Homeಕರ್ನಾಟಕದೇವನಹಳ್ಳಿ: ಸಮಯ ಕೇಳಿ ಸರಕಾರವು ರೈತರಿಗೆ ದ್ರೋಹ ಬಗೆಯುತ್ತಿದೆ; ಮೈಸೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ನಟ ಪ್ರಕಾಶ್ ರಾಜ್...

ದೇವನಹಳ್ಳಿ: ಸಮಯ ಕೇಳಿ ಸರಕಾರವು ರೈತರಿಗೆ ದ್ರೋಹ ಬಗೆಯುತ್ತಿದೆ; ಮೈಸೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ನಟ ಪ್ರಕಾಶ್ ರಾಜ್ ಆರೋಪ

- Advertisement -
- Advertisement -

ಮೈಸೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನಲ್ಲಿ ಕೈಗಾರಿಕಾ ಅಭಿವೃದ್ಧಿಗಾಗಿ ರೈತರ ಭೂಮಿ ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಕ್ರಮದ ವಿರುದ್ಧ ವ್ಯಾಪಕ ಆಕ್ರೋಶ ಭುಗಿಲೆದ್ದಿದೆ. ಈ ವಿಚಾರವಾಗಿ ಮೈಸೂರಿನಲ್ಲಿ ಮಾತನಾಡಿದ ಖ್ಯಾತ ನಟ, ನಿರ್ದೇಶಕ ಹಾಗೂ ಹೋರಾಟಗಾರ ಪ್ರಕಾಶ್ ರಾಜ್ ಅವರು, ಸರ್ಕಾರ ರೈತರ ಒಗ್ಗಟ್ಟನ್ನು ಒಡೆಯಲು ಮತ್ತು ಅವರನ್ನು ಹೆದರಿಸಲು ಹೊಸ ನಾಟಕವಾಡುತ್ತಿದೆ ಎಂದು ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ನಾವು ರೈತರ ಭೂಮಿಯನ್ನು ಕಿತ್ತುಕೊಳ್ಳಲು ಬಿಡುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದ್ದು, ದೊಡ್ಡ ಹೋರಾಟಕ್ಕೆ ಸಿದ್ಧತೆ ನಡೆಸುವುದಾಗಿ ಘೋಷಿಸಿದ್ದಾರೆ.

‘ಇದು ಹಸಿರು ವಲಯ, ಸ್ಲಂ ಆಗುತ್ತಿದೆ ಬೆಂಗಳೂರು’: ಸರಕಾರವು ಈ ದೇವನಹಳ್ಳಿಯ ಈ ಭೂಸ್ವಾಧೀನ ಪ್ರದೇಶವನ್ನು ‘ಹಸಿರು ವಲಯ’ ಮಾಡುವುದಾಗಿ ಹೇಳುತ್ತಿರುವುದನ್ನು ಪ್ರಶ್ನಿಸಿದ ಪ್ರಕಾಶ್ ರಾಜ್, “ಆ ಭೂಮಿ ಈಗಾಗಲೇ ಹಸಿರು ವಲಯವಾಗಿದೆ. 1500 ಎಕರೆ ಭೂಮಿಯಲ್ಲಿ ಭೂರಹಿತರಿದ್ದಾರೆ, ಅವರಿಗೆ ಏನು ಪರಿಹಾರ ನೀಡುತ್ತೀರಿ?” ಎಂದು ಪ್ರಶ್ನಿಸಿದ್ದಾರೆ. “ಯಾರೋ ಒಬ್ಬರು ಸಚಿವರು ಅದು ಹಾಗೆ ಬಿಟ್ಟರೆ ಸ್ಲಂ ಆಗುತ್ತದೆ ಎಂದು ಹೇಳುತ್ತಾರೆ. ಆದರೆ, ಇಡೀ ಬೆಂಗಳೂರನ್ನು ವಶಪಡಿಸಿಕೊಂಡು ಸ್ಲಂ ಮಾಡುತ್ತಿರುವುದು ನೀವೇ” ಎಂದು ಅವರು ಸರ್ಕಾರವನ್ನು ದೂರಿದ್ದಾರೆ.

