Homeಕರ್ನಾಟಕದೇವನಹಳ್ಳಿ: ಸಂಘರ್ಷದ ಹಂತ ತಲುಪಿದ ಭೂಸ್ವಾಧೀನ ವಿರೋಧಿ ಚಳವಳಿ; 'ಸಂಯುಕ್ತ ಹೋರಾಟ'ದಿಂದ 'ದೇವನಹಳ್ಳಿ ಚಲೋ'ಗೆ ಕರೆ

ದೇವನಹಳ್ಳಿ: ಸಂಘರ್ಷದ ಹಂತ ತಲುಪಿದ ಭೂಸ್ವಾಧೀನ ವಿರೋಧಿ ಚಳವಳಿ; ‘ಸಂಯುಕ್ತ ಹೋರಾಟ’ದಿಂದ ‘ದೇವನಹಳ್ಳಿ ಚಲೋ’ಗೆ ಕರೆ

- Advertisement -
- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಚನ್ನರಾಯಪಟ್ಟಣ ಹೋಬಳಿಯ ರೈತರು ಕಳೆದ 1180 ದಿನಗಳಿಂದ (ಸುಮಾರು ನಾಲ್ಕು ವರ್ಷ) ಕೆಐಎಡಿಬಿ ಭೂಸ್ವಾಧೀನ ವಿರೋಧಿ ಹೋರಾಟ ಸಂಘರ್ಷದ ಸ್ಥಿತಿಗೆ ತಲುಪಿದೆ. ಬಲವಂತದ ಹಾಗೂ ಅನ್ಯಾಯದ ಭೂಸ್ವಾಧೀನ ವಿರೋಧಿಸಿ, ಸಂಯುಕ್ತ ಹೋರಾಟ-ಕರ್ನಾಟಕ ಸಂಘಟನೆಯಿಂದ ಜೂನ್‌ 25 ರಂದು ‘ದೇವನಹಳ್ಳಿ ಚಲೋ’ ಹೋರಾಟಕ್ಕೆ ಕರೆ ನೀಡಲಾಗಿದೆ.

ಈ ಬಗ್ಗೆ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಯುಕ್ತ ಹೋರಾಟದ ಮುಖಂಡರು, “13 ಗ್ರಾಮಗಳ ರೈತರು ನಾಡ ಕಚೇರಿ ಮುಂದೆ ಅನಿರ್ದಿಷ್ಟ ಪ್ರತಿಭಟನೆ ನಡೆಸುತ್ತಿದ್ದಾರೆ. ಶೇಕಡಾ 80 ರಷ್ಟು ರೈತರು ಲಿಖಿತವಾಗಿ ಭೂಸ್ವಾಧೀನಕ್ಕೆ ತಮ್ಮ ಅಸಮೃತಿ ಹಾಗೂ ವಿರೋಧ ಸ್ಪಷ್ಟವಾಗಿ ವ್ಯಕ್ತಪಡಿಸಿದ್ದರೂ, ಬಲವಂತದ ಭೂಸ್ವಾಧೀನಕ್ಕೆ ಕ್ರಮವಹಿಸಿರುವುದು, ಭೂ ಸ್ವಾಧೀನ ಕಾಯ್ದೆ-2013 ರ ಸ್ಪಷ್ಠ ಉಲ್ಲಂಘನೆಯಾಗಿದೆ” ಎಂದು ಹೇಳಿದರು.

ಭೂ ಸ್ವಾಧೀನ ಕೈಬಿಡುವಂತೆ ಬೆಂಗಳೂರಿನ ಫ್ರೀಂಡಂ ಪಾರ್ಕಿಲ್ಲಿ ರೈತರು ನಡೆಸಿದ ಪ್ರತಿಭಟನಾ ಸ್ಥಳಗಳಿಗೆ ಈಗಿನ ಮುಖ್ಯಮಂತ್ರಿ, ಹಿಂದಿನ ವಿರೋಧ ಪಕ್ಷದ ನಾಯಕರಾಗಿ ಭೇಟಿ ನೀಡಿದ್ದ ಸಿದ್ದರಾಮಯ್ಯ ಅವರು, ತಾವು ಅಧಿಕಾರಕ್ಕೆ ಬಂದರೆ ಅನ್ಯಾಯ ಹಾಗೂ ಬಲವಂತದ ಭೂ ಸ್ವಾಧೀನವನ್ನು ರದ್ದುಪಡಿಸುವುದಾಗಿ ಸಾರ್ವಜನಿಕ ಘೋಷಣೆ ಮಾಡಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಈಗ ಉಸ್ತುವಾರಿ ಸಚಿವರಾಗಿರುವ ಕೆ.ಎಚ್‌. ಮುನಿಯಪ್ಪ ಕೂಡ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಬಲವಂತವಾಗಿ ಭೂ ಸ್ವಾಧೀನಕ್ಕೆ ಅವಕಾಶ ನೀಡುವುದಿಲ್ಲ ಎಂದು ಈ ರೈತರ ಮತ ಕೇಳಿದ್ದರು. ಆದರೆ, ಈ ಇಬ್ಬರೂ ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳಾದರೂ ತಮ್ಮ ವಚನಕ್ಕೆ ವಿರುದ್ಧವಾಗಿ ವರ್ತಿಸುವ ಮೂಲಕ ವಚನಭ್ರಷ್ಟರು ಎಂದು ಸಾಬೀತು ಮಾಡಿಕೊಂಡಿದ್ದಾರೆ, ಇದು ಸಾರ್ವಜನಿಕ ಹುದ್ದೆಗೆ ಮತ್ತು ನಡವಳಿಕೆಗೆ ಯೋಗ್ಯವಲ್ಲದ್ದು ಎಂದು ಸಂಘಟನೆ ಆಕ್ರೋಶ ಹೊರಹಾಕಿದೆ.

