Homeಕರ್ನಾಟಕದೇವನೂರು ಮತ್ತು ದೊರೆಸ್ವಾಮಿಯವರಿಂದ ಸ್ಪೀಕರ್ ರಿಗೆ ದೂರು ಸಲ್ಲಿಕೆ

ದೇವನೂರು ಮತ್ತು ದೊರೆಸ್ವಾಮಿಯವರಿಂದ ಸ್ಪೀಕರ್ ರಿಗೆ ದೂರು ಸಲ್ಲಿಕೆ

ಈ ಪತ್ರವನ್ನೇ ದೂರು ಎಂದು ತಿಳಿದುಕೊಂಡು ಕ್ರಮ ಜರುಗಿಸಬೇಕೆಂದು ಅವರು ಕೋರಿದ್ದಾರೆ.

- Advertisement -
- Advertisement -

||ನಾನು ಗೌರಿ ಡೆಸ್ಕ್||

ಶಾಸಕರ ರಾಜೀನಾಮೆ, ಪಕ್ಷಾಂತರ ಸಾಧ್ಯತೆ, ಅನರ್ಹತೆಯ ಅರ್ಜಿ ಹಿನ್ನೆಲೆಯಲ್ಲಿ ಹಿರಿಯ ಸಾಹಿತಿ ದೇವನೂರು ಮಹಾದೇವ ಮತ್ತು ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿಯವರು ವಿಧಾನಸಭಾಧ್ಯಕ್ಷರಿಗೆ ಖಾರವಾದ ಪತ್ರವನ್ನು ಬರೆದಿದ್ದಾರೆ. ರಾಜೀನಾಮೆ ಕೊಟ್ಟಿರುವ ಶಾಸಕರು ಹೊಣೆಗೇಡಿತನವನ್ನು ಪ್ರದರ್ಶಿಸಿದ್ದಾರಲ್ಲದೇ, ತಮಗೆ ಮತ ನೀಡಿದವರಿಗೆ ದ್ರೋಹವೆಸಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ಪತ್ರವನ್ನೇ ದೂರು ಎಂದು ತಿಳಿದುಕೊಂಡು ಕ್ರಮ ಜರುಗಿಸಬೇಕೆಂದು ಅವರು ಕೋರಿದ್ದಾರೆ. ಪತ್ರದ ಪೂರ್ಣ ಪಾಠ ಈ ಕೆಳಕಂಡಂತಿದೆ.

ಇವರಿಗೆ,
ಸನ್ಮಾನ್ಯ ಸಭಾಧ್ಯಕ್ಷರು
ಕರ್ನಾಟಕ ವಿಧಾನಸಭೆ
ಬೆಂಗಳೂರು

ಮಾನ್ಯರೇ,
ವಿಷಯ: ಶಾಸಕರು ತಮ್ಮ ಆತ್ಮವನ್ನೂ ನಮ್ಮ ಮತವನ್ನೂ ಮಾರುತ್ತಿರುವ ಹೊತ್ತಿನಲ್ಲಿ
ರಾಜ್ಯದ ಹಾಗೂ ರಾಜಕಾರಣದ ಘನತೆಯನ್ನು ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ
ಮೇಲಿದೆ

ಈ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಅತ್ಯಂತ ಆಘಾತಕಾರಿಯಾಗಿವೆ. ಪಕ್ಷಾಂತರಗಳು ಎಲ್ಲಿಂದ ಎಲ್ಲಿಗೆ ಆಗುತ್ತಿದ್ದರೂ ಇದಕ್ಕೆ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳೂ ಕಾರಣವೆಂದೇ ನಾವು ಭಾವಿಸುತ್ತೇವೆ. ದೇಶದ ಸಂಸದೀಯ ಪ್ರಜಾತಂತ್ರವು ಕೊರತೆಗಳಿಂದ ಕೂಡಿರಬಹುದು. ಆದರೆ, ಸಂವಿಧಾನ ನಿರ್ಮಾತೃಗಳು ಮುಂಬರುವ ಪೀಳಿಗೆಗಳ ಮೇಲೆ ವಿಶ್ವಾಸವಿಟ್ಟು ಕೆಲವು ಅವಕಾಶಗಳನ್ನು ನೀಡಿದ್ದರು. ಅವುಗಳ ದುರುಪಯೋಗ ಮಾಡಿಕೊಂಡು ನಡೆದ ಅನೈತಿಕ ಪಕ್ಷಾಂತರಗಳನ್ನು ತಡೆಯುವ ಉದ್ದೇಶದಿಂದ ಪಕ್ಷಾಂತರ ನಿಷೇಧ ಕಾಯ್ದೆಯು 1985ರಲ್ಲಿ ಜಾರಿಗೆ ಬಂದಿತು. ನಂತರದಲ್ಲಿ 2003ರಲ್ಲಿ ಅದಕ್ಕೆ ತಿದ್ದುಪಡಿಯೂ ಬಂದಿತು.

