತ ಕೇಳಿದ್ದರು. ಆದರೆ, ಈ ಇಬ್ಬರೂ ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳಾದರೂ ತಮ್ಮ ವಚನಕ್ಕೆ ವಿರುದ್ಧವಾಗಿ ವರ್ತಿಸುವ ಮೂಲಕ ವಚನಭ್ರಷ್ಟರು ಎಂದು ಸಾಬೀತು ಮಾಡಿಕೊಂಡಿದ್ದಾರೆ, ಇದು ಸಾರ್ವಜನಿಕ ಹುದ್ದೆಗೆ ಮತ್ತು ನಡವಳಿಕೆಗೆ ಯೋಗ್ಯವಲ್ಲದ್ದು ಎಂದು ಸಂಘಟನೆ ಆಕ್ರೋಶ ಹೊರಹಾಕಿದೆ.

ಇತ್ತೀಚಿಗಿನ ಸಭೆಯೂ ಸೇರಿದಂತೆ ಕಳೆದ ನಾಲ್ಕು ವರ್ಷಗಳಲ್ಲಿ ರೈತರ ಪ್ರತಿಭಟನಾ ಒತ್ತಡ ಹೆಚ್ಚಿದ ಸಂದರ್ಭದಲ್ಲೆಲ್ಲಾ ಮುಖ್ಯಮಂತ್ರಿ ನೇತೃತ್ವದಲ್ಲಿ ನಾಲ್ಕಾರು ಸಭೆಗಳು, ಉಸ್ತುವಾರಿ ಮಂತ್ರಿಗಳ ನೇತೃತ್ವದಲ್ಲಿ ಹತ್ತಾರು ಸಭೆಗಳು ಅಲ್ಲದೇ, ಸ್ವತಃ ಉಸ್ತುವಾರಿ ಮಂತ್ರಿ ಹತ್ತಾರು ಬಾರಿ ಧರಣಿ ಸ್ಥಳಕ್ಕೆ ಭೇಟಿ ಕೊಟ್ಟು ರೈತರ ಪರವಾಗಿ ತೀರ್ಮಾನ ಮಾಡುವುದಾಗಿ ಹೇಳಿ ಚಪ್ಪಾಳೆ ಗಿಟ್ಟಿಸಿಕೊ೦ಡಿದ್ದಾರೆ. ಯಾವುದೇ ಕಾರಣಕ್ಕೂ ರೈತರ ಒಪ್ಪಿಗೆ ಇಲ್ಲದೇ ಭೂಸ್ವಾಧೀನ ಮುಂದುವರೆಸುವುದಿಲ್ಲ ಎಂದು ಸಾರ್ವಜನಿಕವಾಗಿ ಹಲವಾರು ಬಾರಿ ಸ್ಪಷ್ಟಪಡಿಸಿದ್ದಾರೆ. ಈ ರೀತಿ ಭರವಸೆ ನೀಡಿ ಒಳಗೊಳಗೆ ಭೂಸ್ವಾಧೀನದ ಪ್ರಕ್ರಿಯೆ ಮುಂದುವರೆಸಿ ಅಂತಿಮ ಅಧಿಸೂಚನೆ ಹೊರಡಿಸಿರುವುದು ರೈತರಲ್ಲಿ ಹತಾಶೆ-ನಿರಾಶೆ ಉ೦ಟು ಮಾಡಿ, ಒಡಕು ಉ೦ಟು ಮಾಡುವ ಹೀನ ಕುತಂತ್ರವಲ್ಲದೇ ಬೇರೇನೂ ಅಲ್ಲ ಎಂದು ಹೋರಾಟಗಾರರು ಕಿಡಿಕಾರಿದ್ದಾರೆ.

ಸಾರ್ವಜನಿಕವಾಗಿ ಒಂದು ಮುಖ ತೋರಿ, ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಇನ್ನೊಂದು ರೀತಿಯಲ್ಲಿ ಆದೇಶ ನೀಡುವ ಮೂಲಕ ರೈತ ಸಮುದಾಯವನ್ನು ಹಾಗೂ ರೈತ ಹೋರಾಟವನ್ನು ಸಿದ್ದರಾಮಯ್ಯರವರ ನೇತೃತ್ವದ ರಾಜ್ಯ ಸರ್ಕಾರ ಅಪಮಾನಿಸಿದೆ. ಚನ್ನರಾಯಪಟ್ಟಣ ಹೋಬಳಿ ರೈತರ ಧರಣಿ ಸ್ಥಳಕ್ಕೆ ಈ ನಾಲ್ಕು ವರ್ಷಗಳಲ್ಲಿ ಅಖಿಲ ಭಾರತ ಕಿಸಾನ್‌ ಸಭಾ ಅಧ್ಯಕ್ಷರು, ಸಂಯುಕ್ತ ಕಿಸಾನ್‌ ಮೋರ್ಚಾ ನಾಯಕರೂ ಆಗಿರುವ ಡಾ.ಅಶೋಕ್‌ ಧವಳೆ, ಅಖಿಲ ಭಾರತ ಕಿಸಾನ್‌ ಸಭಾದ ಅಖಿಲ ಭಾರತ ಹಣಕಾಸು ಕಾರ್ಯದರ್ಶಿ ಮಾಜಿ ಶಾಸಕ ಕೃಷ್ಣಪ್ರಸಾದ್‌, ಭಾರತೀಯ ಕಿಸಾನ್‌ ಯೂನಿಯನ್‌ನ ರಾಕೇಶ್‌ ಟಿಕಾಯತ್‌ ಸೇರಿದಂತೆ ರಾಷ್ಟ್ರೀಯ ರೈತ ನೇತಾರರು ಭೇಟಿ ಕೊಟ್ಟು ಹೋರಾಟಕ್ಕೆ ಬೆ೦ಬಲ ವ್ಯಕ್ತಪಡಿಸಿದ್ದಾರೆ. ಇಡೀ ರಾಜ್ಯದ ಎಲ್ಲ ರೈತ ಚಳವಳಿಗಳ ಹಾಗೂ ಬುದ್ಧಿಜೀವಿ, ಸಾಹಿತಿಗಳ ಬೆ೦ಬಲ ಮತ್ತು ಅನುಕಂಪ ಈ ಭೂ ಸ್ವಾಧೀನ ವಿರೋಧಿ ರೈತರ ಮೇಲೆ ಇದೆ ಎಂದು ವಿವರಿಸಿದರು.

