Homeಕರ್ನಾಟಕಜು.2ಕ್ಕೆ ನಾಡಕಚೇರಿ ಎದುರು ದೇವನಹಳ್ಳಿ ರೈತರ ಉಪವಾಸ: ಬೆಂಗಳೂರಿನಲ್ಲಿ ಪ್ರಕಾಶ್ ರಾಜ್ ಬೆಂಬಲಿಸಿ ಉಪವಾಸ –...

ಜು.2ಕ್ಕೆ ನಾಡಕಚೇರಿ ಎದುರು ದೇವನಹಳ್ಳಿ ರೈತರ ಉಪವಾಸ: ಬೆಂಗಳೂರಿನಲ್ಲಿ ಪ್ರಕಾಶ್ ರಾಜ್ ಬೆಂಬಲಿಸಿ ಉಪವಾಸ – ವಿಡಿಯೋ

- Advertisement -
- Advertisement -

ಬೆಂಗಳೂರು: ದೇವನಹಳ್ಳಿಯ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ, ಚನ್ನರಾಯಪಟ್ಟಣದ ರೈತರು ಹಾಗೂ ಸಂಯುಕ್ತ ಹೋರಾಟ-ಕರ್ನಾಟಕ ಮತ್ತು ಸಮಾನ ಮನಸ್ಕ ಸಂಘಟನೆಗಳು ಜಂಟಿಯಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ತಮ್ಮ ನಿರಂತರ ಹೋರಾಟ ನಿರ್ಣಾಯಕ ಹಂತ ತಲುಪಿದೆ ಎಂದು ಘೋಷಿಸಿವೆ. ಜುಲೈ 4ರಂದು ಸರ್ಕಾರ ರೈತ ಮುಖಂಡರು ಮತ್ತು ಹೋರಾಟಗಾರರೊಂದಿಗೆ ಕರೆದಿರುವ ಸಭೆಯು 1190 ದಿನಗಳ ಹೋರಾಟಕ್ಕೆ ಮಹತ್ವದ ತಿರುವು ನೀಡಲಿದೆ ಎಂದು ಸಮಿತಿ ಹೇಳಿದೆ.

ಜುಲೈ 2ರಂದು ದೇವನಹಳ್ಳಿಯಲ್ಲಿ ರೈತರಿಂದ, ಬೆಂಗಳೂರಿನಲ್ಲಿ ಗಣ್ಯರಿಂದ ಉಪವಾಸ ಸತ್ಯಾಗ್ರಹ

ಪ್ರಕಟಣೆಯ ಪ್ರಕಾರ, ಜುಲೈ 2ರಂದು (ಗುರುವಾರ) ಎರಡು ಪ್ರಮುಖ ಪ್ರತಿಭಟನೆಗಳು ನಡೆಯಲಿವೆ. ಚನ್ನರಾಯಪಟ್ಟಣದ 13 ಹಳ್ಳಿಗಳ ಸಂತ್ರಸ್ತ ರೈತರು “ನಮ್ಮ ಬದುಕು ಈ ಮಣ್ಣಿನಲ್ಲಿದೆ, ಈ ಮಣ್ಣಿನ ಮಕ್ಕಳ ಭವಿಷ್ಯ ನಿಮ್ಮ ಕೈಯಲ್ಲಿದೆ” ಎಂಬ ಘೋಷವಾಕ್ಯದೊಂದಿಗೆ ದೇವನಹಳ್ಳಿಯ ನಾಡ ಕಚೇರಿ ಮುಂಭಾಗದಲ್ಲಿರುವ ಧರಣಿ ಸ್ಥಳದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ರೈತರ ಈ ಹೋರಾಟಕ್ಕೆ ನೈತಿಕ ಬೆಂಬಲ ತುಂಬಲು ಹಿರಿಯ ಗಾಂಧಿವಾದಿ ಸಂತೋಷ್ ಕೌಲಗಿಯವರು ಕೂಡ ಉಪವಾಸದಲ್ಲಿ ಪಾಲ್ಗೊಳ್ಳಲಿದ್ದಾರೆ.

ಅದೇ ದಿನ, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಯುತ್ತಿರುವ ‘ಭೂಮಿ ಸತ್ಯಾಗ್ರಹ’ದಲ್ಲಿ ಖ್ಯಾತ ನಟ ಪ್ರಕಾಶ್ ರೈ ಆದಿಯಾಗಿ ನಾಡಿನ ಅನೇಕ ಸಂವೇದನಾಶೀಲ ಕಲಾವಿದರು, ರಂಗಕರ್ಮಿಗಳು ಉಪವಾಸ ನಿರತ ರೈತರನ್ನು ಬೆಂಬಲಿಸಿ ‘ಬೆಂಬಲ ಉಪವಾಸ ಸತ್ಯಾಗ್ರಹ’ ಕೂರಲಿದ್ದಾರೆ.

