Homeಕರ್ನಾಟಕಜು.2ಕ್ಕೆ ನಾಡಕಚೇರಿ ಎದುರು ದೇವನಹಳ್ಳಿ ರೈತರ ಉಪವಾಸ: ಬೆಂಗಳೂರಿನಲ್ಲಿ ಪ್ರಕಾಶ್ ರಾಜ್ ಬೆಂಬಲಿಸಿ ಉಪವಾಸ –...

ಜು.2ಕ್ಕೆ ನಾಡಕಚೇರಿ ಎದುರು ದೇವನಹಳ್ಳಿ ರೈತರ ಉಪವಾಸ: ಬೆಂಗಳೂರಿನಲ್ಲಿ ಪ್ರಕಾಶ್ ರಾಜ್ ಬೆಂಬಲಿಸಿ ಉಪವಾಸ – ವಿಡಿಯೋ

- Advertisement -
- Advertisement -

ಬೆಂಗಳೂರು: ದೇವನಹಳ್ಳಿಯ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ, ಚನ್ನರಾಯಪಟ್ಟಣದ ರೈತರು ಹಾಗೂ ಸಂಯುಕ್ತ ಹೋರಾಟ-ಕರ್ನಾಟಕ ಮತ್ತು ಸಮಾನ ಮನಸ್ಕ ಸಂಘಟನೆಗಳು ಜಂಟಿಯಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ತಮ್ಮ ನಿರಂತರ ಹೋರಾಟ ನಿರ್ಣಾಯಕ ಹಂತ ತಲುಪಿದೆ ಎಂದು ಘೋಷಿಸಿವೆ. ಜುಲೈ 4ರಂದು ಸರ್ಕಾರ ರೈತ ಮುಖಂಡರು ಮತ್ತು ಹೋರಾಟಗಾರರೊಂದಿಗೆ ಕರೆದಿರುವ ಸಭೆಯು 1190 ದಿನಗಳ ಹೋರಾಟಕ್ಕೆ ಮಹತ್ವದ ತಿರುವು ನೀಡಲಿದೆ ಎಂದು ಸಮಿತಿ ಹೇಳಿದೆ.

ಜುಲೈ 2ರಂದು ದೇವನಹಳ್ಳಿಯಲ್ಲಿ ರೈತರಿಂದ, ಬೆಂಗಳೂರಿನಲ್ಲಿ ಗಣ್ಯರಿಂದ ಉಪವಾಸ ಸತ್ಯಾಗ್ರಹ

ಪ್ರಕಟಣೆಯ ಪ್ರಕಾರ, ಜುಲೈ 2ರಂದು (ಗುರುವಾರ) ಎರಡು ಪ್ರಮುಖ ಪ್ರತಿಭಟನೆಗಳು ನಡೆಯಲಿವೆ. ಚನ್ನರಾಯಪಟ್ಟಣದ 13 ಹಳ್ಳಿಗಳ ಸಂತ್ರಸ್ತ ರೈತರು “ನಮ್ಮ ಬದುಕು ಈ ಮಣ್ಣಿನಲ್ಲಿದೆ, ಈ ಮಣ್ಣಿನ ಮಕ್ಕಳ ಭವಿಷ್ಯ ನಿಮ್ಮ ಕೈಯಲ್ಲಿದೆ” ಎಂಬ ಘೋಷವಾಕ್ಯದೊಂದಿಗೆ ದೇವನಹಳ್ಳಿಯ ನಾಡ ಕಚೇರಿ ಮುಂಭಾಗದಲ್ಲಿರುವ ಧರಣಿ ಸ್ಥಳದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ರೈತರ ಈ ಹೋರಾಟಕ್ಕೆ ನೈತಿಕ ಬೆಂಬಲ ತುಂಬಲು ಹಿರಿಯ ಗಾಂಧಿವಾದಿ ಸಂತೋಷ್ ಕೌಲಗಿಯವರು ಕೂಡ ಉಪವಾಸದಲ್ಲಿ ಪಾಲ್ಗೊಳ್ಳಲಿದ್ದಾರೆ.

ಅದೇ ದಿನ, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಯುತ್ತಿರುವ ‘ಭೂಮಿ ಸತ್ಯಾಗ್ರಹ’ದಲ್ಲಿ ಖ್ಯಾತ ನಟ ಪ್ರಕಾಶ್ ರೈ ಆದಿಯಾಗಿ ನಾಡಿನ ಅನೇಕ ಸಂವೇದನಾಶೀಲ ಕಲಾವಿದರು, ರಂಗಕರ್ಮಿಗಳು ಉಪವಾಸ ನಿರತ ರೈತರನ್ನು ಬೆಂಬಲಿಸಿ ‘ಬೆಂಬಲ ಉಪವಾಸ ಸತ್ಯಾಗ್ರಹ’ ಕೂರಲಿದ್ದಾರೆ.