ಇತ್ತೀಚಿಗಿನ ಸಭೆಯೂ ಸೇರಿದಂತೆ ಕಳೆದ ನಾಲ್ಕು ವರ್ಷಗಳಲ್ಲಿ ರೈತರ ಪ್ರತಿಭಟನಾ ಒತ್ತಡ ಹೆಚ್ಚಿದ ಸಂದರ್ಭದಲ್ಲೆಲ್ಲಾ ಮುಖ್ಯಮಂತ್ರಿ ನೇತೃತ್ವದಲ್ಲಿ ನಾಲ್ಕಾರು ಸಭೆಗಳು, ಉಸ್ತುವಾರಿ ಮಂತ್ರಿಗಳ ನೇತೃತ್ವದಲ್ಲಿ ಹತ್ತಾರು ಸಭೆಗಳು ಅಲ್ಲದೇ, ಸ್ವತಃ ಉಸ್ತುವಾರಿ ಮಂತ್ರಿ ಹತ್ತಾರು ಬಾರಿ ಧರಣಿ ಸ್ಥಳಕ್ಕೆ ಭೇಟಿ ಕೊಟ್ಟು ರೈತರ ಪರವಾಗಿ ತೀರ್ಮಾನ ಮಾಡುವುದಾಗಿ ಹೇಳಿ ಚಪ್ಪಾಳೆ ಗಿಟ್ಟಿಸಿಕೊ೦ಡಿದ್ದಾರೆ. ಯಾವುದೇ ಕಾರಣಕ್ಕೂ ರೈತರ ಒಪ್ಪಿಗೆ ಇಲ್ಲದೇ ಭೂಸ್ವಾಧೀನ ಮುಂದುವರೆಸುವುದಿಲ್ಲ ಎಂದು ಸಾರ್ವಜನಿಕವಾಗಿ ಹಲವಾರು ಬಾರಿ ಸ್ಪಷ್ಟಪಡಿಸಿದ್ದಾರೆ. ಈ ರೀತಿ ಭರವಸೆ ನೀಡಿ ಒಳಗೊಳಗೆ ಭೂಸ್ವಾಧೀನದ ಪ್ರಕ್ರಿಯೆ ಮುಂದುವರೆಸಿ ಅಂತಿಮ ಅಧಿಸೂಚನೆ ಹೊರಡಿಸಿರುವುದು ರೈತರಲ್ಲಿ ಹತಾಶೆ-ನಿರಾಶೆ ಉ೦ಟು ಮಾಡಿ, ಒಡಕು ಉ೦ಟು ಮಾಡುವ ಹೀನ ಕುತಂತ್ರವಲ್ಲದೇ ಬೇರೇನೂ ಅಲ್ಲ ಎಂದು ಹೋರಾಟಗಾರರು ಕಿಡಿಕಾರಿದ್ದಾರೆ.

ಸಾರ್ವಜನಿಕವಾಗಿ ಒಂದು ಮುಖ ತೋರಿ, ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಇನ್ನೊಂದು ರೀತಿಯಲ್ಲಿ ಆದೇಶ ನೀಡುವ ಮೂಲಕ ರೈತ ಸಮುದಾಯವನ್ನು ಹಾಗೂ ರೈತ ಹೋರಾಟವನ್ನು ಸಿದ್ದರಾಮಯ್ಯರವರ ನೇತೃತ್ವದ ರಾಜ್ಯ ಸರ್ಕಾರ ಅಪಮಾನಿಸಿದೆ. ಚನ್ನರಾಯಪಟ್ಟಣ ಹೋಬಳಿ ರೈತರ ಧರಣಿ ಸ್ಥಳಕ್ಕೆ ಈ ನಾಲ್ಕು ವರ್ಷಗಳಲ್ಲಿ ಅಖಿಲ ಭಾರತ ಕಿಸಾನ್‌ ಸಭಾ ಅಧ್ಯಕ್ಷರು, ಸಂಯುಕ್ತ ಕಿಸಾನ್‌ ಮೋರ್ಚಾ ನಾಯಕರೂ ಆಗಿರುವ ಡಾ.ಅಶೋಕ್‌ ಧವಳೆ, ಅಖಿಲ ಭಾರತ ಕಿಸಾನ್‌ ಸಭಾದ ಅಖಿಲ ಭಾರತ ಹಣಕಾಸು ಕಾರ್ಯದರ್ಶಿ ಮಾಜಿ ಶಾಸಕ ಕೃಷ್ಣಪ್ರಸಾದ್‌, ಭಾರತೀಯ ಕಿಸಾನ್‌ ಯೂನಿಯನ್‌ನ ರಾಕೇಶ್‌ ಟಿಕಾಯತ್‌ ಸೇರಿದಂತೆ ರಾಷ್ಟ್ರೀಯ ರೈತ ನೇತಾರರು ಭೇಟಿ ಕೊಟ್ಟು ಹೋರಾಟಕ್ಕೆ ಬೆ೦ಬಲ ವ್ಯಕ್ತಪಡಿಸಿದ್ದಾರೆ. ಇಡೀ ರಾಜ್ಯದ ಎಲ್ಲ ರೈತ ಚಳವಳಿಗಳ ಹಾಗೂ ಬುದ್ಧಿಜೀವಿ, ಸಾಹಿತಿಗಳ ಬೆ೦ಬಲ ಮತ್ತು ಅನುಕಂಪ ಈ ಭೂ ಸ್ವಾಧೀನ ವಿರೋಧಿ ರೈತರ ಮೇಲೆ ಇದೆ ಎಂದು ವಿವರಿಸಿದರು.

