Homeಕರ್ನಾಟಕಜು.2ಕ್ಕೆ ನಾಡಕಚೇರಿ ಎದುರು ದೇವನಹಳ್ಳಿ ರೈತರ ಉಪವಾಸ: ಬೆಂಗಳೂರಿನಲ್ಲಿ ಪ್ರಕಾಶ್ ರಾಜ್ ಬೆಂಬಲಿಸಿ ಉಪವಾಸ –...

ಜು.2ಕ್ಕೆ ನಾಡಕಚೇರಿ ಎದುರು ದೇವನಹಳ್ಳಿ ರೈತರ ಉಪವಾಸ: ಬೆಂಗಳೂರಿನಲ್ಲಿ ಪ್ರಕಾಶ್ ರಾಜ್ ಬೆಂಬಲಿಸಿ ಉಪವಾಸ – ವಿಡಿಯೋ

- Advertisement -
- Advertisement -

ಬೆಂಗಳೂರು: ದೇವನಹಳ್ಳಿಯ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ, ಚನ್ನರಾಯಪಟ್ಟಣದ ರೈತರು ಹಾಗೂ ಸಂಯುಕ್ತ ಹೋರಾಟ-ಕರ್ನಾಟಕ ಮತ್ತು ಸಮಾನ ಮನಸ್ಕ ಸಂಘಟನೆಗಳು ಜಂಟಿಯಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ತಮ್ಮ ನಿರಂತರ ಹೋರಾಟ ನಿರ್ಣಾಯಕ ಹಂತ ತಲುಪಿದೆ ಎಂದು ಘೋಷಿಸಿವೆ. ಜುಲೈ 4ರಂದು ಸರ್ಕಾರ ರೈತ ಮುಖಂಡರು ಮತ್ತು ಹೋರಾಟಗಾರರೊಂದಿಗೆ ಕರೆದಿರುವ ಸಭೆಯು 1190 ದಿನಗಳ ಹೋರಾಟಕ್ಕೆ ಮಹತ್ವದ ತಿರುವು ನೀಡಲಿದೆ ಎಂದು ಸಮಿತಿ ಹೇಳಿದೆ.

ಜುಲೈ 2ರಂದು ದೇವನಹಳ್ಳಿಯಲ್ಲಿ ರೈತರಿಂದ, ಬೆಂಗಳೂರಿನಲ್ಲಿ ಗಣ್ಯರಿಂದ ಉಪವಾಸ ಸತ್ಯಾಗ್ರಹ

ಪ್ರಕಟಣೆಯ ಪ್ರಕಾರ, ಜುಲೈ 2ರಂದು (ಗುರುವಾರ) ಎರಡು ಪ್ರಮುಖ ಪ್ರತಿಭಟನೆಗಳು ನಡೆಯಲಿವೆ. ಚನ್ನರಾಯಪಟ್ಟಣದ 13 ಹಳ್ಳಿಗಳ ಸಂತ್ರಸ್ತ ರೈತರು “ನಮ್ಮ ಬದುಕು ಈ ಮಣ್ಣಿನಲ್ಲಿದೆ, ಈ ಮಣ್ಣಿನ ಮಕ್ಕಳ ಭವಿಷ್ಯ ನಿಮ್ಮ ಕೈಯಲ್ಲಿದೆ” ಎಂಬ ಘೋಷವಾಕ್ಯದೊಂದಿಗೆ ದೇವನಹಳ್ಳಿಯ ನಾಡ ಕಚೇರಿ ಮುಂಭಾಗದಲ್ಲಿರುವ ಧರಣಿ ಸ್ಥಳದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ರೈತರ ಈ ಹೋರಾಟಕ್ಕೆ ನೈತಿಕ ಬೆಂಬಲ ತುಂಬಲು ಹಿರಿಯ ಗಾಂಧಿವಾದಿ ಸಂತೋಷ್ ಕೌಲಗಿಯವರು ಕೂಡ ಉಪವಾಸದಲ್ಲಿ ಪಾಲ್ಗೊಳ್ಳಲಿದ್ದಾರೆ.

