Homeಕರ್ನಾಟಕದೇವನೂರು ಮತ್ತು ದೊರೆಸ್ವಾಮಿಯವರಿಂದ ಸ್ಪೀಕರ್ ರಿಗೆ ದೂರು ಸಲ್ಲಿಕೆ

ದೇವನೂರು ಮತ್ತು ದೊರೆಸ್ವಾಮಿಯವರಿಂದ ಸ್ಪೀಕರ್ ರಿಗೆ ದೂರು ಸಲ್ಲಿಕೆ

ಈ ಪತ್ರವನ್ನೇ ದೂರು ಎಂದು ತಿಳಿದುಕೊಂಡು ಕ್ರಮ ಜರುಗಿಸಬೇಕೆಂದು ಅವರು ಕೋರಿದ್ದಾರೆ.

- Advertisement -
- Advertisement -

||ನಾನು ಗೌರಿ ಡೆಸ್ಕ್||

ಶಾಸಕರ ರಾಜೀನಾಮೆ, ಪಕ್ಷಾಂತರ ಸಾಧ್ಯತೆ, ಅನರ್ಹತೆಯ ಅರ್ಜಿ ಹಿನ್ನೆಲೆಯಲ್ಲಿ ಹಿರಿಯ ಸಾಹಿತಿ ದೇವನೂರು ಮಹಾದೇವ ಮತ್ತು ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿಯವರು ವಿಧಾನಸಭಾಧ್ಯಕ್ಷರಿಗೆ ಖಾರವಾದ ಪತ್ರವನ್ನು ಬರೆದಿದ್ದಾರೆ. ರಾಜೀನಾಮೆ ಕೊಟ್ಟಿರುವ ಶಾಸಕರು ಹೊಣೆಗೇಡಿತನವನ್ನು ಪ್ರದರ್ಶಿಸಿದ್ದಾರಲ್ಲದೇ, ತಮಗೆ ಮತ ನೀಡಿದವರಿಗೆ ದ್ರೋಹವೆಸಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ಪತ್ರವನ್ನೇ ದೂರು ಎಂದು ತಿಳಿದುಕೊಂಡು ಕ್ರಮ ಜರುಗಿಸಬೇಕೆಂದು ಅವರು ಕೋರಿದ್ದಾರೆ. ಪತ್ರದ ಪೂರ್ಣ ಪಾಠ ಈ ಕೆಳಕಂಡಂತಿದೆ.

ಇವರಿಗೆ,
ಸನ್ಮಾನ್ಯ ಸಭಾಧ್ಯಕ್ಷರು
ಕರ್ನಾಟಕ ವಿಧಾನಸಭೆ
ಬೆಂಗಳೂರು

ಮಾನ್ಯರೇ,
ವಿಷಯ: ಶಾಸಕರು ತಮ್ಮ ಆತ್ಮವನ್ನೂ ನಮ್ಮ ಮತವನ್ನೂ ಮಾರುತ್ತಿರುವ ಹೊತ್ತಿನಲ್ಲಿ
ರಾಜ್ಯದ ಹಾಗೂ ರಾಜಕಾರಣದ ಘನತೆಯನ್ನು ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ
ಮೇಲಿದೆ

ಈ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಅತ್ಯಂತ ಆಘಾತಕಾರಿಯಾಗಿವೆ. ಪಕ್ಷಾಂತರಗಳು ಎಲ್ಲಿಂದ ಎಲ್ಲಿಗೆ ಆಗುತ್ತಿದ್ದರೂ ಇದಕ್ಕೆ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳೂ ಕಾರಣವೆಂದೇ ನಾವು ಭಾವಿಸುತ್ತೇವೆ. ದೇಶದ ಸಂಸದೀಯ ಪ್ರಜಾತಂತ್ರವು ಕೊರತೆಗಳಿಂದ ಕೂಡಿರಬಹುದು. ಆದರೆ, ಸಂವಿಧಾನ ನಿರ್ಮಾತೃಗಳು ಮುಂಬರುವ ಪೀಳಿಗೆಗಳ ಮೇಲೆ ವಿಶ್ವಾಸವಿಟ್ಟು ಕೆಲವು ಅವಕಾಶಗಳನ್ನು ನೀಡಿದ್ದರು. ಅವುಗಳ ದುರುಪಯೋಗ ಮಾಡಿಕೊಂಡು ನಡೆದ ಅನೈತಿಕ ಪಕ್ಷಾಂತರಗಳನ್ನು ತಡೆಯುವ ಉದ್ದೇಶದಿಂದ ಪಕ್ಷಾಂತರ ನಿಷೇಧ ಕಾಯ್ದೆಯು 1985ರಲ್ಲಿ ಜಾರಿಗೆ ಬಂದಿತು. ನಂತರದಲ್ಲಿ 2003ರಲ್ಲಿ ಅದಕ್ಕೆ ತಿದ್ದುಪಡಿಯೂ ಬಂದಿತು.