ಸಾಹಿತಿಗಳು, ಕಲಾವಿದರು, ಚಿಂತಕರಿಂದ ಕ್ಯಾಬಿನೆಟ್‌ಗೆ ಆಗ್ರಹ

ದೇವನಹಳ್ಳಿ ರೈತ ಹೋರಾಟದ ಪರವಾಗಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಯುತ್ತಿರುವ ‘ಭೂಮಿ ಸತ್ಯಾಗ್ರಹ’ ಇಂದು 5ನೇ ದಿನಕ್ಕೆ ಕಾಲಿಟ್ಟಿದ್ದು, ಹಲವು ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ. ಡಾ. ಜಿ. ರಾಮಕೃಷ್ಣ, ಜಾಣಗೆರೆ ವೆಂಕಟರಾಮಯ್ಯ, ಡಾ. ಬಂಜಗೆರೆ ಜಯಪ್ರಕಾಶ್, ಇಂದೂಧರ ಹೊನ್ನಾಪುರ, ಆರ್.ಜಿ. ಹಳ್ಳಿ ನಾಗರಾಜ್ ಮೊದಲಾದ ಹಲವು ಸಾಹಿತಿಗಳು, ಚಿಂತಕರು ಮತ್ತು ಬರಹಗಾರರು ಮುಖ್ಯಮಂತ್ರಿಗಳು ಹಾಗೂ ಕ್ಯಾಬಿನೆಟ್‌ನ ಎಲ್ಲ ಸಚಿವರಿಗೆ ಜಂಟಿಯಾಗಿ ಆಗ್ರಹಿಸಿದ್ದಾರೆ. ಜುಲೈ 2ರಂದು ನಡೆಯುವ ಕ್ಯಾಬಿನೆಟ್ ವಿಶೇಷ ಸಭೆಯಲ್ಲಿ ದೇವನಹಳ್ಳಿಯ ಚನ್ನರಾಯಪಟ್ಟಣದ 13 ಹಳ್ಳಿಗಳ 1777 ಎಕರೆ ಜಮೀನನ್ನು ಭೂಸ್ವಾಧೀನ ಮಾಡುವ ಪ್ರಕ್ರಿಯೆಯನ್ನು ಸಂಪೂರ್ಣ ರದ್ದುಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಹಿರಿಯ ಭಾಷಾ ಹೋರಾಟಗಾರರೂ, ಪತ್ರಕರ್ತರೂ ಆದ ಜಾಣಗೆರೆ ವೆಂಕಟರಾಮಯ್ಯ ಅವರು ಮಾತನಾಡಿ, “ಜುಲೈ 2ರಂದು ಕ್ಯಾಬಿನೆಟ್ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಕ್ಯಾಬಿನೆಟ್‌ನ ಎಲ್ಲ ಸಚಿವರೂ ರೈತರ ಪರವಾದ ನಿರ್ಣಯಕ್ಕೆ ಬರಲೇಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒಳಗೊಂಡಂತೆ, ಕ್ಯಾಬಿನೆಟ್‌ನ ಎಲ್ಲ ಸಚಿವರೂ ಚಳವಳಿಗಳ ಮಹತ್ವವೇನು ಎಂಬುದನ್ನು ಅರಿತವರೇ ಆಗಿದ್ದಾರೆ. ಒಂದು ವೇಳೆ ಸರ್ಕಾರದ ನಿರ್ಧಾರ ರೈತರ ವಿರುದ್ಧ ಬಂದರೆ, ಈ ಚಳವಳಿ ಇನ್ನಷ್ಟು ತೀವ್ರವಾಗಿ ಮುಂದುವರೆಯಲಿದೆ. ರೈತರ ಈ ಹೋರಾಟಕ್ಕೆ ಕರ್ನಾಟಕದ ಸಾಹಿತಿಗಳು, ಬರಹಗಾರರು, ಚಿಂತಕರು ಮತ್ತು ಕಲಾವಿದರ ಸಂಪೂರ್ಣ ಬೆಂಬಲವಿದೆ” ಎಂದು ಹೇಳಿದರು.