ತಮ್ಮ ತೀವ್ರ ಅನಾರೋಗ್ಯದ ನಡುವೆಯೂ ಈ ರೈತರ ಹೋರಾಟಕ್ಕೆ ನೇತೃತ್ವ ನೀಡುತ್ತಿದ್ದ ಜಿ.ಸಿ. ಬಯ್ಯಾರೆಡ್ಡಿರವರು ಈ ಹೋರಾಟದ ಬೇಡಿಕೆಯನ್ನು ಪುನರುಚರಿಸುತ್ತಾ ಮರಣವನ್ನಪ್ಪಿದ್ದಾರೆ. ಇಷ್ಟೆಲ್ಲಾ ಇದ್ದರೂ ಬಹುರಾಷ್ಟ್ರೀಯ ಸಂಸ್ಥೆಗಳು, ರಿಯಲ್‌ ಎಸ್ಟೇಟ್‌ ಮಾಫಿಯಾಗಳ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ಬಲವಂತದ ಹಾಗೂ ಅನ್ಯಾಯದ ಭೂಸ್ವಾಧೀನ ಮಾಡೇತೀರುವ ಹಠ ಸರ್ವಾಧಿಕಾರಿ ಮನೋಭಾವದ್ದು. ಇಂತಹ ಭೂಸ್ವಾಧೀನ ವಿರೋಧಿ ಹೋರಾಟವನ್ನು ರಾಜ್ಯಾದ್ಯಂತ ಸಂಪೂರ್ಣ ಮಟ್ಟ ಹಾಕುವ ಫ್ಯಾಸಿಸ್ಟ್‌ ದುರುದ್ದೇಶದ್ದು. ಈ ದುರುದ್ದೇಶ ಈಡೇರುವುದಕ್ಕೆ ರಾಜ್ಯದ ರೈತ ಸಮುದಾಯ ಅವಕಾಶ ನೀಡುವುದಿಲ್ಲ. ಚನ್ನರಾಯಪಟ್ಟಣ ರೈತರ ಹೋರಾಟಕ್ಕೆ ಬೆ೦ಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯದ ಎಲ್ಲಾ ಭೂಸ್ವಾಧೀನದ ಭೀತಿ ಎದುರಿಸುತ್ತಿರುವ ರೈತರನ್ನು ಒಗ್ಗೂಡಿಸಿ ಚನ್ನರಾಯಪಟ್ಟಣ ಭೂ ಸ್ವಾಧೀನಕ್ಕೆ ಪ್ರಬಲ ವಿರೋಧವನ್ನು ಇನ್ನೂ ಹೆಚ್ಚಿನ ಹೋರಾಟದ ಶಕ್ತಿಯೊಂದಿಗೆ ಮುಂದುವರೆಸಿ, ರೈತ ಹೋರಾಟ ಜಯಗಳಿಸುವಂತೆ ಮಾಡಲು ಜೂನ್‌ 25, 2025 ರಂದು ದೇವನಹಳ್ಳಿ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಕೆಐಎಡಿಬಿ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಮುಖಂಡರಾದ ಕಾರಳ್ಳಿ ಶ್ರೀನಿವಾಸ್, ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ, ದಸಂಸ ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್, ರೈತ ಸಂಘದ ಮುಖಂಡರಾದ ವೀರಸಂಗಯ್ಯ, ಪ್ರಾಂತ ರೈತ ಸಂಘದ ಯಶವಂತ್ ಸೇರಿದಂತೆ ಸಂಯುಕ್ತ ಹೋರಾಟದ ಹಲವರು ಇದ್ದರು.

ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಆಡಳಿತದಲ್ಲಿ ವಿಪರೀತ ಭ್ರಷ್ಟಾಚಾರ, ಶಾಸಕ ರಾಜೇಗೌಡ ವಿರುದ್ಧ ಪ್ರತಿಭಟನೆ; ಕೆ.ಎಲ್.ಅಶೋಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...