Homeಕರ್ನಾಟಕದೇವನಹಳ್ಳಿ ಭೂ ಸ್ವಾಧೀನ: ಇಂದು ಪೂರ್ವಭಾವಿ ಸಭೆ ಕರೆದ ಸಿಎಂ ಸಿದ್ದರಾಮಯ್ಯ , ರಾಜ್ಯಕ್ಕೆ ರಾಷ್ಟ್ರ...

ದೇವನಹಳ್ಳಿ ಭೂ ಸ್ವಾಧೀನ: ಇಂದು ಪೂರ್ವಭಾವಿ ಸಭೆ ಕರೆದ ಸಿಎಂ ಸಿದ್ದರಾಮಯ್ಯ , ರಾಜ್ಯಕ್ಕೆ ರಾಷ್ಟ್ರ ಕಿಸಾನ್ ನಾಯಕರ ಆಗಮನ

- Advertisement -
- Advertisement -

ಬೆಂಗಳೂರು/ದೇವನಹಳ್ಳಿ: ದೇವನಹಳ್ಳಿ ತಾಲ್ಲೂಕಿನ 13 ಗ್ರಾಮಗಳ 1770 ಎಕರೆ ಭೂಮಿಯಲ್ಲಿ, ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ಅಭಿವೃದ್ಧಿಗಾಗಿ ವಶಪಡಿಸಿಕೊಂಡಿದ್ದ ಮೂರು ಗ್ರಾಮಗಳ 450 ಎಕರೆ ಭೂಮಿಯನ್ನು ಕೈಬಿಡುವುದಾಗಿ ಸರ್ಕಾರ ಘೋಷಿಸಿದ್ದರೂ, ರೈತರ ಹೋರಾಟ ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 4ರ ಶುಕ್ರವಾರದಂದು ಹೋರಾಟಗಾರರೊಂದಿಗೆ ಸಂಧಾನ ಸಭೆ ಕರೆದಿದ್ದಾರೆ. ಅದಕ್ಕೂ ಮುನ್ನ, ಜುಲೈ 3ರ ಗುರುವಾರ ಸಂಜೆ 4 ಗಂಟೆಗೆ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಂಬಂಧಿತ ಸಚಿವರು ಹಾಗೂ ಉನ್ನತ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳು ಪೂರ್ವಭಾವಿ ಸಭೆ ನಡೆಸಲಿದ್ದಾರೆ.

ಸಿಎಂ ಕರೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಲಿರುವ ಗಣ್ಯರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಮಹತ್ವದ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾನೂನು ಸಚಿವ ಎಚ್.ಕೆ. ಪಾಟೀಲ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಇಂಧನ ಸಚಿವ ಕೆ.ಜೆ. ಜಾರ್ಜ್, ಕಂದಾಯ ಸಚಿವ ಕೃಷ್ಣಬೈರೇ ಗೌಡ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಕೆಐಎಡಿಬಿ (KIADB) ಸಿಇಒ ಸೇರಿದಂತೆ ಹಲವು ಉನ್ನತ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಸರ್ಕಾರದ ಭರವಸೆಗಳ ನಡುವೆಯೂ ಮುಂದುವರಿದ ಪ್ರತಿಭಟನೆ: ದೇವನಹಳ್ಳಿಯ ಚನ್ನರಾಯಪಟ್ಟಣ, ಮೆಟ್ಟಿಬಾರ್ಲು ಹಾಗೂ ಪ್ರೋತ್ರೀಯ ತಲ್ಲೋಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಕೈಗಾರಿಕಾಭಿವೃದ್ಧಿಗಾಗಿ ಒಟ್ಟು 1700 ಎಕರೆ ಭೂಮಿ ವಶಪಡಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ಇದರಲ್ಲಿ 495 ಎಕರೆ ಭೂಮಿಯನ್ನು ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವುದಾಗಿ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಮತ್ತು ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಈ ಹಿಂದೆ ಘೋಷಿಸಿದ್ದರು. ಅಲ್ಲದೆ, 2013ರ ಭೂಸ್ವಾಧೀನ ಕಾಯ್ದೆ ಅನ್ವಯ ಸೂಕ್ತ ಪರಿಹಾರ ನೀಡಲಾಗುವುದು ಮತ್ತು ಪರಿಹಾರ ಬೇಡವೆಂದವರಿಗೆ ಕೆಐಎಡಿಬಿ ಅಭಿವೃದ್ಧಿಪಡಿಸಿದ 10 ಸಾವಿರ ಚದರ ಅಡಿ ಪರ್ಯಾಯ ಭೂಮಿ ನೀಡುವುದಾಗಿಯೂ ಭರವಸೆ ನೀಡಿದ್ದರು. ಆದರೆ, ಈ ಭರವಸೆಗಳ ಹೊರತಾಗಿಯೂ ರೈತರ ಹೋರಾಟ ಮುಂದುವರಿದಿರುವುದು ಸರ್ಕಾರದ ಆತಂಕಕ್ಕೆ ಕಾರಣವಾಗಿದೆ.