ಸಾಹಿತಿಗಳು, ಕಲಾವಿದರು, ಚಿಂತಕರಿಂದ ಕ್ಯಾಬಿನೆಟ್‌ಗೆ ಆಗ್ರಹ

ದೇವನಹಳ್ಳಿ ರೈತ ಹೋರಾಟದ ಪರವಾಗಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಯುತ್ತಿರುವ ‘ಭೂಮಿ ಸತ್ಯಾಗ್ರಹ’ ಇಂದು 5ನೇ ದಿನಕ್ಕೆ ಕಾಲಿಟ್ಟಿದ್ದು, ಹಲವು ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ. ಡಾ. ಜಿ. ರಾಮಕೃಷ್ಣ, ಜಾಣಗೆರೆ ವೆಂಕಟರಾಮಯ್ಯ, ಡಾ. ಬಂಜಗೆರೆ ಜಯಪ್ರಕಾಶ್, ಇಂದೂಧರ ಹೊನ್ನಾಪುರ, ಆರ್.ಜಿ. ಹಳ್ಳಿ ನಾಗರಾಜ್ ಮೊದಲಾದ ಹಲವು ಸಾಹಿತಿಗಳು, ಚಿಂತಕರು ಮತ್ತು ಬರಹಗಾರರು ಮುಖ್ಯಮಂತ್ರಿಗಳು ಹಾಗೂ ಕ್ಯಾಬಿನೆಟ್‌ನ ಎಲ್ಲ ಸಚಿವರಿಗೆ ಜಂಟಿಯಾಗಿ ಆಗ್ರಹಿಸಿದ್ದಾರೆ. ಜುಲೈ 2ರಂದು ನಡೆಯುವ ಕ್ಯಾಬಿನೆಟ್ ವಿಶೇಷ ಸಭೆಯಲ್ಲಿ ದೇವನಹಳ್ಳಿಯ ಚನ್ನರಾಯಪಟ್ಟಣದ 13 ಹಳ್ಳಿಗಳ 1777 ಎಕರೆ ಜಮೀನನ್ನು ಭೂಸ್ವಾಧೀನ ಮಾಡುವ ಪ್ರಕ್ರಿಯೆಯನ್ನು ಸಂಪೂರ್ಣ ರದ್ದುಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಹಿರಿಯ ಭಾಷಾ ಹೋರಾಟಗಾರರೂ, ಪತ್ರಕರ್ತರೂ ಆದ ಜಾಣಗೆರೆ ವೆಂಕಟರಾಮಯ್ಯ ಅವರು ಮಾತನಾಡಿ, “ಜುಲೈ 2ರಂದು ಕ್ಯಾಬಿನೆಟ್ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಕ್ಯಾಬಿನೆಟ್‌ನ ಎಲ್ಲ ಸಚಿವರೂ ರೈತರ ಪರವಾದ ನಿರ್ಣಯಕ್ಕೆ ಬರಲೇಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒಳಗೊಂಡಂತೆ, ಕ್ಯಾಬಿನೆಟ್‌ನ ಎಲ್ಲ ಸಚಿವರೂ ಚಳವಳಿಗಳ ಮಹತ್ವವೇನು ಎಂಬುದನ್ನು ಅರಿತವರೇ ಆಗಿದ್ದಾರೆ. ಒಂದು ವೇಳೆ ಸರ್ಕಾರದ ನಿರ್ಧಾರ ರೈತರ ವಿರುದ್ಧ ಬಂದರೆ, ಈ ಚಳವಳಿ ಇನ್ನಷ್ಟು ತೀವ್ರವಾಗಿ ಮುಂದುವರೆಯಲಿದೆ. ರೈತರ ಈ ಹೋರಾಟಕ್ಕೆ ಕರ್ನಾಟಕದ ಸಾಹಿತಿಗಳು, ಬರಹಗಾರರು, ಚಿಂತಕರು ಮತ್ತು ಕಲಾವಿದರ ಸಂಪೂರ್ಣ ಬೆಂಬಲವಿದೆ” ಎಂದು ಹೇಳಿದರು.

