Homeಕರ್ನಾಟಕದೇವನಹಳ್ಳಿ| 'ಷರತ್ತುಗಳಿಲ್ಲದೆ ಭೂಸ್ವಾಧೀನ ಕೈಬಿಡಿ..'; ಚನ್ನರಾಯಪಟ್ಟಣ ರೈತರ ಆಗ್ರಹ

ದೇವನಹಳ್ಳಿ| ‘ಷರತ್ತುಗಳಿಲ್ಲದೆ ಭೂಸ್ವಾಧೀನ ಕೈಬಿಡಿ..’; ಚನ್ನರಾಯಪಟ್ಟಣ ರೈತರ ಆಗ್ರಹ

- Advertisement -
- Advertisement -

ದೇವನಹಳ್ಳಿಯ 13 ಗ್ರಾಮಗಳ 1,777 ಎಕರೆ ಭೂಸ್ವಾಧೀನ ಪ್ರಕ್ರಿಯೆಗೆ ರೈತರು ಮತ್ತು ಸಂಘಟನೆಗಳ ತೀವ್ರ ಪ್ರತಿರೋಧದ ನಂತರ ಸರ್ಕಾರವು ಜುಲೈ, 15, 2025 ರಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭೂಸ್ವಾಧೀನವನ್ನು ಸಂಪೂರ್ಣವಾಗಿ ಕೈಬಿಡಲಾಗುವುದು, ರೈತರ ಇಚ್ಛೆಯಂತೆ ಕೃಷಿ ಭೂಮಿಯನ್ನಾಗಿ ಮುಂದುವರೆಸಲಾಗುವುದು ಎಂದು ಘೋಷಿಸಿರುವುದರಿಂದ ಯಾವುದೇ ಷರತ್ತುಗಳಿಲ್ಲದೆ ಭೂ ಸ್ವಾಧೀನವನ್ನು ರದ್ದುಪಡಿಸಬೇಕೆಂದು ರೈತರು ಸರ್ಕಾರವನ್ನು ಒತ್ತಾಯಿಸಿದರು

ಚನ್ನರಾಯಪಟ್ಟಣದ ಧರಣಿ ಸ್ಥಳದಲ್ಲಿ ಇಂದು ನಡೆದ ಸಭೆಯಲ್ಲಿ ನೂರಾರು ರೈತರು ಮತ್ತು ಹೋರಾಟಗಾರರು ಭಾಗವಹಿಸಿದ್ದರು.

ಈ ಬಗ್ಗೆ ಕಳೆದ 1339 ದಿನಗಳಿಂದ ನಡೆಯುತ್ತಿರುವ ಧರಣಿ ಸ್ಥಳದಲ್ಲಿ ಸಭೆ ನಡೆಸಿದ ರೈತರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಶಿಫಾರಾಸ್ಸಿನ ಪತ್ರದ ಬಗ್ಗೆ ಚರ್ಚಿಸಿದ್ದು ಶಾಶ್ವತ ವಿಶೇಷ ಕೃಷಿ ವಲಯ ( permanent special agricultural zone ) ಎಂದು ಘೋಷಿಸುವ ಮತ್ತು ಪಹಣಿಯಲ್ಲಿ ದಾಖಲಿಸುವ, ನಿಯಮಗಳನ್ನು ರೂಪಿಸಲು ಸಮಿತಿಯನ್ನು ರಚಿಸಲು ಸಲ್ಲಿಸಿರುವ ಪ್ರಸ್ತಾವನೆಗಳನ್ನು ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯು ತೀವ್ರವಾಗಿ ವಿರೋಧಿಸುತ್ತದೆ ಎಂದರು.

ಸರ್ಕಾರದ ನಿರ್ಧಾರವನ್ನು ಹೋರಾಟ ಸಮಿತಿ ಪ್ರಬಲವಾಗಿ ಖಂಡಿಸುತ್ತದೆ. ಆದ್ದರಿಂದ, ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಘೋಷಿಸಿದ ರೀತಿಯಲ್ಲಿಯೇ ಕೃಷಿ ಭೂಮಿಯನ್ನು ಯಾವುದೇ ಷರತ್ತುಗಳಿಲ್ಲದೆ ರೈತರಿಗೆ ಉಳಿಸಬೇಕೆಂದು ಒತ್ತಾಯಿಸಿದರು.