ಆದರೆ, ಎಲ್ಲಾ ಕಾಯ್ದೆಗಳಿಂದಲೂ ನುಸುಳಿಕೊಳ್ಳುವ ರೀತಿಯಲ್ಲಿ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಇನ್ನೂ ಹೆಚ್ಚಿನ ಅಧಿಕಾರ ಪಡೆದುಕೊಂಡು ಇನ್ನೊಂದು ಪಕ್ಷದಿಂದ ಸ್ಪರ್ಧಿಸುವ ಹೊಸದೊಂದು ಪ್ರಕ್ರಿಯೆಗೆ ನಮ್ಮ ರಾಜ್ಯ ಕರ್ನಾಟಕವೇ ಮೇಲ್ಪಂಕ್ತಿ ಹಾಕಿಕೊಟ್ಟಿದ್ದು ನಾವು ತಲೆತಗ್ಗಿಸುವ ವಿಚಾರವಾಗಿದೆ. ಇಂದು ಅಂತಹ ಇನ್ನೊಂದು ಸಂದರ್ಭ ನಮ್ಮ ರಾಜ್ಯದಲ್ಲಿ ಈಗ ಉಂಟಾಗಿದೆ. ಮೇಲೆ ಹೇಳಿರುವಂತೆ ಇದರ ಹೊಣೆಯನ್ನು ಮೂರೂ ಪ್ರಮುಖ ರಾಜಕೀಯ ಪಕ್ಷಗಳು ಹೊತ್ತುಕೊಳ್ಳಬೇಕಿದೆ.


ಇಂದು ಆಮಿಷ, ಒತ್ತಡ ಅಥವಾ ಇನ್ನಾವುದೋ ಕಾರಣಕ್ಕೆ ಸ್ವಹಿತಾಸಕ್ತಿಗಾಗಿ ಪಕ್ಷ ಬದಲಾಯಿಸುತ್ತಿರುವವರು ತಮ್ಮ ಆತ್ಮವನ್ನೂ, ತಮಗೆ ಮತ ನೀಡಿದ ಮತದಾರರ ಮತವನ್ನೂ ಮಾರಿಕೊಂಡಂತೆ ಎಂದೇ ನಾವು ಭಾವಿಸುತ್ತೇವೆ. ಶಾಸಕರಿಗೆ ರಾಜೀನಾಮೆ ನೀಡುವ ಹಕ್ಕು ಇದೆ ಎಂಬುದು ವಾಸ್ತವ. ಆದರೆ, ಇದನ್ನು ಕೇವಲ ತಾಂತ್ರಿಕ ವಿಚಾರವನ್ನಾಗಿ ನೋಡದೇ ಸಾರ್ವಜನಿಕ ರಾಜಕೀಯ ನೀತಿ ಸಂಹಿತೆಯ ಭಾಗವಾಗಿ ನೋಡಬೇಕಿದೆ. ಇಂದು ನಡೆಯುತ್ತಿರುವುದು ಪಕ್ಷಾಂತರವೇ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಮತದಾರರು ಅಭ್ಯರ್ಥಿ ಮಾತ್ರವಲ್ಲದೇ ಪಕ್ಷಕ್ಕೂ ಮತ ನೀಡಿರುತ್ತಾರೆ. ಹಲವು ಸಾರಿ ಅಭ್ಯರ್ಥಿ ಇಷ್ಟವಿಲ್ಲದಿದ್ದರೂ ಪಕ್ಷಕ್ಕೇ ಮತ ನೀಡಿರುವ ಸಾಧ್ಯತೆ ಇರುತ್ತದೆ. ಜೊತೆಗೆ ಐದು ವರ್ಷಕ್ಕೆಂದು ಅವರಿಗೆ ಮತ ನೀಡಿರುತ್ತಾರೆ. ಅದನ್ನು ಪೂರೈಸುವ ಹೊಣೆಗಾರಿಕೆಯೂ ಆಯ್ಕೆಯಾದವರದ್ದಾಗಿರುತ್ತದೆ. ಅನಾರೋಗ್ಯ, ಸಾವು ಇತ್ಯಾದಿ ಕಾರಣಗಳನ್ನು ಬಿಟ್ಟು ಇನ್ನಾವ ಕಾರಣಕ್ಕೆ ತೆರವು ಮಾಡಿದರೂ ಅದು ಹೊಣೆಗೇಡಿತನವಾಗುತ್ತದೆ. ಈಗ ನಡೆಯುತ್ತಿರುವುದು ಹೊಣೆಗೇಡಿತನ ಮಾತ್ರವಲ್ಲಾ, ದ್ರೋಹವೂ ಹೌದು. ರಾಜೀನಾಮೆ ನೀಡಿದವರು ಆರು ವರ್ಷಗಳ ಕಾಲ ಯಾವುದೇ ಚುನಾವಣೆಗೂ ನಿಲ್ಲಬಾರದು, ಯಾವುದೇ ಅಧಿಕಾರದ ಸ್ಥಾನಗಳನ್ನೂ ಹೊಂದಬಾರದು ಎಂಬ ನಿಯಮವೂ ಜಾರಿಯಾಗಬೇಕಿದೆ.