ಜುಲೈ 3ರಂದು ಸಂಯುಕ್ತ ಕಿಸಾನ್ ಮೋರ್ಚಾದ ರಾಷ್ಟ್ರೀಯ ನಾಯಕರಾದ ರಾಕೇಶ್ ಟಿಕಾಯತ್, ದರ್ಶನ್ ಪಾಲ್ ಆಗಮನ

ಸಂಯುಕ್ತ ಹೋರಾಟ ಕರ್ನಾಟಕ ಮತ್ತು ಸಮಾನ ಮನಸ್ಕ ಸಂಘಟನೆಗಳ ಪರವಾಗಿ ಬಡಗಲಪುರ ನಾಗೇಂದ್ರ, ಯಶವಂತ್, ನೂರ್ ಶ್ರೀಧರ್, ವರಲಕ್ಷ್ಮಿ ಮೊದಲಾದವರು ಮಾತನಾಡಿ, “ಜುಲೈ 2 ರಿಂದ ಫ್ರೀಡಂ ಪಾರ್ಕ್ ನಿರಂತರ ಚಟುವಟಿಕೆಯ ತಾಣವಾಗಲಿದೆ. ಜುಲೈ 3ರಂದು ದೆಹಲಿಯ ರೈತ ಆಂದೋಲನವನ್ನು ಯಶಸ್ವಿಯಾಗಿ ಮುನ್ನಡೆಸಿದ ಸಂಯುಕ್ತ ಕಿಸಾನ್ ಮೋರ್ಚಾದ ಹಿರಿಯ ರೈತ ನಾಯಕರಾದ ರಾಕೇಶ್ ಟಿಕಾಯತ್, ದರ್ಶನ್ ಪಾಲ್ ಮೊದಲಾದವರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಅವರು ದೇವನಹಳ್ಳಿಗೂ ಭೇಟಿ ನೀಡಿ, ಹಳ್ಳಿಗಳಿಗೆ ತೆರಳಿ ರೈತರಿಗೆ ಭರವಸೆ ತುಂಬಲಿದ್ದಾರೆ” ಎಂದು ಮಾಹಿತಿ ನೀಡಿದರು.

ರೈತರ ಸಭೆ ಬಹಿಷ್ಕರಿಸಿದ ಬಿಜೆಪಿ ಸಂಸದರ ನಡೆಗೆ ಖಂಡನೆ; ಪ್ರಕಾಶ್ ರಾಜ್‌ರಿಂದ ಮಲ್ಲಿಕಾರ್ಜುನ ಖರ್ಗೆ ಭೇಟಿ

ಇದೇ ವೇಳೆ, ದೆಹಲಿಯಲ್ಲಿ ಇಂದು ಭೂಸ್ವಾಧೀನದ ಕುರಿತ ಜಂಟಿ ಸಂಸದೀಯ ಸಭೆಗೆ ಆಹ್ವಾನದ ಮೇರೆಗೆ ರೈತರ ಈ ಭೂಸ್ವಾಧೀನ ವಿಷಯ ಕುರಿತು ಮಾತನಾಡಲು ತೆರಳಿದ್ದ ಮೇಧಾ ಪಾಟ್ಕರ್ ಮತ್ತು ಪ್ರಕಾಶ್ ರೈ ಅವರನ್ನು ಕಂಡ ನಂತರ ಸಭೆಯನ್ನು ಬಹಿಷ್ಕರಿಸಿ ತೆರಳಿದ ಬಿಜೆಪಿ ಸಂಸದರ ವರ್ತನೆಯನ್ನು ಹೋರಾಟ ಸಮಿತಿ ತೀವ್ರವಾಗಿ ಖಂಡಿಸಿತು. ಅಲ್ಲದೆ, ಕೋರಂ ಇದ್ದರೂ ಸಭೆ ನಡೆಸದೆ ರೈತರ ವಿರುದ್ಧವಾದ ನಿಲುವು ತಾಳಿದ ಸಂಸದೀಯ ಸಮಿತಿಯ ಸಂಚಾಲಕರ ನಡೆಯನ್ನೂ ಖಂಡಿಸಲಾಯಿತು. ಈ ಘಟನೆಗಳ ನಂತರ, ಪ್ರಕಾಶ್ ರೈ ಅವರು ವಿರೋಧ ಪಕ್ಷದ ನಾಯಕರೂ, ಎಐಸಿಸಿ ಅಧ್ಯಕ್ಷರೂ ಆದ ಕರ್ನಾಟಕದ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ಅವರಿಗೆ ವಿಚಾರ ತಿಳಿಸಿದ್ದಾರೆ. ಅಲ್ಲದೆ, ರೈತರ ಹೋರಾಟಕ್ಕೆ ಬೆಂಬಲಿಸಿ ರಾಜ್ಯಕ್ಕೆ ಬಂದು ಹೋರಾಟ ನಿರತರನ್ನು ಭೇಟಿಯಾಗುವಂತೆ ಮನವಿ ಮಾಡಿದ್ದಾರೆ ಎಂಬ ಮಾಹಿತಿಯನ್ನೂ ಸಮಿತಿ ನೀಡಿತು.

