Homeಕರ್ನಾಟಕದೇವನಹಳ್ಳಿ: ಸಮಯ ಕೇಳಿ ಸರಕಾರವು ರೈತರಿಗೆ ದ್ರೋಹ ಬಗೆಯುತ್ತಿದೆ; ಮೈಸೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ನಟ ಪ್ರಕಾಶ್ ರಾಜ್...

ದೇವನಹಳ್ಳಿ: ಸಮಯ ಕೇಳಿ ಸರಕಾರವು ರೈತರಿಗೆ ದ್ರೋಹ ಬಗೆಯುತ್ತಿದೆ; ಮೈಸೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ನಟ ಪ್ರಕಾಶ್ ರಾಜ್ ಆರೋಪ

- Advertisement -
- Advertisement -

ಮೈಸೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನಲ್ಲಿ ಕೈಗಾರಿಕಾ ಅಭಿವೃದ್ಧಿಗಾಗಿ ರೈತರ ಭೂಮಿ ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಕ್ರಮದ ವಿರುದ್ಧ ವ್ಯಾಪಕ ಆಕ್ರೋಶ ಭುಗಿಲೆದ್ದಿದೆ. ಈ ವಿಚಾರವಾಗಿ ಮೈಸೂರಿನಲ್ಲಿ ಮಾತನಾಡಿದ ಖ್ಯಾತ ನಟ, ನಿರ್ದೇಶಕ ಹಾಗೂ ಹೋರಾಟಗಾರ ಪ್ರಕಾಶ್ ರಾಜ್ ಅವರು, ಸರ್ಕಾರ ರೈತರ ಒಗ್ಗಟ್ಟನ್ನು ಒಡೆಯಲು ಮತ್ತು ಅವರನ್ನು ಹೆದರಿಸಲು ಹೊಸ ನಾಟಕವಾಡುತ್ತಿದೆ ಎಂದು ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ನಾವು ರೈತರ ಭೂಮಿಯನ್ನು ಕಿತ್ತುಕೊಳ್ಳಲು ಬಿಡುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದ್ದು, ದೊಡ್ಡ ಹೋರಾಟಕ್ಕೆ ಸಿದ್ಧತೆ ನಡೆಸುವುದಾಗಿ ಘೋಷಿಸಿದ್ದಾರೆ.

‘ಇದು ಹಸಿರು ವಲಯ, ಸ್ಲಂ ಆಗುತ್ತಿದೆ ಬೆಂಗಳೂರು’: ಸರಕಾರವು ಈ ದೇವನಹಳ್ಳಿಯ ಈ ಭೂಸ್ವಾಧೀನ ಪ್ರದೇಶವನ್ನು ‘ಹಸಿರು ವಲಯ’ ಮಾಡುವುದಾಗಿ ಹೇಳುತ್ತಿರುವುದನ್ನು ಪ್ರಶ್ನಿಸಿದ ಪ್ರಕಾಶ್ ರಾಜ್, “ಆ ಭೂಮಿ ಈಗಾಗಲೇ ಹಸಿರು ವಲಯವಾಗಿದೆ. 1500 ಎಕರೆ ಭೂಮಿಯಲ್ಲಿ ಭೂರಹಿತರಿದ್ದಾರೆ, ಅವರಿಗೆ ಏನು ಪರಿಹಾರ ನೀಡುತ್ತೀರಿ?” ಎಂದು ಪ್ರಶ್ನಿಸಿದ್ದಾರೆ. “ಯಾರೋ ಒಬ್ಬರು ಸಚಿವರು ಅದು ಹಾಗೆ ಬಿಟ್ಟರೆ ಸ್ಲಂ ಆಗುತ್ತದೆ ಎಂದು ಹೇಳುತ್ತಾರೆ. ಆದರೆ, ಇಡೀ ಬೆಂಗಳೂರನ್ನು ವಶಪಡಿಸಿಕೊಂಡು ಸ್ಲಂ ಮಾಡುತ್ತಿರುವುದು ನೀವೇ” ಎಂದು ಅವರು ಸರ್ಕಾರವನ್ನು ದೂರಿದ್ದಾರೆ.