ಸಿದ್ದರಾಮಯ್ಯ ಸರ್ಕಾರದ ವಿರುದ್ಧ ‘ನಾಟಕ’ದ ಆರೋಪ: “ಸರಕಾರದ ಪ್ರತಿನಿಧಿಗಳು ನಿನ್ನೆಯಿಂದ (ಜು.10) ಹೊಸ ನಾಟಕ ಮಾಡುತ್ತಿದ್ದಾರೆ. ರೈತರ ನಡುವಿನ ಒಗ್ಗಟ್ಟನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಸಮಯ ಕೇಳಿ ಸರಕಾರವು ರೈತರಿಗೆ ದ್ರೋಹ ಬಗೆಯುತ್ತಿದೆ. ಈ ರೀತಿ ನಾಟಕ ಮಾಡಬೇಡಿ ಸಿದ್ದರಾಮಯ್ಯನವರೇ, ರೈತರನ್ನು ನೀವೂ ಹೆದರಿಸಬೇಡಿ” ಎಂದು ಪ್ರಕಾಶ್ ರಾಜ್ ನೇರವಾಗಿ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ. ಸರ್ಕಾರ ಮನವಿ ಮಾಡಿಕೊಂಡಂತೆ ನಡೆದುಕೊಳ್ಳುತ್ತಿಲ್ಲ, ಬದಲಾಗಿ ಸರಕಾರ ಈಗ ಏನು ಮಾಡುತ್ತಿದೆ ಎಂಬುದು ಜನರಿಗೆ ನೇರವಾಗಿ ಗೊತ್ತಾಗುತ್ತಿದೆ ಎಂದು ಅವರು ಹೇಳಿದ್ದಾರೆ.

“ಸಿದ್ದರಾಮಣ್ಣ, ಎಂ.ಬಿ.ಪಾಟೀಲ್ ಅವರೇ, ನಿಮ್ಮ ನಾಟಕ ಗೊತ್ತಾಗುತ್ತಿದೆ. ಹಳ್ಳಿಗಳಿಗೆ ನಿಮ್ಮ ಪುಡಾರಿಗಳು ಹೋಗಿ ರೈತರಿಗೆ ಭಯ ಹುಟ್ಟಿಸುತ್ತಿದ್ದಾರೆ. ಅದರಲ್ಲಿ ಕೆಲವರನ್ನು ಕರೆದುಕೊಂಡು ಬಂದು ಪರಿಹಾರ ಕೇಳಿಸುತ್ತಿದ್ದಾರೆ. ಇದೆಲ್ಲವೂ ನಾಟಕ ಎಂದು ಜನರಿಗೆ ಮತ್ತು ನಮಗೆ ನೇರವಾಗಿ ಗೊತ್ತಾಗುತ್ತಿದೆ” ಎಂದು ಪ್ರಕಾಶ್ ರಾಜ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಭೂಸ್ವಾಧೀನಕ್ಕೆ ಅವಕಾಶವಿಲ್ಲ, ದೊಡ್ಡ ಹೋರಾಟದ ಎಚ್ಚರಿಕೆ: “ದೇವನಹಳ್ಳಿ ರೈತರ ಭೂಮಿಯನ್ನು ಕಿತ್ತುಕೊಳ್ಳಲು ನಾವು ಬಿಡುವುದಿಲ್ಲ. ದೊಡ್ಡಮಟ್ಟದ ಹೋರಾಟವನ್ನೇ ಮಾಡುತ್ತೇವೆ” ಎಂದು ಪ್ರಕಾಶ್ ರಾಜ್ ಖಡಾಖಂಡಿತವಾಗಿ ಹೇಳಿದ್ದಾರೆ. ಜುಲೈ 15ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುವುದಾಗಿ ತಿಳಿಸಿದ್ದು, ಮುಖ್ಯಮಂತ್ರಿ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಮುಂದಿನ ಹೋರಾಟದ ಸ್ವರೂಪ ನಿರ್ಣಯಿಸಲಾಗುವುದು ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ: ಸಿದ್ದರಾಮಯ್ಯ ಅವರು ಪ್ರತಿಪಕ್ಷದ ನಾಯಕರಾಗಿದ್ದಾಗ ದೇವನಹಳ್ಳಿಯ ಭೂಸ್ವಾಧೀನ ಸಂಬಂಧಪಟ್ಟಂತೆ ಬಿಜೆಪಿ ಸರಕಾರವು ಪ್ರಾಥಮಿಕ ಅಧಿಸೂಚನೆ ಹೊರಡಿಸಿತ್ತು. ಆಗ ಸಿದ್ದರಾಮಯ್ಯನವರು ರೈತರ ಪರವಾಗಿ ಹೋರಾಟ ಮಾಡಿದ್ದರು. ಆದರೆ, ಅವರು ಮುಖ್ಯಮಂತ್ರಿಯಾದ ಮೇಲೆ ಮಂತ್ರಿಗಳ ಪ್ರಭಾವಕ್ಕೆ ಮಣಿದಿದ್ದಾರೆ ಎಂದು ಪ್ರಕಾಶ್ ರಾಜ್ ಆರೋಪಿಸಿದ್ದಾರೆ. “ಇದು ಮುಖ್ಯಮಂತ್ರಿಯಿಂದ ರೈತ ವಿರೋಧಿ ನಿಲುವುವಾಗಿದೆ” ಎಂದು ಅವರು ಖಂಡಿಸಿದ್ದಾರೆ.

