Homeಕರ್ನಾಟಕದೇವನಹಳ್ಳಿ ಭೂ ಸತ್ಯಾಗ್ರಹ 4ನೇ ದಿನ: ಸರ್ಕಾರ ಪಾಂಡವರ ಬದಲು ಕೌರವರ ಪರ ಇದೆ -...

ದೇವನಹಳ್ಳಿ ಭೂ ಸತ್ಯಾಗ್ರಹ 4ನೇ ದಿನ: ಸರ್ಕಾರ ಪಾಂಡವರ ಬದಲು ಕೌರವರ ಪರ ಇದೆ – ಸಿಪಿಎಂ ರಾಜ್ಯ ಕಾರ್ಯದರ್ಶಿ ಕೆ.ಪ್ರಕಾಶ್ ಆಕ್ರೋಶ

- Advertisement -
- Advertisement -

ಬೆಂಗಳೂರು: ದೇವನಹಳ್ಳಿ ರೈತರ ಭೂ ಸತ್ಯಾಗ್ರಹ ಹೋರಾಟ ಸ್ವಾತಂತ್ರ್ಯ ಉದ್ಯಾನವನದಲ್ಲಿ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಈ ಮಹತ್ವದ ಹೋರಾಟಕ್ಕೆ ನಾಡಿನ ಪ್ರಮುಖ ಚಿಂತಕರು, ಹೋರಾಟಗಾರರು ಮತ್ತು ವಿವಿಧ ಸಂಘಟನೆಗಳ ನಾಯಕರು ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ಭೂ ಸತ್ಯಾಗ್ರಹದ ಕಾಂ. ಬಯ್ಯಾರೆಡ್ಡಿ ವೇದಿಕೆಯಲ್ಲಿ ಮಾತನಾಡಿದ ಸಿಪಿಎಂ ಪಕ್ಷದ ರಾಜ್ಯ ಕಾರ್ಯದರ್ಶಿ ಕೆ.ಪ್ರಕಾಶ್, ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ಈ ಹೋರಾಟ ಮಹಾಭಾರತದ ಕುರುಕ್ಷೇತ್ರ ಯುದ್ಧದಂತಿದೆ. ಹಾಗಾದರೆ, ಸರ್ಕಾರ ಯಾರ ಪರ ನಿಲ್ಲಬೇಕು? ಪಾಂಡವರ ಪರವೋ, ಕೌರವರ ಪರವೋ? ದುರದೃಷ್ಟವಶಾತ್, ಸರ್ಕಾರ ಪಾಂಡವರ ಪರವಾಗಿ ಕಾಣಿಸುತ್ತಿಲ್ಲ, ಅದು ಕೌರವರ ವೇಷ ತೊಟ್ಟುಕೊಂಡು ಆಟವಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಫ್ಯಾಕ್ಟರಿ ಉಳಿಯಬೇಕು ಎನ್ನುತ್ತಿದ್ದಾರೆ” ಎಂದು ನೇರವಾಗಿ ಕುಟುಕಿದರು.

ದೇವನಹಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಫಾಕ್ಸ್‌ಕಾನ್ (Foxconn) ಕಂಪೆನಿ ಮೊಬೈಲ್ ಫೋನ್ ತಯಾರಿಕಾ ಘಟಕವನ್ನು ಸ್ಥಾಪಿಸುತ್ತಿದೆ. ಇಂತಹ ಕೈಗಾರಿಕೆಗಳಿಗೆ 6,000 ಕೋಟಿ ರೂ. ಸಬ್ಸಿಡಿ ನೀಡುವ ಸರ್ಕಾರದ ಘೋಷಣೆಯನ್ನು ಪ್ರಕಾಶ್ ಬಲವಾಗಿ ವಿರೋಧಿಸಿದರು. “ಸಾಮಾನ್ಯ ಜನರಿಗೆ ಒಂದು ಹೊತ್ತಿನ ಊಟಕ್ಕೂ ಸಂಕಷ್ಟವಿದೆ. ರೈತರು ತಮ್ಮ ಭೂಮಿಯನ್ನು ಉಳಿಸಿಕೊಡಿ ಎಂದು ಆಗ್ರಹಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ವಿದೇಶಿ ಕಂಪನಿಗಳಿಗೆ ಸಾವಿರಾರು ಕೋಟಿ ಸಬ್ಸಿಡಿ ನೀಡುವುದು ಯಾವ ರೀತಿಯ ಕೈಗಾರಿಕಾ ನೀತಿ? ರಾಜ್ಯದ ಜನರ ತೆರಿಗೆ ಹಣವನ್ನು ಬಂಡವಾಳಗಾರರಿಗೆ ಉಚಿತವಾಗಿ ನೀಡಲು ಫ್ಯಾಕ್ಟರಿಗಳು ಬೇಕೆ?” ಎಂದು ಕಿಡಿಕಾರಿದರು. “ಸಿದ್ದರಾಮಯ್ಯನವರೇ, ನೀವು ಮಾಡುತ್ತಿರುವ ಕೆಲಸವನ್ನು ರಾಜ್ಯದ ಜನತೆ ಕಣ್ಣುಮುಚ್ಚಿಕೊಂಡು ನೋಡುತ್ತಿಲ್ಲ. ಇಂತಹ ಫ್ಯಾಕ್ಟರಿಗಳು ನಮಗೆ ಬೇಕಾಗಿಲ್ಲ” ಎಂದು ಎಚ್ಚರಿಕೆ ನೀಡಿದರು.

