Homeಕರ್ನಾಟಕದೇವನಹಳ್ಳಿ: ಸಂಘರ್ಷದ ಹಂತ ತಲುಪಿದ ಭೂಸ್ವಾಧೀನ ವಿರೋಧಿ ಚಳವಳಿ; 'ಸಂಯುಕ್ತ ಹೋರಾಟ'ದಿಂದ 'ದೇವನಹಳ್ಳಿ ಚಲೋ'ಗೆ ಕರೆ

ದೇವನಹಳ್ಳಿ: ಸಂಘರ್ಷದ ಹಂತ ತಲುಪಿದ ಭೂಸ್ವಾಧೀನ ವಿರೋಧಿ ಚಳವಳಿ; ‘ಸಂಯುಕ್ತ ಹೋರಾಟ’ದಿಂದ ‘ದೇವನಹಳ್ಳಿ ಚಲೋ’ಗೆ ಕರೆ

- Advertisement -
- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಚನ್ನರಾಯಪಟ್ಟಣ ಹೋಬಳಿಯ ರೈತರು ಕಳೆದ 1180 ದಿನಗಳಿಂದ (ಸುಮಾರು ನಾಲ್ಕು ವರ್ಷ) ಕೆಐಎಡಿಬಿ ಭೂಸ್ವಾಧೀನ ವಿರೋಧಿ ಹೋರಾಟ ಸಂಘರ್ಷದ ಸ್ಥಿತಿಗೆ ತಲುಪಿದೆ. ಬಲವಂತದ ಹಾಗೂ ಅನ್ಯಾಯದ ಭೂಸ್ವಾಧೀನ ವಿರೋಧಿಸಿ, ಸಂಯುಕ್ತ ಹೋರಾಟ-ಕರ್ನಾಟಕ ಸಂಘಟನೆಯಿಂದ ಜೂನ್‌ 25 ರಂದು ‘ದೇವನಹಳ್ಳಿ ಚಲೋ’ ಹೋರಾಟಕ್ಕೆ ಕರೆ ನೀಡಲಾಗಿದೆ.

ಈ ಬಗ್ಗೆ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಯುಕ್ತ ಹೋರಾಟದ ಮುಖಂಡರು, “13 ಗ್ರಾಮಗಳ ರೈತರು ನಾಡ ಕಚೇರಿ ಮುಂದೆ ಅನಿರ್ದಿಷ್ಟ ಪ್ರತಿಭಟನೆ ನಡೆಸುತ್ತಿದ್ದಾರೆ. ಶೇಕಡಾ 80 ರಷ್ಟು ರೈತರು ಲಿಖಿತವಾಗಿ ಭೂಸ್ವಾಧೀನಕ್ಕೆ ತಮ್ಮ ಅಸಮೃತಿ ಹಾಗೂ ವಿರೋಧ ಸ್ಪಷ್ಟವಾಗಿ ವ್ಯಕ್ತಪಡಿಸಿದ್ದರೂ, ಬಲವಂತದ ಭೂಸ್ವಾಧೀನಕ್ಕೆ ಕ್ರಮವಹಿಸಿರುವುದು, ಭೂ ಸ್ವಾಧೀನ ಕಾಯ್ದೆ-2013 ರ ಸ್ಪಷ್ಠ ಉಲ್ಲಂಘನೆಯಾಗಿದೆ” ಎಂದು ಹೇಳಿದರು.

ಭೂ ಸ್ವಾಧೀನ ಕೈಬಿಡುವಂತೆ ಬೆಂಗಳೂರಿನ ಫ್ರೀಂಡಂ ಪಾರ್ಕಿಲ್ಲಿ ರೈತರು ನಡೆಸಿದ ಪ್ರತಿಭಟನಾ ಸ್ಥಳಗಳಿಗೆ ಈಗಿನ ಮುಖ್ಯಮಂತ್ರಿ, ಹಿಂದಿನ ವಿರೋಧ ಪಕ್ಷದ ನಾಯಕರಾಗಿ ಭೇಟಿ ನೀಡಿದ್ದ ಸಿದ್ದರಾಮಯ್ಯ ಅವರು, ತಾವು ಅಧಿಕಾರಕ್ಕೆ ಬಂದರೆ ಅನ್ಯಾಯ ಹಾಗೂ ಬಲವಂತದ ಭೂ ಸ್ವಾಧೀನವನ್ನು ರದ್ದುಪಡಿಸುವುದಾಗಿ ಸಾರ್ವಜನಿಕ ಘೋಷಣೆ ಮಾಡಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಈಗ ಉಸ್ತುವಾರಿ ಸಚಿವರಾಗಿರುವ ಕೆ.ಎಚ್‌. ಮುನಿಯಪ್ಪ ಕೂಡ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಬಲವಂತವಾಗಿ ಭೂ ಸ್ವಾಧೀನಕ್ಕೆ ಅವಕಾಶ ನೀಡುವುದಿಲ್ಲ ಎಂದು ಈ ರೈತರ ಮತ ಕೇಳಿದ್ದರು. ಆದರೆ, ಈ ಇಬ್ಬರೂ ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳಾದರೂ ತಮ್ಮ ವಚನಕ್ಕೆ ವಿರುದ್ಧವಾಗಿ ವರ್ತಿಸುವ ಮೂಲಕ ವಚನಭ್ರಷ್ಟರು ಎಂದು ಸಾಬೀತು ಮಾಡಿಕೊಂಡಿದ್ದಾರೆ, ಇದು ಸಾರ್ವಜನಿಕ ಹುದ್ದೆಗೆ ಮತ್ತು ನಡವಳಿಕೆಗೆ ಯೋಗ್ಯವಲ್ಲದ್ದು ಎಂದು ಸಂಘಟನೆ ಆಕ್ರೋಶ ಹೊರಹಾಕಿದೆ.

