Homeಕರ್ನಾಟಕದೇವನಹಳ್ಳಿ ಭೂ ಸತ್ಯಾಗ್ರಹ 4ನೇ ದಿನ: ಸರ್ಕಾರ ಪಾಂಡವರ ಬದಲು ಕೌರವರ ಪರ ಇದೆ -...

ದೇವನಹಳ್ಳಿ ಭೂ ಸತ್ಯಾಗ್ರಹ 4ನೇ ದಿನ: ಸರ್ಕಾರ ಪಾಂಡವರ ಬದಲು ಕೌರವರ ಪರ ಇದೆ – ಸಿಪಿಎಂ ರಾಜ್ಯ ಕಾರ್ಯದರ್ಶಿ ಕೆ.ಪ್ರಕಾಶ್ ಆಕ್ರೋಶ

- Advertisement -
- Advertisement -

ಬೆಂಗಳೂರು: ದೇವನಹಳ್ಳಿ ರೈತರ ಭೂ ಸತ್ಯಾಗ್ರಹ ಹೋರಾಟ ಸ್ವಾತಂತ್ರ್ಯ ಉದ್ಯಾನವನದಲ್ಲಿ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಈ ಮಹತ್ವದ ಹೋರಾಟಕ್ಕೆ ನಾಡಿನ ಪ್ರಮುಖ ಚಿಂತಕರು, ಹೋರಾಟಗಾರರು ಮತ್ತು ವಿವಿಧ ಸಂಘಟನೆಗಳ ನಾಯಕರು ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ಭೂ ಸತ್ಯಾಗ್ರಹದ ಕಾಂ. ಬಯ್ಯಾರೆಡ್ಡಿ ವೇದಿಕೆಯಲ್ಲಿ ಮಾತನಾಡಿದ ಸಿಪಿಎಂ ಪಕ್ಷದ ರಾಜ್ಯ ಕಾರ್ಯದರ್ಶಿ ಕೆ.ಪ್ರಕಾಶ್, ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ಈ ಹೋರಾಟ ಮಹಾಭಾರತದ ಕುರುಕ್ಷೇತ್ರ ಯುದ್ಧದಂತಿದೆ. ಹಾಗಾದರೆ, ಸರ್ಕಾರ ಯಾರ ಪರ ನಿಲ್ಲಬೇಕು? ಪಾಂಡವರ ಪರವೋ, ಕೌರವರ ಪರವೋ? ದುರದೃಷ್ಟವಶಾತ್, ಸರ್ಕಾರ ಪಾಂಡವರ ಪರವಾಗಿ ಕಾಣಿಸುತ್ತಿಲ್ಲ, ಅದು ಕೌರವರ ವೇಷ ತೊಟ್ಟುಕೊಂಡು ಆಟವಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಫ್ಯಾಕ್ಟರಿ ಉಳಿಯಬೇಕು ಎನ್ನುತ್ತಿದ್ದಾರೆ” ಎಂದು ನೇರವಾಗಿ ಕುಟುಕಿದರು.

ದೇವನಹಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಫಾಕ್ಸ್‌ಕಾನ್ (Foxconn) ಕಂಪೆನಿ ಮೊಬೈಲ್ ಫೋನ್ ತಯಾರಿಕಾ ಘಟಕವನ್ನು ಸ್ಥಾಪಿಸುತ್ತಿದೆ. ಇಂತಹ ಕೈಗಾರಿಕೆಗಳಿಗೆ 6,000 ಕೋಟಿ ರೂ. ಸಬ್ಸಿಡಿ ನೀಡುವ ಸರ್ಕಾರದ ಘೋಷಣೆಯನ್ನು ಪ್ರಕಾಶ್ ಬಲವಾಗಿ ವಿರೋಧಿಸಿದರು. “ಸಾಮಾನ್ಯ ಜನರಿಗೆ ಒಂದು ಹೊತ್ತಿನ ಊಟಕ್ಕೂ ಸಂಕಷ್ಟವಿದೆ. ರೈತರು ತಮ್ಮ ಭೂಮಿಯನ್ನು ಉಳಿಸಿಕೊಡಿ ಎಂದು ಆಗ್ರಹಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ವಿದೇಶಿ ಕಂಪನಿಗಳಿಗೆ ಸಾವಿರಾರು ಕೋಟಿ ಸಬ್ಸಿಡಿ ನೀಡುವುದು ಯಾವ ರೀತಿಯ ಕೈಗಾರಿಕಾ ನೀತಿ? ರಾಜ್ಯದ ಜನರ ತೆರಿಗೆ ಹಣವನ್ನು ಬಂಡವಾಳಗಾರರಿಗೆ ಉಚಿತವಾಗಿ ನೀಡಲು ಫ್ಯಾಕ್ಟರಿಗಳು ಬೇಕೆ?” ಎಂದು ಕಿಡಿಕಾರಿದರು. “ಸಿದ್ದರಾಮಯ್ಯನವರೇ, ನೀವು ಮಾಡುತ್ತಿರುವ ಕೆಲಸವನ್ನು ರಾಜ್ಯದ ಜನತೆ ಕಣ್ಣುಮುಚ್ಚಿಕೊಂಡು ನೋಡುತ್ತಿಲ್ಲ. ಇಂತಹ ಫ್ಯಾಕ್ಟರಿಗಳು ನಮಗೆ ಬೇಕಾಗಿಲ್ಲ” ಎಂದು ಎಚ್ಚರಿಕೆ ನೀಡಿದರು.

