Homeಕರ್ನಾಟಕದೇವನೂರು ಮತ್ತು ದೊರೆಸ್ವಾಮಿಯವರಿಂದ ಸ್ಪೀಕರ್ ರಿಗೆ ದೂರು ಸಲ್ಲಿಕೆ

ದೇವನೂರು ಮತ್ತು ದೊರೆಸ್ವಾಮಿಯವರಿಂದ ಸ್ಪೀಕರ್ ರಿಗೆ ದೂರು ಸಲ್ಲಿಕೆ

ಈ ಪತ್ರವನ್ನೇ ದೂರು ಎಂದು ತಿಳಿದುಕೊಂಡು ಕ್ರಮ ಜರುಗಿಸಬೇಕೆಂದು ಅವರು ಕೋರಿದ್ದಾರೆ.

- Advertisement -
- Advertisement -

||ನಾನು ಗೌರಿ ಡೆಸ್ಕ್||

ಶಾಸಕರ ರಾಜೀನಾಮೆ, ಪಕ್ಷಾಂತರ ಸಾಧ್ಯತೆ, ಅನರ್ಹತೆಯ ಅರ್ಜಿ ಹಿನ್ನೆಲೆಯಲ್ಲಿ ಹಿರಿಯ ಸಾಹಿತಿ ದೇವನೂರು ಮಹಾದೇವ ಮತ್ತು ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿಯವರು ವಿಧಾನಸಭಾಧ್ಯಕ್ಷರಿಗೆ ಖಾರವಾದ ಪತ್ರವನ್ನು ಬರೆದಿದ್ದಾರೆ. ರಾಜೀನಾಮೆ ಕೊಟ್ಟಿರುವ ಶಾಸಕರು ಹೊಣೆಗೇಡಿತನವನ್ನು ಪ್ರದರ್ಶಿಸಿದ್ದಾರಲ್ಲದೇ, ತಮಗೆ ಮತ ನೀಡಿದವರಿಗೆ ದ್ರೋಹವೆಸಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ಪತ್ರವನ್ನೇ ದೂರು ಎಂದು ತಿಳಿದುಕೊಂಡು ಕ್ರಮ ಜರುಗಿಸಬೇಕೆಂದು ಅವರು ಕೋರಿದ್ದಾರೆ. ಪತ್ರದ ಪೂರ್ಣ ಪಾಠ ಈ ಕೆಳಕಂಡಂತಿದೆ.

ಇವರಿಗೆ,
ಸನ್ಮಾನ್ಯ ಸಭಾಧ್ಯಕ್ಷರು
ಕರ್ನಾಟಕ ವಿಧಾನಸಭೆ
ಬೆಂಗಳೂರು

ಮಾನ್ಯರೇ,
ವಿಷಯ: ಶಾಸಕರು ತಮ್ಮ ಆತ್ಮವನ್ನೂ ನಮ್ಮ ಮತವನ್ನೂ ಮಾರುತ್ತಿರುವ ಹೊತ್ತಿನಲ್ಲಿ
ರಾಜ್ಯದ ಹಾಗೂ ರಾಜಕಾರಣದ ಘನತೆಯನ್ನು ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ
ಮೇಲಿದೆ

ಈ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಅತ್ಯಂತ ಆಘಾತಕಾರಿಯಾಗಿವೆ. ಪಕ್ಷಾಂತರಗಳು ಎಲ್ಲಿಂದ ಎಲ್ಲಿಗೆ ಆಗುತ್ತಿದ್ದರೂ ಇದಕ್ಕೆ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳೂ ಕಾರಣವೆಂದೇ ನಾವು ಭಾವಿಸುತ್ತೇವೆ. ದೇಶದ ಸಂಸದೀಯ ಪ್ರಜಾತಂತ್ರವು ಕೊರತೆಗಳಿಂದ ಕೂಡಿರಬಹುದು. ಆದರೆ, ಸಂವಿಧಾನ ನಿರ್ಮಾತೃಗಳು ಮುಂಬರುವ ಪೀಳಿಗೆಗಳ ಮೇಲೆ ವಿಶ್ವಾಸವಿಟ್ಟು ಕೆಲವು ಅವಕಾಶಗಳನ್ನು ನೀಡಿದ್ದರು. ಅವುಗಳ ದುರುಪಯೋಗ ಮಾಡಿಕೊಂಡು ನಡೆದ ಅನೈತಿಕ ಪಕ್ಷಾಂತರಗಳನ್ನು ತಡೆಯುವ ಉದ್ದೇಶದಿಂದ ಪಕ್ಷಾಂತರ ನಿಷೇಧ ಕಾಯ್ದೆಯು 1985ರಲ್ಲಿ ಜಾರಿಗೆ ಬಂದಿತು. ನಂತರದಲ್ಲಿ 2003ರಲ್ಲಿ ಅದಕ್ಕೆ ತಿದ್ದುಪಡಿಯೂ ಬಂದಿತು.