ಇತ್ತೀಚಿಗಿನ ಸಭೆಯೂ ಸೇರಿದಂತೆ ಕಳೆದ ನಾಲ್ಕು ವರ್ಷಗಳಲ್ಲಿ ರೈತರ ಪ್ರತಿಭಟನಾ ಒತ್ತಡ ಹೆಚ್ಚಿದ ಸಂದರ್ಭದಲ್ಲೆಲ್ಲಾ ಮುಖ್ಯಮಂತ್ರಿ ನೇತೃತ್ವದಲ್ಲಿ ನಾಲ್ಕಾರು ಸಭೆಗಳು, ಉಸ್ತುವಾರಿ ಮಂತ್ರಿಗಳ ನೇತೃತ್ವದಲ್ಲಿ ಹತ್ತಾರು ಸಭೆಗಳು ಅಲ್ಲದೇ, ಸ್ವತಃ ಉಸ್ತುವಾರಿ ಮಂತ್ರಿ ಹತ್ತಾರು ಬಾರಿ ಧರಣಿ ಸ್ಥಳಕ್ಕೆ ಭೇಟಿ ಕೊಟ್ಟು ರೈತರ ಪರವಾಗಿ ತೀರ್ಮಾನ ಮಾಡುವುದಾಗಿ ಹೇಳಿ ಚಪ್ಪಾಳೆ ಗಿಟ್ಟಿಸಿಕೊ೦ಡಿದ್ದಾರೆ. ಯಾವುದೇ ಕಾರಣಕ್ಕೂ ರೈತರ ಒಪ್ಪಿಗೆ ಇಲ್ಲದೇ ಭೂಸ್ವಾಧೀನ ಮುಂದುವರೆಸುವುದಿಲ್ಲ ಎಂದು ಸಾರ್ವಜನಿಕವಾಗಿ ಹಲವಾರು ಬಾರಿ ಸ್ಪಷ್ಟಪಡಿಸಿದ್ದಾರೆ. ಈ ರೀತಿ ಭರವಸೆ ನೀಡಿ ಒಳಗೊಳಗೆ ಭೂಸ್ವಾಧೀನದ ಪ್ರಕ್ರಿಯೆ ಮುಂದುವರೆಸಿ ಅಂತಿಮ ಅಧಿಸೂಚನೆ ಹೊರಡಿಸಿರುವುದು ರೈತರಲ್ಲಿ ಹತಾಶೆ-ನಿರಾಶೆ ಉ೦ಟು ಮಾಡಿ, ಒಡಕು ಉ೦ಟು ಮಾಡುವ ಹೀನ ಕುತಂತ್ರವಲ್ಲದೇ ಬೇರೇನೂ ಅಲ್ಲ ಎಂದು ಹೋರಾಟಗಾರರು ಕಿಡಿಕಾರಿದ್ದಾರೆ.

ಸಾರ್ವಜನಿಕವಾಗಿ ಒಂದು ಮುಖ ತೋರಿ, ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಇನ್ನೊಂದು ರೀತಿಯಲ್ಲಿ ಆದೇಶ ನೀಡುವ ಮೂಲಕ ರೈತ ಸಮುದಾಯವನ್ನು ಹಾಗೂ ರೈತ ಹೋರಾಟವನ್ನು ಸಿದ್ದರಾಮಯ್ಯರವರ ನೇತೃತ್ವದ ರಾಜ್ಯ ಸರ್ಕಾರ ಅಪಮಾನಿಸಿದೆ. ಚನ್ನರಾಯಪಟ್ಟಣ ಹೋಬಳಿ ರೈತರ ಧರಣಿ ಸ್ಥಳಕ್ಕೆ ಈ ನಾಲ್ಕು ವರ್ಷಗಳಲ್ಲಿ ಅಖಿಲ ಭಾರತ ಕಿಸಾನ್‌ ಸಭಾ ಅಧ್ಯಕ್ಷರು, ಸಂಯುಕ್ತ ಕಿಸಾನ್‌ ಮೋರ್ಚಾ ನಾಯಕರೂ ಆಗಿರುವ ಡಾ.ಅಶೋಕ್‌ ಧವಳೆ, ಅಖಿಲ ಭಾರತ ಕಿಸಾನ್‌ ಸಭಾದ ಅಖಿಲ ಭಾರತ ಹಣಕಾಸು ಕಾರ್ಯದರ್ಶಿ ಮಾಜಿ ಶಾಸಕ ಕೃಷ್ಣಪ್ರಸಾದ್‌, ಭಾರತೀಯ ಕಿಸಾನ್‌ ಯೂನಿಯನ್‌ನ ರಾಕೇಶ್‌ ಟಿಕಾಯತ್‌ ಸೇರಿದಂತೆ ರಾಷ್ಟ್ರೀಯ ರೈತ ನೇತಾರರು ಭೇಟಿ ಕೊಟ್ಟು ಹೋರಾಟಕ್ಕೆ ಬೆ೦ಬಲ ವ್ಯಕ್ತಪಡಿಸಿದ್ದಾರೆ. ಇಡೀ ರಾಜ್ಯದ ಎಲ್ಲ ರೈತ ಚಳವಳಿಗಳ ಹಾಗೂ ಬುದ್ಧಿಜೀವಿ, ಸಾಹಿತಿಗಳ ಬೆ೦ಬಲ ಮತ್ತು ಅನುಕಂಪ ಈ ಭೂ ಸ್ವಾಧೀನ ವಿರೋಧಿ ರೈತರ ಮೇಲೆ ಇದೆ ಎಂದು ವಿವರಿಸಿದರು.

