Homeಮುಖಪುಟದೇವನಹಳ್ಳಿ ಭೂ ಸ್ವಾಧೀನ: ಜು.15ರಂದು ಅಂತಿಮ ನಿರ್ಧಾರ ಪ್ರಕಟಿಸುವ ಭರವಸೆ ನೀಡಿದ ಸರ್ಕಾರ

ದೇವನಹಳ್ಳಿ ಭೂ ಸ್ವಾಧೀನ: ಜು.15ರಂದು ಅಂತಿಮ ನಿರ್ಧಾರ ಪ್ರಕಟಿಸುವ ಭರವಸೆ ನೀಡಿದ ಸರ್ಕಾರ

- Advertisement -
- Advertisement -

ದೇವನಹಳ್ಳಿ ರೈತರ ಭೂ ಸ್ವಾಧೀನ ಸಂಬಂಧ ಜುಲೈ 15ರಂದು ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಕೊಟ್ಟಿದ್ದಾರೆ ಎಂದು ರಾಜ್ಯ ರೈತ ಸಂಘದ ನಾಯಕ ಬಡಗಲಪುರ ನಾಗೇಂದ್ರ ಶುಕ್ರವಾರ (ಜು.4) ತಿಳಿಸಿದರು.

ಫ್ರೀಡಂ ಪಾರ್ಕ್‌ನಲ್ಲಿ ನಡೆದ ‘ನಾಡ ಉಳಿಸಿ ಸಮಾವೇಶ’ದ ವೇದಿಕೆಯಲ್ಲಿ ಮಾತನಾಡಿದ ಅವರು, ವಿಧಾನಸೌಧದಲ್ಲಿ ನಡೆದ ರೈತರು, ಹೋರಾಟಗಾರರ ಜೊತೆಗಿನ ಸರ್ಕಾರದ ಸಭೆಯಲ್ಲಿ ನಡೆದ ಚರ್ಚೆ ಮತ್ತು ಮುಂದಿನ ಹೋರಾಟದ ರೂಪುರೇಷಗಳ ಮಾಹಿತಿ ನೀಡಿದರು.

ಸಿಎಂ 10 ದಿನಗಳ ಕಾಲಾವಕಾಶ ಕೇಳಿದ್ದಾರೆ. ಜುಲೈ 15ರಂದು ಬೆಳಿಗ್ಗೆ 11 ಗಂಟೆಗೆ ಮತ್ತೆ ಸಭೆ ಕರೆದಿದ್ದಾರೆ. ಆಯ್ತು ಸಭೆ ಬರ್ತೀವಿ ಎಂದು ಹೇಳಿದ್ದೇವೆ. ಆದರೆ, ಅಂತಿಮ ತೀರ್ಮಾನ ದೇವನಹಳ್ಳಿಯ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ಭೂ ಸ್ವಾಧೀನವನ್ನು ಕೈ ಬಿಡ್ತೀನಿ ಎಂದಷ್ಟೇ ನೀವು ಹೇಳಬೇಕು ಎಂಬುವುದಾಗಿ ತಿಳಿಸಿ ಬಂದಿದ್ದೇವೆ ಎಂದರು.

ಮುನಿಯಪ್ಪ ಮತ್ತು ಎಂ.ಬಿ ಪಾಟೀಲ್ ಕುತಂತ್ರದಿಂದ ರೈತರ ಭೂಮಿ ಕಬಳಸಲು ಭೂಗಳ್ಳರಾಗಿ ನಿಂತಿದ್ದಾರೆ ಅವರಿಗೆ ಸ್ಪಷ್ಟ ಎಚ್ಚರಿಕೆ ಕೊಟ್ಟಿದ್ದೇವೆ. ಅವರು ಭೂಮಿಯನ್ನು ಕಿತ್ತುಕೊಳ್ಳೂವುದಕ್ಕೆ ಸಾಧ್ಯವಿಲ್ಲ, ನಾವು ಭೂಮಿ ಬಿಟ್ಟುಕೊಡುವ ಪ್ರಶ್ನೆಯೂ ಇಲ್ಲ ಇದಂತೂ ಸ್ಪಷ್ಟ ಎಂದು ಇದೇ ವೇಳೆ ತಿಳಿಸಿದರು.

ನಾವು ಕೈಗಾರಿಕೆ ವಿರೋಧಿಗಳಲ್ಲ. ಆದರೆ, ಬೆಂಗಳೂರು ಸುತ್ತಮುತ್ತಲೇ ಕಾರ್ಖಾನೆಗಳು ಏಕೆ ಬೇಕು? ಅವೈಜ್ಞಾನಿಕವಾದ ಅಭಿವೃದ್ಧಿ ತಂತ್ರವನ್ನು ಕೈ ಬಿಡಿ ಎಂದು ಎಚ್ಚರಿಸಿ ಬಂದಿದ್ದೇವೆ ಎಂದು ಹೇಳಿದರು.

ಭೂ ಸ್ವಾಧೀನ ಹಿಂಪಡೆಯಬೇಕಾದರೆ ಕಾನೂನು ತೊಡಕುಗಳಿವೆ. ಒಮ್ಮತದ ತೀರ್ಮಾನ ಆಗಬೇಕಿದೆ. ಅದಕ್ಕೆ 10 ದಿನಗಳ ಸಮಯ ಬೇಕು ಎಂದು ಸಿಎಂ ಕೇಳಿದ್ದಾರೆ. ಜುಲೈ 15ಕ್ಕೆ ಅಂತಿಮ ತೀರ್ಮಾನ ಪ್ರಕಟಿಸುವುದಾಗಿ ಭರವಸೆ ಕೊಟ್ಟಿದ್ದಾರೆ. ಅವರ ಮಾತು ಕೇಳಿ ಜನಚಳವಳಿಗಳು ಮೈ ಮರೆಯುವುದಿಲ್ಲ. ಮುಂದಿನ ಹೋರಾಟಗಳ ಬಗ್ಗೆ ತೀರ್ಮಾನ ಮಾಡಿದ್ದೇವೆ ಎಂದರು.

ದೇವನಹಳ್ಳಿ ಭೂ ಸ್ವಾಧೀನ| ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...