ಸಿದ್ದರಾಮಯ್ಯ ಸರ್ಕಾರದ ವಿರುದ್ಧ ‘ನಾಟಕ’ದ ಆರೋಪ: “ಸರಕಾರದ ಪ್ರತಿನಿಧಿಗಳು ನಿನ್ನೆಯಿಂದ (ಜು.10) ಹೊಸ ನಾಟಕ ಮಾಡುತ್ತಿದ್ದಾರೆ. ರೈತರ ನಡುವಿನ ಒಗ್ಗಟ್ಟನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಸಮಯ ಕೇಳಿ ಸರಕಾರವು ರೈತರಿಗೆ ದ್ರೋಹ ಬಗೆಯುತ್ತಿದೆ. ಈ ರೀತಿ ನಾಟಕ ಮಾಡಬೇಡಿ ಸಿದ್ದರಾಮಯ್ಯನವರೇ, ರೈತರನ್ನು ನೀವೂ ಹೆದರಿಸಬೇಡಿ” ಎಂದು ಪ್ರಕಾಶ್ ರಾಜ್ ನೇರವಾಗಿ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ. ಸರ್ಕಾರ ಮನವಿ ಮಾಡಿಕೊಂಡಂತೆ ನಡೆದುಕೊಳ್ಳುತ್ತಿಲ್ಲ, ಬದಲಾಗಿ ಸರಕಾರ ಈಗ ಏನು ಮಾಡುತ್ತಿದೆ ಎಂಬುದು ಜನರಿಗೆ ನೇರವಾಗಿ ಗೊತ್ತಾಗುತ್ತಿದೆ ಎಂದು ಅವರು ಹೇಳಿದ್ದಾರೆ.

“ಸಿದ್ದರಾಮಣ್ಣ, ಎಂ.ಬಿ.ಪಾಟೀಲ್ ಅವರೇ, ನಿಮ್ಮ ನಾಟಕ ಗೊತ್ತಾಗುತ್ತಿದೆ. ಹಳ್ಳಿಗಳಿಗೆ ನಿಮ್ಮ ಪುಡಾರಿಗಳು ಹೋಗಿ ರೈತರಿಗೆ ಭಯ ಹುಟ್ಟಿಸುತ್ತಿದ್ದಾರೆ. ಅದರಲ್ಲಿ ಕೆಲವರನ್ನು ಕರೆದುಕೊಂಡು ಬಂದು ಪರಿಹಾರ ಕೇಳಿಸುತ್ತಿದ್ದಾರೆ. ಇದೆಲ್ಲವೂ ನಾಟಕ ಎಂದು ಜನರಿಗೆ ಮತ್ತು ನಮಗೆ ನೇರವಾಗಿ ಗೊತ್ತಾಗುತ್ತಿದೆ” ಎಂದು ಪ್ರಕಾಶ್ ರಾಜ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಭೂಸ್ವಾಧೀನಕ್ಕೆ ಅವಕಾಶವಿಲ್ಲ, ದೊಡ್ಡ ಹೋರಾಟದ ಎಚ್ಚರಿಕೆ: “ದೇವನಹಳ್ಳಿ ರೈತರ ಭೂಮಿಯನ್ನು ಕಿತ್ತುಕೊಳ್ಳಲು ನಾವು ಬಿಡುವುದಿಲ್ಲ. ದೊಡ್ಡಮಟ್ಟದ ಹೋರಾಟವನ್ನೇ ಮಾಡುತ್ತೇವೆ” ಎಂದು ಪ್ರಕಾಶ್ ರಾಜ್ ಖಡಾಖಂಡಿತವಾಗಿ ಹೇಳಿದ್ದಾರೆ. ಜುಲೈ 15ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುವುದಾಗಿ ತಿಳಿಸಿದ್ದು, ಮುಖ್ಯಮಂತ್ರಿ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಮುಂದಿನ ಹೋರಾಟದ ಸ್ವರೂಪ ನಿರ್ಣಯಿಸಲಾಗುವುದು ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ: ಸಿದ್ದರಾಮಯ್ಯ ಅವರು ಪ್ರತಿಪಕ್ಷದ ನಾಯಕರಾಗಿದ್ದಾಗ ದೇವನಹಳ್ಳಿಯ ಭೂಸ್ವಾಧೀನ ಸಂಬಂಧಪಟ್ಟಂತೆ ಬಿಜೆಪಿ ಸರಕಾರವು ಪ್ರಾಥಮಿಕ ಅಧಿಸೂಚನೆ ಹೊರಡಿಸಿತ್ತು. ಆಗ ಸಿದ್ದರಾಮಯ್ಯನವರು ರೈತರ ಪರವಾಗಿ ಹೋರಾಟ ಮಾಡಿದ್ದರು. ಆದರೆ, ಅವರು ಮುಖ್ಯಮಂತ್ರಿಯಾದ ಮೇಲೆ ಮಂತ್ರಿಗಳ ಪ್ರಭಾವಕ್ಕೆ ಮಣಿದಿದ್ದಾರೆ ಎಂದು ಪ್ರಕಾಶ್ ರಾಜ್ ಆರೋಪಿಸಿದ್ದಾರೆ. “ಇದು ಮುಖ್ಯಮಂತ್ರಿಯಿಂದ ರೈತ ವಿರೋಧಿ ನಿಲುವುವಾಗಿದೆ” ಎಂದು ಅವರು ಖಂಡಿಸಿದ್ದಾರೆ.

