Homeಕರ್ನಾಟಕದೇವನಹಳ್ಳಿ: ಸಂಘರ್ಷದ ಹಂತ ತಲುಪಿದ ಭೂಸ್ವಾಧೀನ ವಿರೋಧಿ ಚಳವಳಿ; 'ಸಂಯುಕ್ತ ಹೋರಾಟ'ದಿಂದ 'ದೇವನಹಳ್ಳಿ ಚಲೋ'ಗೆ ಕರೆ

ದೇವನಹಳ್ಳಿ: ಸಂಘರ್ಷದ ಹಂತ ತಲುಪಿದ ಭೂಸ್ವಾಧೀನ ವಿರೋಧಿ ಚಳವಳಿ; ‘ಸಂಯುಕ್ತ ಹೋರಾಟ’ದಿಂದ ‘ದೇವನಹಳ್ಳಿ ಚಲೋ’ಗೆ ಕರೆ

- Advertisement -
- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಚನ್ನರಾಯಪಟ್ಟಣ ಹೋಬಳಿಯ ರೈತರು ಕಳೆದ 1180 ದಿನಗಳಿಂದ (ಸುಮಾರು ನಾಲ್ಕು ವರ್ಷ) ಕೆಐಎಡಿಬಿ ಭೂಸ್ವಾಧೀನ ವಿರೋಧಿ ಹೋರಾಟ ಸಂಘರ್ಷದ ಸ್ಥಿತಿಗೆ ತಲುಪಿದೆ. ಬಲವಂತದ ಹಾಗೂ ಅನ್ಯಾಯದ ಭೂಸ್ವಾಧೀನ ವಿರೋಧಿಸಿ, ಸಂಯುಕ್ತ ಹೋರಾಟ-ಕರ್ನಾಟಕ ಸಂಘಟನೆಯಿಂದ ಜೂನ್‌ 25 ರಂದು ‘ದೇವನಹಳ್ಳಿ ಚಲೋ’ ಹೋರಾಟಕ್ಕೆ ಕರೆ ನೀಡಲಾಗಿದೆ.

ಈ ಬಗ್ಗೆ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಯುಕ್ತ ಹೋರಾಟದ ಮುಖಂಡರು, “13 ಗ್ರಾಮಗಳ ರೈತರು ನಾಡ ಕಚೇರಿ ಮುಂದೆ ಅನಿರ್ದಿಷ್ಟ ಪ್ರತಿಭಟನೆ ನಡೆಸುತ್ತಿದ್ದಾರೆ. ಶೇಕಡಾ 80 ರಷ್ಟು ರೈತರು ಲಿಖಿತವಾಗಿ ಭೂಸ್ವಾಧೀನಕ್ಕೆ ತಮ್ಮ ಅಸಮೃತಿ ಹಾಗೂ ವಿರೋಧ ಸ್ಪಷ್ಟವಾಗಿ ವ್ಯಕ್ತಪಡಿಸಿದ್ದರೂ, ಬಲವಂತದ ಭೂಸ್ವಾಧೀನಕ್ಕೆ ಕ್ರಮವಹಿಸಿರುವುದು, ಭೂ ಸ್ವಾಧೀನ ಕಾಯ್ದೆ-2013 ರ ಸ್ಪಷ್ಠ ಉಲ್ಲಂಘನೆಯಾಗಿದೆ” ಎಂದು ಹೇಳಿದರು.

ಭೂ ಸ್ವಾಧೀನ ಕೈಬಿಡುವಂತೆ ಬೆಂಗಳೂರಿನ ಫ್ರೀಂಡಂ ಪಾರ್ಕಿಲ್ಲಿ ರೈತರು ನಡೆಸಿದ ಪ್ರತಿಭಟನಾ ಸ್ಥಳಗಳಿಗೆ ಈಗಿನ ಮುಖ್ಯಮಂತ್ರಿ, ಹಿಂದಿನ ವಿರೋಧ ಪಕ್ಷದ ನಾಯಕರಾಗಿ ಭೇಟಿ ನೀಡಿದ್ದ ಸಿದ್ದರಾಮಯ್ಯ ಅವರು, ತಾವು ಅಧಿಕಾರಕ್ಕೆ ಬಂದರೆ ಅನ್ಯಾಯ ಹಾಗೂ ಬಲವಂತದ ಭೂ ಸ್ವಾಧೀನವನ್ನು ರದ್ದುಪಡಿಸುವುದಾಗಿ ಸಾರ್ವಜನಿಕ ಘೋಷಣೆ ಮಾಡಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಈಗ ಉಸ್ತುವಾರಿ ಸಚಿವರಾಗಿರುವ ಕೆ.ಎಚ್‌. ಮುನಿಯಪ್ಪ ಕೂಡ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಬಲವಂತವಾಗಿ ಭೂ ಸ್ವಾಧೀನಕ್ಕೆ ಅವಕಾಶ ನೀಡುವುದಿಲ್ಲ ಎಂದು ಈ ರೈತರ ಮತ ಕೇಳಿದ್ದರು. ಆದರೆ, ಈ ಇಬ್ಬರೂ ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳಾದರೂ ತಮ್ಮ ವಚನಕ್ಕೆ ವಿರುದ್ಧವಾಗಿ ವರ್ತಿಸುವ ಮೂಲಕ ವಚನಭ್ರಷ್ಟರು ಎಂದು ಸಾಬೀತು ಮಾಡಿಕೊಂಡಿದ್ದಾರೆ, ಇದು ಸಾರ್ವಜನಿಕ ಹುದ್ದೆಗೆ ಮತ್ತು ನಡವಳಿಕೆಗೆ ಯೋಗ್ಯವಲ್ಲದ್ದು ಎಂದು ಸಂಘಟನೆ ಆಕ್ರೋಶ ಹೊರಹಾಕಿದೆ.

