Homeಕರ್ನಾಟಕದೇವನಹಳ್ಳಿ ಭೂ ಸ್ವಾಧೀನ: ಇಂದು ಪೂರ್ವಭಾವಿ ಸಭೆ ಕರೆದ ಸಿಎಂ ಸಿದ್ದರಾಮಯ್ಯ , ರಾಜ್ಯಕ್ಕೆ ರಾಷ್ಟ್ರ...

ದೇವನಹಳ್ಳಿ ಭೂ ಸ್ವಾಧೀನ: ಇಂದು ಪೂರ್ವಭಾವಿ ಸಭೆ ಕರೆದ ಸಿಎಂ ಸಿದ್ದರಾಮಯ್ಯ , ರಾಜ್ಯಕ್ಕೆ ರಾಷ್ಟ್ರ ಕಿಸಾನ್ ನಾಯಕರ ಆಗಮನ

- Advertisement -
- Advertisement -

ಬೆಂಗಳೂರು/ದೇವನಹಳ್ಳಿ: ದೇವನಹಳ್ಳಿ ತಾಲ್ಲೂಕಿನ 13 ಗ್ರಾಮಗಳ 1770 ಎಕರೆ ಭೂಮಿಯಲ್ಲಿ, ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ಅಭಿವೃದ್ಧಿಗಾಗಿ ವಶಪಡಿಸಿಕೊಂಡಿದ್ದ ಮೂರು ಗ್ರಾಮಗಳ 450 ಎಕರೆ ಭೂಮಿಯನ್ನು ಕೈಬಿಡುವುದಾಗಿ ಸರ್ಕಾರ ಘೋಷಿಸಿದ್ದರೂ, ರೈತರ ಹೋರಾಟ ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 4ರ ಶುಕ್ರವಾರದಂದು ಹೋರಾಟಗಾರರೊಂದಿಗೆ ಸಂಧಾನ ಸಭೆ ಕರೆದಿದ್ದಾರೆ. ಅದಕ್ಕೂ ಮುನ್ನ, ಜುಲೈ 3ರ ಗುರುವಾರ ಸಂಜೆ 4 ಗಂಟೆಗೆ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಂಬಂಧಿತ ಸಚಿವರು ಹಾಗೂ ಉನ್ನತ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳು ಪೂರ್ವಭಾವಿ ಸಭೆ ನಡೆಸಲಿದ್ದಾರೆ.

ಸಿಎಂ ಕರೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಲಿರುವ ಗಣ್ಯರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಮಹತ್ವದ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾನೂನು ಸಚಿವ ಎಚ್.ಕೆ. ಪಾಟೀಲ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಇಂಧನ ಸಚಿವ ಕೆ.ಜೆ. ಜಾರ್ಜ್, ಕಂದಾಯ ಸಚಿವ ಕೃಷ್ಣಬೈರೇ ಗೌಡ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಕೆಐಎಡಿಬಿ (KIADB) ಸಿಇಒ ಸೇರಿದಂತೆ ಹಲವು ಉನ್ನತ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಸರ್ಕಾರದ ಭರವಸೆಗಳ ನಡುವೆಯೂ ಮುಂದುವರಿದ ಪ್ರತಿಭಟನೆ: ದೇವನಹಳ್ಳಿಯ ಚನ್ನರಾಯಪಟ್ಟಣ, ಮೆಟ್ಟಿಬಾರ್ಲು ಹಾಗೂ ಪ್ರೋತ್ರೀಯ ತಲ್ಲೋಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಕೈಗಾರಿಕಾಭಿವೃದ್ಧಿಗಾಗಿ ಒಟ್ಟು 1700 ಎಕರೆ ಭೂಮಿ ವಶಪಡಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ಇದರಲ್ಲಿ 495 ಎಕರೆ ಭೂಮಿಯನ್ನು ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವುದಾಗಿ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಮತ್ತು ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಈ ಹಿಂದೆ ಘೋಷಿಸಿದ್ದರು. ಅಲ್ಲದೆ, 2013ರ ಭೂಸ್ವಾಧೀನ ಕಾಯ್ದೆ ಅನ್ವಯ ಸೂಕ್ತ ಪರಿಹಾರ ನೀಡಲಾಗುವುದು ಮತ್ತು ಪರಿಹಾರ ಬೇಡವೆಂದವರಿಗೆ ಕೆಐಎಡಿಬಿ ಅಭಿವೃದ್ಧಿಪಡಿಸಿದ 10 ಸಾವಿರ ಚದರ ಅಡಿ ಪರ್ಯಾಯ ಭೂಮಿ ನೀಡುವುದಾಗಿಯೂ ಭರವಸೆ ನೀಡಿದ್ದರು. ಆದರೆ, ಈ ಭರವಸೆಗಳ ಹೊರತಾಗಿಯೂ ರೈತರ ಹೋರಾಟ ಮುಂದುವರಿದಿರುವುದು ಸರ್ಕಾರದ ಆತಂಕಕ್ಕೆ ಕಾರಣವಾಗಿದೆ.

