Homeಕರ್ನಾಟಕಜು.2ಕ್ಕೆ ನಾಡಕಚೇರಿ ಎದುರು ದೇವನಹಳ್ಳಿ ರೈತರ ಉಪವಾಸ: ಬೆಂಗಳೂರಿನಲ್ಲಿ ಪ್ರಕಾಶ್ ರಾಜ್ ಬೆಂಬಲಿಸಿ ಉಪವಾಸ –...

ಜು.2ಕ್ಕೆ ನಾಡಕಚೇರಿ ಎದುರು ದೇವನಹಳ್ಳಿ ರೈತರ ಉಪವಾಸ: ಬೆಂಗಳೂರಿನಲ್ಲಿ ಪ್ರಕಾಶ್ ರಾಜ್ ಬೆಂಬಲಿಸಿ ಉಪವಾಸ – ವಿಡಿಯೋ

- Advertisement -
- Advertisement -

ಬೆಂಗಳೂರು: ದೇವನಹಳ್ಳಿಯ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ, ಚನ್ನರಾಯಪಟ್ಟಣದ ರೈತರು ಹಾಗೂ ಸಂಯುಕ್ತ ಹೋರಾಟ-ಕರ್ನಾಟಕ ಮತ್ತು ಸಮಾನ ಮನಸ್ಕ ಸಂಘಟನೆಗಳು ಜಂಟಿಯಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ತಮ್ಮ ನಿರಂತರ ಹೋರಾಟ ನಿರ್ಣಾಯಕ ಹಂತ ತಲುಪಿದೆ ಎಂದು ಘೋಷಿಸಿವೆ. ಜುಲೈ 4ರಂದು ಸರ್ಕಾರ ರೈತ ಮುಖಂಡರು ಮತ್ತು ಹೋರಾಟಗಾರರೊಂದಿಗೆ ಕರೆದಿರುವ ಸಭೆಯು 1190 ದಿನಗಳ ಹೋರಾಟಕ್ಕೆ ಮಹತ್ವದ ತಿರುವು ನೀಡಲಿದೆ ಎಂದು ಸಮಿತಿ ಹೇಳಿದೆ.

ಜುಲೈ 2ರಂದು ದೇವನಹಳ್ಳಿಯಲ್ಲಿ ರೈತರಿಂದ, ಬೆಂಗಳೂರಿನಲ್ಲಿ ಗಣ್ಯರಿಂದ ಉಪವಾಸ ಸತ್ಯಾಗ್ರಹ

ಪ್ರಕಟಣೆಯ ಪ್ರಕಾರ, ಜುಲೈ 2ರಂದು (ಗುರುವಾರ) ಎರಡು ಪ್ರಮುಖ ಪ್ರತಿಭಟನೆಗಳು ನಡೆಯಲಿವೆ. ಚನ್ನರಾಯಪಟ್ಟಣದ 13 ಹಳ್ಳಿಗಳ ಸಂತ್ರಸ್ತ ರೈತರು “ನಮ್ಮ ಬದುಕು ಈ ಮಣ್ಣಿನಲ್ಲಿದೆ, ಈ ಮಣ್ಣಿನ ಮಕ್ಕಳ ಭವಿಷ್ಯ ನಿಮ್ಮ ಕೈಯಲ್ಲಿದೆ” ಎಂಬ ಘೋಷವಾಕ್ಯದೊಂದಿಗೆ ದೇವನಹಳ್ಳಿಯ ನಾಡ ಕಚೇರಿ ಮುಂಭಾಗದಲ್ಲಿರುವ ಧರಣಿ ಸ್ಥಳದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ರೈತರ ಈ ಹೋರಾಟಕ್ಕೆ ನೈತಿಕ ಬೆಂಬಲ ತುಂಬಲು ಹಿರಿಯ ಗಾಂಧಿವಾದಿ ಸಂತೋಷ್ ಕೌಲಗಿಯವರು ಕೂಡ ಉಪವಾಸದಲ್ಲಿ ಪಾಲ್ಗೊಳ್ಳಲಿದ್ದಾರೆ.