ಜುಲೈ 4ರಂದು “ನಾಡ ಉಳಿಸಿ ಸಮಾವೇಶ”

ಜುಲೈ 4ರಂದು ಮುಖ್ಯಮಂತ್ರಿಗಳು ರೈತರು ಮತ್ತು ಹೋರಾಟಗಾರರೊಂದಿಗೆ ಕರೆದಿರುವ ಸಭೆಯ ವೇಳೆ, ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿ ಬೃಹತ್ “ನಾಡ ಉಳಿಸಿ ಸಮಾವೇಶ” ನಡೆಯಲಿದೆ. ಇದರಲ್ಲಿ ನಾಡಿನ ಎಲ್ಲ ಭಾಗಗಳಿಂದ ಸಂಘಟನೆಗಳ ಕಾರ್ಯಕರ್ತರು, ಪ್ರಜಾಪ್ರಭುತ್ವದ ಪರ ಇರುವ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಮಿತಿ ಮಾಹಿತಿ ನೀಡಿದೆ. “ದೇವನಹಳ್ಳಿ ಹೋರಾಟ ಕೇವಲ ಸ್ಥಳೀಯ ಸಮಸ್ಯೆಯಲ್ಲ, ಇದು ರಾಜ್ಯದ ರೈತರ ಅಸ್ಮಿತೆ ಮತ್ತು ಕೃಷಿ ಸಂಸ್ಕೃತಿಯ ರಕ್ಷಣೆಯ ಹೋರಾಟ” ಎಂದು ಸಮಿತಿ ಮುಖಂಡರು ಪುನರುಚ್ಚರಿಸಿದರು.

ಸಭೆಯಲ್ಲಿ ಡಾ. ಜಿ. ರಾಮಕೃಷ್ಣ, ಜಾಣಗೆರೆ ವೆಂಕಟರಾಮಯ್ಯ, ಡಾ. ಬಂಜಗೆರೆ ಜಯಪ್ರಕಾಶ್, ಇಂದೂಧರ ಹೊನ್ನಾಪುರ, ಆರ್.ಜಿ. ಹಳ್ಳಿ ನಾಗರಾಜ್, ಗುರುಪ್ರಸಾದ್ ಕೆರಗೋಡು, ವಿ. ನಾಗರಾಜ್, ಜೆ.ಎಂ. ವೀರಸಂಗಯ್ಯ, ಚುಕ್ಕಿ ನಂಜುಂಡಸ್ವಾಮಿ, ಮೀನಾಕ್ಷಿ ಸುಂದರಂ, ಲಕ್ಷ್ಮಿ, ದೇವಿ, ಶ್ರೀನಿವಾಸ್ ಕಾರಹಳ್ಳಿ, ಡಿ.ಎಚ್. ಪೂಜಾರ್, ಪ್ರಭಾ ಬೆಳವಂಗಲ, ಕೆ.ವಿ. ಭಟ್, ಮಲ್ಲಿಗೆ ಸಿರಿಮನೆ, ನಾಗರಾಜ್ ಪೂಜಾರ್, ಶ್ರೀಮತಿ ವೀರಸಂಗಯ್ಯ ಮೊದಲಾದವರು ಇದ್ದರು.

ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟ:  ಜು.2ಕ್ಕೆ ಸಂತ್ರಸ್ತ ರೈತರಿಂದ  ಉಪವಾಸ ಸತ್ಯಾಗ್ರಹ-ವೀಡಿಯೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...

ಗೋಣಿ ತುಮಕೂರು ಅಸ್ಪೃಶ್ಯತೆ ಆಚರಣೆ ಪ್ರಕರಣ: ತಹಶೀಲ್ದಾರ್ ಸಮ್ಮುಖದಲ್ಲಿ ದೇಗುಲ ಪ್ರವೇಶಿಸಿದ ನವ ದಂಪತಿ

ಕಳೆದ ವಾರ ಭಾರಿ ಚರ್ಚೆಗೆ ಗ್ರಾಸವಾಗಿದ್ದ ದಲಿತ ನವ ದಂಪತಿ ದೇಗುಲ  ಪ್ರವೇಶ ಹಾಗೂ ದಲಿತ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತುರುವೇಕೆರೆ ತಾಲೂಕು ಗೋಣಿ ತುಮಕೂರು ಗ್ರಾಮದಲ್ಲಿರುವ ಸವರ್ಣೀಯ ಮತ್ತು ದಲಿತ ಜನಾಂಗದ ನಡುವೆ...

ದ್ವೇಷ ಭಾಷಣ ಆರೋಪ: ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಎಫ್ಐಆರ್ 

ಯಾದಗಿರಿ ಜಿಲ್ಲೆಯಲ್ಲಿ ನಡೆದ ಶಿವಾಜಿ ಜಯಂತಿ ಆಚರಣೆಯ ಸಂದರ್ಭದಲ್ಲಿ ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಜಿಲ್ಲೆಯ ಗುರ್ಮಿತ್ಕಲ್ ಪಟ್ಟಣದಲ್ಲಿ ಈ...