ದೇವನಹಳ್ಳಿ ರೈತರ ಕೂಗು: ಭೂಮಿ, ಬದುಕು ಉಳಿಸುವ ಪ್ರಾಮಾಣಿಕ ಪ್ರತಿರೋಧ

ಇದು ಕೇವಲ ಪರಿಹಾರದ ಹಣಕ್ಕಾಗಿ ನಡೆಯುತ್ತಿರುವ ಪ್ರತಿಭಟನೆಯಲ್ಲ, ಬದಲಾಗಿ ತಮ್ಮ ಭೂಮಿ, ಬದುಕು ಮತ್ತು ಪರಿಸರವನ್ನು ಉಳಿಸಿಕೊಳ್ಳುವ ದೇವನಹಳ್ಳಿ ತಾಲ್ಲೂಕಿನ 13 ಹಳ್ಳಿಗಳ ರೈತ ಕುಟುಂಬಗಳ ಪ್ರಾಮಾಣಿಕ ಪ್ರತಿರೋಧ. ಕಳೆದ 1185 ದಿನಗಳಿಂದ ನಿರಂತರವಾಗಿ ಹೋರಾಡುತ್ತಿರುವ ಈ ರೈತರು, ತಮ್ಮ ಭೂಮಿಯನ್ನು ಬಲವಂತವಾಗಿ ಕಸಿದುಕೊಳ್ಳದಂತೆ ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ. ಭೂಮಿಯಿಲ್ಲದ ಬದುಕು ವಿನಾಶಕ್ಕೆ ಸಮಾನ ಎಂಬುದನ್ನು ತಮ್ಮ ಅನುಭವದಿಂದ ಅರಿತಿರುವ ಈ ರೈತರು ಯಾವ ಕಾರಣಕ್ಕೂ ಭೂಮಿ ಬಿಡುವುದಿಲ್ಲ ಎಂದು ದೃಢ ಸಂಕಲ್ಪ ಮಾಡಿದ್ದಾರೆ.

ನೆಲಕ್ಕಾಗಿ ಒಗ್ಗಟ್ಟಾದ ಕರ್ನಾಟಕ: ದೇವನಹಳ್ಳಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ ಈಗ ಇಡೀ ಕರ್ನಾಟಕದ ಆತ್ಮಸಾಕ್ಷಿಯನ್ನು ಬಡಿದೆಬ್ಬಿಸಿದೆ. ರೈತರ ದನಿಯೊಂದಿಗೆ ಇಂದು ಇಡೀ ನಾಡು ದನಿಗೂಡಿಸಿದೆ.

ಭೂಮಿ ಕಳೆದುಕೊಂಡವರ ಬವಣೆ, ಭೂಮಿ ಉಳಿಸುವವರ ಸಂಕಲ್ಪ: ಈ ಹೋರಾಟಕ್ಕೆ ಸಂಬಂಧಿಸಿದ ವೀಡಿಯೊಗಳು ಈಗಾಗಲೇ ಭೂಮಿ ಕಳೆದುಕೊಂಡು ಬೀದಿಗೆ ಬಂದವರ ಕಷ್ಟಗಳನ್ನು ಮತ್ತು ತಮ್ಮ ನೆಲವನ್ನು ಉಳಿಸಿಕೊಳ್ಳಲು ದೃಢಸಂಕಲ್ಪ ಮಾಡಿರುವವರ ಬದುಕಿನ ಚಿತ್ರಣವನ್ನು ಅನಾವರಣಗೊಳಿಸಿವೆ. ಸಂಪೂರ್ಣ ಸಾಕ್ಷ್ಯಚಿತ್ರವಾಗಿ ಹೊರಬರಲಿರುವ ಈ ಪ್ರಯತ್ನದ ಸಣ್ಣ ಭಾಗವನ್ನು ಈ ಹೋರಾಟದ ಸಂದರ್ಭದಲ್ಲಿ ಸಾರ್ವಜನಿಕರಿಗೆ ವಿಷಯ ತಲುಪಿಸುವ ಉದ್ದೇಶದಿಂದ ಬಿಡುಗಡೆ ಮಾಡಲಾಗಿದೆ.

