Homeಕರ್ನಾಟಕದೇವನಹಳ್ಳಿ ಭೂ ಸತ್ಯಾಗ್ರಹ 4ನೇ ದಿನ: ಸರ್ಕಾರ ಪಾಂಡವರ ಬದಲು ಕೌರವರ ಪರ ಇದೆ -...

ದೇವನಹಳ್ಳಿ ಭೂ ಸತ್ಯಾಗ್ರಹ 4ನೇ ದಿನ: ಸರ್ಕಾರ ಪಾಂಡವರ ಬದಲು ಕೌರವರ ಪರ ಇದೆ – ಸಿಪಿಎಂ ರಾಜ್ಯ ಕಾರ್ಯದರ್ಶಿ ಕೆ.ಪ್ರಕಾಶ್ ಆಕ್ರೋಶ

- Advertisement -
- Advertisement -

ಬೆಂಗಳೂರು: ದೇವನಹಳ್ಳಿ ರೈತರ ಭೂ ಸತ್ಯಾಗ್ರಹ ಹೋರಾಟ ಸ್ವಾತಂತ್ರ್ಯ ಉದ್ಯಾನವನದಲ್ಲಿ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಈ ಮಹತ್ವದ ಹೋರಾಟಕ್ಕೆ ನಾಡಿನ ಪ್ರಮುಖ ಚಿಂತಕರು, ಹೋರಾಟಗಾರರು ಮತ್ತು ವಿವಿಧ ಸಂಘಟನೆಗಳ ನಾಯಕರು ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ಭೂ ಸತ್ಯಾಗ್ರಹದ ಕಾಂ. ಬಯ್ಯಾರೆಡ್ಡಿ ವೇದಿಕೆಯಲ್ಲಿ ಮಾತನಾಡಿದ ಸಿಪಿಎಂ ಪಕ್ಷದ ರಾಜ್ಯ ಕಾರ್ಯದರ್ಶಿ ಕೆ.ಪ್ರಕಾಶ್, ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ಈ ಹೋರಾಟ ಮಹಾಭಾರತದ ಕುರುಕ್ಷೇತ್ರ ಯುದ್ಧದಂತಿದೆ. ಹಾಗಾದರೆ, ಸರ್ಕಾರ ಯಾರ ಪರ ನಿಲ್ಲಬೇಕು? ಪಾಂಡವರ ಪರವೋ, ಕೌರವರ ಪರವೋ? ದುರದೃಷ್ಟವಶಾತ್, ಸರ್ಕಾರ ಪಾಂಡವರ ಪರವಾಗಿ ಕಾಣಿಸುತ್ತಿಲ್ಲ, ಅದು ಕೌರವರ ವೇಷ ತೊಟ್ಟುಕೊಂಡು ಆಟವಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಫ್ಯಾಕ್ಟರಿ ಉಳಿಯಬೇಕು ಎನ್ನುತ್ತಿದ್ದಾರೆ” ಎಂದು ನೇರವಾಗಿ ಕುಟುಕಿದರು.

ದೇವನಹಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಫಾಕ್ಸ್‌ಕಾನ್ (Foxconn) ಕಂಪೆನಿ ಮೊಬೈಲ್ ಫೋನ್ ತಯಾರಿಕಾ ಘಟಕವನ್ನು ಸ್ಥಾಪಿಸುತ್ತಿದೆ. ಇಂತಹ ಕೈಗಾರಿಕೆಗಳಿಗೆ 6,000 ಕೋಟಿ ರೂ. ಸಬ್ಸಿಡಿ ನೀಡುವ ಸರ್ಕಾರದ ಘೋಷಣೆಯನ್ನು ಪ್ರಕಾಶ್ ಬಲವಾಗಿ ವಿರೋಧಿಸಿದರು. “ಸಾಮಾನ್ಯ ಜನರಿಗೆ ಒಂದು ಹೊತ್ತಿನ ಊಟಕ್ಕೂ ಸಂಕಷ್ಟವಿದೆ. ರೈತರು ತಮ್ಮ ಭೂಮಿಯನ್ನು ಉಳಿಸಿಕೊಡಿ ಎಂದು ಆಗ್ರಹಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ವಿದೇಶಿ ಕಂಪನಿಗಳಿಗೆ ಸಾವಿರಾರು ಕೋಟಿ ಸಬ್ಸಿಡಿ ನೀಡುವುದು ಯಾವ ರೀತಿಯ ಕೈಗಾರಿಕಾ ನೀತಿ? ರಾಜ್ಯದ ಜನರ ತೆರಿಗೆ ಹಣವನ್ನು ಬಂಡವಾಳಗಾರರಿಗೆ ಉಚಿತವಾಗಿ ನೀಡಲು ಫ್ಯಾಕ್ಟರಿಗಳು ಬೇಕೆ?” ಎಂದು ಕಿಡಿಕಾರಿದರು. “ಸಿದ್ದರಾಮಯ್ಯನವರೇ, ನೀವು ಮಾಡುತ್ತಿರುವ ಕೆಲಸವನ್ನು ರಾಜ್ಯದ ಜನತೆ ಕಣ್ಣುಮುಚ್ಚಿಕೊಂಡು ನೋಡುತ್ತಿಲ್ಲ. ಇಂತಹ ಫ್ಯಾಕ್ಟರಿಗಳು ನಮಗೆ ಬೇಕಾಗಿಲ್ಲ” ಎಂದು ಎಚ್ಚರಿಕೆ ನೀಡಿದರು.