‘ನಾನು ಕನ್ನಡಿಗ, ಕರ್ನಾಟಕದ ಮಗ’: ಎಂ.ಬಿ.ಪಾಟೀಲ್‌ಗೆ ಸವಾಲು “ನಾನು ಕನ್ನಡಿಗ, ಕರ್ನಾಟಕದ ಮಗ, ರಾಜ್ಯದ ರೈತರ ಪರ ಹೋರಾಟ ಮಾಡುತ್ತೇನೆ” ಎಂದು ಘೋಷಿಸಿದ ಪ್ರಕಾಶ್ ರಾಜ್, “ಆಂಧ್ರ, ಗುಜರಾತ್‌ನಲ್ಲಿ ಹೋರಾಟ ಮಾಡಿ ಎಂದು ಹೇಳಲು ಎಂ.ಬಿ.ಪಾಟೀಲ್ ಯಾರು?” ಎಂದು ಸಚಿವ ಎಂ.ಬಿ.ಪಾಟೀಲ್ ಅವರನ್ನು ಪ್ರಶ್ನಿಸಿದ್ದಾರೆ. ಈ ಮೂಲಕ ತಮ್ಮ ಹೋರಾಟದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣದ 13 ಗ್ರಾಮಗಳ ರೈತರು, ಕೈಗಾರಿಕಾ ಅಭಿವೃದ್ಧಿಗಾಗಿ ಕರ್ನಾಟಕ ಸರ್ಕಾರವು ತಮ್ಮ ಭೂಮಿಯನ್ನು “ಬಲವಂತವಾಗಿ” ಸ್ವಾಧೀನಪಡಿಸಿಕೊಳ್ಳುವುದರ ವಿರುದ್ಧ ಸಾವಿರದ ನೂರು ದಿನಗಳಿಗಿಂತಲೂ ಹೆಚ್ಚು ಕಾಲ ಆಂದೋಲನ ನಡೆಸುತ್ತಿದ್ದಾರೆ. 2022ರಲ್ಲಿ, ಬಸವರಾಜ ಬೊಮ್ಮಾಯಿ ಸರ್ಕಾರವು ಉದ್ದೇಶಿತ ಹೈಟೆಕ್ ರಕ್ಷಣಾ ಮತ್ತು ಏರೋಸ್ಪೇಸ್ ಪಾರ್ಕ್‌ಗಾಗಿ 1,777 ಎಕರೆ ಭೂಮಿಯನ್ನು ಅಧಿಸೂಚಿಸಿತ್ತು. ಈ ಅತ್ಯಂತ ಫಲವತ್ತಾದ ಪ್ರದೇಶವು ಬೆಂಗಳೂರಿನ ಆಹಾರ ಮತ್ತು ಪೋಷಕಾಂಶ ಭದ್ರತೆಗೆ ಜೀವನಾಡಿಯಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಬಡಗಲಪುರ ನಾಗೇಂದ್ರ, ಚುಕ್ಕಿ ನಂಜುಂಡಸ್ವಾಮಿ, ಗುರಪ್ರಸಾದ್‌ ಕೆರೆಗೋಡು, ಸಿದ್ದರಾಜು ಮುಂತಾದವರು ಉಪಸ್ಥಿತರಿದ್ದರು.

ದೇವನಹಳ್ಳಿ: ಅಂತಿಮ ಅಧಿಸೂಚನೆ ಹಿಂಪಡೆಯಲು ಸರ್ಕಾರಕ್ಕೆ ಅಧಿಕಾರವಿದೆ – ರಾಜ್ಯ ಹೈಕೋರ್ಟ್‌ ವಕೀಲ ಕ್ಲಿಫ್ಟನ್ ಡಿ’ ರೋಜಾರಿಯೋ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...