ಅದೇ ದಿನ, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಯುತ್ತಿರುವ ‘ಭೂಮಿ ಸತ್ಯಾಗ್ರಹ’ದಲ್ಲಿ ಖ್ಯಾತ ನಟ ಪ್ರಕಾಶ್ ರೈ ಆದಿಯಾಗಿ ನಾಡಿನ ಅನೇಕ ಸಂವೇದನಾಶೀಲ ಕಲಾವಿದರು, ರಂಗಕರ್ಮಿಗಳು ಉಪವಾಸ ನಿರತ ರೈತರನ್ನು ಬೆಂಬಲಿಸಿ ‘ಬೆಂಬಲ ಉಪವಾಸ ಸತ್ಯಾಗ್ರಹ’ ಕೂರಲಿದ್ದಾರೆ.

ಸಾಹಿತಿಗಳು, ಕಲಾವಿದರು, ಚಿಂತಕರಿಂದ ಕ್ಯಾಬಿನೆಟ್‌ಗೆ ಆಗ್ರಹ

ದೇವನಹಳ್ಳಿ ರೈತ ಹೋರಾಟದ ಪರವಾಗಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಯುತ್ತಿರುವ ‘ಭೂಮಿ ಸತ್ಯಾಗ್ರಹ’ ಇಂದು 5ನೇ ದಿನಕ್ಕೆ ಕಾಲಿಟ್ಟಿದ್ದು, ಹಲವು ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ. ಡಾ. ಜಿ. ರಾಮಕೃಷ್ಣ, ಜಾಣಗೆರೆ ವೆಂಕಟರಾಮಯ್ಯ, ಡಾ. ಬಂಜಗೆರೆ ಜಯಪ್ರಕಾಶ್, ಇಂದೂಧರ ಹೊನ್ನಾಪುರ, ಆರ್.ಜಿ. ಹಳ್ಳಿ ನಾಗರಾಜ್ ಮೊದಲಾದ ಹಲವು ಸಾಹಿತಿಗಳು, ಚಿಂತಕರು ಮತ್ತು ಬರಹಗಾರರು ಮುಖ್ಯಮಂತ್ರಿಗಳು ಹಾಗೂ ಕ್ಯಾಬಿನೆಟ್‌ನ ಎಲ್ಲ ಸಚಿವರಿಗೆ ಜಂಟಿಯಾಗಿ ಆಗ್ರಹಿಸಿದ್ದಾರೆ. ಜುಲೈ 2ರಂದು ನಡೆಯುವ ಕ್ಯಾಬಿನೆಟ್ ವಿಶೇಷ ಸಭೆಯಲ್ಲಿ ದೇವನಹಳ್ಳಿಯ ಚನ್ನರಾಯಪಟ್ಟಣದ 13 ಹಳ್ಳಿಗಳ 1777 ಎಕರೆ ಜಮೀನನ್ನು ಭೂಸ್ವಾಧೀನ ಮಾಡುವ ಪ್ರಕ್ರಿಯೆಯನ್ನು ಸಂಪೂರ್ಣ ರದ್ದುಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಹಿರಿಯ ಭಾಷಾ ಹೋರಾಟಗಾರರೂ, ಪತ್ರಕರ್ತರೂ ಆದ ಜಾಣಗೆರೆ ವೆಂಕಟರಾಮಯ್ಯ ಅವರು ಮಾತನಾಡಿ, “ಜುಲೈ 2ರಂದು ಕ್ಯಾಬಿನೆಟ್ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಕ್ಯಾಬಿನೆಟ್‌ನ ಎಲ್ಲ ಸಚಿವರೂ ರೈತರ ಪರವಾದ ನಿರ್ಣಯಕ್ಕೆ ಬರಲೇಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒಳಗೊಂಡಂತೆ, ಕ್ಯಾಬಿನೆಟ್‌ನ ಎಲ್ಲ ಸಚಿವರೂ ಚಳವಳಿಗಳ ಮಹತ್ವವೇನು ಎಂಬುದನ್ನು ಅರಿತವರೇ ಆಗಿದ್ದಾರೆ. ಒಂದು ವೇಳೆ ಸರ್ಕಾರದ ನಿರ್ಧಾರ ರೈತರ ವಿರುದ್ಧ ಬಂದರೆ, ಈ ಚಳವಳಿ ಇನ್ನಷ್ಟು ತೀವ್ರವಾಗಿ ಮುಂದುವರೆಯಲಿದೆ. ರೈತರ ಈ ಹೋರಾಟಕ್ಕೆ ಕರ್ನಾಟಕದ ಸಾಹಿತಿಗಳು, ಬರಹಗಾರರು, ಚಿಂತಕರು ಮತ್ತು ಕಲಾವಿದರ ಸಂಪೂರ್ಣ ಬೆಂಬಲವಿದೆ” ಎಂದು ಹೇಳಿದರು.

