Homeಕರ್ನಾಟಕದೇವನಹಳ್ಳಿ: ಸಮಯ ಕೇಳಿ ಸರಕಾರವು ರೈತರಿಗೆ ದ್ರೋಹ ಬಗೆಯುತ್ತಿದೆ; ಮೈಸೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ನಟ ಪ್ರಕಾಶ್ ರಾಜ್...

ದೇವನಹಳ್ಳಿ: ಸಮಯ ಕೇಳಿ ಸರಕಾರವು ರೈತರಿಗೆ ದ್ರೋಹ ಬಗೆಯುತ್ತಿದೆ; ಮೈಸೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ನಟ ಪ್ರಕಾಶ್ ರಾಜ್ ಆರೋಪ

- Advertisement -
- Advertisement -

ಮೈಸೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನಲ್ಲಿ ಕೈಗಾರಿಕಾ ಅಭಿವೃದ್ಧಿಗಾಗಿ ರೈತರ ಭೂಮಿ ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಕ್ರಮದ ವಿರುದ್ಧ ವ್ಯಾಪಕ ಆಕ್ರೋಶ ಭುಗಿಲೆದ್ದಿದೆ. ಈ ವಿಚಾರವಾಗಿ ಮೈಸೂರಿನಲ್ಲಿ ಮಾತನಾಡಿದ ಖ್ಯಾತ ನಟ, ನಿರ್ದೇಶಕ ಹಾಗೂ ಹೋರಾಟಗಾರ ಪ್ರಕಾಶ್ ರಾಜ್ ಅವರು, ಸರ್ಕಾರ ರೈತರ ಒಗ್ಗಟ್ಟನ್ನು ಒಡೆಯಲು ಮತ್ತು ಅವರನ್ನು ಹೆದರಿಸಲು ಹೊಸ ನಾಟಕವಾಡುತ್ತಿದೆ ಎಂದು ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ನಾವು ರೈತರ ಭೂಮಿಯನ್ನು ಕಿತ್ತುಕೊಳ್ಳಲು ಬಿಡುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದ್ದು, ದೊಡ್ಡ ಹೋರಾಟಕ್ಕೆ ಸಿದ್ಧತೆ ನಡೆಸುವುದಾಗಿ ಘೋಷಿಸಿದ್ದಾರೆ.

‘ಇದು ಹಸಿರು ವಲಯ, ಸ್ಲಂ ಆಗುತ್ತಿದೆ ಬೆಂಗಳೂರು’: ಸರಕಾರವು ಈ ದೇವನಹಳ್ಳಿಯ ಈ ಭೂಸ್ವಾಧೀನ ಪ್ರದೇಶವನ್ನು ‘ಹಸಿರು ವಲಯ’ ಮಾಡುವುದಾಗಿ ಹೇಳುತ್ತಿರುವುದನ್ನು ಪ್ರಶ್ನಿಸಿದ ಪ್ರಕಾಶ್ ರಾಜ್, “ಆ ಭೂಮಿ ಈಗಾಗಲೇ ಹಸಿರು ವಲಯವಾಗಿದೆ. 1500 ಎಕರೆ ಭೂಮಿಯಲ್ಲಿ ಭೂರಹಿತರಿದ್ದಾರೆ, ಅವರಿಗೆ ಏನು ಪರಿಹಾರ ನೀಡುತ್ತೀರಿ?” ಎಂದು ಪ್ರಶ್ನಿಸಿದ್ದಾರೆ. “ಯಾರೋ ಒಬ್ಬರು ಸಚಿವರು ಅದು ಹಾಗೆ ಬಿಟ್ಟರೆ ಸ್ಲಂ ಆಗುತ್ತದೆ ಎಂದು ಹೇಳುತ್ತಾರೆ. ಆದರೆ, ಇಡೀ ಬೆಂಗಳೂರನ್ನು ವಶಪಡಿಸಿಕೊಂಡು ಸ್ಲಂ ಮಾಡುತ್ತಿರುವುದು ನೀವೇ” ಎಂದು ಅವರು ಸರ್ಕಾರವನ್ನು ದೂರಿದ್ದಾರೆ.

