Homeಕರ್ನಾಟಕದೇವನಹಳ್ಳಿ ಭೂಸ್ವಾಧೀನ ವಿರೋಧಿ ಉಪವಾಸ ಸತ್ಯಾಗ್ರಹ: "ಫ್ಯಾಕ್ಟರಿಗಳಿಂದ ಅನ್ನ ಬೆಳೆಯಲು ಸಾಧ್ಯವೇ?" ನಟ ಕಿಶೋರ್ ಕುಮಾರ್...

ದೇವನಹಳ್ಳಿ ಭೂಸ್ವಾಧೀನ ವಿರೋಧಿ ಉಪವಾಸ ಸತ್ಯಾಗ್ರಹ: “ಫ್ಯಾಕ್ಟರಿಗಳಿಂದ ಅನ್ನ ಬೆಳೆಯಲು ಸಾಧ್ಯವೇ?” ನಟ ಕಿಶೋರ್ ಕುಮಾರ್ ಆಕ್ರೋಶ

- Advertisement -
- Advertisement -

ಬೆಂಗಳೂರು: ಅಭಿವೃದ್ಧಿಯ ಹೆಸರಿನಲ್ಲಿ ದೇವನಹಳ್ಳಿ ಭಾಗದಲ್ಲಿ ನಡೆಯುತ್ತಿರುವ ಭೂಸ್ವಾಧೀನ ಪ್ರಕ್ರಿಯೆಗಳ ವಿರುದ್ಧ ರೈತರ ಆಕ್ರೋಶ ಭುಗಿಲೆದ್ದಿದೆ. ಇಂದು, ಜುಲೈ 2ರಂದು, ರೈತರು ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣದ ನಾಡಕಚೇರಿ ಎದುರು ಬೃಹತ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರೆ, ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೆಲ ಹೋರಾಟಗಾರರು ಸಹ ಉಪವಾಸದಲ್ಲಿ ತೊಡಗಿದ್ದಾರೆ. ಒಂದು ಕಡೆ ನಂದಿಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯುತ್ತಿದ್ದರೆ, ಇನ್ನೊಂದೆಡೆ ತೀವ್ರಗೊಂಡಿರುವ ರೈತರ ಭೂ ವಿರೋಧಿ ಹೋರಾಟವು ಸರ್ಕಾರಕ್ಕೆ ನೇರ ಸವಾಲೊಡ್ಡಿದೆ. ಈ ಹೋರಾಟಕ್ಕೆ ನಟ ಕಿಶೋರ್ ಕುಮಾರ್ ಧ್ವನಿಗೂಡಿಸಿದ್ದು, ರೈತರ ಭವಿಷ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

“ರೈತರು ತಮ್ಮ ಹೊಲ, ಗದ್ದೆಗಳಲ್ಲಿ ಮಾಡುವ ಕೌಶಲ್ಯಪೂರ್ಣ ಕೆಲಸಗಳನ್ನು ಫ್ಯಾಕ್ಟರಿಗಳಿಂದ ಕೊಡಲು ಸಾಧ್ಯವೇ? ಫ್ಯಾಕ್ಟರಿಗಳಿಂದ ಅನ್ನ ಬೆಳೆಯಲು ಸಾಧ್ಯವೇ?” ಎಂದು ಪ್ರಶ್ನಿಸಿರುವ ನಟ ಕಿಶೋರ್, ಆಧುನಿಕ ಕೈಗಾರಿಕೀಕರಣದ ಭ್ರಮೆಯಲ್ಲಿ ರೈತರ ಮೂಲ ಬದುಕು ಕಸಿದುಕೊಳ್ಳಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ದೇವನಹಳ್ಳಿ ರೈತರು ಭೂಸ್ವಾಧೀನದಿಂದಾಗಿ ತಮ್ಮ ಬದುಕಿನ ಮೂಲಾಧಾರವಾದ ಭೂಮಿಯನ್ನು ಕಳೆದುಕೊಂಡು ನಿರುದ್ಯೋಗಿಗಳಾಗುತ್ತಾರೆ ಎಂಬ ಆತಂಕವನ್ನು ನಟ ಕಿಶೋರ್ ಮತ್ತಷ್ಟು ಸ್ಪಷ್ಟಪಡಿಸಿದ್ದಾರೆ. “ಈ ರೈತರನ್ನೆಲ್ಲಾ ನಗರಕ್ಕೆ ವಲಸೆ ಬರುವಂತೆ ಮಾಡುತ್ತಾರೆ. ಇಲ್ಲಿ ಯಾವುದೋ ಒಂದು ಸೆಕ್ಯೂರಿಟಿ ಕೆಲಸ, ಕಸ ಗುಡಿಸುವ ಕೆಲಸವನ್ನು ಅವರು ಮಾಡಬೇಕಾಗುತ್ತದೆ. ಒಟ್ಟಿನಲ್ಲಿ ತನ್ನ ಮನಸ್ಸಿಗೆ ಬೇಕಾದಂತೆ ಸ್ವಾಭಿಮಾನದಿಂದ ಬದುಕಿದ್ದ ರೈತರನ್ನು ನಗರದಲ್ಲಿ ಕೂಲಿ ಕೆಲಸಕ್ಕೆ ಹಚ್ಚಲಾಗುತ್ತದೆ” ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ಹಳ್ಳಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದವರು ಸಹ ಒಂದು ರೀತಿಯ ನೆಮ್ಮದಿಯ ಜೀವನ ನಡೆಸುತ್ತಿದ್ದರು ಎಂಬುದನ್ನು ಸ್ಮರಿಸಿದ ಅವರು, ಭೂಮಿ ಇಲ್ಲದವರು ಸಹ ಹಳ್ಳಿಯಲ್ಲೇ ಕೂಲಿ ಮಾಡುತ್ತಿದ್ದರೂ ಬದುಕು ನೆಮ್ಮದಿಯಿಂದಿತ್ತು ಎಂದಿದ್ದಾರೆ. “ಒಟ್ಟಾರೆ, ರೈತರ ಈಗಿನ ನೆಮ್ಮದಿಯ ಜೀವನವನ್ನು ಕೆಡಿಸಿ, ಸರ್ಕಾರ ಅಥವಾ ಕಾರ್ಪೊರೇಟ್‌ಗಳು ಕೊಟ್ಟ ಸಂಬಳಕ್ಕೆ ಜೀವನಪೂರ್ತಿ ದುಡಿಯಬೇಕಾಗುತ್ತದೆ. ಅಲ್ಲಿಗೆ ಅವರ ಜೀವನ ಮುಗಿದು ಹೋಗುತ್ತದೆ” ಎಂದು ಭೂಸ್ವಾಧೀನದಿಂದ ರೈತರ ಬದುಕಿನ ಮೇಲೆ ಆಗುವ ತೀವ್ರ, ದೀರ್ಘಕಾಲೀನ ಪರಿಣಾಮವನ್ನು ಕಟುವಾಗಿ ವಿವರಿಸಿದ್ದಾರೆ.