ದೇವನಹಳ್ಳಿ ರೈತರ ಕೂಗು: ಭೂಮಿ, ಬದುಕು ಉಳಿಸುವ ಪ್ರಾಮಾಣಿಕ ಪ್ರತಿರೋಧ

ಇದು ಕೇವಲ ಪರಿಹಾರದ ಹಣಕ್ಕಾಗಿ ನಡೆಯುತ್ತಿರುವ ಪ್ರತಿಭಟನೆಯಲ್ಲ, ಬದಲಾಗಿ ತಮ್ಮ ಭೂಮಿ, ಬದುಕು ಮತ್ತು ಪರಿಸರವನ್ನು ಉಳಿಸಿಕೊಳ್ಳುವ ದೇವನಹಳ್ಳಿ ತಾಲ್ಲೂಕಿನ 13 ಹಳ್ಳಿಗಳ ರೈತ ಕುಟುಂಬಗಳ ಪ್ರಾಮಾಣಿಕ ಪ್ರತಿರೋಧ. ಕಳೆದ 1185 ದಿನಗಳಿಂದ ನಿರಂತರವಾಗಿ ಹೋರಾಡುತ್ತಿರುವ ಈ ರೈತರು, ತಮ್ಮ ಭೂಮಿಯನ್ನು ಬಲವಂತವಾಗಿ ಕಸಿದುಕೊಳ್ಳದಂತೆ ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ. ಭೂಮಿಯಿಲ್ಲದ ಬದುಕು ವಿನಾಶಕ್ಕೆ ಸಮಾನ ಎಂಬುದನ್ನು ತಮ್ಮ ಅನುಭವದಿಂದ ಅರಿತಿರುವ ಈ ರೈತರು ಯಾವ ಕಾರಣಕ್ಕೂ ಭೂಮಿ ಬಿಡುವುದಿಲ್ಲ ಎಂದು ದೃಢ ಸಂಕಲ್ಪ ಮಾಡಿದ್ದಾರೆ.

ನೆಲಕ್ಕಾಗಿ ಒಗ್ಗಟ್ಟಾದ ಕರ್ನಾಟಕ: ದೇವನಹಳ್ಳಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ ಈಗ ಇಡೀ ಕರ್ನಾಟಕದ ಆತ್ಮಸಾಕ್ಷಿಯನ್ನು ಬಡಿದೆಬ್ಬಿಸಿದೆ. ರೈತರ ದನಿಯೊಂದಿಗೆ ಇಂದು ಇಡೀ ನಾಡು ದನಿಗೂಡಿಸಿದೆ.

ಭೂಮಿ ಕಳೆದುಕೊಂಡವರ ಬವಣೆ, ಭೂಮಿ ಉಳಿಸುವವರ ಸಂಕಲ್ಪ: ಈ ಹೋರಾಟಕ್ಕೆ ಸಂಬಂಧಿಸಿದ ವೀಡಿಯೊಗಳು ಈಗಾಗಲೇ ಭೂಮಿ ಕಳೆದುಕೊಂಡು ಬೀದಿಗೆ ಬಂದವರ ಕಷ್ಟಗಳನ್ನು ಮತ್ತು ತಮ್ಮ ನೆಲವನ್ನು ಉಳಿಸಿಕೊಳ್ಳಲು ದೃಢಸಂಕಲ್ಪ ಮಾಡಿರುವವರ ಬದುಕಿನ ಚಿತ್ರಣವನ್ನು ಅನಾವರಣಗೊಳಿಸಿವೆ. ಸಂಪೂರ್ಣ ಸಾಕ್ಷ್ಯಚಿತ್ರವಾಗಿ ಹೊರಬರಲಿರುವ ಈ ಪ್ರಯತ್ನದ ಸಣ್ಣ ಭಾಗವನ್ನು ಈ ಹೋರಾಟದ ಸಂದರ್ಭದಲ್ಲಿ ಸಾರ್ವಜನಿಕರಿಗೆ ವಿಷಯ ತಲುಪಿಸುವ ಉದ್ದೇಶದಿಂದ ಬಿಡುಗಡೆ ಮಾಡಲಾಗಿದೆ.