ಇತ್ತೀಚಿಗಿನ ಸಭೆಯೂ ಸೇರಿದಂತೆ ಕಳೆದ ನಾಲ್ಕು ವರ್ಷಗಳಲ್ಲಿ ರೈತರ ಪ್ರತಿಭಟನಾ ಒತ್ತಡ ಹೆಚ್ಚಿದ ಸಂದರ್ಭದಲ್ಲೆಲ್ಲಾ ಮುಖ್ಯಮಂತ್ರಿ ನೇತೃತ್ವದಲ್ಲಿ ನಾಲ್ಕಾರು ಸಭೆಗಳು, ಉಸ್ತುವಾರಿ ಮಂತ್ರಿಗಳ ನೇತೃತ್ವದಲ್ಲಿ ಹತ್ತಾರು ಸಭೆಗಳು ಅಲ್ಲದೇ, ಸ್ವತಃ ಉಸ್ತುವಾರಿ ಮಂತ್ರಿ ಹತ್ತಾರು ಬಾರಿ ಧರಣಿ ಸ್ಥಳಕ್ಕೆ ಭೇಟಿ ಕೊಟ್ಟು ರೈತರ ಪರವಾಗಿ ತೀರ್ಮಾನ ಮಾಡುವುದಾಗಿ ಹೇಳಿ ಚಪ್ಪಾಳೆ ಗಿಟ್ಟಿಸಿಕೊ೦ಡಿದ್ದಾರೆ. ಯಾವುದೇ ಕಾರಣಕ್ಕೂ ರೈತರ ಒಪ್ಪಿಗೆ ಇಲ್ಲದೇ ಭೂಸ್ವಾಧೀನ ಮುಂದುವರೆಸುವುದಿಲ್ಲ ಎಂದು ಸಾರ್ವಜನಿಕವಾಗಿ ಹಲವಾರು ಬಾರಿ ಸ್ಪಷ್ಟಪಡಿಸಿದ್ದಾರೆ. ಈ ರೀತಿ ಭರವಸೆ ನೀಡಿ ಒಳಗೊಳಗೆ ಭೂಸ್ವಾಧೀನದ ಪ್ರಕ್ರಿಯೆ ಮುಂದುವರೆಸಿ ಅಂತಿಮ ಅಧಿಸೂಚನೆ ಹೊರಡಿಸಿರುವುದು ರೈತರಲ್ಲಿ ಹತಾಶೆ-ನಿರಾಶೆ ಉ೦ಟು ಮಾಡಿ, ಒಡಕು ಉ೦ಟು ಮಾಡುವ ಹೀನ ಕುತಂತ್ರವಲ್ಲದೇ ಬೇರೇನೂ ಅಲ್ಲ ಎಂದು ಹೋರಾಟಗಾರರು ಕಿಡಿಕಾರಿದ್ದಾರೆ.

ಸಾರ್ವಜನಿಕವಾಗಿ ಒಂದು ಮುಖ ತೋರಿ, ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಇನ್ನೊಂದು ರೀತಿಯಲ್ಲಿ ಆದೇಶ ನೀಡುವ ಮೂಲಕ ರೈತ ಸಮುದಾಯವನ್ನು ಹಾಗೂ ರೈತ ಹೋರಾಟವನ್ನು ಸಿದ್ದರಾಮಯ್ಯರವರ ನೇತೃತ್ವದ ರಾಜ್ಯ ಸರ್ಕಾರ ಅಪಮಾನಿಸಿದೆ. ಚನ್ನರಾಯಪಟ್ಟಣ ಹೋಬಳಿ ರೈತರ ಧರಣಿ ಸ್ಥಳಕ್ಕೆ ಈ ನಾಲ್ಕು ವರ್ಷಗಳಲ್ಲಿ ಅಖಿಲ ಭಾರತ ಕಿಸಾನ್‌ ಸಭಾ ಅಧ್ಯಕ್ಷರು, ಸಂಯುಕ್ತ ಕಿಸಾನ್‌ ಮೋರ್ಚಾ ನಾಯಕರೂ ಆಗಿರುವ ಡಾ.ಅಶೋಕ್‌ ಧವಳೆ, ಅಖಿಲ ಭಾರತ ಕಿಸಾನ್‌ ಸಭಾದ ಅಖಿಲ ಭಾರತ ಹಣಕಾಸು ಕಾರ್ಯದರ್ಶಿ ಮಾಜಿ ಶಾಸಕ ಕೃಷ್ಣಪ್ರಸಾದ್‌, ಭಾರತೀಯ ಕಿಸಾನ್‌ ಯೂನಿಯನ್‌ನ ರಾಕೇಶ್‌ ಟಿಕಾಯತ್‌ ಸೇರಿದಂತೆ ರಾಷ್ಟ್ರೀಯ ರೈತ ನೇತಾರರು ಭೇಟಿ ಕೊಟ್ಟು ಹೋರಾಟಕ್ಕೆ ಬೆ೦ಬಲ ವ್ಯಕ್ತಪಡಿಸಿದ್ದಾರೆ. ಇಡೀ ರಾಜ್ಯದ ಎಲ್ಲ ರೈತ ಚಳವಳಿಗಳ ಹಾಗೂ ಬುದ್ಧಿಜೀವಿ, ಸಾಹಿತಿಗಳ ಬೆ೦ಬಲ ಮತ್ತು ಅನುಕಂಪ ಈ ಭೂ ಸ್ವಾಧೀನ ವಿರೋಧಿ ರೈತರ ಮೇಲೆ ಇದೆ ಎಂದು ವಿವರಿಸಿದರು.