ತಮ್ಮ ತೀವ್ರ ಅನಾರೋಗ್ಯದ ನಡುವೆಯೂ ಈ ರೈತರ ಹೋರಾಟಕ್ಕೆ ನೇತೃತ್ವ ನೀಡುತ್ತಿದ್ದ ಜಿ.ಸಿ. ಬಯ್ಯಾರೆಡ್ಡಿರವರು ಈ ಹೋರಾಟದ ಬೇಡಿಕೆಯನ್ನು ಪುನರುಚರಿಸುತ್ತಾ ಮರಣವನ್ನಪ್ಪಿದ್ದಾರೆ. ಇಷ್ಟೆಲ್ಲಾ ಇದ್ದರೂ ಬಹುರಾಷ್ಟ್ರೀಯ ಸಂಸ್ಥೆಗಳು, ರಿಯಲ್‌ ಎಸ್ಟೇಟ್‌ ಮಾಫಿಯಾಗಳ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ಬಲವಂತದ ಹಾಗೂ ಅನ್ಯಾಯದ ಭೂಸ್ವಾಧೀನ ಮಾಡೇತೀರುವ ಹಠ ಸರ್ವಾಧಿಕಾರಿ ಮನೋಭಾವದ್ದು. ಇಂತಹ ಭೂಸ್ವಾಧೀನ ವಿರೋಧಿ ಹೋರಾಟವನ್ನು ರಾಜ್ಯಾದ್ಯಂತ ಸಂಪೂರ್ಣ ಮಟ್ಟ ಹಾಕುವ ಫ್ಯಾಸಿಸ್ಟ್‌ ದುರುದ್ದೇಶದ್ದು. ಈ ದುರುದ್ದೇಶ ಈಡೇರುವುದಕ್ಕೆ ರಾಜ್ಯದ ರೈತ ಸಮುದಾಯ ಅವಕಾಶ ನೀಡುವುದಿಲ್ಲ. ಚನ್ನರಾಯಪಟ್ಟಣ ರೈತರ ಹೋರಾಟಕ್ಕೆ ಬೆ೦ಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯದ ಎಲ್ಲಾ ಭೂಸ್ವಾಧೀನದ ಭೀತಿ ಎದುರಿಸುತ್ತಿರುವ ರೈತರನ್ನು ಒಗ್ಗೂಡಿಸಿ ಚನ್ನರಾಯಪಟ್ಟಣ ಭೂ ಸ್ವಾಧೀನಕ್ಕೆ ಪ್ರಬಲ ವಿರೋಧವನ್ನು ಇನ್ನೂ ಹೆಚ್ಚಿನ ಹೋರಾಟದ ಶಕ್ತಿಯೊಂದಿಗೆ ಮುಂದುವರೆಸಿ, ರೈತ ಹೋರಾಟ ಜಯಗಳಿಸುವಂತೆ ಮಾಡಲು ಜೂನ್‌ 25, 2025 ರಂದು ದೇವನಹಳ್ಳಿ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಕೆಐಎಡಿಬಿ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಮುಖಂಡರಾದ ಕಾರಳ್ಳಿ ಶ್ರೀನಿವಾಸ್, ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ, ದಸಂಸ ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್, ರೈತ ಸಂಘದ ಮುಖಂಡರಾದ ವೀರಸಂಗಯ್ಯ, ಪ್ರಾಂತ ರೈತ ಸಂಘದ ಯಶವಂತ್ ಸೇರಿದಂತೆ ಸಂಯುಕ್ತ ಹೋರಾಟದ ಹಲವರು ಇದ್ದರು.

ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಆಡಳಿತದಲ್ಲಿ ವಿಪರೀತ ಭ್ರಷ್ಟಾಚಾರ, ಶಾಸಕ ರಾಜೇಗೌಡ ವಿರುದ್ಧ ಪ್ರತಿಭಟನೆ; ಕೆ.ಎಲ್.ಅಶೋಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...