Homeಕರ್ನಾಟಕದೇವನಹಳ್ಳಿ ಭೂಸ್ವಾಧೀನ ವಿರೋಧಿ ಉಪವಾಸ ಸತ್ಯಾಗ್ರಹ: "ಫ್ಯಾಕ್ಟರಿಗಳಿಂದ ಅನ್ನ ಬೆಳೆಯಲು ಸಾಧ್ಯವೇ?" ನಟ ಕಿಶೋರ್ ಕುಮಾರ್...

ದೇವನಹಳ್ಳಿ ಭೂಸ್ವಾಧೀನ ವಿರೋಧಿ ಉಪವಾಸ ಸತ್ಯಾಗ್ರಹ: “ಫ್ಯಾಕ್ಟರಿಗಳಿಂದ ಅನ್ನ ಬೆಳೆಯಲು ಸಾಧ್ಯವೇ?” ನಟ ಕಿಶೋರ್ ಕುಮಾರ್ ಆಕ್ರೋಶ

- Advertisement -
- Advertisement -

ಬೆಂಗಳೂರು: ಅಭಿವೃದ್ಧಿಯ ಹೆಸರಿನಲ್ಲಿ ದೇವನಹಳ್ಳಿ ಭಾಗದಲ್ಲಿ ನಡೆಯುತ್ತಿರುವ ಭೂಸ್ವಾಧೀನ ಪ್ರಕ್ರಿಯೆಗಳ ವಿರುದ್ಧ ರೈತರ ಆಕ್ರೋಶ ಭುಗಿಲೆದ್ದಿದೆ. ಇಂದು, ಜುಲೈ 2ರಂದು, ರೈತರು ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣದ ನಾಡಕಚೇರಿ ಎದುರು ಬೃಹತ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರೆ, ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೆಲ ಹೋರಾಟಗಾರರು ಸಹ ಉಪವಾಸದಲ್ಲಿ ತೊಡಗಿದ್ದಾರೆ. ಒಂದು ಕಡೆ ನಂದಿಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯುತ್ತಿದ್ದರೆ, ಇನ್ನೊಂದೆಡೆ ತೀವ್ರಗೊಂಡಿರುವ ರೈತರ ಭೂ ವಿರೋಧಿ ಹೋರಾಟವು ಸರ್ಕಾರಕ್ಕೆ ನೇರ ಸವಾಲೊಡ್ಡಿದೆ. ಈ ಹೋರಾಟಕ್ಕೆ ನಟ ಕಿಶೋರ್ ಕುಮಾರ್ ಧ್ವನಿಗೂಡಿಸಿದ್ದು, ರೈತರ ಭವಿಷ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

“ರೈತರು ತಮ್ಮ ಹೊಲ, ಗದ್ದೆಗಳಲ್ಲಿ ಮಾಡುವ ಕೌಶಲ್ಯಪೂರ್ಣ ಕೆಲಸಗಳನ್ನು ಫ್ಯಾಕ್ಟರಿಗಳಿಂದ ಕೊಡಲು ಸಾಧ್ಯವೇ? ಫ್ಯಾಕ್ಟರಿಗಳಿಂದ ಅನ್ನ ಬೆಳೆಯಲು ಸಾಧ್ಯವೇ?” ಎಂದು ಪ್ರಶ್ನಿಸಿರುವ ನಟ ಕಿಶೋರ್, ಆಧುನಿಕ ಕೈಗಾರಿಕೀಕರಣದ ಭ್ರಮೆಯಲ್ಲಿ ರೈತರ ಮೂಲ ಬದುಕು ಕಸಿದುಕೊಳ್ಳಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ದೇವನಹಳ್ಳಿ ರೈತರು ಭೂಸ್ವಾಧೀನದಿಂದಾಗಿ ತಮ್ಮ ಬದುಕಿನ ಮೂಲಾಧಾರವಾದ ಭೂಮಿಯನ್ನು ಕಳೆದುಕೊಂಡು ನಿರುದ್ಯೋಗಿಗಳಾಗುತ್ತಾರೆ ಎಂಬ ಆತಂಕವನ್ನು ನಟ ಕಿಶೋರ್ ಮತ್ತಷ್ಟು ಸ್ಪಷ್ಟಪಡಿಸಿದ್ದಾರೆ. “ಈ ರೈತರನ್ನೆಲ್ಲಾ ನಗರಕ್ಕೆ ವಲಸೆ ಬರುವಂತೆ ಮಾಡುತ್ತಾರೆ. ಇಲ್ಲಿ ಯಾವುದೋ ಒಂದು ಸೆಕ್ಯೂರಿಟಿ ಕೆಲಸ, ಕಸ ಗುಡಿಸುವ ಕೆಲಸವನ್ನು ಅವರು ಮಾಡಬೇಕಾಗುತ್ತದೆ. ಒಟ್ಟಿನಲ್ಲಿ ತನ್ನ ಮನಸ್ಸಿಗೆ ಬೇಕಾದಂತೆ ಸ್ವಾಭಿಮಾನದಿಂದ ಬದುಕಿದ್ದ ರೈತರನ್ನು ನಗರದಲ್ಲಿ ಕೂಲಿ ಕೆಲಸಕ್ಕೆ ಹಚ್ಚಲಾಗುತ್ತದೆ” ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ಹಳ್ಳಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದವರು ಸಹ ಒಂದು ರೀತಿಯ ನೆಮ್ಮದಿಯ ಜೀವನ ನಡೆಸುತ್ತಿದ್ದರು ಎಂಬುದನ್ನು ಸ್ಮರಿಸಿದ ಅವರು, ಭೂಮಿ ಇಲ್ಲದವರು ಸಹ ಹಳ್ಳಿಯಲ್ಲೇ ಕೂಲಿ ಮಾಡುತ್ತಿದ್ದರೂ ಬದುಕು ನೆಮ್ಮದಿಯಿಂದಿತ್ತು ಎಂದಿದ್ದಾರೆ. “ಒಟ್ಟಾರೆ, ರೈತರ ಈಗಿನ ನೆಮ್ಮದಿಯ ಜೀವನವನ್ನು ಕೆಡಿಸಿ, ಸರ್ಕಾರ ಅಥವಾ ಕಾರ್ಪೊರೇಟ್‌ಗಳು ಕೊಟ್ಟ ಸಂಬಳಕ್ಕೆ ಜೀವನಪೂರ್ತಿ ದುಡಿಯಬೇಕಾಗುತ್ತದೆ. ಅಲ್ಲಿಗೆ ಅವರ ಜೀವನ ಮುಗಿದು ಹೋಗುತ್ತದೆ” ಎಂದು ಭೂಸ್ವಾಧೀನದಿಂದ ರೈತರ ಬದುಕಿನ ಮೇಲೆ ಆಗುವ ತೀವ್ರ, ದೀರ್ಘಕಾಲೀನ ಪರಿಣಾಮವನ್ನು ಕಟುವಾಗಿ ವಿವರಿಸಿದ್ದಾರೆ.