ಆದರೆ, ಎಲ್ಲಾ ಕಾಯ್ದೆಗಳಿಂದಲೂ ನುಸುಳಿಕೊಳ್ಳುವ ರೀತಿಯಲ್ಲಿ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಇನ್ನೂ ಹೆಚ್ಚಿನ ಅಧಿಕಾರ ಪಡೆದುಕೊಂಡು ಇನ್ನೊಂದು ಪಕ್ಷದಿಂದ ಸ್ಪರ್ಧಿಸುವ ಹೊಸದೊಂದು ಪ್ರಕ್ರಿಯೆಗೆ ನಮ್ಮ ರಾಜ್ಯ ಕರ್ನಾಟಕವೇ ಮೇಲ್ಪಂಕ್ತಿ ಹಾಕಿಕೊಟ್ಟಿದ್ದು ನಾವು ತಲೆತಗ್ಗಿಸುವ ವಿಚಾರವಾಗಿದೆ. ಇಂದು ಅಂತಹ ಇನ್ನೊಂದು ಸಂದರ್ಭ ನಮ್ಮ ರಾಜ್ಯದಲ್ಲಿ ಈಗ ಉಂಟಾಗಿದೆ. ಮೇಲೆ ಹೇಳಿರುವಂತೆ ಇದರ ಹೊಣೆಯನ್ನು ಮೂರೂ ಪ್ರಮುಖ ರಾಜಕೀಯ ಪಕ್ಷಗಳು ಹೊತ್ತುಕೊಳ್ಳಬೇಕಿದೆ.


ಇಂದು ಆಮಿಷ, ಒತ್ತಡ ಅಥವಾ ಇನ್ನಾವುದೋ ಕಾರಣಕ್ಕೆ ಸ್ವಹಿತಾಸಕ್ತಿಗಾಗಿ ಪಕ್ಷ ಬದಲಾಯಿಸುತ್ತಿರುವವರು ತಮ್ಮ ಆತ್ಮವನ್ನೂ, ತಮಗೆ ಮತ ನೀಡಿದ ಮತದಾರರ ಮತವನ್ನೂ ಮಾರಿಕೊಂಡಂತೆ ಎಂದೇ ನಾವು ಭಾವಿಸುತ್ತೇವೆ. ಶಾಸಕರಿಗೆ ರಾಜೀನಾಮೆ ನೀಡುವ ಹಕ್ಕು ಇದೆ ಎಂಬುದು ವಾಸ್ತವ. ಆದರೆ, ಇದನ್ನು ಕೇವಲ ತಾಂತ್ರಿಕ ವಿಚಾರವನ್ನಾಗಿ ನೋಡದೇ ಸಾರ್ವಜನಿಕ ರಾಜಕೀಯ ನೀತಿ ಸಂಹಿತೆಯ ಭಾಗವಾಗಿ ನೋಡಬೇಕಿದೆ. ಇಂದು ನಡೆಯುತ್ತಿರುವುದು ಪಕ್ಷಾಂತರವೇ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಮತದಾರರು ಅಭ್ಯರ್ಥಿ ಮಾತ್ರವಲ್ಲದೇ ಪಕ್ಷಕ್ಕೂ ಮತ ನೀಡಿರುತ್ತಾರೆ. ಹಲವು ಸಾರಿ ಅಭ್ಯರ್ಥಿ ಇಷ್ಟವಿಲ್ಲದಿದ್ದರೂ ಪಕ್ಷಕ್ಕೇ ಮತ ನೀಡಿರುವ ಸಾಧ್ಯತೆ ಇರುತ್ತದೆ. ಜೊತೆಗೆ ಐದು ವರ್ಷಕ್ಕೆಂದು ಅವರಿಗೆ ಮತ ನೀಡಿರುತ್ತಾರೆ. ಅದನ್ನು ಪೂರೈಸುವ ಹೊಣೆಗಾರಿಕೆಯೂ ಆಯ್ಕೆಯಾದವರದ್ದಾಗಿರುತ್ತದೆ. ಅನಾರೋಗ್ಯ, ಸಾವು ಇತ್ಯಾದಿ ಕಾರಣಗಳನ್ನು ಬಿಟ್ಟು ಇನ್ನಾವ ಕಾರಣಕ್ಕೆ ತೆರವು ಮಾಡಿದರೂ ಅದು ಹೊಣೆಗೇಡಿತನವಾಗುತ್ತದೆ. ಈಗ ನಡೆಯುತ್ತಿರುವುದು ಹೊಣೆಗೇಡಿತನ ಮಾತ್ರವಲ್ಲಾ, ದ್ರೋಹವೂ ಹೌದು. ರಾಜೀನಾಮೆ ನೀಡಿದವರು ಆರು ವರ್ಷಗಳ ಕಾಲ ಯಾವುದೇ ಚುನಾವಣೆಗೂ ನಿಲ್ಲಬಾರದು, ಯಾವುದೇ ಅಧಿಕಾರದ ಸ್ಥಾನಗಳನ್ನೂ ಹೊಂದಬಾರದು ಎಂಬ ನಿಯಮವೂ ಜಾರಿಯಾಗಬೇಕಿದೆ.

