Homeಕರ್ನಾಟಕದೇವನಹಳ್ಳಿ: ಸಮಯ ಕೇಳಿ ಸರಕಾರವು ರೈತರಿಗೆ ದ್ರೋಹ ಬಗೆಯುತ್ತಿದೆ; ಮೈಸೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ನಟ ಪ್ರಕಾಶ್ ರಾಜ್...

ದೇವನಹಳ್ಳಿ: ಸಮಯ ಕೇಳಿ ಸರಕಾರವು ರೈತರಿಗೆ ದ್ರೋಹ ಬಗೆಯುತ್ತಿದೆ; ಮೈಸೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ನಟ ಪ್ರಕಾಶ್ ರಾಜ್ ಆರೋಪ

- Advertisement -
- Advertisement -

ಮೈಸೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನಲ್ಲಿ ಕೈಗಾರಿಕಾ ಅಭಿವೃದ್ಧಿಗಾಗಿ ರೈತರ ಭೂಮಿ ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಕ್ರಮದ ವಿರುದ್ಧ ವ್ಯಾಪಕ ಆಕ್ರೋಶ ಭುಗಿಲೆದ್ದಿದೆ. ಈ ವಿಚಾರವಾಗಿ ಮೈಸೂರಿನಲ್ಲಿ ಮಾತನಾಡಿದ ಖ್ಯಾತ ನಟ, ನಿರ್ದೇಶಕ ಹಾಗೂ ಹೋರಾಟಗಾರ ಪ್ರಕಾಶ್ ರಾಜ್ ಅವರು, ಸರ್ಕಾರ ರೈತರ ಒಗ್ಗಟ್ಟನ್ನು ಒಡೆಯಲು ಮತ್ತು ಅವರನ್ನು ಹೆದರಿಸಲು ಹೊಸ ನಾಟಕವಾಡುತ್ತಿದೆ ಎಂದು ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ನಾವು ರೈತರ ಭೂಮಿಯನ್ನು ಕಿತ್ತುಕೊಳ್ಳಲು ಬಿಡುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದ್ದು, ದೊಡ್ಡ ಹೋರಾಟಕ್ಕೆ ಸಿದ್ಧತೆ ನಡೆಸುವುದಾಗಿ ಘೋಷಿಸಿದ್ದಾರೆ.

‘ಇದು ಹಸಿರು ವಲಯ, ಸ್ಲಂ ಆಗುತ್ತಿದೆ ಬೆಂಗಳೂರು’: ಸರಕಾರವು ಈ ದೇವನಹಳ್ಳಿಯ ಈ ಭೂಸ್ವಾಧೀನ ಪ್ರದೇಶವನ್ನು ‘ಹಸಿರು ವಲಯ’ ಮಾಡುವುದಾಗಿ ಹೇಳುತ್ತಿರುವುದನ್ನು ಪ್ರಶ್ನಿಸಿದ ಪ್ರಕಾಶ್ ರಾಜ್, “ಆ ಭೂಮಿ ಈಗಾಗಲೇ ಹಸಿರು ವಲಯವಾಗಿದೆ. 1500 ಎಕರೆ ಭೂಮಿಯಲ್ಲಿ ಭೂರಹಿತರಿದ್ದಾರೆ, ಅವರಿಗೆ ಏನು ಪರಿಹಾರ ನೀಡುತ್ತೀರಿ?” ಎಂದು ಪ್ರಶ್ನಿಸಿದ್ದಾರೆ. “ಯಾರೋ ಒಬ್ಬರು ಸಚಿವರು ಅದು ಹಾಗೆ ಬಿಟ್ಟರೆ ಸ್ಲಂ ಆಗುತ್ತದೆ ಎಂದು ಹೇಳುತ್ತಾರೆ. ಆದರೆ, ಇಡೀ ಬೆಂಗಳೂರನ್ನು ವಶಪಡಿಸಿಕೊಂಡು ಸ್ಲಂ ಮಾಡುತ್ತಿರುವುದು ನೀವೇ” ಎಂದು ಅವರು ಸರ್ಕಾರವನ್ನು ದೂರಿದ್ದಾರೆ.

