Homeಕರ್ನಾಟಕದೇವನಹಳ್ಳಿ: ಸಮಯ ಕೇಳಿ ಸರಕಾರವು ರೈತರಿಗೆ ದ್ರೋಹ ಬಗೆಯುತ್ತಿದೆ; ಮೈಸೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ನಟ ಪ್ರಕಾಶ್ ರಾಜ್...

ದೇವನಹಳ್ಳಿ: ಸಮಯ ಕೇಳಿ ಸರಕಾರವು ರೈತರಿಗೆ ದ್ರೋಹ ಬಗೆಯುತ್ತಿದೆ; ಮೈಸೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ನಟ ಪ್ರಕಾಶ್ ರಾಜ್ ಆರೋಪ

- Advertisement -
- Advertisement -

ಮೈಸೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನಲ್ಲಿ ಕೈಗಾರಿಕಾ ಅಭಿವೃದ್ಧಿಗಾಗಿ ರೈತರ ಭೂಮಿ ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಕ್ರಮದ ವಿರುದ್ಧ ವ್ಯಾಪಕ ಆಕ್ರೋಶ ಭುಗಿಲೆದ್ದಿದೆ. ಈ ವಿಚಾರವಾಗಿ ಮೈಸೂರಿನಲ್ಲಿ ಮಾತನಾಡಿದ ಖ್ಯಾತ ನಟ, ನಿರ್ದೇಶಕ ಹಾಗೂ ಹೋರಾಟಗಾರ ಪ್ರಕಾಶ್ ರಾಜ್ ಅವರು, ಸರ್ಕಾರ ರೈತರ ಒಗ್ಗಟ್ಟನ್ನು ಒಡೆಯಲು ಮತ್ತು ಅವರನ್ನು ಹೆದರಿಸಲು ಹೊಸ ನಾಟಕವಾಡುತ್ತಿದೆ ಎಂದು ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ನಾವು ರೈತರ ಭೂಮಿಯನ್ನು ಕಿತ್ತುಕೊಳ್ಳಲು ಬಿಡುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದ್ದು, ದೊಡ್ಡ ಹೋರಾಟಕ್ಕೆ ಸಿದ್ಧತೆ ನಡೆಸುವುದಾಗಿ ಘೋಷಿಸಿದ್ದಾರೆ.

‘ಇದು ಹಸಿರು ವಲಯ, ಸ್ಲಂ ಆಗುತ್ತಿದೆ ಬೆಂಗಳೂರು’: ಸರಕಾರವು ಈ ದೇವನಹಳ್ಳಿಯ ಈ ಭೂಸ್ವಾಧೀನ ಪ್ರದೇಶವನ್ನು ‘ಹಸಿರು ವಲಯ’ ಮಾಡುವುದಾಗಿ ಹೇಳುತ್ತಿರುವುದನ್ನು ಪ್ರಶ್ನಿಸಿದ ಪ್ರಕಾಶ್ ರಾಜ್, “ಆ ಭೂಮಿ ಈಗಾಗಲೇ ಹಸಿರು ವಲಯವಾಗಿದೆ. 1500 ಎಕರೆ ಭೂಮಿಯಲ್ಲಿ ಭೂರಹಿತರಿದ್ದಾರೆ, ಅವರಿಗೆ ಏನು ಪರಿಹಾರ ನೀಡುತ್ತೀರಿ?” ಎಂದು ಪ್ರಶ್ನಿಸಿದ್ದಾರೆ. “ಯಾರೋ ಒಬ್ಬರು ಸಚಿವರು ಅದು ಹಾಗೆ ಬಿಟ್ಟರೆ ಸ್ಲಂ ಆಗುತ್ತದೆ ಎಂದು ಹೇಳುತ್ತಾರೆ. ಆದರೆ, ಇಡೀ ಬೆಂಗಳೂರನ್ನು ವಶಪಡಿಸಿಕೊಂಡು ಸ್ಲಂ ಮಾಡುತ್ತಿರುವುದು ನೀವೇ” ಎಂದು ಅವರು ಸರ್ಕಾರವನ್ನು ದೂರಿದ್ದಾರೆ.