ಜುಲೈ 3ರಂದು ಸಂಯುಕ್ತ ಕಿಸಾನ್ ಮೋರ್ಚಾದ ರಾಷ್ಟ್ರೀಯ ನಾಯಕರಾದ ರಾಕೇಶ್ ಟಿಕಾಯತ್, ದರ್ಶನ್ ಪಾಲ್ ಆಗಮನ

ಸಂಯುಕ್ತ ಹೋರಾಟ ಕರ್ನಾಟಕ ಮತ್ತು ಸಮಾನ ಮನಸ್ಕ ಸಂಘಟನೆಗಳ ಪರವಾಗಿ ಬಡಗಲಪುರ ನಾಗೇಂದ್ರ, ಯಶವಂತ್, ನೂರ್ ಶ್ರೀಧರ್, ವರಲಕ್ಷ್ಮಿ ಮೊದಲಾದವರು ಮಾತನಾಡಿ, “ಜುಲೈ 2 ರಿಂದ ಫ್ರೀಡಂ ಪಾರ್ಕ್ ನಿರಂತರ ಚಟುವಟಿಕೆಯ ತಾಣವಾಗಲಿದೆ. ಜುಲೈ 3ರಂದು ದೆಹಲಿಯ ರೈತ ಆಂದೋಲನವನ್ನು ಯಶಸ್ವಿಯಾಗಿ ಮುನ್ನಡೆಸಿದ ಸಂಯುಕ್ತ ಕಿಸಾನ್ ಮೋರ್ಚಾದ ಹಿರಿಯ ರೈತ ನಾಯಕರಾದ ರಾಕೇಶ್ ಟಿಕಾಯತ್, ದರ್ಶನ್ ಪಾಲ್ ಮೊದಲಾದವರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಅವರು ದೇವನಹಳ್ಳಿಗೂ ಭೇಟಿ ನೀಡಿ, ಹಳ್ಳಿಗಳಿಗೆ ತೆರಳಿ ರೈತರಿಗೆ ಭರವಸೆ ತುಂಬಲಿದ್ದಾರೆ” ಎಂದು ಮಾಹಿತಿ ನೀಡಿದರು.

ರೈತರ ಸಭೆ ಬಹಿಷ್ಕರಿಸಿದ ಬಿಜೆಪಿ ಸಂಸದರ ನಡೆಗೆ ಖಂಡನೆ; ಪ್ರಕಾಶ್ ರಾಜ್‌ರಿಂದ ಮಲ್ಲಿಕಾರ್ಜುನ ಖರ್ಗೆ ಭೇಟಿ

ಇದೇ ವೇಳೆ, ದೆಹಲಿಯಲ್ಲಿ ಇಂದು ಭೂಸ್ವಾಧೀನದ ಕುರಿತ ಜಂಟಿ ಸಂಸದೀಯ ಸಭೆಗೆ ಆಹ್ವಾನದ ಮೇರೆಗೆ ರೈತರ ಈ ಭೂಸ್ವಾಧೀನ ವಿಷಯ ಕುರಿತು ಮಾತನಾಡಲು ತೆರಳಿದ್ದ ಮೇಧಾ ಪಾಟ್ಕರ್ ಮತ್ತು ಪ್ರಕಾಶ್ ರೈ ಅವರನ್ನು ಕಂಡ ನಂತರ ಸಭೆಯನ್ನು ಬಹಿಷ್ಕರಿಸಿ ತೆರಳಿದ ಬಿಜೆಪಿ ಸಂಸದರ ವರ್ತನೆಯನ್ನು ಹೋರಾಟ ಸಮಿತಿ ತೀವ್ರವಾಗಿ ಖಂಡಿಸಿತು. ಅಲ್ಲದೆ, ಕೋರಂ ಇದ್ದರೂ ಸಭೆ ನಡೆಸದೆ ರೈತರ ವಿರುದ್ಧವಾದ ನಿಲುವು ತಾಳಿದ ಸಂಸದೀಯ ಸಮಿತಿಯ ಸಂಚಾಲಕರ ನಡೆಯನ್ನೂ ಖಂಡಿಸಲಾಯಿತು. ಈ ಘಟನೆಗಳ ನಂತರ, ಪ್ರಕಾಶ್ ರೈ ಅವರು ವಿರೋಧ ಪಕ್ಷದ ನಾಯಕರೂ, ಎಐಸಿಸಿ ಅಧ್ಯಕ್ಷರೂ ಆದ ಕರ್ನಾಟಕದ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ಅವರಿಗೆ ವಿಚಾರ ತಿಳಿಸಿದ್ದಾರೆ. ಅಲ್ಲದೆ, ರೈತರ ಹೋರಾಟಕ್ಕೆ ಬೆಂಬಲಿಸಿ ರಾಜ್ಯಕ್ಕೆ ಬಂದು ಹೋರಾಟ ನಿರತರನ್ನು ಭೇಟಿಯಾಗುವಂತೆ ಮನವಿ ಮಾಡಿದ್ದಾರೆ ಎಂಬ ಮಾಹಿತಿಯನ್ನೂ ಸಮಿತಿ ನೀಡಿತು.