ಸಿದ್ದರಾಮಯ್ಯ ಸರ್ಕಾರದ ವಿರುದ್ಧ ‘ನಾಟಕ’ದ ಆರೋಪ: “ಸರಕಾರದ ಪ್ರತಿನಿಧಿಗಳು ನಿನ್ನೆಯಿಂದ (ಜು.10) ಹೊಸ ನಾಟಕ ಮಾಡುತ್ತಿದ್ದಾರೆ. ರೈತರ ನಡುವಿನ ಒಗ್ಗಟ್ಟನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಸಮಯ ಕೇಳಿ ಸರಕಾರವು ರೈತರಿಗೆ ದ್ರೋಹ ಬಗೆಯುತ್ತಿದೆ. ಈ ರೀತಿ ನಾಟಕ ಮಾಡಬೇಡಿ ಸಿದ್ದರಾಮಯ್ಯನವರೇ, ರೈತರನ್ನು ನೀವೂ ಹೆದರಿಸಬೇಡಿ” ಎಂದು ಪ್ರಕಾಶ್ ರಾಜ್ ನೇರವಾಗಿ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ. ಸರ್ಕಾರ ಮನವಿ ಮಾಡಿಕೊಂಡಂತೆ ನಡೆದುಕೊಳ್ಳುತ್ತಿಲ್ಲ, ಬದಲಾಗಿ ಸರಕಾರ ಈಗ ಏನು ಮಾಡುತ್ತಿದೆ ಎಂಬುದು ಜನರಿಗೆ ನೇರವಾಗಿ ಗೊತ್ತಾಗುತ್ತಿದೆ ಎಂದು ಅವರು ಹೇಳಿದ್ದಾರೆ.

“ಸಿದ್ದರಾಮಣ್ಣ, ಎಂ.ಬಿ.ಪಾಟೀಲ್ ಅವರೇ, ನಿಮ್ಮ ನಾಟಕ ಗೊತ್ತಾಗುತ್ತಿದೆ. ಹಳ್ಳಿಗಳಿಗೆ ನಿಮ್ಮ ಪುಡಾರಿಗಳು ಹೋಗಿ ರೈತರಿಗೆ ಭಯ ಹುಟ್ಟಿಸುತ್ತಿದ್ದಾರೆ. ಅದರಲ್ಲಿ ಕೆಲವರನ್ನು ಕರೆದುಕೊಂಡು ಬಂದು ಪರಿಹಾರ ಕೇಳಿಸುತ್ತಿದ್ದಾರೆ. ಇದೆಲ್ಲವೂ ನಾಟಕ ಎಂದು ಜನರಿಗೆ ಮತ್ತು ನಮಗೆ ನೇರವಾಗಿ ಗೊತ್ತಾಗುತ್ತಿದೆ” ಎಂದು ಪ್ರಕಾಶ್ ರಾಜ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಭೂಸ್ವಾಧೀನಕ್ಕೆ ಅವಕಾಶವಿಲ್ಲ, ದೊಡ್ಡ ಹೋರಾಟದ ಎಚ್ಚರಿಕೆ: “ದೇವನಹಳ್ಳಿ ರೈತರ ಭೂಮಿಯನ್ನು ಕಿತ್ತುಕೊಳ್ಳಲು ನಾವು ಬಿಡುವುದಿಲ್ಲ. ದೊಡ್ಡಮಟ್ಟದ ಹೋರಾಟವನ್ನೇ ಮಾಡುತ್ತೇವೆ” ಎಂದು ಪ್ರಕಾಶ್ ರಾಜ್ ಖಡಾಖಂಡಿತವಾಗಿ ಹೇಳಿದ್ದಾರೆ. ಜುಲೈ 15ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುವುದಾಗಿ ತಿಳಿಸಿದ್ದು, ಮುಖ್ಯಮಂತ್ರಿ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಮುಂದಿನ ಹೋರಾಟದ ಸ್ವರೂಪ ನಿರ್ಣಯಿಸಲಾಗುವುದು ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ: ಸಿದ್ದರಾಮಯ್ಯ ಅವರು ಪ್ರತಿಪಕ್ಷದ ನಾಯಕರಾಗಿದ್ದಾಗ ದೇವನಹಳ್ಳಿಯ ಭೂಸ್ವಾಧೀನ ಸಂಬಂಧಪಟ್ಟಂತೆ ಬಿಜೆಪಿ ಸರಕಾರವು ಪ್ರಾಥಮಿಕ ಅಧಿಸೂಚನೆ ಹೊರಡಿಸಿತ್ತು. ಆಗ ಸಿದ್ದರಾಮಯ್ಯನವರು ರೈತರ ಪರವಾಗಿ ಹೋರಾಟ ಮಾಡಿದ್ದರು. ಆದರೆ, ಅವರು ಮುಖ್ಯಮಂತ್ರಿಯಾದ ಮೇಲೆ ಮಂತ್ರಿಗಳ ಪ್ರಭಾವಕ್ಕೆ ಮಣಿದಿದ್ದಾರೆ ಎಂದು ಪ್ರಕಾಶ್ ರಾಜ್ ಆರೋಪಿಸಿದ್ದಾರೆ. “ಇದು ಮುಖ್ಯಮಂತ್ರಿಯಿಂದ ರೈತ ವಿರೋಧಿ ನಿಲುವುವಾಗಿದೆ” ಎಂದು ಅವರು ಖಂಡಿಸಿದ್ದಾರೆ.