ಸಿದ್ದರಾಮಯ್ಯ ಸರ್ಕಾರದ ವಿರುದ್ಧ ‘ನಾಟಕ’ದ ಆರೋಪ: “ಸರಕಾರದ ಪ್ರತಿನಿಧಿಗಳು ನಿನ್ನೆಯಿಂದ (ಜು.10) ಹೊಸ ನಾಟಕ ಮಾಡುತ್ತಿದ್ದಾರೆ. ರೈತರ ನಡುವಿನ ಒಗ್ಗಟ್ಟನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಸಮಯ ಕೇಳಿ ಸರಕಾರವು ರೈತರಿಗೆ ದ್ರೋಹ ಬಗೆಯುತ್ತಿದೆ. ಈ ರೀತಿ ನಾಟಕ ಮಾಡಬೇಡಿ ಸಿದ್ದರಾಮಯ್ಯನವರೇ, ರೈತರನ್ನು ನೀವೂ ಹೆದರಿಸಬೇಡಿ” ಎಂದು ಪ್ರಕಾಶ್ ರಾಜ್ ನೇರವಾಗಿ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ. ಸರ್ಕಾರ ಮನವಿ ಮಾಡಿಕೊಂಡಂತೆ ನಡೆದುಕೊಳ್ಳುತ್ತಿಲ್ಲ, ಬದಲಾಗಿ ಸರಕಾರ ಈಗ ಏನು ಮಾಡುತ್ತಿದೆ ಎಂಬುದು ಜನರಿಗೆ ನೇರವಾಗಿ ಗೊತ್ತಾಗುತ್ತಿದೆ ಎಂದು ಅವರು ಹೇಳಿದ್ದಾರೆ.

“ಸಿದ್ದರಾಮಣ್ಣ, ಎಂ.ಬಿ.ಪಾಟೀಲ್ ಅವರೇ, ನಿಮ್ಮ ನಾಟಕ ಗೊತ್ತಾಗುತ್ತಿದೆ. ಹಳ್ಳಿಗಳಿಗೆ ನಿಮ್ಮ ಪುಡಾರಿಗಳು ಹೋಗಿ ರೈತರಿಗೆ ಭಯ ಹುಟ್ಟಿಸುತ್ತಿದ್ದಾರೆ. ಅದರಲ್ಲಿ ಕೆಲವರನ್ನು ಕರೆದುಕೊಂಡು ಬಂದು ಪರಿಹಾರ ಕೇಳಿಸುತ್ತಿದ್ದಾರೆ. ಇದೆಲ್ಲವೂ ನಾಟಕ ಎಂದು ಜನರಿಗೆ ಮತ್ತು ನಮಗೆ ನೇರವಾಗಿ ಗೊತ್ತಾಗುತ್ತಿದೆ” ಎಂದು ಪ್ರಕಾಶ್ ರಾಜ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಭೂಸ್ವಾಧೀನಕ್ಕೆ ಅವಕಾಶವಿಲ್ಲ, ದೊಡ್ಡ ಹೋರಾಟದ ಎಚ್ಚರಿಕೆ: “ದೇವನಹಳ್ಳಿ ರೈತರ ಭೂಮಿಯನ್ನು ಕಿತ್ತುಕೊಳ್ಳಲು ನಾವು ಬಿಡುವುದಿಲ್ಲ. ದೊಡ್ಡಮಟ್ಟದ ಹೋರಾಟವನ್ನೇ ಮಾಡುತ್ತೇವೆ” ಎಂದು ಪ್ರಕಾಶ್ ರಾಜ್ ಖಡಾಖಂಡಿತವಾಗಿ ಹೇಳಿದ್ದಾರೆ. ಜುಲೈ 15ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುವುದಾಗಿ ತಿಳಿಸಿದ್ದು, ಮುಖ್ಯಮಂತ್ರಿ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಮುಂದಿನ ಹೋರಾಟದ ಸ್ವರೂಪ ನಿರ್ಣಯಿಸಲಾಗುವುದು ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ: ಸಿದ್ದರಾಮಯ್ಯ ಅವರು ಪ್ರತಿಪಕ್ಷದ ನಾಯಕರಾಗಿದ್ದಾಗ ದೇವನಹಳ್ಳಿಯ ಭೂಸ್ವಾಧೀನ ಸಂಬಂಧಪಟ್ಟಂತೆ ಬಿಜೆಪಿ ಸರಕಾರವು ಪ್ರಾಥಮಿಕ ಅಧಿಸೂಚನೆ ಹೊರಡಿಸಿತ್ತು. ಆಗ ಸಿದ್ದರಾಮಯ್ಯನವರು ರೈತರ ಪರವಾಗಿ ಹೋರಾಟ ಮಾಡಿದ್ದರು. ಆದರೆ, ಅವರು ಮುಖ್ಯಮಂತ್ರಿಯಾದ ಮೇಲೆ ಮಂತ್ರಿಗಳ ಪ್ರಭಾವಕ್ಕೆ ಮಣಿದಿದ್ದಾರೆ ಎಂದು ಪ್ರಕಾಶ್ ರಾಜ್ ಆರೋಪಿಸಿದ್ದಾರೆ. “ಇದು ಮುಖ್ಯಮಂತ್ರಿಯಿಂದ ರೈತ ವಿರೋಧಿ ನಿಲುವುವಾಗಿದೆ” ಎಂದು ಅವರು ಖಂಡಿಸಿದ್ದಾರೆ.

