Homeಕರ್ನಾಟಕದೇವನಹಳ್ಳಿ: ಸಂಘರ್ಷದ ಹಂತ ತಲುಪಿದ ಭೂಸ್ವಾಧೀನ ವಿರೋಧಿ ಚಳವಳಿ; 'ಸಂಯುಕ್ತ ಹೋರಾಟ'ದಿಂದ 'ದೇವನಹಳ್ಳಿ ಚಲೋ'ಗೆ ಕರೆ

ದೇವನಹಳ್ಳಿ: ಸಂಘರ್ಷದ ಹಂತ ತಲುಪಿದ ಭೂಸ್ವಾಧೀನ ವಿರೋಧಿ ಚಳವಳಿ; ‘ಸಂಯುಕ್ತ ಹೋರಾಟ’ದಿಂದ ‘ದೇವನಹಳ್ಳಿ ಚಲೋ’ಗೆ ಕರೆ

- Advertisement -
- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಚನ್ನರಾಯಪಟ್ಟಣ ಹೋಬಳಿಯ ರೈತರು ಕಳೆದ 1180 ದಿನಗಳಿಂದ (ಸುಮಾರು ನಾಲ್ಕು ವರ್ಷ) ಕೆಐಎಡಿಬಿ ಭೂಸ್ವಾಧೀನ ವಿರೋಧಿ ಹೋರಾಟ ಸಂಘರ್ಷದ ಸ್ಥಿತಿಗೆ ತಲುಪಿದೆ. ಬಲವಂತದ ಹಾಗೂ ಅನ್ಯಾಯದ ಭೂಸ್ವಾಧೀನ ವಿರೋಧಿಸಿ, ಸಂಯುಕ್ತ ಹೋರಾಟ-ಕರ್ನಾಟಕ ಸಂಘಟನೆಯಿಂದ ಜೂನ್‌ 25 ರಂದು ‘ದೇವನಹಳ್ಳಿ ಚಲೋ’ ಹೋರಾಟಕ್ಕೆ ಕರೆ ನೀಡಲಾಗಿದೆ.

ಈ ಬಗ್ಗೆ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಯುಕ್ತ ಹೋರಾಟದ ಮುಖಂಡರು, “13 ಗ್ರಾಮಗಳ ರೈತರು ನಾಡ ಕಚೇರಿ ಮುಂದೆ ಅನಿರ್ದಿಷ್ಟ ಪ್ರತಿಭಟನೆ ನಡೆಸುತ್ತಿದ್ದಾರೆ. ಶೇಕಡಾ 80 ರಷ್ಟು ರೈತರು ಲಿಖಿತವಾಗಿ ಭೂಸ್ವಾಧೀನಕ್ಕೆ ತಮ್ಮ ಅಸಮೃತಿ ಹಾಗೂ ವಿರೋಧ ಸ್ಪಷ್ಟವಾಗಿ ವ್ಯಕ್ತಪಡಿಸಿದ್ದರೂ, ಬಲವಂತದ ಭೂಸ್ವಾಧೀನಕ್ಕೆ ಕ್ರಮವಹಿಸಿರುವುದು, ಭೂ ಸ್ವಾಧೀನ ಕಾಯ್ದೆ-2013 ರ ಸ್ಪಷ್ಠ ಉಲ್ಲಂಘನೆಯಾಗಿದೆ” ಎಂದು ಹೇಳಿದರು.

ಭೂ ಸ್ವಾಧೀನ ಕೈಬಿಡುವಂತೆ ಬೆಂಗಳೂರಿನ ಫ್ರೀಂಡಂ ಪಾರ್ಕಿಲ್ಲಿ ರೈತರು ನಡೆಸಿದ ಪ್ರತಿಭಟನಾ ಸ್ಥಳಗಳಿಗೆ ಈಗಿನ ಮುಖ್ಯಮಂತ್ರಿ, ಹಿಂದಿನ ವಿರೋಧ ಪಕ್ಷದ ನಾಯಕರಾಗಿ ಭೇಟಿ ನೀಡಿದ್ದ ಸಿದ್ದರಾಮಯ್ಯ ಅವರು, ತಾವು ಅಧಿಕಾರಕ್ಕೆ ಬಂದರೆ ಅನ್ಯಾಯ ಹಾಗೂ ಬಲವಂತದ ಭೂ ಸ್ವಾಧೀನವನ್ನು ರದ್ದುಪಡಿಸುವುದಾಗಿ ಸಾರ್ವಜನಿಕ ಘೋಷಣೆ ಮಾಡಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಈಗ ಉಸ್ತುವಾರಿ ಸಚಿವರಾಗಿರುವ ಕೆ.ಎಚ್‌. ಮುನಿಯಪ್ಪ ಕೂಡ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಬಲವಂತವಾಗಿ ಭೂ ಸ್ವಾಧೀನಕ್ಕೆ ಅವಕಾಶ ನೀಡುವುದಿಲ್ಲ ಎಂದು ಈ ರೈತರ ಮತ ಕೇಳಿದ್ದರು. ಆದರೆ, ಈ ಇಬ್ಬರೂ ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳಾದರೂ ತಮ್ಮ ವಚನಕ್ಕೆ ವಿರುದ್ಧವಾಗಿ ವರ್ತಿಸುವ ಮೂಲಕ ವಚನಭ್ರಷ್ಟರು ಎಂದು ಸಾಬೀತು ಮಾಡಿಕೊಂಡಿದ್ದಾರೆ, ಇದು ಸಾರ್ವಜನಿಕ ಹುದ್ದೆಗೆ ಮತ್ತು ನಡವಳಿಕೆಗೆ ಯೋಗ್ಯವಲ್ಲದ್ದು ಎಂದು ಸಂಘಟನೆ ಆಕ್ರೋಶ ಹೊರಹಾಕಿದೆ.