ಹೋರಾಟಕ್ಕೆ ರಾಷ್ಟ್ರೀಯ ನಾಯಕರ ಬೆಂಬಲ: ಇಂದು ಟಿಕಾಯತ್, ದರ್ಶನ್ ಪಾಲ್ ಆಗಮನ

ದೇವನಹಳ್ಳಿ ರೈತರ ಹೋರಾಟಕ್ಕೆ ರಾಷ್ಟ್ರೀಯ ಮಟ್ಟದ ಬೆಂಬಲ ವ್ಯಕ್ತವಾಗಿದ್ದು, ದೆಹಲಿಯ ಸಂಯುಕ್ತ ಕಿಸಾನ್ ಮೋರ್ಚಾದ ಪ್ರಮುಖ ನಾಯಕರಾದ ರಾಕೇಶ್ ಟಿಕಾಯತ್ ಮತ್ತು ದರ್ಶನ್ ಪಾಲ್ ಅವರು ರಾಜ್ಯಕ್ಕೆ ಆಗಮಿಸಲಿದ್ದಾರೆ. ರೈತ ಹೋರಾಟಗಾರರು ನೀಡಿರುವ ಮಾಹಿತಿ ಪ್ರಕಾರ, ಈ ಇಬ್ಬರು ನಾಯಕರು ಬೆಳಿಗ್ಗೆ ದೇವನಹಳ್ಳಿಯ ಸಂತ್ರಸ್ತ ರೈತರನ್ನು ಭೇಟಿಯಾಗಿ ಅವರ ಸಮಸ್ಯೆಗಳನ್ನು ಆಲಿಸಲಿದ್ದಾರೆ. ನಂತರ, ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿ, ರೈತರ ಆಗ್ರಹಗಳನ್ನು ಸರ್ಕಾರದ ಮುಂದಿಡಲಿದ್ದಾರೆ. ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರೈತರ ಪರವಾಗಿ ಸಂಧಾನ ನಡೆಸುವ ಸಾಧ್ಯತೆ ಇದೆ. ರಾಷ್ಟ್ರೀಯ ನಾಯಕರ ಈ ಭೇಟಿ ರೈತರ ಹೋರಾಟಕ್ಕೆ ಹೊಸ ಆಯಾಮ ನೀಡುವ ನಿರೀಕ್ಷೆಯಿದೆ.

ನಾಡಿನ ನಾಗರಿಕರಿಗೆ ಹೋರಾಟಗಾರರ ಮನವಿ: “ಕನ್ನಡನಾಡಿನ ಜೀವಪರ, ಜನಪರ ಚಿಂತನೆಯ ಬಂಧುಗಳೇ,” ಎಂದು ಸಂಬೋಧಿಸಿರುವ ರೈತ ಹೋರಾಟಗಾರರು, “ದಯವಿಟ್ಟು ನೋಡಿ, ನಿಮ್ಮ ಸ್ನೇಹಿತರ ಬಳಗಕ್ಕೂ ಹಂಚಿ…. ಸರ್ಕಾರ ರೈತರ ಆಗ್ರಹವನ್ನು ಒಪ್ಪಿ, ಬಲವಂತದ ಭೂಸ್ವಾಧೀನವನ್ನು ಕೈಬಿಡಬೇಕೆಂದು ನಿಮಗೆ ಸಾಧ್ಯವಿರುವ ರೀತಿಗಳಲ್ಲಿ ಸರ್ಕಾರವನ್ನು ಒತ್ತಾಯಿಸಿ. ಈ ಹೋರಾಟ ನಾಡಿನ ಆತ್ಮಸಾಕ್ಷಿಯನ್ನು ಬಡಿದೆಬ್ಬಿಸಿದೆ, ಈ ರೈತರಿಗೆ ಗೆಲುವು ಸಿಗಲೇಬೇಕು” ಎಂದು ಮನವಿ ಮಾಡಿದ್ದಾರೆ.

ದೇವನಹಳ್ಳಿ ಏರೋಸ್ಪೇಸ್ ಪಾರ್ಕ್‌ನಂತಹ ಬೃಹತ್ ಯೋಜನೆಗಳು ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದ್ದರೂ, ಸ್ಥಳೀಯ ರೈತರ ಬದುಕು ಮತ್ತು ಭೂಮಿಯ ಹಕ್ಕನ್ನು ಗೌರವಿಸುವುದು ಅತ್ಯಗತ್ಯ ಎಂಬ ಸಂದೇಶ ಈ ಹೋರಾಟದಿಂದ ಹೊರಹೊಮ್ಮಿದೆ. ಸರ್ಕಾರದ ಸಂಧಾನ ಸಭೆಯ ಫಲಿತಾಂಶ ಕುತೂಹಲ ಮೂಡಿಸಿದೆ.

ಸಚಿವ ಸಂಪುಟ ಸಭೆ; ಪತ್ರಿಕಾಗೋಷ್ಠಿಯಲ್ಲಿ ದೇವನಹಳ್ಳಿ ಭೂಸ್ವಾಧೀನ ವಿಚಾರ ಪ್ರಸ್ತಾಪಿಸದ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...