ಆದರೆ, ಎಲ್ಲಾ ಕಾಯ್ದೆಗಳಿಂದಲೂ ನುಸುಳಿಕೊಳ್ಳುವ ರೀತಿಯಲ್ಲಿ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಇನ್ನೂ ಹೆಚ್ಚಿನ ಅಧಿಕಾರ ಪಡೆದುಕೊಂಡು ಇನ್ನೊಂದು ಪಕ್ಷದಿಂದ ಸ್ಪರ್ಧಿಸುವ ಹೊಸದೊಂದು ಪ್ರಕ್ರಿಯೆಗೆ ನಮ್ಮ ರಾಜ್ಯ ಕರ್ನಾಟಕವೇ ಮೇಲ್ಪಂಕ್ತಿ ಹಾಕಿಕೊಟ್ಟಿದ್ದು ನಾವು ತಲೆತಗ್ಗಿಸುವ ವಿಚಾರವಾಗಿದೆ. ಇಂದು ಅಂತಹ ಇನ್ನೊಂದು ಸಂದರ್ಭ ನಮ್ಮ ರಾಜ್ಯದಲ್ಲಿ ಈಗ ಉಂಟಾಗಿದೆ. ಮೇಲೆ ಹೇಳಿರುವಂತೆ ಇದರ ಹೊಣೆಯನ್ನು ಮೂರೂ ಪ್ರಮುಖ ರಾಜಕೀಯ ಪಕ್ಷಗಳು ಹೊತ್ತುಕೊಳ್ಳಬೇಕಿದೆ.


ಇಂದು ಆಮಿಷ, ಒತ್ತಡ ಅಥವಾ ಇನ್ನಾವುದೋ ಕಾರಣಕ್ಕೆ ಸ್ವಹಿತಾಸಕ್ತಿಗಾಗಿ ಪಕ್ಷ ಬದಲಾಯಿಸುತ್ತಿರುವವರು ತಮ್ಮ ಆತ್ಮವನ್ನೂ, ತಮಗೆ ಮತ ನೀಡಿದ ಮತದಾರರ ಮತವನ್ನೂ ಮಾರಿಕೊಂಡಂತೆ ಎಂದೇ ನಾವು ಭಾವಿಸುತ್ತೇವೆ. ಶಾಸಕರಿಗೆ ರಾಜೀನಾಮೆ ನೀಡುವ ಹಕ್ಕು ಇದೆ ಎಂಬುದು ವಾಸ್ತವ. ಆದರೆ, ಇದನ್ನು ಕೇವಲ ತಾಂತ್ರಿಕ ವಿಚಾರವನ್ನಾಗಿ ನೋಡದೇ ಸಾರ್ವಜನಿಕ ರಾಜಕೀಯ ನೀತಿ ಸಂಹಿತೆಯ ಭಾಗವಾಗಿ ನೋಡಬೇಕಿದೆ. ಇಂದು ನಡೆಯುತ್ತಿರುವುದು ಪಕ್ಷಾಂತರವೇ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಮತದಾರರು ಅಭ್ಯರ್ಥಿ ಮಾತ್ರವಲ್ಲದೇ ಪಕ್ಷಕ್ಕೂ ಮತ ನೀಡಿರುತ್ತಾರೆ. ಹಲವು ಸಾರಿ ಅಭ್ಯರ್ಥಿ ಇಷ್ಟವಿಲ್ಲದಿದ್ದರೂ ಪಕ್ಷಕ್ಕೇ ಮತ ನೀಡಿರುವ ಸಾಧ್ಯತೆ ಇರುತ್ತದೆ. ಜೊತೆಗೆ ಐದು ವರ್ಷಕ್ಕೆಂದು ಅವರಿಗೆ ಮತ ನೀಡಿರುತ್ತಾರೆ. ಅದನ್ನು ಪೂರೈಸುವ ಹೊಣೆಗಾರಿಕೆಯೂ ಆಯ್ಕೆಯಾದವರದ್ದಾಗಿರುತ್ತದೆ. ಅನಾರೋಗ್ಯ, ಸಾವು ಇತ್ಯಾದಿ ಕಾರಣಗಳನ್ನು ಬಿಟ್ಟು ಇನ್ನಾವ ಕಾರಣಕ್ಕೆ ತೆರವು ಮಾಡಿದರೂ ಅದು ಹೊಣೆಗೇಡಿತನವಾಗುತ್ತದೆ. ಈಗ ನಡೆಯುತ್ತಿರುವುದು ಹೊಣೆಗೇಡಿತನ ಮಾತ್ರವಲ್ಲಾ, ದ್ರೋಹವೂ ಹೌದು. ರಾಜೀನಾಮೆ ನೀಡಿದವರು ಆರು ವರ್ಷಗಳ ಕಾಲ ಯಾವುದೇ ಚುನಾವಣೆಗೂ ನಿಲ್ಲಬಾರದು, ಯಾವುದೇ ಅಧಿಕಾರದ ಸ್ಥಾನಗಳನ್ನೂ ಹೊಂದಬಾರದು ಎಂಬ ನಿಯಮವೂ ಜಾರಿಯಾಗಬೇಕಿದೆ.