ಕೋಲಾರದ ನರಸಾಪುರ ಬಳಿ ಇರುವ ವಿಸ್ಟ್ರಾನ್ ಕಂಪನಿಯು ಈಗ ಟಾಟಾ ಎಲೆಕ್ಟ್ರಾನಿಕ್ಸ್  ಒಡೆತನದಲ್ಲಿದೆ. ಈ ಘಟಕವನ್ನು ಉದಾಹರಿಸಿದ ಪ್ರಕಾಶ್, “ಅಲ್ಲಿ 30 ಸಾವಿರಕ್ಕೂ ಹೆಚ್ಚು ರೈತಾಪಿ ವರ್ಗದ ಯುವಕ-ಯುವತಿಯರು ಕೆಲಸ ಮಾಡುತ್ತಿದ್ದಾರೆ. ಆದರೆ, ಅದರಲ್ಲಿ ಕೇವಲ ಒಂದು ಸಾವಿರ ಮಂದಿಗೆ ಮಾತ್ರ ಖಾಯಂ ಉದ್ಯೋಗವಿದೆ. ಕೋಲಾರ, ಮಾಲೂರು, ಹೊಸಕೋಟೆ ಸುತ್ತಮುತ್ತಲಿನ ಮಕ್ಕಳಿಗೆ ಅರೆಕಾಲಿಕ, ಅಶ್ಲೀಲ ಕೆಲಸ, ಪುಕ್ಕಟೆ ಸಂಬಳಕ್ಕೆ ದುಡಿಸಿಕೊಳ್ಳುವ ನೀತಿಯನ್ನು ಸಿದ್ದರಾಮಯ್ಯ ಮತ್ತು ಎಂ.ಬಿ. ಪಾಟೀಲ್ ನೇತೃತ್ವದ ಸರ್ಕಾರ ಜಾರಿಗೆ ತಂದಿದೆ. ಸರ್ಕಾರವೇ 6-7 ಸಾವಿರ ಕೋಟಿ ರೂ. ಸಬ್ಸಿಡಿ ಕೊಟ್ಟು ಇಂತಹ ಕಂಪನಿಗಳಿಗೆ ಮತ್ತಷ್ಟು ಲೂಟಿ ಮಾಡಲು ಉತ್ತೇಜನ ನೀಡುತ್ತಿದೆ. ಇದನ್ನೇ ನಾವು ನಿಮ್ಮಿಂದ, ಕಾಂಗ್ರೆಸ್ ಸರ್ಕಾರದಿಂದ ನಿರೀಕ್ಷಿಸಿದ್ದು? ನೀವು ಯಾರ ಪರವಾಗಿ ಇದ್ದೀರಿ?” ಎಂದು ತೀವ್ರವಾಗಿ ಪ್ರಶ್ನಿಸಿದರು.

ಈ ಭೂ ಸತ್ಯಾಗ್ರಹ ವೇದಿಕೆಗೆ ಹಿರಿಯ ವಕೀಲರಾದ ಪ್ರೊ. ರವಿವರ್ಮಕುಮಾರ್, ಚಿಂತಕರಾದ ಡಾ.‌ಜಿ‌. ರಾಮಕೃಷ್ಣ, ಪ್ರೊ.‌ಮರುಳಸಿದ್ಧಪ್ಪ, ಜಾನಪದ ಅಕಾಡೆಮಿಯ ಅಧ್ಯಕ್ಷರೂ ಆಗಿದ್ದ ಹಿರಿಯ ಕಲಾವಿದ ಪಿಚ್ಚಳ್ಳಿ ಶ್ರೀನಿವಾಸ್, ಹಿರಿಯ ಚಿಂತಕ ಸುಬ್ಬು ಹೊಲೆಯಾರ್ ಮುಂತಾದ ಅನೇಕರು ಭೇಟಿ ನೀಡಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ರಾಜಕಾರಣಿಗಳಾದ ಮಹಿಮಾ ಪಟೇಲ್ ಮತ್ತು ಬಿ.ಆರ್. ಪಾಟೀಲ್ ಅವರೂ ಸಹ ರಾಜಕಾರಣಿಗಳಾಗಿರದೆ, ಹೋರಾಟಗಾರರಾಗಿ ರೈತರಿಗೆ ಬೆಂಬಲ ನೀಡಲು ಬಂದಿರುವುದಾಗಿ ಹೇಳಿದ್ದಾರೆ. ವಿವಿಧ ಚಳುವಳಿಗಳ ಮುಖಂಡರಾದ ಸಿದ್ಧನಗೌಡ ಪಾಟೀಲ್, ಮಾವಳ್ಳಿ ಶಂಕರ್, ಸಾತಿ ಸುಂದರೇಶ್, ಮೀನಾಕ್ಷಿ ಸುಂದರಂ, ಬಡಗಲಪುರ ನಾಗೇಂದ್ರ, ವರಲಕ್ಷ್ಮಿ, ಚುಕ್ಕಿ ನಂಜುಂಡಸ್ವಾಮಿ, ಕ್ಲಿಫ್ಟನ್ ರೊಜಾರಿಯೋ, ನಿರ್ಮಲ, ಕೆಜೆಎಸ್ ಮರಿಯಪ್ಪ ಮೊದಲಾದವರು ಹೋರಾಟದಲ್ಲಿ ಭಾಗವಹಿಸಿದ್ದರು.

ಜುಲೈ 4ಕ್ಕೆ ‘ನಾಡ ಉಳಿಸಿ ಸಮಾವೇಶ’: ದೇವನಹಳ್ಳಿ ಭೂಸ್ವಾಧೀನ ಕೈಬಿಡುವಂತೆ ರೈತರಿಂದ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...