ಜುಲೈ 3ರಂದು ಸಂಯುಕ್ತ ಕಿಸಾನ್ ಮೋರ್ಚಾದ ರಾಷ್ಟ್ರೀಯ ನಾಯಕರಾದ ರಾಕೇಶ್ ಟಿಕಾಯತ್, ದರ್ಶನ್ ಪಾಲ್ ಆಗಮನ

ಸಂಯುಕ್ತ ಹೋರಾಟ ಕರ್ನಾಟಕ ಮತ್ತು ಸಮಾನ ಮನಸ್ಕ ಸಂಘಟನೆಗಳ ಪರವಾಗಿ ಬಡಗಲಪುರ ನಾಗೇಂದ್ರ, ಯಶವಂತ್, ನೂರ್ ಶ್ರೀಧರ್, ವರಲಕ್ಷ್ಮಿ ಮೊದಲಾದವರು ಮಾತನಾಡಿ, “ಜುಲೈ 2 ರಿಂದ ಫ್ರೀಡಂ ಪಾರ್ಕ್ ನಿರಂತರ ಚಟುವಟಿಕೆಯ ತಾಣವಾಗಲಿದೆ. ಜುಲೈ 3ರಂದು ದೆಹಲಿಯ ರೈತ ಆಂದೋಲನವನ್ನು ಯಶಸ್ವಿಯಾಗಿ ಮುನ್ನಡೆಸಿದ ಸಂಯುಕ್ತ ಕಿಸಾನ್ ಮೋರ್ಚಾದ ಹಿರಿಯ ರೈತ ನಾಯಕರಾದ ರಾಕೇಶ್ ಟಿಕಾಯತ್, ದರ್ಶನ್ ಪಾಲ್ ಮೊದಲಾದವರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಅವರು ದೇವನಹಳ್ಳಿಗೂ ಭೇಟಿ ನೀಡಿ, ಹಳ್ಳಿಗಳಿಗೆ ತೆರಳಿ ರೈತರಿಗೆ ಭರವಸೆ ತುಂಬಲಿದ್ದಾರೆ” ಎಂದು ಮಾಹಿತಿ ನೀಡಿದರು.

ರೈತರ ಸಭೆ ಬಹಿಷ್ಕರಿಸಿದ ಬಿಜೆಪಿ ಸಂಸದರ ನಡೆಗೆ ಖಂಡನೆ; ಪ್ರಕಾಶ್ ರಾಜ್‌ರಿಂದ ಮಲ್ಲಿಕಾರ್ಜುನ ಖರ್ಗೆ ಭೇಟಿ

ಇದೇ ವೇಳೆ, ದೆಹಲಿಯಲ್ಲಿ ಇಂದು ಭೂಸ್ವಾಧೀನದ ಕುರಿತ ಜಂಟಿ ಸಂಸದೀಯ ಸಭೆಗೆ ಆಹ್ವಾನದ ಮೇರೆಗೆ ರೈತರ ಈ ಭೂಸ್ವಾಧೀನ ವಿಷಯ ಕುರಿತು ಮಾತನಾಡಲು ತೆರಳಿದ್ದ ಮೇಧಾ ಪಾಟ್ಕರ್ ಮತ್ತು ಪ್ರಕಾಶ್ ರೈ ಅವರನ್ನು ಕಂಡ ನಂತರ ಸಭೆಯನ್ನು ಬಹಿಷ್ಕರಿಸಿ ತೆರಳಿದ ಬಿಜೆಪಿ ಸಂಸದರ ವರ್ತನೆಯನ್ನು ಹೋರಾಟ ಸಮಿತಿ ತೀವ್ರವಾಗಿ ಖಂಡಿಸಿತು. ಅಲ್ಲದೆ, ಕೋರಂ ಇದ್ದರೂ ಸಭೆ ನಡೆಸದೆ ರೈತರ ವಿರುದ್ಧವಾದ ನಿಲುವು ತಾಳಿದ ಸಂಸದೀಯ ಸಮಿತಿಯ ಸಂಚಾಲಕರ ನಡೆಯನ್ನೂ ಖಂಡಿಸಲಾಯಿತು. ಈ ಘಟನೆಗಳ ನಂತರ, ಪ್ರಕಾಶ್ ರೈ ಅವರು ವಿರೋಧ ಪಕ್ಷದ ನಾಯಕರೂ, ಎಐಸಿಸಿ ಅಧ್ಯಕ್ಷರೂ ಆದ ಕರ್ನಾಟಕದ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ಅವರಿಗೆ ವಿಚಾರ ತಿಳಿಸಿದ್ದಾರೆ. ಅಲ್ಲದೆ, ರೈತರ ಹೋರಾಟಕ್ಕೆ ಬೆಂಬಲಿಸಿ ರಾಜ್ಯಕ್ಕೆ ಬಂದು ಹೋರಾಟ ನಿರತರನ್ನು ಭೇಟಿಯಾಗುವಂತೆ ಮನವಿ ಮಾಡಿದ್ದಾರೆ ಎಂಬ ಮಾಹಿತಿಯನ್ನೂ ಸಮಿತಿ ನೀಡಿತು.