‘ನಾನು ಕನ್ನಡಿಗ, ಕರ್ನಾಟಕದ ಮಗ’: ಎಂ.ಬಿ.ಪಾಟೀಲ್‌ಗೆ ಸವಾಲು “ನಾನು ಕನ್ನಡಿಗ, ಕರ್ನಾಟಕದ ಮಗ, ರಾಜ್ಯದ ರೈತರ ಪರ ಹೋರಾಟ ಮಾಡುತ್ತೇನೆ” ಎಂದು ಘೋಷಿಸಿದ ಪ್ರಕಾಶ್ ರಾಜ್, “ಆಂಧ್ರ, ಗುಜರಾತ್‌ನಲ್ಲಿ ಹೋರಾಟ ಮಾಡಿ ಎಂದು ಹೇಳಲು ಎಂ.ಬಿ.ಪಾಟೀಲ್ ಯಾರು?” ಎಂದು ಸಚಿವ ಎಂ.ಬಿ.ಪಾಟೀಲ್ ಅವರನ್ನು ಪ್ರಶ್ನಿಸಿದ್ದಾರೆ. ಈ ಮೂಲಕ ತಮ್ಮ ಹೋರಾಟದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣದ 13 ಗ್ರಾಮಗಳ ರೈತರು, ಕೈಗಾರಿಕಾ ಅಭಿವೃದ್ಧಿಗಾಗಿ ಕರ್ನಾಟಕ ಸರ್ಕಾರವು ತಮ್ಮ ಭೂಮಿಯನ್ನು “ಬಲವಂತವಾಗಿ” ಸ್ವಾಧೀನಪಡಿಸಿಕೊಳ್ಳುವುದರ ವಿರುದ್ಧ ಸಾವಿರದ ನೂರು ದಿನಗಳಿಗಿಂತಲೂ ಹೆಚ್ಚು ಕಾಲ ಆಂದೋಲನ ನಡೆಸುತ್ತಿದ್ದಾರೆ. 2022ರಲ್ಲಿ, ಬಸವರಾಜ ಬೊಮ್ಮಾಯಿ ಸರ್ಕಾರವು ಉದ್ದೇಶಿತ ಹೈಟೆಕ್ ರಕ್ಷಣಾ ಮತ್ತು ಏರೋಸ್ಪೇಸ್ ಪಾರ್ಕ್‌ಗಾಗಿ 1,777 ಎಕರೆ ಭೂಮಿಯನ್ನು ಅಧಿಸೂಚಿಸಿತ್ತು. ಈ ಅತ್ಯಂತ ಫಲವತ್ತಾದ ಪ್ರದೇಶವು ಬೆಂಗಳೂರಿನ ಆಹಾರ ಮತ್ತು ಪೋಷಕಾಂಶ ಭದ್ರತೆಗೆ ಜೀವನಾಡಿಯಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಬಡಗಲಪುರ ನಾಗೇಂದ್ರ, ಚುಕ್ಕಿ ನಂಜುಂಡಸ್ವಾಮಿ, ಗುರಪ್ರಸಾದ್‌ ಕೆರೆಗೋಡು, ಸಿದ್ದರಾಜು ಮುಂತಾದವರು ಉಪಸ್ಥಿತರಿದ್ದರು.

ದೇವನಹಳ್ಳಿ: ಅಂತಿಮ ಅಧಿಸೂಚನೆ ಹಿಂಪಡೆಯಲು ಸರ್ಕಾರಕ್ಕೆ ಅಧಿಕಾರವಿದೆ – ರಾಜ್ಯ ಹೈಕೋರ್ಟ್‌ ವಕೀಲ ಕ್ಲಿಫ್ಟನ್ ಡಿ’ ರೋಜಾರಿಯೋ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...