ಈ ಸ್ವೇಚ್ಛಾಚಾರವು ಪಕ್ಷಾಂತರ ನಿಷೇಧ ಕಾಯ್ದೆಯ ವ್ಯಾಪ್ತಿಯಲ್ಲಿಯೇ, ಕಾಯ್ದೆಗೆ ಹೆಗ್ಗಣಗಳಂತೆ ಬಿಲ ಕೊರೆದು, ಅದನ್ನೇ ಬುಡಮೇಲು ಮಾಡುವ ಕೃತ್ಯವಾಗಿದೆ. ಇದನ್ನು ವಿಧಾನಸಭಾಧ್ಯಕ್ಷರು ಗಂಭೀರವಾಗಿ ಪರಿಗಣಿಸಬೇಕಿದೆ.

ಇವೆಲ್ಲದರಿಂದ ಈಗಾಗಲೇ ಸಮಾಜದ ಮುಂದೆ ಪಾತಾಳಕ್ಕಿಳಿದಿರುವ ರಾಜಕೀಯ ವ್ಯವಸ್ಥೆಯ ಆತ್ಮವೇ ದಾಳಿಗೊಳಗಾಗುತ್ತಿದೆ. ಆದ್ದರಿಂದ ಇದನ್ನು ಸರಿಪಡಿಸಲು ಬೇಕಾದ ಎಲ್ಲಾ ಕ್ರಮಗಳನ್ನು ನೀವು ತೆಗೆದುಕೊಳ್ಳಲೇ- ಬೇಕೆಂದು ನಿಮ್ಮನ್ನು ಒತ್ತಾಯಿಸುತ್ತಿದ್ದೇವೆ. ಅಂತಹ ಜವಾಬ್ದಾರಿ ಸ್ಥಾನದಲ್ಲಿ ಕುಳಿತಿರುವ ತಾವು, ತಮ್ಮ ವ್ಯಕ್ತಿಗತ ನಿಲುವುಗಳೇನಾಗಿದ್ದರೂ ತಪ್ಪಾದ ಮತ್ತು ಆತುರದ ನಿರ್ಧಾರಕ್ಕೆ ಬರಬಾರದೆಂಬುದು ನಮ್ಮ ಆಗ್ರಹ. ಇದನ್ನೇ ನೀವು ನಮ್ಮ ದೂರು ಎಂದೂ ಪರಿಗಣಿಸಬೇಕೆಂದು ಕೋರುತ್ತೇವೆ.

ಅಗತ್ಯವಿದ್ದರೆ ಉನ್ನತ ನ್ಯಾಯಾಲಯಗಳಿಗೂ ಹೋಗುವ ಮೂಲಕ ಸಂವಿಧಾನವನ್ನು ಕಾಪಾಡುವ ಹೊಣೆ ಹಾಗೂ ಅಧಿಕಾರ ಹೊಂದಿರುವ ನ್ಯಾಯಾಧೀಶರಲ್ಲೂ ಮನವಿ ಮಾಡಬೇಕೆಂದು ತೀರ್ಮಾನಿಸಿದ್ದೇವೆ. ಅಂತಹ ಪರಿಸ್ಥಿತಿ ಬಾರದಂತೆ, ಸಂವಿಧಾನಬದ್ಧ ಅಧಿಕಾರ ಹೊಂದಿರುವ ತಾವು ಪರಿಣಾಮಕಾರಿಯಾದ ಕ್ರಮ ತೆಗೆದುಕೊಳ್ಳುತ್ತೀರೆಂದು ಆಶಿಸುತ್ತೇವೆ.

ವಂದನೆಗಳೊಂದಿಗೆ,

ತಮ್ಮ ವಿಶ್ವಾಸಿಗಳು

ದೇವನೂರ ಮಹಾದೇವ ಎಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Gowri is still alive, who will inspire the coming generations. Devanur mahadev and h s doreswamy are pure souls fearless souls who have rightful thoughts for society. We welcome their opinions on today’s politics and hope it will be followed.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...