ಸಿದ್ದರಾಮಯ್ಯ ಸರ್ಕಾರದ ವಿರುದ್ಧ ‘ನಾಟಕ’ದ ಆರೋಪ: “ಸರಕಾರದ ಪ್ರತಿನಿಧಿಗಳು ನಿನ್ನೆಯಿಂದ (ಜು.10) ಹೊಸ ನಾಟಕ ಮಾಡುತ್ತಿದ್ದಾರೆ. ರೈತರ ನಡುವಿನ ಒಗ್ಗಟ್ಟನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಸಮಯ ಕೇಳಿ ಸರಕಾರವು ರೈತರಿಗೆ ದ್ರೋಹ ಬಗೆಯುತ್ತಿದೆ. ಈ ರೀತಿ ನಾಟಕ ಮಾಡಬೇಡಿ ಸಿದ್ದರಾಮಯ್ಯನವರೇ, ರೈತರನ್ನು ನೀವೂ ಹೆದರಿಸಬೇಡಿ” ಎಂದು ಪ್ರಕಾಶ್ ರಾಜ್ ನೇರವಾಗಿ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ. ಸರ್ಕಾರ ಮನವಿ ಮಾಡಿಕೊಂಡಂತೆ ನಡೆದುಕೊಳ್ಳುತ್ತಿಲ್ಲ, ಬದಲಾಗಿ ಸರಕಾರ ಈಗ ಏನು ಮಾಡುತ್ತಿದೆ ಎಂಬುದು ಜನರಿಗೆ ನೇರವಾಗಿ ಗೊತ್ತಾಗುತ್ತಿದೆ ಎಂದು ಅವರು ಹೇಳಿದ್ದಾರೆ.

“ಸಿದ್ದರಾಮಣ್ಣ, ಎಂ.ಬಿ.ಪಾಟೀಲ್ ಅವರೇ, ನಿಮ್ಮ ನಾಟಕ ಗೊತ್ತಾಗುತ್ತಿದೆ. ಹಳ್ಳಿಗಳಿಗೆ ನಿಮ್ಮ ಪುಡಾರಿಗಳು ಹೋಗಿ ರೈತರಿಗೆ ಭಯ ಹುಟ್ಟಿಸುತ್ತಿದ್ದಾರೆ. ಅದರಲ್ಲಿ ಕೆಲವರನ್ನು ಕರೆದುಕೊಂಡು ಬಂದು ಪರಿಹಾರ ಕೇಳಿಸುತ್ತಿದ್ದಾರೆ. ಇದೆಲ್ಲವೂ ನಾಟಕ ಎಂದು ಜನರಿಗೆ ಮತ್ತು ನಮಗೆ ನೇರವಾಗಿ ಗೊತ್ತಾಗುತ್ತಿದೆ” ಎಂದು ಪ್ರಕಾಶ್ ರಾಜ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಭೂಸ್ವಾಧೀನಕ್ಕೆ ಅವಕಾಶವಿಲ್ಲ, ದೊಡ್ಡ ಹೋರಾಟದ ಎಚ್ಚರಿಕೆ: “ದೇವನಹಳ್ಳಿ ರೈತರ ಭೂಮಿಯನ್ನು ಕಿತ್ತುಕೊಳ್ಳಲು ನಾವು ಬಿಡುವುದಿಲ್ಲ. ದೊಡ್ಡಮಟ್ಟದ ಹೋರಾಟವನ್ನೇ ಮಾಡುತ್ತೇವೆ” ಎಂದು ಪ್ರಕಾಶ್ ರಾಜ್ ಖಡಾಖಂಡಿತವಾಗಿ ಹೇಳಿದ್ದಾರೆ. ಜುಲೈ 15ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುವುದಾಗಿ ತಿಳಿಸಿದ್ದು, ಮುಖ್ಯಮಂತ್ರಿ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಮುಂದಿನ ಹೋರಾಟದ ಸ್ವರೂಪ ನಿರ್ಣಯಿಸಲಾಗುವುದು ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ: ಸಿದ್ದರಾಮಯ್ಯ ಅವರು ಪ್ರತಿಪಕ್ಷದ ನಾಯಕರಾಗಿದ್ದಾಗ ದೇವನಹಳ್ಳಿಯ ಭೂಸ್ವಾಧೀನ ಸಂಬಂಧಪಟ್ಟಂತೆ ಬಿಜೆಪಿ ಸರಕಾರವು ಪ್ರಾಥಮಿಕ ಅಧಿಸೂಚನೆ ಹೊರಡಿಸಿತ್ತು. ಆಗ ಸಿದ್ದರಾಮಯ್ಯನವರು ರೈತರ ಪರವಾಗಿ ಹೋರಾಟ ಮಾಡಿದ್ದರು. ಆದರೆ, ಅವರು ಮುಖ್ಯಮಂತ್ರಿಯಾದ ಮೇಲೆ ಮಂತ್ರಿಗಳ ಪ್ರಭಾವಕ್ಕೆ ಮಣಿದಿದ್ದಾರೆ ಎಂದು ಪ್ರಕಾಶ್ ರಾಜ್ ಆರೋಪಿಸಿದ್ದಾರೆ. “ಇದು ಮುಖ್ಯಮಂತ್ರಿಯಿಂದ ರೈತ ವಿರೋಧಿ ನಿಲುವುವಾಗಿದೆ” ಎಂದು ಅವರು ಖಂಡಿಸಿದ್ದಾರೆ.