ಅಭಿವೃದ್ಧಿಯ ಹೆಸರಿನಲ್ಲಿ ಈಗಾಗಲೇ ರಾಜ್ಯದ ಹಲವು ಕಡೆಗಳಲ್ಲಿ ಭೂ ಕಬಳಿಕೆಯಿಂದಾಗಿ ಸಾವಿರಾರು ರೈತರು ಏನೆಲ್ಲಾ ಅನುಭವಿಸುತ್ತಿದ್ದಾರೆ ಎಂಬುದನ್ನು ಗಮನದಲ್ಲಿಟ್ಟುಕೊಂಡು, “ಮುಖ್ಯವಾಗಿ ನಮ್ಮ ನಾಡಿನ ಜನತೆ ಇದನ್ನು ನಮ್ಮ ಹೋರಾಟ ಎಂದು ತಿಳಿದುಕೊಂಡು, ಅರ್ಥಮಾಡಿಕೊಂಡು ಇಲ್ಲಿಗೆ ಬಂದು ರೈತರನ್ನು, ಇಲ್ಲಿಯ ಹೋರಾಟಗಾರರನ್ನು ಬೆಂಬಲಿಸಬೇಕು” ಎಂದು ನಟ ಕಿಶೋರ್ ಕುಮಾರ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ದೇವನಹಳ್ಳಿ ರೈತರ ಭೂ ವಿರೋಧಿ ಹೋರಾಟದ ಕುರಿತು ನಾಡಿನೆಲ್ಲೆಡೆ ಸಾಕಷ್ಟು ಚರ್ಚೆ ನಡೆಯುತ್ತಿದ್ದು, ರಾಜ್ಯದಲ್ಲಿ ಇದು ಒಂದು ಪ್ರಮುಖ ವಿಷಯವಾಗಿ ಮಾರ್ಪಟ್ಟಿದೆ. ರೈತರ ಈ ಹೋರಾಟಕ್ಕೆ ನಂದಿಬೆಟ್ಟದಲ್ಲಿ ಸಭೆ ಸೇರಿರುವ ರಾಜ್ಯ ಸರ್ಕಾರ ಯಾವ ರೀತಿ ಸ್ಪಂದಿಸುತ್ತದೆ, ಯಾವ ನಿರ್ಧಾರಗಳನ್ನು ಕೈಗೊಳ್ಳುತ್ತದೆ ಎಂಬುದನ್ನು ಎಲ್ಲರೂ ಕಾದು ನೋಡುತ್ತಿದ್ದಾರೆ.

ಫ್ರೀಡಂ ಪಾರ್ಕ್‌ನಲ್ಲಿ ಹೋರಾಟಗಾರರಾದ ಡಿ.ಎಚ್ ಪೂಜಾರಿ, ಯಶವಂತ, ಎಸ್‌. ವರಲಕ್ಷ್ಮಿ, ದೇವಿ, ಲಕ್ಷ್ಮಣ ಮಂಡಲಗೇರಾ, ಮಲ್ಲಿಗೆ ಸಿರಿಮನೆ ಮತ್ತು ಪ್ರಭಾ ಬೆಳವಂಗಲ ಉಪವಾಸ ಕುಳಿತಿದ್ದಾರೆ. ಉಳಿದವರು ಅವರಿಗೆ ಸಾಥ್ ನೀಡಿದ್ದಾರೆ.

ಆರನೇ ದಿನಕ್ಕೆ ಕಾಲಿಟ್ಟ ‘ಭೂಮಿ ಸತ್ಯಾಗ್ರಹ’: ಫ್ರೀಡಂ ಪಾರ್ಕ್‌, ಚನ್ನರಾಯಪಟ್ಟಣದಲ್ಲಿ ನಿರಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...