Homeಕರ್ನಾಟಕದೇವನಹಳ್ಳಿ ಭೂ ಹೋರಾಟಕ್ಕೆ ನಿರ್ಣಾಯಕ ಕ್ಷಣ: ಸಿಎಂ ಸಭೆ; "ಹೊಸ ಇತಿಹಾಸ ಸೃಷ್ಟಿಯ ನಿರೀಕ್ಷೆಯಿದೆ" ಎಂದ...

ದೇವನಹಳ್ಳಿ ಭೂ ಹೋರಾಟಕ್ಕೆ ನಿರ್ಣಾಯಕ ಕ್ಷಣ: ಸಿಎಂ ಸಭೆ; “ಹೊಸ ಇತಿಹಾಸ ಸೃಷ್ಟಿಯ ನಿರೀಕ್ಷೆಯಿದೆ” ಎಂದ ಕೆ.ಎಲ್. ಅಶೋಕ್

- Advertisement -
- Advertisement -

ಬೆಂಗಳೂರು: ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ ರೈತರು ಕಳೆದ ಮೂರೂವರೆ ವರ್ಷಗಳಿಂದಲೂ (1197 ದಿನಗಳು) ನಿರಂತರವಾಗಿ ನಡೆಸುತ್ತಿರುವ ಐತಿಹಾಸಿಕ ಭೂಸ್ವಾಧೀನ ವಿರೋಧಿ ಹೋರಾಟ ಇದೀಗ ನಿರ್ಣಾಯಕ ಹಂತವನ್ನು ತಲುಪಿದೆ. ಈ ಬಹುಕಾಲದ ಹೋರಾಟದ ಅಂತಿಮ ಕ್ಷಣಗಣನೆ ಆರಂಭಗೊಂಡಿದ್ದು, ನಾಳೆ (ಜುಲೈ 15) ಬೆಳಿಗ್ಗೆ 11:30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಂತ್ರಿಗಳು ಮತ್ತು ಹೋರಾಟಗಾರರ ನಡುವೆ ಅತ್ಯಂತ ಮಹತ್ವದ ಸಭೆ ನಿಗದಿಯಾಗಿದೆ. ಇದು ಕೇವಲ ದೇವನಹಳ್ಳಿಯ ರೈತರ ಭವಿಷ್ಯವನ್ನು ನಿರ್ಧರಿಸುವುದಲ್ಲದೆ, ಭಾರತದ ರೈತ ಚಳುವಳಿ ಮತ್ತು ಭೂ ಹಕ್ಕಿನ ಹೋರಾಟಕ್ಕೆ ಹೊಸ ಚಾರಿತ್ರಿಕ ಮೈಲುಗಲ್ಲಾಗಲಿದೆ ಎಂದು ‘ಎದ್ದೇಳು ಕರ್ನಾಟಕ’ದ ಕೆ.ಎಲ್. ಅಶೋಕ್ ಆಶಯ ವ್ಯಕ್ತಪಡಿಸಿದ್ದಾರೆ.

ಇಂದು (ಜುಲೈ 14) ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆ.ಎಲ್. ಅಶೋಕ್, ಈ ದೇವನಹಳ್ಳಿ ಹೋರಾಟವು ರಾಜ್ಯದ ಗಡಿ ಮೀರಿ ದೇಶಾದ್ಯಂತ ವ್ಯಾಪಕ ಬೆಂಬಲ ಗಳಿಸಿದೆ ಎಂದು ವಿವರಿಸಿದರು. ಕಳೆದ 15 ದಿನಗಳಿಂದ ದೇಶಾದ್ಯಂತ ಓಡಾಡಿ, ರೈತಪರ ಧ್ವನಿಯಾಗಿರುವ ಹಾಗೂ ಭಾರತದ ಎಲ್ಲ ಚಳುವಳಿಗಳ ನಡುವೆ ಸೇತುವೆಯಾಗಿರುವ ಪ್ರಗತಿಪರ ನಟ ಪ್ರಕಾಶ್ ರಾಜ್ ಅವರ ಬೆಂಬಲವನ್ನು ಅವರು ಹೃತ್ಪೂರ್ವಕವಾಗಿ ಶ್ಲಾಘಿಸಿದರು. “ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಳೆ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದರ ಮೇಲೆ ಅವರು ಯಾರ ಪರ ಎಂಬುದನ್ನು ಸ್ಪಷ್ಟವಾಗಲಿದೆ. ಅವರು ಈ ಸಂಕೀರ್ಣ ಪರಿಸ್ಥಿತಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ರೈತಪರ ನಾಯಕ ಎನ್ನಿಸಿಕೊಳ್ಳುತ್ತಾರೆ ಎಂಬ ಬಲವಾದ ನಿರೀಕ್ಷೆಯಲ್ಲಿ ನಾವೆಲ್ಲ ಇದ್ದೇವೆ” ಎಂದು ಅಶೋಕ್ ದೃಢವಾಗಿ ಹೇಳಿದ್ದಾರೆ.

