Homeಕರ್ನಾಟಕದೇವನಹಳ್ಳಿ| 'ಷರತ್ತುಗಳಿಲ್ಲದೆ ಭೂಸ್ವಾಧೀನ ಕೈಬಿಡಿ..'; ಚನ್ನರಾಯಪಟ್ಟಣ ರೈತರ ಆಗ್ರಹ

ದೇವನಹಳ್ಳಿ| ‘ಷರತ್ತುಗಳಿಲ್ಲದೆ ಭೂಸ್ವಾಧೀನ ಕೈಬಿಡಿ..’; ಚನ್ನರಾಯಪಟ್ಟಣ ರೈತರ ಆಗ್ರಹ

- Advertisement -
- Advertisement -

ದೇವನಹಳ್ಳಿಯ 13 ಗ್ರಾಮಗಳ 1,777 ಎಕರೆ ಭೂಸ್ವಾಧೀನ ಪ್ರಕ್ರಿಯೆಗೆ ರೈತರು ಮತ್ತು ಸಂಘಟನೆಗಳ ತೀವ್ರ ಪ್ರತಿರೋಧದ ನಂತರ ಸರ್ಕಾರವು ಜುಲೈ, 15, 2025 ರಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭೂಸ್ವಾಧೀನವನ್ನು ಸಂಪೂರ್ಣವಾಗಿ ಕೈಬಿಡಲಾಗುವುದು, ರೈತರ ಇಚ್ಛೆಯಂತೆ ಕೃಷಿ ಭೂಮಿಯನ್ನಾಗಿ ಮುಂದುವರೆಸಲಾಗುವುದು ಎಂದು ಘೋಷಿಸಿರುವುದರಿಂದ ಯಾವುದೇ ಷರತ್ತುಗಳಿಲ್ಲದೆ ಭೂ ಸ್ವಾಧೀನವನ್ನು ರದ್ದುಪಡಿಸಬೇಕೆಂದು ರೈತರು ಸರ್ಕಾರವನ್ನು ಒತ್ತಾಯಿಸಿದರು

ಚನ್ನರಾಯಪಟ್ಟಣದ ಧರಣಿ ಸ್ಥಳದಲ್ಲಿ ಇಂದು ನಡೆದ ಸಭೆಯಲ್ಲಿ ನೂರಾರು ರೈತರು ಮತ್ತು ಹೋರಾಟಗಾರರು ಭಾಗವಹಿಸಿದ್ದರು.

ಈ ಬಗ್ಗೆ ಕಳೆದ 1339 ದಿನಗಳಿಂದ ನಡೆಯುತ್ತಿರುವ ಧರಣಿ ಸ್ಥಳದಲ್ಲಿ ಸಭೆ ನಡೆಸಿದ ರೈತರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಶಿಫಾರಾಸ್ಸಿನ ಪತ್ರದ ಬಗ್ಗೆ ಚರ್ಚಿಸಿದ್ದು ಶಾಶ್ವತ ವಿಶೇಷ ಕೃಷಿ ವಲಯ ( permanent special agricultural zone ) ಎಂದು ಘೋಷಿಸುವ ಮತ್ತು ಪಹಣಿಯಲ್ಲಿ ದಾಖಲಿಸುವ, ನಿಯಮಗಳನ್ನು ರೂಪಿಸಲು ಸಮಿತಿಯನ್ನು ರಚಿಸಲು ಸಲ್ಲಿಸಿರುವ ಪ್ರಸ್ತಾವನೆಗಳನ್ನು ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯು ತೀವ್ರವಾಗಿ ವಿರೋಧಿಸುತ್ತದೆ ಎಂದರು.

ಸರ್ಕಾರದ ನಿರ್ಧಾರವನ್ನು ಹೋರಾಟ ಸಮಿತಿ ಪ್ರಬಲವಾಗಿ ಖಂಡಿಸುತ್ತದೆ. ಆದ್ದರಿಂದ, ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಘೋಷಿಸಿದ ರೀತಿಯಲ್ಲಿಯೇ ಕೃಷಿ ಭೂಮಿಯನ್ನು ಯಾವುದೇ ಷರತ್ತುಗಳಿಲ್ಲದೆ ರೈತರಿಗೆ ಉಳಿಸಬೇಕೆಂದು ಒತ್ತಾಯಿಸಿದರು.