ಇತ್ತೀಚಿಗಿನ ಸಭೆಯೂ ಸೇರಿದಂತೆ ಕಳೆದ ನಾಲ್ಕು ವರ್ಷಗಳಲ್ಲಿ ರೈತರ ಪ್ರತಿಭಟನಾ ಒತ್ತಡ ಹೆಚ್ಚಿದ ಸಂದರ್ಭದಲ್ಲೆಲ್ಲಾ ಮುಖ್ಯಮಂತ್ರಿ ನೇತೃತ್ವದಲ್ಲಿ ನಾಲ್ಕಾರು ಸಭೆಗಳು, ಉಸ್ತುವಾರಿ ಮಂತ್ರಿಗಳ ನೇತೃತ್ವದಲ್ಲಿ ಹತ್ತಾರು ಸಭೆಗಳು ಅಲ್ಲದೇ, ಸ್ವತಃ ಉಸ್ತುವಾರಿ ಮಂತ್ರಿ ಹತ್ತಾರು ಬಾರಿ ಧರಣಿ ಸ್ಥಳಕ್ಕೆ ಭೇಟಿ ಕೊಟ್ಟು ರೈತರ ಪರವಾಗಿ ತೀರ್ಮಾನ ಮಾಡುವುದಾಗಿ ಹೇಳಿ ಚಪ್ಪಾಳೆ ಗಿಟ್ಟಿಸಿಕೊ೦ಡಿದ್ದಾರೆ. ಯಾವುದೇ ಕಾರಣಕ್ಕೂ ರೈತರ ಒಪ್ಪಿಗೆ ಇಲ್ಲದೇ ಭೂಸ್ವಾಧೀನ ಮುಂದುವರೆಸುವುದಿಲ್ಲ ಎಂದು ಸಾರ್ವಜನಿಕವಾಗಿ ಹಲವಾರು ಬಾರಿ ಸ್ಪಷ್ಟಪಡಿಸಿದ್ದಾರೆ. ಈ ರೀತಿ ಭರವಸೆ ನೀಡಿ ಒಳಗೊಳಗೆ ಭೂಸ್ವಾಧೀನದ ಪ್ರಕ್ರಿಯೆ ಮುಂದುವರೆಸಿ ಅಂತಿಮ ಅಧಿಸೂಚನೆ ಹೊರಡಿಸಿರುವುದು ರೈತರಲ್ಲಿ ಹತಾಶೆ-ನಿರಾಶೆ ಉ೦ಟು ಮಾಡಿ, ಒಡಕು ಉ೦ಟು ಮಾಡುವ ಹೀನ ಕುತಂತ್ರವಲ್ಲದೇ ಬೇರೇನೂ ಅಲ್ಲ ಎಂದು ಹೋರಾಟಗಾರರು ಕಿಡಿಕಾರಿದ್ದಾರೆ.

ಸಾರ್ವಜನಿಕವಾಗಿ ಒಂದು ಮುಖ ತೋರಿ, ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಇನ್ನೊಂದು ರೀತಿಯಲ್ಲಿ ಆದೇಶ ನೀಡುವ ಮೂಲಕ ರೈತ ಸಮುದಾಯವನ್ನು ಹಾಗೂ ರೈತ ಹೋರಾಟವನ್ನು ಸಿದ್ದರಾಮಯ್ಯರವರ ನೇತೃತ್ವದ ರಾಜ್ಯ ಸರ್ಕಾರ ಅಪಮಾನಿಸಿದೆ. ಚನ್ನರಾಯಪಟ್ಟಣ ಹೋಬಳಿ ರೈತರ ಧರಣಿ ಸ್ಥಳಕ್ಕೆ ಈ ನಾಲ್ಕು ವರ್ಷಗಳಲ್ಲಿ ಅಖಿಲ ಭಾರತ ಕಿಸಾನ್‌ ಸಭಾ ಅಧ್ಯಕ್ಷರು, ಸಂಯುಕ್ತ ಕಿಸಾನ್‌ ಮೋರ್ಚಾ ನಾಯಕರೂ ಆಗಿರುವ ಡಾ.ಅಶೋಕ್‌ ಧವಳೆ, ಅಖಿಲ ಭಾರತ ಕಿಸಾನ್‌ ಸಭಾದ ಅಖಿಲ ಭಾರತ ಹಣಕಾಸು ಕಾರ್ಯದರ್ಶಿ ಮಾಜಿ ಶಾಸಕ ಕೃಷ್ಣಪ್ರಸಾದ್‌, ಭಾರತೀಯ ಕಿಸಾನ್‌ ಯೂನಿಯನ್‌ನ ರಾಕೇಶ್‌ ಟಿಕಾಯತ್‌ ಸೇರಿದಂತೆ ರಾಷ್ಟ್ರೀಯ ರೈತ ನೇತಾರರು ಭೇಟಿ ಕೊಟ್ಟು ಹೋರಾಟಕ್ಕೆ ಬೆ೦ಬಲ ವ್ಯಕ್ತಪಡಿಸಿದ್ದಾರೆ. ಇಡೀ ರಾಜ್ಯದ ಎಲ್ಲ ರೈತ ಚಳವಳಿಗಳ ಹಾಗೂ ಬುದ್ಧಿಜೀವಿ, ಸಾಹಿತಿಗಳ ಬೆ೦ಬಲ ಮತ್ತು ಅನುಕಂಪ ಈ ಭೂ ಸ್ವಾಧೀನ ವಿರೋಧಿ ರೈತರ ಮೇಲೆ ಇದೆ ಎಂದು ವಿವರಿಸಿದರು.