ಅಭಿವೃದ್ಧಿಯ ಹೆಸರಿನಲ್ಲಿ ಈಗಾಗಲೇ ರಾಜ್ಯದ ಹಲವು ಕಡೆಗಳಲ್ಲಿ ಭೂ ಕಬಳಿಕೆಯಿಂದಾಗಿ ಸಾವಿರಾರು ರೈತರು ಏನೆಲ್ಲಾ ಅನುಭವಿಸುತ್ತಿದ್ದಾರೆ ಎಂಬುದನ್ನು ಗಮನದಲ್ಲಿಟ್ಟುಕೊಂಡು, “ಮುಖ್ಯವಾಗಿ ನಮ್ಮ ನಾಡಿನ ಜನತೆ ಇದನ್ನು ನಮ್ಮ ಹೋರಾಟ ಎಂದು ತಿಳಿದುಕೊಂಡು, ಅರ್ಥಮಾಡಿಕೊಂಡು ಇಲ್ಲಿಗೆ ಬಂದು ರೈತರನ್ನು, ಇಲ್ಲಿಯ ಹೋರಾಟಗಾರರನ್ನು ಬೆಂಬಲಿಸಬೇಕು” ಎಂದು ನಟ ಕಿಶೋರ್ ಕುಮಾರ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ದೇವನಹಳ್ಳಿ ರೈತರ ಭೂ ವಿರೋಧಿ ಹೋರಾಟದ ಕುರಿತು ನಾಡಿನೆಲ್ಲೆಡೆ ಸಾಕಷ್ಟು ಚರ್ಚೆ ನಡೆಯುತ್ತಿದ್ದು, ರಾಜ್ಯದಲ್ಲಿ ಇದು ಒಂದು ಪ್ರಮುಖ ವಿಷಯವಾಗಿ ಮಾರ್ಪಟ್ಟಿದೆ. ರೈತರ ಈ ಹೋರಾಟಕ್ಕೆ ನಂದಿಬೆಟ್ಟದಲ್ಲಿ ಸಭೆ ಸೇರಿರುವ ರಾಜ್ಯ ಸರ್ಕಾರ ಯಾವ ರೀತಿ ಸ್ಪಂದಿಸುತ್ತದೆ, ಯಾವ ನಿರ್ಧಾರಗಳನ್ನು ಕೈಗೊಳ್ಳುತ್ತದೆ ಎಂಬುದನ್ನು ಎಲ್ಲರೂ ಕಾದು ನೋಡುತ್ತಿದ್ದಾರೆ.

ಫ್ರೀಡಂ ಪಾರ್ಕ್‌ನಲ್ಲಿ ಹೋರಾಟಗಾರರಾದ ಡಿ.ಎಚ್ ಪೂಜಾರಿ, ಯಶವಂತ, ಎಸ್‌. ವರಲಕ್ಷ್ಮಿ, ದೇವಿ, ಲಕ್ಷ್ಮಣ ಮಂಡಲಗೇರಾ, ಮಲ್ಲಿಗೆ ಸಿರಿಮನೆ ಮತ್ತು ಪ್ರಭಾ ಬೆಳವಂಗಲ ಉಪವಾಸ ಕುಳಿತಿದ್ದಾರೆ. ಉಳಿದವರು ಅವರಿಗೆ ಸಾಥ್ ನೀಡಿದ್ದಾರೆ.

ಆರನೇ ದಿನಕ್ಕೆ ಕಾಲಿಟ್ಟ ‘ಭೂಮಿ ಸತ್ಯಾಗ್ರಹ’: ಫ್ರೀಡಂ ಪಾರ್ಕ್‌, ಚನ್ನರಾಯಪಟ್ಟಣದಲ್ಲಿ ನಿರಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...