ಅದೇ ದಿನ, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಯುತ್ತಿರುವ ‘ಭೂಮಿ ಸತ್ಯಾಗ್ರಹ’ದಲ್ಲಿ ಖ್ಯಾತ ನಟ ಪ್ರಕಾಶ್ ರೈ ಆದಿಯಾಗಿ ನಾಡಿನ ಅನೇಕ ಸಂವೇದನಾಶೀಲ ಕಲಾವಿದರು, ರಂಗಕರ್ಮಿಗಳು ಉಪವಾಸ ನಿರತ ರೈತರನ್ನು ಬೆಂಬಲಿಸಿ ‘ಬೆಂಬಲ ಉಪವಾಸ ಸತ್ಯಾಗ್ರಹ’ ಕೂರಲಿದ್ದಾರೆ.

ಸಾಹಿತಿಗಳು, ಕಲಾವಿದರು, ಚಿಂತಕರಿಂದ ಕ್ಯಾಬಿನೆಟ್‌ಗೆ ಆಗ್ರಹ

ದೇವನಹಳ್ಳಿ ರೈತ ಹೋರಾಟದ ಪರವಾಗಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಯುತ್ತಿರುವ ‘ಭೂಮಿ ಸತ್ಯಾಗ್ರಹ’ ಇಂದು 5ನೇ ದಿನಕ್ಕೆ ಕಾಲಿಟ್ಟಿದ್ದು, ಹಲವು ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ. ಡಾ. ಜಿ. ರಾಮಕೃಷ್ಣ, ಜಾಣಗೆರೆ ವೆಂಕಟರಾಮಯ್ಯ, ಡಾ. ಬಂಜಗೆರೆ ಜಯಪ್ರಕಾಶ್, ಇಂದೂಧರ ಹೊನ್ನಾಪುರ, ಆರ್.ಜಿ. ಹಳ್ಳಿ ನಾಗರಾಜ್ ಮೊದಲಾದ ಹಲವು ಸಾಹಿತಿಗಳು, ಚಿಂತಕರು ಮತ್ತು ಬರಹಗಾರರು ಮುಖ್ಯಮಂತ್ರಿಗಳು ಹಾಗೂ ಕ್ಯಾಬಿನೆಟ್‌ನ ಎಲ್ಲ ಸಚಿವರಿಗೆ ಜಂಟಿಯಾಗಿ ಆಗ್ರಹಿಸಿದ್ದಾರೆ. ಜುಲೈ 2ರಂದು ನಡೆಯುವ ಕ್ಯಾಬಿನೆಟ್ ವಿಶೇಷ ಸಭೆಯಲ್ಲಿ ದೇವನಹಳ್ಳಿಯ ಚನ್ನರಾಯಪಟ್ಟಣದ 13 ಹಳ್ಳಿಗಳ 1777 ಎಕರೆ ಜಮೀನನ್ನು ಭೂಸ್ವಾಧೀನ ಮಾಡುವ ಪ್ರಕ್ರಿಯೆಯನ್ನು ಸಂಪೂರ್ಣ ರದ್ದುಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಹಿರಿಯ ಭಾಷಾ ಹೋರಾಟಗಾರರೂ, ಪತ್ರಕರ್ತರೂ ಆದ ಜಾಣಗೆರೆ ವೆಂಕಟರಾಮಯ್ಯ ಅವರು ಮಾತನಾಡಿ, “ಜುಲೈ 2ರಂದು ಕ್ಯಾಬಿನೆಟ್ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಕ್ಯಾಬಿನೆಟ್‌ನ ಎಲ್ಲ ಸಚಿವರೂ ರೈತರ ಪರವಾದ ನಿರ್ಣಯಕ್ಕೆ ಬರಲೇಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒಳಗೊಂಡಂತೆ, ಕ್ಯಾಬಿನೆಟ್‌ನ ಎಲ್ಲ ಸಚಿವರೂ ಚಳವಳಿಗಳ ಮಹತ್ವವೇನು ಎಂಬುದನ್ನು ಅರಿತವರೇ ಆಗಿದ್ದಾರೆ. ಒಂದು ವೇಳೆ ಸರ್ಕಾರದ ನಿರ್ಧಾರ ರೈತರ ವಿರುದ್ಧ ಬಂದರೆ, ಈ ಚಳವಳಿ ಇನ್ನಷ್ಟು ತೀವ್ರವಾಗಿ ಮುಂದುವರೆಯಲಿದೆ. ರೈತರ ಈ ಹೋರಾಟಕ್ಕೆ ಕರ್ನಾಟಕದ ಸಾಹಿತಿಗಳು, ಬರಹಗಾರರು, ಚಿಂತಕರು ಮತ್ತು ಕಲಾವಿದರ ಸಂಪೂರ್ಣ ಬೆಂಬಲವಿದೆ” ಎಂದು ಹೇಳಿದರು.