ಜುಲೈ 4ರಂದು “ನಾಡ ಉಳಿಸಿ ಸಮಾವೇಶ”

ಜುಲೈ 4ರಂದು ಮುಖ್ಯಮಂತ್ರಿಗಳು ರೈತರು ಮತ್ತು ಹೋರಾಟಗಾರರೊಂದಿಗೆ ಕರೆದಿರುವ ಸಭೆಯ ವೇಳೆ, ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿ ಬೃಹತ್ “ನಾಡ ಉಳಿಸಿ ಸಮಾವೇಶ” ನಡೆಯಲಿದೆ. ಇದರಲ್ಲಿ ನಾಡಿನ ಎಲ್ಲ ಭಾಗಗಳಿಂದ ಸಂಘಟನೆಗಳ ಕಾರ್ಯಕರ್ತರು, ಪ್ರಜಾಪ್ರಭುತ್ವದ ಪರ ಇರುವ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಮಿತಿ ಮಾಹಿತಿ ನೀಡಿದೆ. “ದೇವನಹಳ್ಳಿ ಹೋರಾಟ ಕೇವಲ ಸ್ಥಳೀಯ ಸಮಸ್ಯೆಯಲ್ಲ, ಇದು ರಾಜ್ಯದ ರೈತರ ಅಸ್ಮಿತೆ ಮತ್ತು ಕೃಷಿ ಸಂಸ್ಕೃತಿಯ ರಕ್ಷಣೆಯ ಹೋರಾಟ” ಎಂದು ಸಮಿತಿ ಮುಖಂಡರು ಪುನರುಚ್ಚರಿಸಿದರು.

ಸಭೆಯಲ್ಲಿ ಡಾ. ಜಿ. ರಾಮಕೃಷ್ಣ, ಜಾಣಗೆರೆ ವೆಂಕಟರಾಮಯ್ಯ, ಡಾ. ಬಂಜಗೆರೆ ಜಯಪ್ರಕಾಶ್, ಇಂದೂಧರ ಹೊನ್ನಾಪುರ, ಆರ್.ಜಿ. ಹಳ್ಳಿ ನಾಗರಾಜ್, ಗುರುಪ್ರಸಾದ್ ಕೆರಗೋಡು, ವಿ. ನಾಗರಾಜ್, ಜೆ.ಎಂ. ವೀರಸಂಗಯ್ಯ, ಚುಕ್ಕಿ ನಂಜುಂಡಸ್ವಾಮಿ, ಮೀನಾಕ್ಷಿ ಸುಂದರಂ, ಲಕ್ಷ್ಮಿ, ದೇವಿ, ಶ್ರೀನಿವಾಸ್ ಕಾರಹಳ್ಳಿ, ಡಿ.ಎಚ್. ಪೂಜಾರ್, ಪ್ರಭಾ ಬೆಳವಂಗಲ, ಕೆ.ವಿ. ಭಟ್, ಮಲ್ಲಿಗೆ ಸಿರಿಮನೆ, ನಾಗರಾಜ್ ಪೂಜಾರ್, ಶ್ರೀಮತಿ ವೀರಸಂಗಯ್ಯ ಮೊದಲಾದವರು ಇದ್ದರು.

ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟ:  ಜು.2ಕ್ಕೆ ಸಂತ್ರಸ್ತ ರೈತರಿಂದ  ಉಪವಾಸ ಸತ್ಯಾಗ್ರಹ-ವೀಡಿಯೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...