Homeಮುಖಪುಟದೇವನಹಳ್ಳಿ ಭೂ ಸ್ವಾಧೀನ: ಜು.15ರಂದು ಅಂತಿಮ ನಿರ್ಧಾರ ಪ್ರಕಟಿಸುವ ಭರವಸೆ ನೀಡಿದ ಸರ್ಕಾರ

ದೇವನಹಳ್ಳಿ ಭೂ ಸ್ವಾಧೀನ: ಜು.15ರಂದು ಅಂತಿಮ ನಿರ್ಧಾರ ಪ್ರಕಟಿಸುವ ಭರವಸೆ ನೀಡಿದ ಸರ್ಕಾರ

- Advertisement -
- Advertisement -

ದೇವನಹಳ್ಳಿ ರೈತರ ಭೂ ಸ್ವಾಧೀನ ಸಂಬಂಧ ಜುಲೈ 15ರಂದು ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಕೊಟ್ಟಿದ್ದಾರೆ ಎಂದು ರಾಜ್ಯ ರೈತ ಸಂಘದ ನಾಯಕ ಬಡಗಲಪುರ ನಾಗೇಂದ್ರ ಶುಕ್ರವಾರ (ಜು.4) ತಿಳಿಸಿದರು.

ಫ್ರೀಡಂ ಪಾರ್ಕ್‌ನಲ್ಲಿ ನಡೆದ ‘ನಾಡ ಉಳಿಸಿ ಸಮಾವೇಶ’ದ ವೇದಿಕೆಯಲ್ಲಿ ಮಾತನಾಡಿದ ಅವರು, ವಿಧಾನಸೌಧದಲ್ಲಿ ನಡೆದ ರೈತರು, ಹೋರಾಟಗಾರರ ಜೊತೆಗಿನ ಸರ್ಕಾರದ ಸಭೆಯಲ್ಲಿ ನಡೆದ ಚರ್ಚೆ ಮತ್ತು ಮುಂದಿನ ಹೋರಾಟದ ರೂಪುರೇಷಗಳ ಮಾಹಿತಿ ನೀಡಿದರು.

ಸಿಎಂ 10 ದಿನಗಳ ಕಾಲಾವಕಾಶ ಕೇಳಿದ್ದಾರೆ. ಜುಲೈ 15ರಂದು ಬೆಳಿಗ್ಗೆ 11 ಗಂಟೆಗೆ ಮತ್ತೆ ಸಭೆ ಕರೆದಿದ್ದಾರೆ. ಆಯ್ತು ಸಭೆ ಬರ್ತೀವಿ ಎಂದು ಹೇಳಿದ್ದೇವೆ. ಆದರೆ, ಅಂತಿಮ ತೀರ್ಮಾನ ದೇವನಹಳ್ಳಿಯ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ಭೂ ಸ್ವಾಧೀನವನ್ನು ಕೈ ಬಿಡ್ತೀನಿ ಎಂದಷ್ಟೇ ನೀವು ಹೇಳಬೇಕು ಎಂಬುವುದಾಗಿ ತಿಳಿಸಿ ಬಂದಿದ್ದೇವೆ ಎಂದರು.

ಮುನಿಯಪ್ಪ ಮತ್ತು ಎಂ.ಬಿ ಪಾಟೀಲ್ ಕುತಂತ್ರದಿಂದ ರೈತರ ಭೂಮಿ ಕಬಳಸಲು ಭೂಗಳ್ಳರಾಗಿ ನಿಂತಿದ್ದಾರೆ ಅವರಿಗೆ ಸ್ಪಷ್ಟ ಎಚ್ಚರಿಕೆ ಕೊಟ್ಟಿದ್ದೇವೆ. ಅವರು ಭೂಮಿಯನ್ನು ಕಿತ್ತುಕೊಳ್ಳೂವುದಕ್ಕೆ ಸಾಧ್ಯವಿಲ್ಲ, ನಾವು ಭೂಮಿ ಬಿಟ್ಟುಕೊಡುವ ಪ್ರಶ್ನೆಯೂ ಇಲ್ಲ ಇದಂತೂ ಸ್ಪಷ್ಟ ಎಂದು ಇದೇ ವೇಳೆ ತಿಳಿಸಿದರು.

ನಾವು ಕೈಗಾರಿಕೆ ವಿರೋಧಿಗಳಲ್ಲ. ಆದರೆ, ಬೆಂಗಳೂರು ಸುತ್ತಮುತ್ತಲೇ ಕಾರ್ಖಾನೆಗಳು ಏಕೆ ಬೇಕು? ಅವೈಜ್ಞಾನಿಕವಾದ ಅಭಿವೃದ್ಧಿ ತಂತ್ರವನ್ನು ಕೈ ಬಿಡಿ ಎಂದು ಎಚ್ಚರಿಸಿ ಬಂದಿದ್ದೇವೆ ಎಂದು ಹೇಳಿದರು.

ಭೂ ಸ್ವಾಧೀನ ಹಿಂಪಡೆಯಬೇಕಾದರೆ ಕಾನೂನು ತೊಡಕುಗಳಿವೆ. ಒಮ್ಮತದ ತೀರ್ಮಾನ ಆಗಬೇಕಿದೆ. ಅದಕ್ಕೆ 10 ದಿನಗಳ ಸಮಯ ಬೇಕು ಎಂದು ಸಿಎಂ ಕೇಳಿದ್ದಾರೆ. ಜುಲೈ 15ಕ್ಕೆ ಅಂತಿಮ ತೀರ್ಮಾನ ಪ್ರಕಟಿಸುವುದಾಗಿ ಭರವಸೆ ಕೊಟ್ಟಿದ್ದಾರೆ. ಅವರ ಮಾತು ಕೇಳಿ ಜನಚಳವಳಿಗಳು ಮೈ ಮರೆಯುವುದಿಲ್ಲ. ಮುಂದಿನ ಹೋರಾಟಗಳ ಬಗ್ಗೆ ತೀರ್ಮಾನ ಮಾಡಿದ್ದೇವೆ ಎಂದರು.

ದೇವನಹಳ್ಳಿ ಭೂ ಸ್ವಾಧೀನ| ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...