‘ನಾನು ಕನ್ನಡಿಗ, ಕರ್ನಾಟಕದ ಮಗ’: ಎಂ.ಬಿ.ಪಾಟೀಲ್‌ಗೆ ಸವಾಲು “ನಾನು ಕನ್ನಡಿಗ, ಕರ್ನಾಟಕದ ಮಗ, ರಾಜ್ಯದ ರೈತರ ಪರ ಹೋರಾಟ ಮಾಡುತ್ತೇನೆ” ಎಂದು ಘೋಷಿಸಿದ ಪ್ರಕಾಶ್ ರಾಜ್, “ಆಂಧ್ರ, ಗುಜರಾತ್‌ನಲ್ಲಿ ಹೋರಾಟ ಮಾಡಿ ಎಂದು ಹೇಳಲು ಎಂ.ಬಿ.ಪಾಟೀಲ್ ಯಾರು?” ಎಂದು ಸಚಿವ ಎಂ.ಬಿ.ಪಾಟೀಲ್ ಅವರನ್ನು ಪ್ರಶ್ನಿಸಿದ್ದಾರೆ. ಈ ಮೂಲಕ ತಮ್ಮ ಹೋರಾಟದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣದ 13 ಗ್ರಾಮಗಳ ರೈತರು, ಕೈಗಾರಿಕಾ ಅಭಿವೃದ್ಧಿಗಾಗಿ ಕರ್ನಾಟಕ ಸರ್ಕಾರವು ತಮ್ಮ ಭೂಮಿಯನ್ನು “ಬಲವಂತವಾಗಿ” ಸ್ವಾಧೀನಪಡಿಸಿಕೊಳ್ಳುವುದರ ವಿರುದ್ಧ ಸಾವಿರದ ನೂರು ದಿನಗಳಿಗಿಂತಲೂ ಹೆಚ್ಚು ಕಾಲ ಆಂದೋಲನ ನಡೆಸುತ್ತಿದ್ದಾರೆ. 2022ರಲ್ಲಿ, ಬಸವರಾಜ ಬೊಮ್ಮಾಯಿ ಸರ್ಕಾರವು ಉದ್ದೇಶಿತ ಹೈಟೆಕ್ ರಕ್ಷಣಾ ಮತ್ತು ಏರೋಸ್ಪೇಸ್ ಪಾರ್ಕ್‌ಗಾಗಿ 1,777 ಎಕರೆ ಭೂಮಿಯನ್ನು ಅಧಿಸೂಚಿಸಿತ್ತು. ಈ ಅತ್ಯಂತ ಫಲವತ್ತಾದ ಪ್ರದೇಶವು ಬೆಂಗಳೂರಿನ ಆಹಾರ ಮತ್ತು ಪೋಷಕಾಂಶ ಭದ್ರತೆಗೆ ಜೀವನಾಡಿಯಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಬಡಗಲಪುರ ನಾಗೇಂದ್ರ, ಚುಕ್ಕಿ ನಂಜುಂಡಸ್ವಾಮಿ, ಗುರಪ್ರಸಾದ್‌ ಕೆರೆಗೋಡು, ಸಿದ್ದರಾಜು ಮುಂತಾದವರು ಉಪಸ್ಥಿತರಿದ್ದರು.

ದೇವನಹಳ್ಳಿ: ಅಂತಿಮ ಅಧಿಸೂಚನೆ ಹಿಂಪಡೆಯಲು ಸರ್ಕಾರಕ್ಕೆ ಅಧಿಕಾರವಿದೆ – ರಾಜ್ಯ ಹೈಕೋರ್ಟ್‌ ವಕೀಲ ಕ್ಲಿಫ್ಟನ್ ಡಿ’ ರೋಜಾರಿಯೋ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...