ಈ ಸ್ವೇಚ್ಛಾಚಾರವು ಪಕ್ಷಾಂತರ ನಿಷೇಧ ಕಾಯ್ದೆಯ ವ್ಯಾಪ್ತಿಯಲ್ಲಿಯೇ, ಕಾಯ್ದೆಗೆ ಹೆಗ್ಗಣಗಳಂತೆ ಬಿಲ ಕೊರೆದು, ಅದನ್ನೇ ಬುಡಮೇಲು ಮಾಡುವ ಕೃತ್ಯವಾಗಿದೆ. ಇದನ್ನು ವಿಧಾನಸಭಾಧ್ಯಕ್ಷರು ಗಂಭೀರವಾಗಿ ಪರಿಗಣಿಸಬೇಕಿದೆ.

ಇವೆಲ್ಲದರಿಂದ ಈಗಾಗಲೇ ಸಮಾಜದ ಮುಂದೆ ಪಾತಾಳಕ್ಕಿಳಿದಿರುವ ರಾಜಕೀಯ ವ್ಯವಸ್ಥೆಯ ಆತ್ಮವೇ ದಾಳಿಗೊಳಗಾಗುತ್ತಿದೆ. ಆದ್ದರಿಂದ ಇದನ್ನು ಸರಿಪಡಿಸಲು ಬೇಕಾದ ಎಲ್ಲಾ ಕ್ರಮಗಳನ್ನು ನೀವು ತೆಗೆದುಕೊಳ್ಳಲೇ- ಬೇಕೆಂದು ನಿಮ್ಮನ್ನು ಒತ್ತಾಯಿಸುತ್ತಿದ್ದೇವೆ. ಅಂತಹ ಜವಾಬ್ದಾರಿ ಸ್ಥಾನದಲ್ಲಿ ಕುಳಿತಿರುವ ತಾವು, ತಮ್ಮ ವ್ಯಕ್ತಿಗತ ನಿಲುವುಗಳೇನಾಗಿದ್ದರೂ ತಪ್ಪಾದ ಮತ್ತು ಆತುರದ ನಿರ್ಧಾರಕ್ಕೆ ಬರಬಾರದೆಂಬುದು ನಮ್ಮ ಆಗ್ರಹ. ಇದನ್ನೇ ನೀವು ನಮ್ಮ ದೂರು ಎಂದೂ ಪರಿಗಣಿಸಬೇಕೆಂದು ಕೋರುತ್ತೇವೆ.

ಅಗತ್ಯವಿದ್ದರೆ ಉನ್ನತ ನ್ಯಾಯಾಲಯಗಳಿಗೂ ಹೋಗುವ ಮೂಲಕ ಸಂವಿಧಾನವನ್ನು ಕಾಪಾಡುವ ಹೊಣೆ ಹಾಗೂ ಅಧಿಕಾರ ಹೊಂದಿರುವ ನ್ಯಾಯಾಧೀಶರಲ್ಲೂ ಮನವಿ ಮಾಡಬೇಕೆಂದು ತೀರ್ಮಾನಿಸಿದ್ದೇವೆ. ಅಂತಹ ಪರಿಸ್ಥಿತಿ ಬಾರದಂತೆ, ಸಂವಿಧಾನಬದ್ಧ ಅಧಿಕಾರ ಹೊಂದಿರುವ ತಾವು ಪರಿಣಾಮಕಾರಿಯಾದ ಕ್ರಮ ತೆಗೆದುಕೊಳ್ಳುತ್ತೀರೆಂದು ಆಶಿಸುತ್ತೇವೆ.

ವಂದನೆಗಳೊಂದಿಗೆ,

ತಮ್ಮ ವಿಶ್ವಾಸಿಗಳು

ದೇವನೂರ ಮಹಾದೇವ ಎಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Gowri is still alive, who will inspire the coming generations. Devanur mahadev and h s doreswamy are pure souls fearless souls who have rightful thoughts for society. We welcome their opinions on today’s politics and hope it will be followed.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...