ಈ ಸ್ವೇಚ್ಛಾಚಾರವು ಪಕ್ಷಾಂತರ ನಿಷೇಧ ಕಾಯ್ದೆಯ ವ್ಯಾಪ್ತಿಯಲ್ಲಿಯೇ, ಕಾಯ್ದೆಗೆ ಹೆಗ್ಗಣಗಳಂತೆ ಬಿಲ ಕೊರೆದು, ಅದನ್ನೇ ಬುಡಮೇಲು ಮಾಡುವ ಕೃತ್ಯವಾಗಿದೆ. ಇದನ್ನು ವಿಧಾನಸಭಾಧ್ಯಕ್ಷರು ಗಂಭೀರವಾಗಿ ಪರಿಗಣಿಸಬೇಕಿದೆ.

ಇವೆಲ್ಲದರಿಂದ ಈಗಾಗಲೇ ಸಮಾಜದ ಮುಂದೆ ಪಾತಾಳಕ್ಕಿಳಿದಿರುವ ರಾಜಕೀಯ ವ್ಯವಸ್ಥೆಯ ಆತ್ಮವೇ ದಾಳಿಗೊಳಗಾಗುತ್ತಿದೆ. ಆದ್ದರಿಂದ ಇದನ್ನು ಸರಿಪಡಿಸಲು ಬೇಕಾದ ಎಲ್ಲಾ ಕ್ರಮಗಳನ್ನು ನೀವು ತೆಗೆದುಕೊಳ್ಳಲೇ- ಬೇಕೆಂದು ನಿಮ್ಮನ್ನು ಒತ್ತಾಯಿಸುತ್ತಿದ್ದೇವೆ. ಅಂತಹ ಜವಾಬ್ದಾರಿ ಸ್ಥಾನದಲ್ಲಿ ಕುಳಿತಿರುವ ತಾವು, ತಮ್ಮ ವ್ಯಕ್ತಿಗತ ನಿಲುವುಗಳೇನಾಗಿದ್ದರೂ ತಪ್ಪಾದ ಮತ್ತು ಆತುರದ ನಿರ್ಧಾರಕ್ಕೆ ಬರಬಾರದೆಂಬುದು ನಮ್ಮ ಆಗ್ರಹ. ಇದನ್ನೇ ನೀವು ನಮ್ಮ ದೂರು ಎಂದೂ ಪರಿಗಣಿಸಬೇಕೆಂದು ಕೋರುತ್ತೇವೆ.

ಅಗತ್ಯವಿದ್ದರೆ ಉನ್ನತ ನ್ಯಾಯಾಲಯಗಳಿಗೂ ಹೋಗುವ ಮೂಲಕ ಸಂವಿಧಾನವನ್ನು ಕಾಪಾಡುವ ಹೊಣೆ ಹಾಗೂ ಅಧಿಕಾರ ಹೊಂದಿರುವ ನ್ಯಾಯಾಧೀಶರಲ್ಲೂ ಮನವಿ ಮಾಡಬೇಕೆಂದು ತೀರ್ಮಾನಿಸಿದ್ದೇವೆ. ಅಂತಹ ಪರಿಸ್ಥಿತಿ ಬಾರದಂತೆ, ಸಂವಿಧಾನಬದ್ಧ ಅಧಿಕಾರ ಹೊಂದಿರುವ ತಾವು ಪರಿಣಾಮಕಾರಿಯಾದ ಕ್ರಮ ತೆಗೆದುಕೊಳ್ಳುತ್ತೀರೆಂದು ಆಶಿಸುತ್ತೇವೆ.

ವಂದನೆಗಳೊಂದಿಗೆ,

ತಮ್ಮ ವಿಶ್ವಾಸಿಗಳು

ದೇವನೂರ ಮಹಾದೇವ ಎಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Gowri is still alive, who will inspire the coming generations. Devanur mahadev and h s doreswamy are pure souls fearless souls who have rightful thoughts for society. We welcome their opinions on today’s politics and hope it will be followed.

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...