‘ನಾನು ಕನ್ನಡಿಗ, ಕರ್ನಾಟಕದ ಮಗ’: ಎಂ.ಬಿ.ಪಾಟೀಲ್‌ಗೆ ಸವಾಲು “ನಾನು ಕನ್ನಡಿಗ, ಕರ್ನಾಟಕದ ಮಗ, ರಾಜ್ಯದ ರೈತರ ಪರ ಹೋರಾಟ ಮಾಡುತ್ತೇನೆ” ಎಂದು ಘೋಷಿಸಿದ ಪ್ರಕಾಶ್ ರಾಜ್, “ಆಂಧ್ರ, ಗುಜರಾತ್‌ನಲ್ಲಿ ಹೋರಾಟ ಮಾಡಿ ಎಂದು ಹೇಳಲು ಎಂ.ಬಿ.ಪಾಟೀಲ್ ಯಾರು?” ಎಂದು ಸಚಿವ ಎಂ.ಬಿ.ಪಾಟೀಲ್ ಅವರನ್ನು ಪ್ರಶ್ನಿಸಿದ್ದಾರೆ. ಈ ಮೂಲಕ ತಮ್ಮ ಹೋರಾಟದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣದ 13 ಗ್ರಾಮಗಳ ರೈತರು, ಕೈಗಾರಿಕಾ ಅಭಿವೃದ್ಧಿಗಾಗಿ ಕರ್ನಾಟಕ ಸರ್ಕಾರವು ತಮ್ಮ ಭೂಮಿಯನ್ನು “ಬಲವಂತವಾಗಿ” ಸ್ವಾಧೀನಪಡಿಸಿಕೊಳ್ಳುವುದರ ವಿರುದ್ಧ ಸಾವಿರದ ನೂರು ದಿನಗಳಿಗಿಂತಲೂ ಹೆಚ್ಚು ಕಾಲ ಆಂದೋಲನ ನಡೆಸುತ್ತಿದ್ದಾರೆ. 2022ರಲ್ಲಿ, ಬಸವರಾಜ ಬೊಮ್ಮಾಯಿ ಸರ್ಕಾರವು ಉದ್ದೇಶಿತ ಹೈಟೆಕ್ ರಕ್ಷಣಾ ಮತ್ತು ಏರೋಸ್ಪೇಸ್ ಪಾರ್ಕ್‌ಗಾಗಿ 1,777 ಎಕರೆ ಭೂಮಿಯನ್ನು ಅಧಿಸೂಚಿಸಿತ್ತು. ಈ ಅತ್ಯಂತ ಫಲವತ್ತಾದ ಪ್ರದೇಶವು ಬೆಂಗಳೂರಿನ ಆಹಾರ ಮತ್ತು ಪೋಷಕಾಂಶ ಭದ್ರತೆಗೆ ಜೀವನಾಡಿಯಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಬಡಗಲಪುರ ನಾಗೇಂದ್ರ, ಚುಕ್ಕಿ ನಂಜುಂಡಸ್ವಾಮಿ, ಗುರಪ್ರಸಾದ್‌ ಕೆರೆಗೋಡು, ಸಿದ್ದರಾಜು ಮುಂತಾದವರು ಉಪಸ್ಥಿತರಿದ್ದರು.

ದೇವನಹಳ್ಳಿ: ಅಂತಿಮ ಅಧಿಸೂಚನೆ ಹಿಂಪಡೆಯಲು ಸರ್ಕಾರಕ್ಕೆ ಅಧಿಕಾರವಿದೆ – ರಾಜ್ಯ ಹೈಕೋರ್ಟ್‌ ವಕೀಲ ಕ್ಲಿಫ್ಟನ್ ಡಿ’ ರೋಜಾರಿಯೋ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...