ಜುಲೈ 3ರಂದು ಸಂಯುಕ್ತ ಕಿಸಾನ್ ಮೋರ್ಚಾದ ರಾಷ್ಟ್ರೀಯ ನಾಯಕರಾದ ರಾಕೇಶ್ ಟಿಕಾಯತ್, ದರ್ಶನ್ ಪಾಲ್ ಆಗಮನ

ಸಂಯುಕ್ತ ಹೋರಾಟ ಕರ್ನಾಟಕ ಮತ್ತು ಸಮಾನ ಮನಸ್ಕ ಸಂಘಟನೆಗಳ ಪರವಾಗಿ ಬಡಗಲಪುರ ನಾಗೇಂದ್ರ, ಯಶವಂತ್, ನೂರ್ ಶ್ರೀಧರ್, ವರಲಕ್ಷ್ಮಿ ಮೊದಲಾದವರು ಮಾತನಾಡಿ, “ಜುಲೈ 2 ರಿಂದ ಫ್ರೀಡಂ ಪಾರ್ಕ್ ನಿರಂತರ ಚಟುವಟಿಕೆಯ ತಾಣವಾಗಲಿದೆ. ಜುಲೈ 3ರಂದು ದೆಹಲಿಯ ರೈತ ಆಂದೋಲನವನ್ನು ಯಶಸ್ವಿಯಾಗಿ ಮುನ್ನಡೆಸಿದ ಸಂಯುಕ್ತ ಕಿಸಾನ್ ಮೋರ್ಚಾದ ಹಿರಿಯ ರೈತ ನಾಯಕರಾದ ರಾಕೇಶ್ ಟಿಕಾಯತ್, ದರ್ಶನ್ ಪಾಲ್ ಮೊದಲಾದವರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಅವರು ದೇವನಹಳ್ಳಿಗೂ ಭೇಟಿ ನೀಡಿ, ಹಳ್ಳಿಗಳಿಗೆ ತೆರಳಿ ರೈತರಿಗೆ ಭರವಸೆ ತುಂಬಲಿದ್ದಾರೆ” ಎಂದು ಮಾಹಿತಿ ನೀಡಿದರು.

ರೈತರ ಸಭೆ ಬಹಿಷ್ಕರಿಸಿದ ಬಿಜೆಪಿ ಸಂಸದರ ನಡೆಗೆ ಖಂಡನೆ; ಪ್ರಕಾಶ್ ರಾಜ್‌ರಿಂದ ಮಲ್ಲಿಕಾರ್ಜುನ ಖರ್ಗೆ ಭೇಟಿ

ಇದೇ ವೇಳೆ, ದೆಹಲಿಯಲ್ಲಿ ಇಂದು ಭೂಸ್ವಾಧೀನದ ಕುರಿತ ಜಂಟಿ ಸಂಸದೀಯ ಸಭೆಗೆ ಆಹ್ವಾನದ ಮೇರೆಗೆ ರೈತರ ಈ ಭೂಸ್ವಾಧೀನ ವಿಷಯ ಕುರಿತು ಮಾತನಾಡಲು ತೆರಳಿದ್ದ ಮೇಧಾ ಪಾಟ್ಕರ್ ಮತ್ತು ಪ್ರಕಾಶ್ ರೈ ಅವರನ್ನು ಕಂಡ ನಂತರ ಸಭೆಯನ್ನು ಬಹಿಷ್ಕರಿಸಿ ತೆರಳಿದ ಬಿಜೆಪಿ ಸಂಸದರ ವರ್ತನೆಯನ್ನು ಹೋರಾಟ ಸಮಿತಿ ತೀವ್ರವಾಗಿ ಖಂಡಿಸಿತು. ಅಲ್ಲದೆ, ಕೋರಂ ಇದ್ದರೂ ಸಭೆ ನಡೆಸದೆ ರೈತರ ವಿರುದ್ಧವಾದ ನಿಲುವು ತಾಳಿದ ಸಂಸದೀಯ ಸಮಿತಿಯ ಸಂಚಾಲಕರ ನಡೆಯನ್ನೂ ಖಂಡಿಸಲಾಯಿತು. ಈ ಘಟನೆಗಳ ನಂತರ, ಪ್ರಕಾಶ್ ರೈ ಅವರು ವಿರೋಧ ಪಕ್ಷದ ನಾಯಕರೂ, ಎಐಸಿಸಿ ಅಧ್ಯಕ್ಷರೂ ಆದ ಕರ್ನಾಟಕದ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ಅವರಿಗೆ ವಿಚಾರ ತಿಳಿಸಿದ್ದಾರೆ. ಅಲ್ಲದೆ, ರೈತರ ಹೋರಾಟಕ್ಕೆ ಬೆಂಬಲಿಸಿ ರಾಜ್ಯಕ್ಕೆ ಬಂದು ಹೋರಾಟ ನಿರತರನ್ನು ಭೇಟಿಯಾಗುವಂತೆ ಮನವಿ ಮಾಡಿದ್ದಾರೆ ಎಂಬ ಮಾಹಿತಿಯನ್ನೂ ಸಮಿತಿ ನೀಡಿತು.