ಈ‌ ಸಂಧರ್ಭದಲ್ಲಿ ಮಾತನಾಡಿದ ಹೋರಾಟಗಾರ್ತಿ ಪ್ರಭಾ ಬೆಳವಂಗಲ,”ಇದು ರೈತರ ಹಿತರಕ್ಷಣೆಯಲ್ಲ, ಬದಲಿಗೆ ಭೂಮಿ ನೀಡದ ರೈತರ ಮೇಲೆ ಸೇಡು ತೀರಿಸಿಕೊಳ್ಳುವ ತಂತ್ರವಾಗಿದೆ. ‘ಶಾಶ್ವತ ವಿಶೇಷ ಕೃಷಿ ವಲಯ’ದ ಹೆಸರಿನಲ್ಲಿ ರೈತರ ಕೃಷಿ ಭೂಮಿಯ ಮೌಲ್ಯವನ್ನು ಕುಗ್ಗಿಸಿ, ಅವರ ಮೇಲೆ ಒತ್ತಡ ಹೇರಿ ಭೂಮಿಯನ್ನು ಕಸಿಯುವ ಹುನ್ನಾರ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಸಂಚಾಲಕ ಕಾರಳ್ಳಿ ಶ್ರೀನಿವಾಸ್ ಮಾತನಾಡಿ, “ಸರ್ಕಾರವು ಯಾವುದೇ ರೀತಿಯ ನಿರ್ಬಂಧಗಳನ್ನು ಹೇರದೆ, 13 ಗ್ರಾಮಗಳ 1,777 ಎಕರೆ ಭೂಮಿಯನ್ನು ಪ್ರಸ್ತುತ ಇರುವಂತೆ ಕೃಷಿ ವಲಯವನ್ನಾಗಿ ಮುಂದುವರಿಸಿ, ಕೂಡಲೇ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈ ಬಿಡುವ ಅಧಿಕೃತ ಆದೇಶವನ್ನು ಹೊರಡಿಸಬೇಕು” ಎಂದು ಒತ್ತಾಯಿಸಿದರು.

ಹೋರಾಟ ಸಮಿತಿಯ ಮುಖಂಡ ನಲ್ಲಪನಹಳ್ಳಿ ನಂಜಪ್ಪ ಮಾತನಾಡಿ, “ಶಾಶ್ವತ ವಿಶೇಷ ಕೃಷಿ ವಲಯ’ದ ನಿರ್ಧಾರದಿಂದ ಸರ್ಕಾರ ಹಿಂದೆ ಸರಿದು ಅನಗತ್ಯವಾಗಿ ರೈತರಿಗೆ ಹಿಂಸೆ ಮತ್ತು ಕಿರುಕುಳ ನೀಡುವುದನ್ನು ಬಿಟ್ಟು ಕಳೆದ ಮೂರುವರೆ ವರ್ಷಗಳಿಂದ ಅತಂತ್ರವಾಗಿ ಬದುಕುತ್ತಿರುವ ನಮ್ಮಗಳಿಗೆ ಈ ಭೂಸ್ವಾಧೀನವನ್ನು ರದ್ದುಪಡಿಸಿ ನೆಮ್ಮದಿಯಿಂದ ಕೃಷಿ ಚಟುವಟಿಕೆ ನಡೆಸಲು ಅವಕಾಶ ಕಲ್ಪಿಸಬೇಕು” ಎಂದರು.

ರೈತ ಮಹಿಳೆ ವೆಂಕಟಮ್ಮ ಮಾತನಾಡಿ, ಒಂದುವೇಳೆ ಶಾಶ್ವತ ಕೃಷಿ ವಲಯ ಎಂದು ಘೋಷಿಸಿದ್ದೆ ಆದರೆ, ನಾವುಗಳು ತೀವ್ರ ತರವಾದ ಹೋರಾಟಕ್ಕೆ ಮುಂದಾಗುತ್ತೇವೆ ಎಂದು ಎಚ್ಚರಿಸಿದರು.

ಸಭೆಯಲ್ಲಿ ಅಶ್ಥತಪ್ಪ, ತಿಮ್ಮರಾಯಪ್ಪ, ಗೋಪಿನಾಥ್, ವೆಂಕಟರಮಣಪ್ಪ, ದೇವರಾಜು, ಲೋಕೇಶ್, ನಂಜೇಗೌಡ, ಮುನಿರಾಜು, ಮುನಿಷಾಮಪ್ಪ ಮುಕುಂದ, ಶ್ರೀನಿವಾಸ್, ಪ್ರಮೋದ್, ಗೋಪಾಲಗೌಡ, ಕೃಷ್ಣಪ್ಪ, ನಾರಾಯಣಮ್ಮ, ಲಕ್ಷ್ಮಮ್ಮ, ಮಂಜುನಾಥ್, ವೆಂಕಟೇಶ್ ಮುನಿವೆಂಕಟಮ್ಮ, ಪಿಳ್ಳಪ್ಪ, ಕೃಷ್ಣಪ್ಪ, ಸೇರಿದಂತೆ 13 ಹಳ್ಳಿಗಳ ರೈತ ಮುಖಂಡರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...