ಕೋಲಾರದ ನರಸಾಪುರ ಬಳಿ ಇರುವ ವಿಸ್ಟ್ರಾನ್ ಕಂಪನಿಯು ಈಗ ಟಾಟಾ ಎಲೆಕ್ಟ್ರಾನಿಕ್ಸ್  ಒಡೆತನದಲ್ಲಿದೆ. ಈ ಘಟಕವನ್ನು ಉದಾಹರಿಸಿದ ಪ್ರಕಾಶ್, “ಅಲ್ಲಿ 30 ಸಾವಿರಕ್ಕೂ ಹೆಚ್ಚು ರೈತಾಪಿ ವರ್ಗದ ಯುವಕ-ಯುವತಿಯರು ಕೆಲಸ ಮಾಡುತ್ತಿದ್ದಾರೆ. ಆದರೆ, ಅದರಲ್ಲಿ ಕೇವಲ ಒಂದು ಸಾವಿರ ಮಂದಿಗೆ ಮಾತ್ರ ಖಾಯಂ ಉದ್ಯೋಗವಿದೆ. ಕೋಲಾರ, ಮಾಲೂರು, ಹೊಸಕೋಟೆ ಸುತ್ತಮುತ್ತಲಿನ ಮಕ್ಕಳಿಗೆ ಅರೆಕಾಲಿಕ, ಅಶ್ಲೀಲ ಕೆಲಸ, ಪುಕ್ಕಟೆ ಸಂಬಳಕ್ಕೆ ದುಡಿಸಿಕೊಳ್ಳುವ ನೀತಿಯನ್ನು ಸಿದ್ದರಾಮಯ್ಯ ಮತ್ತು ಎಂ.ಬಿ. ಪಾಟೀಲ್ ನೇತೃತ್ವದ ಸರ್ಕಾರ ಜಾರಿಗೆ ತಂದಿದೆ. ಸರ್ಕಾರವೇ 6-7 ಸಾವಿರ ಕೋಟಿ ರೂ. ಸಬ್ಸಿಡಿ ಕೊಟ್ಟು ಇಂತಹ ಕಂಪನಿಗಳಿಗೆ ಮತ್ತಷ್ಟು ಲೂಟಿ ಮಾಡಲು ಉತ್ತೇಜನ ನೀಡುತ್ತಿದೆ. ಇದನ್ನೇ ನಾವು ನಿಮ್ಮಿಂದ, ಕಾಂಗ್ರೆಸ್ ಸರ್ಕಾರದಿಂದ ನಿರೀಕ್ಷಿಸಿದ್ದು? ನೀವು ಯಾರ ಪರವಾಗಿ ಇದ್ದೀರಿ?” ಎಂದು ತೀವ್ರವಾಗಿ ಪ್ರಶ್ನಿಸಿದರು.

ಈ ಭೂ ಸತ್ಯಾಗ್ರಹ ವೇದಿಕೆಗೆ ಹಿರಿಯ ವಕೀಲರಾದ ಪ್ರೊ. ರವಿವರ್ಮಕುಮಾರ್, ಚಿಂತಕರಾದ ಡಾ.‌ಜಿ‌. ರಾಮಕೃಷ್ಣ, ಪ್ರೊ.‌ಮರುಳಸಿದ್ಧಪ್ಪ, ಜಾನಪದ ಅಕಾಡೆಮಿಯ ಅಧ್ಯಕ್ಷರೂ ಆಗಿದ್ದ ಹಿರಿಯ ಕಲಾವಿದ ಪಿಚ್ಚಳ್ಳಿ ಶ್ರೀನಿವಾಸ್, ಹಿರಿಯ ಚಿಂತಕ ಸುಬ್ಬು ಹೊಲೆಯಾರ್ ಮುಂತಾದ ಅನೇಕರು ಭೇಟಿ ನೀಡಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ರಾಜಕಾರಣಿಗಳಾದ ಮಹಿಮಾ ಪಟೇಲ್ ಮತ್ತು ಬಿ.ಆರ್. ಪಾಟೀಲ್ ಅವರೂ ಸಹ ರಾಜಕಾರಣಿಗಳಾಗಿರದೆ, ಹೋರಾಟಗಾರರಾಗಿ ರೈತರಿಗೆ ಬೆಂಬಲ ನೀಡಲು ಬಂದಿರುವುದಾಗಿ ಹೇಳಿದ್ದಾರೆ. ವಿವಿಧ ಚಳುವಳಿಗಳ ಮುಖಂಡರಾದ ಸಿದ್ಧನಗೌಡ ಪಾಟೀಲ್, ಮಾವಳ್ಳಿ ಶಂಕರ್, ಸಾತಿ ಸುಂದರೇಶ್, ಮೀನಾಕ್ಷಿ ಸುಂದರಂ, ಬಡಗಲಪುರ ನಾಗೇಂದ್ರ, ವರಲಕ್ಷ್ಮಿ, ಚುಕ್ಕಿ ನಂಜುಂಡಸ್ವಾಮಿ, ಕ್ಲಿಫ್ಟನ್ ರೊಜಾರಿಯೋ, ನಿರ್ಮಲ, ಕೆಜೆಎಸ್ ಮರಿಯಪ್ಪ ಮೊದಲಾದವರು ಹೋರಾಟದಲ್ಲಿ ಭಾಗವಹಿಸಿದ್ದರು.

ಜುಲೈ 4ಕ್ಕೆ ‘ನಾಡ ಉಳಿಸಿ ಸಮಾವೇಶ’: ದೇವನಹಳ್ಳಿ ಭೂಸ್ವಾಧೀನ ಕೈಬಿಡುವಂತೆ ರೈತರಿಂದ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...