ತಮ್ಮ ತೀವ್ರ ಅನಾರೋಗ್ಯದ ನಡುವೆಯೂ ಈ ರೈತರ ಹೋರಾಟಕ್ಕೆ ನೇತೃತ್ವ ನೀಡುತ್ತಿದ್ದ ಜಿ.ಸಿ. ಬಯ್ಯಾರೆಡ್ಡಿರವರು ಈ ಹೋರಾಟದ ಬೇಡಿಕೆಯನ್ನು ಪುನರುಚರಿಸುತ್ತಾ ಮರಣವನ್ನಪ್ಪಿದ್ದಾರೆ. ಇಷ್ಟೆಲ್ಲಾ ಇದ್ದರೂ ಬಹುರಾಷ್ಟ್ರೀಯ ಸಂಸ್ಥೆಗಳು, ರಿಯಲ್‌ ಎಸ್ಟೇಟ್‌ ಮಾಫಿಯಾಗಳ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ಬಲವಂತದ ಹಾಗೂ ಅನ್ಯಾಯದ ಭೂಸ್ವಾಧೀನ ಮಾಡೇತೀರುವ ಹಠ ಸರ್ವಾಧಿಕಾರಿ ಮನೋಭಾವದ್ದು. ಇಂತಹ ಭೂಸ್ವಾಧೀನ ವಿರೋಧಿ ಹೋರಾಟವನ್ನು ರಾಜ್ಯಾದ್ಯಂತ ಸಂಪೂರ್ಣ ಮಟ್ಟ ಹಾಕುವ ಫ್ಯಾಸಿಸ್ಟ್‌ ದುರುದ್ದೇಶದ್ದು. ಈ ದುರುದ್ದೇಶ ಈಡೇರುವುದಕ್ಕೆ ರಾಜ್ಯದ ರೈತ ಸಮುದಾಯ ಅವಕಾಶ ನೀಡುವುದಿಲ್ಲ. ಚನ್ನರಾಯಪಟ್ಟಣ ರೈತರ ಹೋರಾಟಕ್ಕೆ ಬೆ೦ಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯದ ಎಲ್ಲಾ ಭೂಸ್ವಾಧೀನದ ಭೀತಿ ಎದುರಿಸುತ್ತಿರುವ ರೈತರನ್ನು ಒಗ್ಗೂಡಿಸಿ ಚನ್ನರಾಯಪಟ್ಟಣ ಭೂ ಸ್ವಾಧೀನಕ್ಕೆ ಪ್ರಬಲ ವಿರೋಧವನ್ನು ಇನ್ನೂ ಹೆಚ್ಚಿನ ಹೋರಾಟದ ಶಕ್ತಿಯೊಂದಿಗೆ ಮುಂದುವರೆಸಿ, ರೈತ ಹೋರಾಟ ಜಯಗಳಿಸುವಂತೆ ಮಾಡಲು ಜೂನ್‌ 25, 2025 ರಂದು ದೇವನಹಳ್ಳಿ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಕೆಐಎಡಿಬಿ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಮುಖಂಡರಾದ ಕಾರಳ್ಳಿ ಶ್ರೀನಿವಾಸ್, ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ, ದಸಂಸ ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್, ರೈತ ಸಂಘದ ಮುಖಂಡರಾದ ವೀರಸಂಗಯ್ಯ, ಪ್ರಾಂತ ರೈತ ಸಂಘದ ಯಶವಂತ್ ಸೇರಿದಂತೆ ಸಂಯುಕ್ತ ಹೋರಾಟದ ಹಲವರು ಇದ್ದರು.

ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಆಡಳಿತದಲ್ಲಿ ವಿಪರೀತ ಭ್ರಷ್ಟಾಚಾರ, ಶಾಸಕ ರಾಜೇಗೌಡ ವಿರುದ್ಧ ಪ್ರತಿಭಟನೆ; ಕೆ.ಎಲ್.ಅಶೋಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...