ಈ ದೇವನಹಳ್ಳಿ ಭೂ ಹೋರಾಟಕ್ಕೆ ರಾಜ್ಯದ ಹಾಗೂ ದೇಶದ ವಿವಿಧ ಸ್ತರಗಳ ಸಂಘಟನೆಗಳು ಒಗ್ಗೂಡಿವೆ. ಕಾರ್ಮಿಕ ಸಂಘಟನೆಗಳು, ರೈತ ಸಂಘಟನೆಗಳು, ದಲಿತ ಸಂಘಟನೆಗಳು, ಮಹಿಳಾ ಸಂಘಟನೆಗಳು ಮತ್ತು ವಿದ್ಯಾರ್ಥಿ ಸಂಘಟನೆಗಳು ಒಗ್ಗಟ್ಟಿನಿಂದ ಹೆಗಲು ನೀಡುವ ಮೂಲಕ ಈ ಹೋರಾಟದ ಅಪಾರ ಶಕ್ತಿಯನ್ನು ಪ್ರದರ್ಶಿಸಿವೆ. “ಕಾಂಗ್ರೆಸ್ ಸರ್ಕಾರವು ‘ಪಂಚ ಗ್ಯಾರಂಟಿ’ಗಳ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿದ್ದು, ಈಗಾಗಲೇ ಕೆಲವು ಗ್ಯಾರಂಟಿಗಳನ್ನು ಈಡೇರಿಸಿದೆ. ಇದೇ ಬದ್ಧತೆಯನ್ನು ರೈತರಿಗೆ ನೀಡಿದ ಭರವಸೆಗಳ ವಿಷಯದಲ್ಲೂ ತೋರಿ, ನ್ಯಾಯ ಒದಗಿಸುತ್ತದೆ ಎಂಬ ವಿಶ್ವಾಸವನ್ನು ನಾವೆಲ್ಲ ಇಟ್ಟುಕೊಂಡಿದ್ದೇವೆ” ಎಂದು ಅಶೋಕ್ ನುಡಿದಿದ್ದಾರೆ.

ಜುಲೈ 15ರ ದಿನಾಂಕವು ಕೇವಲ ದೇವನಹಳ್ಳಿ ರೈತರಿಗೆ ಮಾತ್ರವಲ್ಲದೆ, ಇಡೀ ಭಾರತದ ಚಳುವಳಿಗಳ ಇತಿಹಾಸದಲ್ಲಿ ಒಂದು ವಿಶೇಷ ದಿನವಾಗಿ ದಾಖಲಾಗಲಿದೆ. ಈ ಹೋರಾಟಕ್ಕೆ ರಾಷ್ಟ್ರ ಮಟ್ಟದ ನಾಯಕರು ಭೇಟಿ ನೀಡಿ ಬೆಂಬಲ ಸೂಚಿಸಿರುವುದು ಇದರ ಮಹತ್ವವನ್ನು ಎತ್ತಿ ತೋರಿಸುತ್ತದೆ. ಇದು ಕರ್ನಾಟಕದ ಇತರ ಬಗರ್ ಹುಕುಂ ಹೋರಾಟಗಳು, ದಲಿತ, ರೈತ ಮತ್ತು ಕಾರ್ಮಿಕ ಹೋರಾಟಗಳಿಗೆ ಒಂದು ಮಾದರಿಯಾಗಿದೆ. “ಈ ಐತಿಹಾಸಿಕ ಸಂದರ್ಭದಲ್ಲಿ ನಟ ಪ್ರಕಾಶ್ ರಾಜ್ ಅವರಂತಹ ಪ್ರಮುಖ ವ್ಯಕ್ತಿಗಳು ನಮ್ಮೆಲ್ಲರಿಗೂ ಸೇತುವೆಯಾಗಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ” ಎಂದು ಕೆ.ಎಲ್. ಅಶೋಕ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ನಟ ಪ್ರಕಾಶ್ ರಾಜ್, ತಾರಾರಾವ್, ಬೋರಯ್ಯ ಚಿತ್ರದುರ್ಗ, ರೈತ ನಾಯಕ ವೀರಸಂಗಯ್ಯ, ದಲಿತ ಮುಖಂಡ ವೆಂಕಟೇಶ್ ಸೇರಿದಂತೆ ಹಲವು ಗಣ್ಯರು ಮತ್ತು ಹೋರಾಟದ ನಾಯಕರು ಉಪಸ್ಥಿತರಿದ್ದರು.

ನಾಳೆಯ ಸಭೆಯಲ್ಲಿ ಭೂ ಸ್ವಾಧೀನ ಕೈ ಬಿಡುವ ಬಗ್ಗೆ ತಿಳಿಸಿ, ಪರಿಹಾರ ಹಣದ ಮಾತು ಬೇಡ: ನಟ ಪ್ರಕಾಶ್ ರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...