‘ನಾನು ಕನ್ನಡಿಗ, ಕರ್ನಾಟಕದ ಮಗ’: ಎಂ.ಬಿ.ಪಾಟೀಲ್‌ಗೆ ಸವಾಲು “ನಾನು ಕನ್ನಡಿಗ, ಕರ್ನಾಟಕದ ಮಗ, ರಾಜ್ಯದ ರೈತರ ಪರ ಹೋರಾಟ ಮಾಡುತ್ತೇನೆ” ಎಂದು ಘೋಷಿಸಿದ ಪ್ರಕಾಶ್ ರಾಜ್, “ಆಂಧ್ರ, ಗುಜರಾತ್‌ನಲ್ಲಿ ಹೋರಾಟ ಮಾಡಿ ಎಂದು ಹೇಳಲು ಎಂ.ಬಿ.ಪಾಟೀಲ್ ಯಾರು?” ಎಂದು ಸಚಿವ ಎಂ.ಬಿ.ಪಾಟೀಲ್ ಅವರನ್ನು ಪ್ರಶ್ನಿಸಿದ್ದಾರೆ. ಈ ಮೂಲಕ ತಮ್ಮ ಹೋರಾಟದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣದ 13 ಗ್ರಾಮಗಳ ರೈತರು, ಕೈಗಾರಿಕಾ ಅಭಿವೃದ್ಧಿಗಾಗಿ ಕರ್ನಾಟಕ ಸರ್ಕಾರವು ತಮ್ಮ ಭೂಮಿಯನ್ನು “ಬಲವಂತವಾಗಿ” ಸ್ವಾಧೀನಪಡಿಸಿಕೊಳ್ಳುವುದರ ವಿರುದ್ಧ ಸಾವಿರದ ನೂರು ದಿನಗಳಿಗಿಂತಲೂ ಹೆಚ್ಚು ಕಾಲ ಆಂದೋಲನ ನಡೆಸುತ್ತಿದ್ದಾರೆ. 2022ರಲ್ಲಿ, ಬಸವರಾಜ ಬೊಮ್ಮಾಯಿ ಸರ್ಕಾರವು ಉದ್ದೇಶಿತ ಹೈಟೆಕ್ ರಕ್ಷಣಾ ಮತ್ತು ಏರೋಸ್ಪೇಸ್ ಪಾರ್ಕ್‌ಗಾಗಿ 1,777 ಎಕರೆ ಭೂಮಿಯನ್ನು ಅಧಿಸೂಚಿಸಿತ್ತು. ಈ ಅತ್ಯಂತ ಫಲವತ್ತಾದ ಪ್ರದೇಶವು ಬೆಂಗಳೂರಿನ ಆಹಾರ ಮತ್ತು ಪೋಷಕಾಂಶ ಭದ್ರತೆಗೆ ಜೀವನಾಡಿಯಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಬಡಗಲಪುರ ನಾಗೇಂದ್ರ, ಚುಕ್ಕಿ ನಂಜುಂಡಸ್ವಾಮಿ, ಗುರಪ್ರಸಾದ್‌ ಕೆರೆಗೋಡು, ಸಿದ್ದರಾಜು ಮುಂತಾದವರು ಉಪಸ್ಥಿತರಿದ್ದರು.

ದೇವನಹಳ್ಳಿ: ಅಂತಿಮ ಅಧಿಸೂಚನೆ ಹಿಂಪಡೆಯಲು ಸರ್ಕಾರಕ್ಕೆ ಅಧಿಕಾರವಿದೆ – ರಾಜ್ಯ ಹೈಕೋರ್ಟ್‌ ವಕೀಲ ಕ್ಲಿಫ್ಟನ್ ಡಿ’ ರೋಜಾರಿಯೋ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...