ಈ‌ ಸಂಧರ್ಭದಲ್ಲಿ ಮಾತನಾಡಿದ ಹೋರಾಟಗಾರ್ತಿ ಪ್ರಭಾ ಬೆಳವಂಗಲ,”ಇದು ರೈತರ ಹಿತರಕ್ಷಣೆಯಲ್ಲ, ಬದಲಿಗೆ ಭೂಮಿ ನೀಡದ ರೈತರ ಮೇಲೆ ಸೇಡು ತೀರಿಸಿಕೊಳ್ಳುವ ತಂತ್ರವಾಗಿದೆ. ‘ಶಾಶ್ವತ ವಿಶೇಷ ಕೃಷಿ ವಲಯ’ದ ಹೆಸರಿನಲ್ಲಿ ರೈತರ ಕೃಷಿ ಭೂಮಿಯ ಮೌಲ್ಯವನ್ನು ಕುಗ್ಗಿಸಿ, ಅವರ ಮೇಲೆ ಒತ್ತಡ ಹೇರಿ ಭೂಮಿಯನ್ನು ಕಸಿಯುವ ಹುನ್ನಾರ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಸಂಚಾಲಕ ಕಾರಳ್ಳಿ ಶ್ರೀನಿವಾಸ್ ಮಾತನಾಡಿ, “ಸರ್ಕಾರವು ಯಾವುದೇ ರೀತಿಯ ನಿರ್ಬಂಧಗಳನ್ನು ಹೇರದೆ, 13 ಗ್ರಾಮಗಳ 1,777 ಎಕರೆ ಭೂಮಿಯನ್ನು ಪ್ರಸ್ತುತ ಇರುವಂತೆ ಕೃಷಿ ವಲಯವನ್ನಾಗಿ ಮುಂದುವರಿಸಿ, ಕೂಡಲೇ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈ ಬಿಡುವ ಅಧಿಕೃತ ಆದೇಶವನ್ನು ಹೊರಡಿಸಬೇಕು” ಎಂದು ಒತ್ತಾಯಿಸಿದರು.

ಹೋರಾಟ ಸಮಿತಿಯ ಮುಖಂಡ ನಲ್ಲಪನಹಳ್ಳಿ ನಂಜಪ್ಪ ಮಾತನಾಡಿ, “ಶಾಶ್ವತ ವಿಶೇಷ ಕೃಷಿ ವಲಯ’ದ ನಿರ್ಧಾರದಿಂದ ಸರ್ಕಾರ ಹಿಂದೆ ಸರಿದು ಅನಗತ್ಯವಾಗಿ ರೈತರಿಗೆ ಹಿಂಸೆ ಮತ್ತು ಕಿರುಕುಳ ನೀಡುವುದನ್ನು ಬಿಟ್ಟು ಕಳೆದ ಮೂರುವರೆ ವರ್ಷಗಳಿಂದ ಅತಂತ್ರವಾಗಿ ಬದುಕುತ್ತಿರುವ ನಮ್ಮಗಳಿಗೆ ಈ ಭೂಸ್ವಾಧೀನವನ್ನು ರದ್ದುಪಡಿಸಿ ನೆಮ್ಮದಿಯಿಂದ ಕೃಷಿ ಚಟುವಟಿಕೆ ನಡೆಸಲು ಅವಕಾಶ ಕಲ್ಪಿಸಬೇಕು” ಎಂದರು.

ರೈತ ಮಹಿಳೆ ವೆಂಕಟಮ್ಮ ಮಾತನಾಡಿ, ಒಂದುವೇಳೆ ಶಾಶ್ವತ ಕೃಷಿ ವಲಯ ಎಂದು ಘೋಷಿಸಿದ್ದೆ ಆದರೆ, ನಾವುಗಳು ತೀವ್ರ ತರವಾದ ಹೋರಾಟಕ್ಕೆ ಮುಂದಾಗುತ್ತೇವೆ ಎಂದು ಎಚ್ಚರಿಸಿದರು.

ಸಭೆಯಲ್ಲಿ ಅಶ್ಥತಪ್ಪ, ತಿಮ್ಮರಾಯಪ್ಪ, ಗೋಪಿನಾಥ್, ವೆಂಕಟರಮಣಪ್ಪ, ದೇವರಾಜು, ಲೋಕೇಶ್, ನಂಜೇಗೌಡ, ಮುನಿರಾಜು, ಮುನಿಷಾಮಪ್ಪ ಮುಕುಂದ, ಶ್ರೀನಿವಾಸ್, ಪ್ರಮೋದ್, ಗೋಪಾಲಗೌಡ, ಕೃಷ್ಣಪ್ಪ, ನಾರಾಯಣಮ್ಮ, ಲಕ್ಷ್ಮಮ್ಮ, ಮಂಜುನಾಥ್, ವೆಂಕಟೇಶ್ ಮುನಿವೆಂಕಟಮ್ಮ, ಪಿಳ್ಳಪ್ಪ, ಕೃಷ್ಣಪ್ಪ, ಸೇರಿದಂತೆ 13 ಹಳ್ಳಿಗಳ ರೈತ ಮುಖಂಡರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...