ಕೋಲಾರದ ನರಸಾಪುರ ಬಳಿ ಇರುವ ವಿಸ್ಟ್ರಾನ್ ಕಂಪನಿಯು ಈಗ ಟಾಟಾ ಎಲೆಕ್ಟ್ರಾನಿಕ್ಸ್  ಒಡೆತನದಲ್ಲಿದೆ. ಈ ಘಟಕವನ್ನು ಉದಾಹರಿಸಿದ ಪ್ರಕಾಶ್, “ಅಲ್ಲಿ 30 ಸಾವಿರಕ್ಕೂ ಹೆಚ್ಚು ರೈತಾಪಿ ವರ್ಗದ ಯುವಕ-ಯುವತಿಯರು ಕೆಲಸ ಮಾಡುತ್ತಿದ್ದಾರೆ. ಆದರೆ, ಅದರಲ್ಲಿ ಕೇವಲ ಒಂದು ಸಾವಿರ ಮಂದಿಗೆ ಮಾತ್ರ ಖಾಯಂ ಉದ್ಯೋಗವಿದೆ. ಕೋಲಾರ, ಮಾಲೂರು, ಹೊಸಕೋಟೆ ಸುತ್ತಮುತ್ತಲಿನ ಮಕ್ಕಳಿಗೆ ಅರೆಕಾಲಿಕ, ಅಶ್ಲೀಲ ಕೆಲಸ, ಪುಕ್ಕಟೆ ಸಂಬಳಕ್ಕೆ ದುಡಿಸಿಕೊಳ್ಳುವ ನೀತಿಯನ್ನು ಸಿದ್ದರಾಮಯ್ಯ ಮತ್ತು ಎಂ.ಬಿ. ಪಾಟೀಲ್ ನೇತೃತ್ವದ ಸರ್ಕಾರ ಜಾರಿಗೆ ತಂದಿದೆ. ಸರ್ಕಾರವೇ 6-7 ಸಾವಿರ ಕೋಟಿ ರೂ. ಸಬ್ಸಿಡಿ ಕೊಟ್ಟು ಇಂತಹ ಕಂಪನಿಗಳಿಗೆ ಮತ್ತಷ್ಟು ಲೂಟಿ ಮಾಡಲು ಉತ್ತೇಜನ ನೀಡುತ್ತಿದೆ. ಇದನ್ನೇ ನಾವು ನಿಮ್ಮಿಂದ, ಕಾಂಗ್ರೆಸ್ ಸರ್ಕಾರದಿಂದ ನಿರೀಕ್ಷಿಸಿದ್ದು? ನೀವು ಯಾರ ಪರವಾಗಿ ಇದ್ದೀರಿ?” ಎಂದು ತೀವ್ರವಾಗಿ ಪ್ರಶ್ನಿಸಿದರು.

ಈ ಭೂ ಸತ್ಯಾಗ್ರಹ ವೇದಿಕೆಗೆ ಹಿರಿಯ ವಕೀಲರಾದ ಪ್ರೊ. ರವಿವರ್ಮಕುಮಾರ್, ಚಿಂತಕರಾದ ಡಾ.‌ಜಿ‌. ರಾಮಕೃಷ್ಣ, ಪ್ರೊ.‌ಮರುಳಸಿದ್ಧಪ್ಪ, ಜಾನಪದ ಅಕಾಡೆಮಿಯ ಅಧ್ಯಕ್ಷರೂ ಆಗಿದ್ದ ಹಿರಿಯ ಕಲಾವಿದ ಪಿಚ್ಚಳ್ಳಿ ಶ್ರೀನಿವಾಸ್, ಹಿರಿಯ ಚಿಂತಕ ಸುಬ್ಬು ಹೊಲೆಯಾರ್ ಮುಂತಾದ ಅನೇಕರು ಭೇಟಿ ನೀಡಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ರಾಜಕಾರಣಿಗಳಾದ ಮಹಿಮಾ ಪಟೇಲ್ ಮತ್ತು ಬಿ.ಆರ್. ಪಾಟೀಲ್ ಅವರೂ ಸಹ ರಾಜಕಾರಣಿಗಳಾಗಿರದೆ, ಹೋರಾಟಗಾರರಾಗಿ ರೈತರಿಗೆ ಬೆಂಬಲ ನೀಡಲು ಬಂದಿರುವುದಾಗಿ ಹೇಳಿದ್ದಾರೆ. ವಿವಿಧ ಚಳುವಳಿಗಳ ಮುಖಂಡರಾದ ಸಿದ್ಧನಗೌಡ ಪಾಟೀಲ್, ಮಾವಳ್ಳಿ ಶಂಕರ್, ಸಾತಿ ಸುಂದರೇಶ್, ಮೀನಾಕ್ಷಿ ಸುಂದರಂ, ಬಡಗಲಪುರ ನಾಗೇಂದ್ರ, ವರಲಕ್ಷ್ಮಿ, ಚುಕ್ಕಿ ನಂಜುಂಡಸ್ವಾಮಿ, ಕ್ಲಿಫ್ಟನ್ ರೊಜಾರಿಯೋ, ನಿರ್ಮಲ, ಕೆಜೆಎಸ್ ಮರಿಯಪ್ಪ ಮೊದಲಾದವರು ಹೋರಾಟದಲ್ಲಿ ಭಾಗವಹಿಸಿದ್ದರು.

ಜುಲೈ 4ಕ್ಕೆ ‘ನಾಡ ಉಳಿಸಿ ಸಮಾವೇಶ’: ದೇವನಹಳ್ಳಿ ಭೂಸ್ವಾಧೀನ ಕೈಬಿಡುವಂತೆ ರೈತರಿಂದ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...