ಜುಲೈ 4ರಂದು “ನಾಡ ಉಳಿಸಿ ಸಮಾವೇಶ”

ಜುಲೈ 4ರಂದು ಮುಖ್ಯಮಂತ್ರಿಗಳು ರೈತರು ಮತ್ತು ಹೋರಾಟಗಾರರೊಂದಿಗೆ ಕರೆದಿರುವ ಸಭೆಯ ವೇಳೆ, ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿ ಬೃಹತ್ “ನಾಡ ಉಳಿಸಿ ಸಮಾವೇಶ” ನಡೆಯಲಿದೆ. ಇದರಲ್ಲಿ ನಾಡಿನ ಎಲ್ಲ ಭಾಗಗಳಿಂದ ಸಂಘಟನೆಗಳ ಕಾರ್ಯಕರ್ತರು, ಪ್ರಜಾಪ್ರಭುತ್ವದ ಪರ ಇರುವ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಮಿತಿ ಮಾಹಿತಿ ನೀಡಿದೆ. “ದೇವನಹಳ್ಳಿ ಹೋರಾಟ ಕೇವಲ ಸ್ಥಳೀಯ ಸಮಸ್ಯೆಯಲ್ಲ, ಇದು ರಾಜ್ಯದ ರೈತರ ಅಸ್ಮಿತೆ ಮತ್ತು ಕೃಷಿ ಸಂಸ್ಕೃತಿಯ ರಕ್ಷಣೆಯ ಹೋರಾಟ” ಎಂದು ಸಮಿತಿ ಮುಖಂಡರು ಪುನರುಚ್ಚರಿಸಿದರು.

ಸಭೆಯಲ್ಲಿ ಡಾ. ಜಿ. ರಾಮಕೃಷ್ಣ, ಜಾಣಗೆರೆ ವೆಂಕಟರಾಮಯ್ಯ, ಡಾ. ಬಂಜಗೆರೆ ಜಯಪ್ರಕಾಶ್, ಇಂದೂಧರ ಹೊನ್ನಾಪುರ, ಆರ್.ಜಿ. ಹಳ್ಳಿ ನಾಗರಾಜ್, ಗುರುಪ್ರಸಾದ್ ಕೆರಗೋಡು, ವಿ. ನಾಗರಾಜ್, ಜೆ.ಎಂ. ವೀರಸಂಗಯ್ಯ, ಚುಕ್ಕಿ ನಂಜುಂಡಸ್ವಾಮಿ, ಮೀನಾಕ್ಷಿ ಸುಂದರಂ, ಲಕ್ಷ್ಮಿ, ದೇವಿ, ಶ್ರೀನಿವಾಸ್ ಕಾರಹಳ್ಳಿ, ಡಿ.ಎಚ್. ಪೂಜಾರ್, ಪ್ರಭಾ ಬೆಳವಂಗಲ, ಕೆ.ವಿ. ಭಟ್, ಮಲ್ಲಿಗೆ ಸಿರಿಮನೆ, ನಾಗರಾಜ್ ಪೂಜಾರ್, ಶ್ರೀಮತಿ ವೀರಸಂಗಯ್ಯ ಮೊದಲಾದವರು ಇದ್ದರು.

ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟ:  ಜು.2ಕ್ಕೆ ಸಂತ್ರಸ್ತ ರೈತರಿಂದ  ಉಪವಾಸ ಸತ್ಯಾಗ್ರಹ-ವೀಡಿಯೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...