ಹೋರಾಟಕ್ಕೆ ರಾಷ್ಟ್ರೀಯ ನಾಯಕರ ಬೆಂಬಲ: ಇಂದು ಟಿಕಾಯತ್, ದರ್ಶನ್ ಪಾಲ್ ಆಗಮನ

ದೇವನಹಳ್ಳಿ ರೈತರ ಹೋರಾಟಕ್ಕೆ ರಾಷ್ಟ್ರೀಯ ಮಟ್ಟದ ಬೆಂಬಲ ವ್ಯಕ್ತವಾಗಿದ್ದು, ದೆಹಲಿಯ ಸಂಯುಕ್ತ ಕಿಸಾನ್ ಮೋರ್ಚಾದ ಪ್ರಮುಖ ನಾಯಕರಾದ ರಾಕೇಶ್ ಟಿಕಾಯತ್ ಮತ್ತು ದರ್ಶನ್ ಪಾಲ್ ಅವರು ರಾಜ್ಯಕ್ಕೆ ಆಗಮಿಸಲಿದ್ದಾರೆ. ರೈತ ಹೋರಾಟಗಾರರು ನೀಡಿರುವ ಮಾಹಿತಿ ಪ್ರಕಾರ, ಈ ಇಬ್ಬರು ನಾಯಕರು ಬೆಳಿಗ್ಗೆ ದೇವನಹಳ್ಳಿಯ ಸಂತ್ರಸ್ತ ರೈತರನ್ನು ಭೇಟಿಯಾಗಿ ಅವರ ಸಮಸ್ಯೆಗಳನ್ನು ಆಲಿಸಲಿದ್ದಾರೆ. ನಂತರ, ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿ, ರೈತರ ಆಗ್ರಹಗಳನ್ನು ಸರ್ಕಾರದ ಮುಂದಿಡಲಿದ್ದಾರೆ. ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರೈತರ ಪರವಾಗಿ ಸಂಧಾನ ನಡೆಸುವ ಸಾಧ್ಯತೆ ಇದೆ. ರಾಷ್ಟ್ರೀಯ ನಾಯಕರ ಈ ಭೇಟಿ ರೈತರ ಹೋರಾಟಕ್ಕೆ ಹೊಸ ಆಯಾಮ ನೀಡುವ ನಿರೀಕ್ಷೆಯಿದೆ.

ನಾಡಿನ ನಾಗರಿಕರಿಗೆ ಹೋರಾಟಗಾರರ ಮನವಿ: “ಕನ್ನಡನಾಡಿನ ಜೀವಪರ, ಜನಪರ ಚಿಂತನೆಯ ಬಂಧುಗಳೇ,” ಎಂದು ಸಂಬೋಧಿಸಿರುವ ರೈತ ಹೋರಾಟಗಾರರು, “ದಯವಿಟ್ಟು ನೋಡಿ, ನಿಮ್ಮ ಸ್ನೇಹಿತರ ಬಳಗಕ್ಕೂ ಹಂಚಿ…. ಸರ್ಕಾರ ರೈತರ ಆಗ್ರಹವನ್ನು ಒಪ್ಪಿ, ಬಲವಂತದ ಭೂಸ್ವಾಧೀನವನ್ನು ಕೈಬಿಡಬೇಕೆಂದು ನಿಮಗೆ ಸಾಧ್ಯವಿರುವ ರೀತಿಗಳಲ್ಲಿ ಸರ್ಕಾರವನ್ನು ಒತ್ತಾಯಿಸಿ. ಈ ಹೋರಾಟ ನಾಡಿನ ಆತ್ಮಸಾಕ್ಷಿಯನ್ನು ಬಡಿದೆಬ್ಬಿಸಿದೆ, ಈ ರೈತರಿಗೆ ಗೆಲುವು ಸಿಗಲೇಬೇಕು” ಎಂದು ಮನವಿ ಮಾಡಿದ್ದಾರೆ.

ದೇವನಹಳ್ಳಿ ಏರೋಸ್ಪೇಸ್ ಪಾರ್ಕ್‌ನಂತಹ ಬೃಹತ್ ಯೋಜನೆಗಳು ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದ್ದರೂ, ಸ್ಥಳೀಯ ರೈತರ ಬದುಕು ಮತ್ತು ಭೂಮಿಯ ಹಕ್ಕನ್ನು ಗೌರವಿಸುವುದು ಅತ್ಯಗತ್ಯ ಎಂಬ ಸಂದೇಶ ಈ ಹೋರಾಟದಿಂದ ಹೊರಹೊಮ್ಮಿದೆ. ಸರ್ಕಾರದ ಸಂಧಾನ ಸಭೆಯ ಫಲಿತಾಂಶ ಕುತೂಹಲ ಮೂಡಿಸಿದೆ.

ಸಚಿವ ಸಂಪುಟ ಸಭೆ; ಪತ್ರಿಕಾಗೋಷ್ಠಿಯಲ್ಲಿ ದೇವನಹಳ್ಳಿ ಭೂಸ್ವಾಧೀನ ವಿಚಾರ ಪ್ರಸ್ತಾಪಿಸದ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...