ತಮ್ಮ ತೀವ್ರ ಅನಾರೋಗ್ಯದ ನಡುವೆಯೂ ಈ ರೈತರ ಹೋರಾಟಕ್ಕೆ ನೇತೃತ್ವ ನೀಡುತ್ತಿದ್ದ ಜಿ.ಸಿ. ಬಯ್ಯಾರೆಡ್ಡಿರವರು ಈ ಹೋರಾಟದ ಬೇಡಿಕೆಯನ್ನು ಪುನರುಚರಿಸುತ್ತಾ ಮರಣವನ್ನಪ್ಪಿದ್ದಾರೆ. ಇಷ್ಟೆಲ್ಲಾ ಇದ್ದರೂ ಬಹುರಾಷ್ಟ್ರೀಯ ಸಂಸ್ಥೆಗಳು, ರಿಯಲ್‌ ಎಸ್ಟೇಟ್‌ ಮಾಫಿಯಾಗಳ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ಬಲವಂತದ ಹಾಗೂ ಅನ್ಯಾಯದ ಭೂಸ್ವಾಧೀನ ಮಾಡೇತೀರುವ ಹಠ ಸರ್ವಾಧಿಕಾರಿ ಮನೋಭಾವದ್ದು. ಇಂತಹ ಭೂಸ್ವಾಧೀನ ವಿರೋಧಿ ಹೋರಾಟವನ್ನು ರಾಜ್ಯಾದ್ಯಂತ ಸಂಪೂರ್ಣ ಮಟ್ಟ ಹಾಕುವ ಫ್ಯಾಸಿಸ್ಟ್‌ ದುರುದ್ದೇಶದ್ದು. ಈ ದುರುದ್ದೇಶ ಈಡೇರುವುದಕ್ಕೆ ರಾಜ್ಯದ ರೈತ ಸಮುದಾಯ ಅವಕಾಶ ನೀಡುವುದಿಲ್ಲ. ಚನ್ನರಾಯಪಟ್ಟಣ ರೈತರ ಹೋರಾಟಕ್ಕೆ ಬೆ೦ಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯದ ಎಲ್ಲಾ ಭೂಸ್ವಾಧೀನದ ಭೀತಿ ಎದುರಿಸುತ್ತಿರುವ ರೈತರನ್ನು ಒಗ್ಗೂಡಿಸಿ ಚನ್ನರಾಯಪಟ್ಟಣ ಭೂ ಸ್ವಾಧೀನಕ್ಕೆ ಪ್ರಬಲ ವಿರೋಧವನ್ನು ಇನ್ನೂ ಹೆಚ್ಚಿನ ಹೋರಾಟದ ಶಕ್ತಿಯೊಂದಿಗೆ ಮುಂದುವರೆಸಿ, ರೈತ ಹೋರಾಟ ಜಯಗಳಿಸುವಂತೆ ಮಾಡಲು ಜೂನ್‌ 25, 2025 ರಂದು ದೇವನಹಳ್ಳಿ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಕೆಐಎಡಿಬಿ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಮುಖಂಡರಾದ ಕಾರಳ್ಳಿ ಶ್ರೀನಿವಾಸ್, ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ, ದಸಂಸ ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್, ರೈತ ಸಂಘದ ಮುಖಂಡರಾದ ವೀರಸಂಗಯ್ಯ, ಪ್ರಾಂತ ರೈತ ಸಂಘದ ಯಶವಂತ್ ಸೇರಿದಂತೆ ಸಂಯುಕ್ತ ಹೋರಾಟದ ಹಲವರು ಇದ್ದರು.

ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಆಡಳಿತದಲ್ಲಿ ವಿಪರೀತ ಭ್ರಷ್ಟಾಚಾರ, ಶಾಸಕ ರಾಜೇಗೌಡ ವಿರುದ್ಧ ಪ್ರತಿಭಟನೆ; ಕೆ.ಎಲ್.ಅಶೋಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...