ಜುಲೈ 4ರಂದು “ನಾಡ ಉಳಿಸಿ ಸಮಾವೇಶ”

ಜುಲೈ 4ರಂದು ಮುಖ್ಯಮಂತ್ರಿಗಳು ರೈತರು ಮತ್ತು ಹೋರಾಟಗಾರರೊಂದಿಗೆ ಕರೆದಿರುವ ಸಭೆಯ ವೇಳೆ, ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿ ಬೃಹತ್ “ನಾಡ ಉಳಿಸಿ ಸಮಾವೇಶ” ನಡೆಯಲಿದೆ. ಇದರಲ್ಲಿ ನಾಡಿನ ಎಲ್ಲ ಭಾಗಗಳಿಂದ ಸಂಘಟನೆಗಳ ಕಾರ್ಯಕರ್ತರು, ಪ್ರಜಾಪ್ರಭುತ್ವದ ಪರ ಇರುವ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಮಿತಿ ಮಾಹಿತಿ ನೀಡಿದೆ. “ದೇವನಹಳ್ಳಿ ಹೋರಾಟ ಕೇವಲ ಸ್ಥಳೀಯ ಸಮಸ್ಯೆಯಲ್ಲ, ಇದು ರಾಜ್ಯದ ರೈತರ ಅಸ್ಮಿತೆ ಮತ್ತು ಕೃಷಿ ಸಂಸ್ಕೃತಿಯ ರಕ್ಷಣೆಯ ಹೋರಾಟ” ಎಂದು ಸಮಿತಿ ಮುಖಂಡರು ಪುನರುಚ್ಚರಿಸಿದರು.

ಸಭೆಯಲ್ಲಿ ಡಾ. ಜಿ. ರಾಮಕೃಷ್ಣ, ಜಾಣಗೆರೆ ವೆಂಕಟರಾಮಯ್ಯ, ಡಾ. ಬಂಜಗೆರೆ ಜಯಪ್ರಕಾಶ್, ಇಂದೂಧರ ಹೊನ್ನಾಪುರ, ಆರ್.ಜಿ. ಹಳ್ಳಿ ನಾಗರಾಜ್, ಗುರುಪ್ರಸಾದ್ ಕೆರಗೋಡು, ವಿ. ನಾಗರಾಜ್, ಜೆ.ಎಂ. ವೀರಸಂಗಯ್ಯ, ಚುಕ್ಕಿ ನಂಜುಂಡಸ್ವಾಮಿ, ಮೀನಾಕ್ಷಿ ಸುಂದರಂ, ಲಕ್ಷ್ಮಿ, ದೇವಿ, ಶ್ರೀನಿವಾಸ್ ಕಾರಹಳ್ಳಿ, ಡಿ.ಎಚ್. ಪೂಜಾರ್, ಪ್ರಭಾ ಬೆಳವಂಗಲ, ಕೆ.ವಿ. ಭಟ್, ಮಲ್ಲಿಗೆ ಸಿರಿಮನೆ, ನಾಗರಾಜ್ ಪೂಜಾರ್, ಶ್ರೀಮತಿ ವೀರಸಂಗಯ್ಯ ಮೊದಲಾದವರು ಇದ್ದರು.

ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟ:  ಜು.2ಕ್ಕೆ ಸಂತ್ರಸ್ತ ರೈತರಿಂದ  ಉಪವಾಸ ಸತ್ಯಾಗ್ರಹ-ವೀಡಿಯೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಚುನಾವಣೆ | ಭವಾನಿಪುರದಲ್ಲಿ ನನ್ನ ನಾಮಪತ್ರ ರದ್ದತಿಗೆ ಪಿತೂರಿ ನಡೆದಿತ್ತು : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ತನ್ನ ನಾಮಪತ್ರವನ್ನು ರದ್ದುಗೊಳಿಸಲು ಉದ್ದೇಶಪೂರ್ವಕ ಪಿತೂರಿ ನಡೆದಿತ್ತು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. "ನಮ್ಮ ಹೋರಾಟ ಬಿಜೆಪಿ ವಿರುದ್ಧವಲ್ಲ; ವ್ಯವಸ್ಥೆಯಲ್ಲಿರುವ ದೋಷಗಳ ವಿರುದ್ಧ. ನನ್ನ ಸ್ವಂತ...