ತಮ್ಮ ತೀವ್ರ ಅನಾರೋಗ್ಯದ ನಡುವೆಯೂ ಈ ರೈತರ ಹೋರಾಟಕ್ಕೆ ನೇತೃತ್ವ ನೀಡುತ್ತಿದ್ದ ಜಿ.ಸಿ. ಬಯ್ಯಾರೆಡ್ಡಿರವರು ಈ ಹೋರಾಟದ ಬೇಡಿಕೆಯನ್ನು ಪುನರುಚರಿಸುತ್ತಾ ಮರಣವನ್ನಪ್ಪಿದ್ದಾರೆ. ಇಷ್ಟೆಲ್ಲಾ ಇದ್ದರೂ ಬಹುರಾಷ್ಟ್ರೀಯ ಸಂಸ್ಥೆಗಳು, ರಿಯಲ್‌ ಎಸ್ಟೇಟ್‌ ಮಾಫಿಯಾಗಳ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ಬಲವಂತದ ಹಾಗೂ ಅನ್ಯಾಯದ ಭೂಸ್ವಾಧೀನ ಮಾಡೇತೀರುವ ಹಠ ಸರ್ವಾಧಿಕಾರಿ ಮನೋಭಾವದ್ದು. ಇಂತಹ ಭೂಸ್ವಾಧೀನ ವಿರೋಧಿ ಹೋರಾಟವನ್ನು ರಾಜ್ಯಾದ್ಯಂತ ಸಂಪೂರ್ಣ ಮಟ್ಟ ಹಾಕುವ ಫ್ಯಾಸಿಸ್ಟ್‌ ದುರುದ್ದೇಶದ್ದು. ಈ ದುರುದ್ದೇಶ ಈಡೇರುವುದಕ್ಕೆ ರಾಜ್ಯದ ರೈತ ಸಮುದಾಯ ಅವಕಾಶ ನೀಡುವುದಿಲ್ಲ. ಚನ್ನರಾಯಪಟ್ಟಣ ರೈತರ ಹೋರಾಟಕ್ಕೆ ಬೆ೦ಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯದ ಎಲ್ಲಾ ಭೂಸ್ವಾಧೀನದ ಭೀತಿ ಎದುರಿಸುತ್ತಿರುವ ರೈತರನ್ನು ಒಗ್ಗೂಡಿಸಿ ಚನ್ನರಾಯಪಟ್ಟಣ ಭೂ ಸ್ವಾಧೀನಕ್ಕೆ ಪ್ರಬಲ ವಿರೋಧವನ್ನು ಇನ್ನೂ ಹೆಚ್ಚಿನ ಹೋರಾಟದ ಶಕ್ತಿಯೊಂದಿಗೆ ಮುಂದುವರೆಸಿ, ರೈತ ಹೋರಾಟ ಜಯಗಳಿಸುವಂತೆ ಮಾಡಲು ಜೂನ್‌ 25, 2025 ರಂದು ದೇವನಹಳ್ಳಿ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಕೆಐಎಡಿಬಿ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಮುಖಂಡರಾದ ಕಾರಳ್ಳಿ ಶ್ರೀನಿವಾಸ್, ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ, ದಸಂಸ ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್, ರೈತ ಸಂಘದ ಮುಖಂಡರಾದ ವೀರಸಂಗಯ್ಯ, ಪ್ರಾಂತ ರೈತ ಸಂಘದ ಯಶವಂತ್ ಸೇರಿದಂತೆ ಸಂಯುಕ್ತ ಹೋರಾಟದ ಹಲವರು ಇದ್ದರು.

ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಆಡಳಿತದಲ್ಲಿ ವಿಪರೀತ ಭ್ರಷ್ಟಾಚಾರ, ಶಾಸಕ ರಾಜೇಗೌಡ ವಿರುದ್ಧ ಪ್ರತಿಭಟನೆ; ಕೆ.ಎಲ್.ಅಶೋಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...