ಇಸ್ರೇಲ್‌ನಾದ್ಯಂತ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತ ವಿರುದ್ಧ ಬೀದಿಗಿಳಿದ ಜನ

ಗಾಝಾದಲ್ಲಿ ಸುಮಾರು 80 ಸಾವಿರದಷ್ಟು ಜನರನ್ನು ಹತ್ಯೆಗೈದ ಬಳಿಕ, ಈಗ ಲೆಬನಾನ್ ಮತ್ತು ಇರಾನ್ ಮೇಲೆ ದಾಳಿ ನಡೆಸುತ್ತಿರುವ ಇಸ್ರೇಲ್‌ನ ಬೆಂಜಮಿನ್ ನೆತನ್ಯಾಹು ಸರ್ಕಾರದ ವಿರುದ್ದ ಅಲ್ಲಿನ ನಾಗರಿಕರು ಬೀದಿಗಿಳಿದಿದ್ದಾರೆ. ನೆತನ್ಯಾಹು ಆಡಳಿತದ...

Islamabad Talks | ಅಮೆರಿಕದ ಷರತ್ತುಗಳನ್ನು ತಿರಸ್ಕರಿಸಿದ ಇರಾನ್‌ : ಯಾವುದೇ ಒಪ್ಪಂದವಿಲ್ಲದೆ ವಾಪಸ್ ಹೋದ ಜೆಡಿ ವ್ಯಾನ್ಸ್ ನಿಯೋಗ

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿರುವ ಅಮೆರಿಕ-ಇರಾನ್‌ ನಡುವಿನ ಮಹತ್ವದ ಶಾಂತಿ ಮಾತುಕತೆ ವಿಫಲವಾದಂತೆ ಗೋಚರಿಸುತ್ತಿದೆ. ಅಮೆರಿಕದ ಪರವಾಗಿ ಮಾತುಕತೆಗೆ ಆಗಮಿಸಿದ್ದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನೇತೃತ್ವದ ನಿಯೋಗ, ಇರಾನ್‌ ಜೊತೆ ಯಾವುದೇ ಒಪ್ಪಂದ ಸಾಧ್ಯವಾಗದೆ...

ಹರಿಯಾಣದ ಮೋಸ್ಟ್ ವಾಂಟೆಡ್ ‘ಗ್ಯಾಂಗ್‌ಸ್ಟರ್’ ಸಾಹಿಲ್ ಚೌಹಾಣ್ ಥೈಲ್ಯಾಂಡ್ ನಿಂದ ಗಡೀಪಾರು; ದೆಹಲಿಯಲ್ಲಿ ವಶಕ್ಕೆ ಪಡೆಯಲಿರುವ ಎಸ್‌ಟಿಎಫ್

ಭಾರತೀಯ ಭದ್ರತಾ ಸಂಸ್ಥೆಗಳಿಗೆ ಒಂದು ಪ್ರಮುಖ ಪ್ರಗತಿಯಲ್ಲಿ, ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಸಾಹಿಲ್ ಚೌಹಾಣ್‌ನನ್ನು ಥೈಲ್ಯಾಂಡ್‌ನಿಂದ ಗಡೀಪಾರು ಮಾಡಿದ ನಂತರ ಭಾರತಕ್ಕೆ ಕರೆತರಲಾಗುತ್ತಿದೆ. ಅಧಿಕಾರಿಗಳ ಪ್ರಕಾರ, ಚೌಹಾಣ್ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ...

ಛತ್ತೀಸ್‌ಗಢ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ತುಂಬಿ ಬಾವಿ ಬಳಿ ಎಸೆದಿದ್ದ ಆರೋಪಿ ಬಂಧನ

ಛತ್ತೀಸ್‌ಗಢದ ದುರ್ಗ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿ, ನಂತರ ಮಗು ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ಹಾಕಿ ಬಾವಿಯ ಬಳಿ ಎಸೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಉತೈ...

ಉತ್ತರಪ್ರದೇಶ: ಪ್ರೇಮ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಪ್ರತೀಕಾರ: ಮನೆಗೆ ನುಗ್ಗಿ 23ವರ್ಷದ ಯುವತಿ ಮತ್ತು ತಾಯಿಯ ಮೇಲೆ ಆಸಿಡ್ ದಾಳಿ; ಯುವತಿ ಸಾವು

ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ 23 ವರ್ಷದ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡು ಆಕೆಯ ತಾಯಿ ಗಂಭೀರವಾಗಿ ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ...

ಬೆಂಗಳೂರಿನ ಪ್ರವಾಹ ಕಾಮಗಾರಿ ಮೇ 30ರೊಳಗೆ ಪೂರ್ಣಗೊಳಿಸಿ, ಇಲ್ಲದಿದ್ದರೆ ಅಮಾನತು ಎದುರಿಸಿ; ಅಧಿಕಾರಿಗಳಿಗೆ ಎಸಿಎಸ್ ತುಷಾರ್ ಗಿರಿನಾಥ್ ಎಚ್ಚರಿಕೆ

ಬೆಂಗಳೂರು: ಮೇ 30 ರೊಳಗೆ ಬಾಕಿ ಇರುವ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿ, ಇಲ್ಲದಿದ್ದರೆ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಲಹಂಕದ ಕೇಂದ್ರೀಯ ವಿಹಾರ, ಟಾಟಾ...

ಮರ್ಯಾದೆಗೇಡು ಹತ್ಯೆ ತಡೆಯುವ ʼಇವ ನಮ್ಮವ ಇವ ನಮ್ಮವʼ ವಿಧೇಯಕಕ್ಕೆ ರಾಜ್ಯಪಾಲರಿಂದ ಸಹಿ

ರಾಜ್ಯ ವಿಧಾನಮಂಡಲ ಅಂಗೀಕರಿಸಿದ ವಿಧೇಯಕಗಳ ಪೈಕಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಬದಲಿಗೆ ಮತಪತ್ರ ಬಳಕೆ ಕಡ್ಡಾಯಗೊಳಿಸುವ ‘2026ರ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ’ ಹೊರತುಪಡಿಸಿ ಉಳಿದವುಗಳಿಗೆ...

ಶಾತವಾಹನ ವಿವಿ ವಿವಾದ: ಬಲಪಂಥೀಯರಿಂದ ದಲಿತ ಪ್ರಾಧ್ಯಾಪಕಿ ಮತ್ತು ವಿದ್ಯಾರ್ಥಿಗೆ ‘ನಗರ ನಕ್ಸಲರು’ ಎಂಬ ಹಣೆಪಟ್ಟಿಯಲ್ಲಿ ನಿರಂತರ ಕಿರುಕುಳ

ತೆಲಂಗಾಣದ ಶಾತವಾಹನ ವಿಶ್ವವಿದ್ಯಾಲಯದಲ್ಲಿ ದಲಿತ ಮಹಿಳಾ ಪ್ರಾಧ್ಯಾಪಕಿ ಮತ್ತು ದಲಿತ ವಿದ್ಯಾರ್ಥಿನಿಯನ್ನು "ನಗರ ನಕ್ಸಲರು" ಎಂದು ಹಣೆಪಟ್ಟಿ ಕಟ್ಟಿ ನಿರಂತರ ಕಿರುಕುಳ ನೀಡಿದ ನಂತರ ವಿವಾದ ಭುಗಿಲೆದ್ದಿದ್ದು, ಇದಕ್ಕೆ ಶಿಕ್ಷಣ ತಜ್ಞರು ಮತ್ತು...

ಕೇಂದ್ರದ ಹೊಸ ಕಾಯ್ದೆಯಿಂದ ಸಂಕಷ್ಟ : ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಹಾರ್ಮೋನ್ ಚಿಕಿತ್ಸೆ ಮುಂದುವರಿಸಲು ಕೇರಳ ಹೈಕೋರ್ಟ್ ಅನುಮತಿ

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026 ಅಂಗೀಕಾರಗೊಂಡ ನಂತರ ಆಸ್ಪತ್ರೆಗಳು ತಮ್ಮ ಚಿಕಿತ್ಸೆಯನ್ನು ಸ್ಥಗಿತಗೊಳಿಸಿವೆ ಎಂದು ಆರೋಪಿಸಿದ್ದ ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಹಾರ್ಮೋನ್ ಬದಲಿ ಚಿಕಿತ್ಸೆಯನ್ನು ಮುಂದುವರಿಸಲು ಕೇರಳ ಹೈಕೋರ್ಟ್...